Homeಕರ್ನಾಟಕ7 ಸೀಟುಗಳಲ್ಲಿ ಮಾತ್ರ ಬಿಜೆಪಿ ಗ್ಯಾರಂಟಿ: ಬಿಜೆಪಿ ಕೋರ್ ಕಮಿಟಿ ಅಂದಾಜು

7 ಸೀಟುಗಳಲ್ಲಿ ಮಾತ್ರ ಬಿಜೆಪಿ ಗ್ಯಾರಂಟಿ: ಬಿಜೆಪಿ ಕೋರ್ ಕಮಿಟಿ ಅಂದಾಜು

- Advertisement -
- Advertisement -

ಅನರ್ಹತೆ ಎತ್ತಿ ಹಿಡಿದು, ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿಲು ಅವಕಾಶ ನೀಡಿದ ಸುಪ್ರೀಂಕೋರ್ಟಿನ ತೀರ್ಪಿನ ನಂತರ ಅನರ್ಹ ಶಾಸಕರು ದೆಹಲಿಯಲ್ಲೇ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ರನ್ನು ಭೇಟಿ ಮಾಡಿದ್ದಾರೆ. ನಂತರ ಬೆಂಗಳೂರಿಗೆ ಬಂದವರು ಸೀದಾ ಯಡಿಯೂರಪ್ಪನವರ ಜೊತೆ ಸಭೆ ನಡೆಸಿದ್ದಾರೆ. ಅಲ್ಲಿಂದ ಯಡಿಯೂರಪ್ಪನವರು ಹೋಗಿದ್ದು ಬಿಜೆಪಿ ಕೋರ್ ಕಮಿಟಿ ಸಭೆಗೆ. ಅಲ್ಲಿ ನಡೆದ ಚರ್ಚೆಯಲ್ಲಿ ಕಮಿಟಿ ಯಾವ ಅಭಿಪ್ರಾಯಕ್ಕೆ ಬಂದಿತು ಎಂಬುದು ನಾನುಗೌರಿ.ಕಾಂಗೆ ಬಿಜೆಪಿ ಮೂಲಗಳು ತಿಳಿಸಿವೆ.

ಚುನಾವಣೆಗೆ ಹೋಗುತ್ತಿರುವ ಒಟ್ಟು 15 ಕ್ಷೇತ್ರಗಳಲ್ಲಿ ಬಿಜೆಪಿ ಎಷ್ಟರ ಮಟ್ಟಿಗೆ ವಿಜಯ ಸಾಧಿಸಬಹುದು ಎಂಬುದು ಕೋರ್ ಕಮಿಟಿಯ ಚರ್ಚೆಗಳಲ್ಲಿ ಒಂದು ಮುಖ್ಯ ಅಜೆಂಡಾ ಆಗಿತ್ತು. ಅನರ್ಹರು ಸ್ಪರ್ಧೆ ಮಾಡಬಹುದು ಎಂದು ಹೇಳಿರುವುದರಿಂದ, ಯಾವ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಬೇಕು ಎಂಬುದು ಚರ್ಚೆಯ ಮತ್ತೊಂದು ಅಂಶವಾಗಿತ್ತು. ರೋಷನ್ ಬೇಗ್ ಹೊರತುಪಡಿಸಿದರೆ ಮಿಕ್ಕೆಲ್ಲರನ್ನೂ ಬಿಜೆಪಿ ಪುರಸ್ಕರಿಸಬೇಕು ಎಂಬುದರ ಬಗ್ಗೆ ಯಾರಿಗೂ ಭಿನ್ನ ಅಭಿಪ್ರಾಯ ಇರಲಿಲ್ಲ.

ರೋಷನ್ ಬೇಗ್ ಐಎಂಎ ಕೇಸಿನಲ್ಲಿ ಭಾಗಿಯಾಗಿರುವುದು, ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿರುವುದು ಮಾತ್ರವಲ್ಲದೇ, ಆರೆಸ್ಸೆಸ್ ಮೂಲದವರಿಗೆ (ಮುಖ್ಯವಾಗಿ ಬಿ.ಎಲ್.ಸಂತೋಷ್‌ಗೆ) ಅವರ ಮೇಲೆ ನಿರ್ದಿಷ್ಟವಾದ ಬೇರೆ ಸಿಟ್ಟೂ ಇದೆಯೆಂದು ಹೇಳಲಾಗುತ್ತಿದೆ.

ಉಳಿದಂತೆ ಇನ್ನೂ ಮೂರು ಕ್ಷೇತ್ರಗಳಲ್ಲಿ ಅನರ್ಹ ಶಾಸಕರಿಗೇ ಟಿಕೆಟ್ ನೀಡಲು ಇನ್ನೂ ಸಹಮತ ಏರ್ಪಟ್ಟಿಲ್ಲ. ಅವುಗಳೆಂದರೆ ಹುಣಸೂರು, ಅಥಣಿ ಮತ್ತು ರಾಣಿಬೆನ್ನೂರು.

ಇನ್ನೆಲ್ಲಾ ಕ್ಷೇತ್ರಗಳಲ್ಲೂ ಅನರ್ಹರಿಗೇ ಟಿಕೆಟ್ ನೀಡಲಾಗುತ್ತದೆ. ಆದರೆ, ಗೆಲುವಿನ ಗ್ಯಾರಂಟಿ ಇರುವುದು 10 ಕ್ಷೇತ್ರಗಳಲ್ಲಿ ಎಂದು ಬಿಜೆಪಿಯ ವತಿಯಿಂದ ಬಹಿರಂಗವಾಗಿ ಹೇಳಲಾಗುತ್ತಿದೆಯಾದರೂ, ಒಳಗೆ ಚರ್ಚೆ ನಡೆದಿರುವುದು 7 ಕ್ಷೇತ್ರಗಳಲ್ಲಿ ಮಾತ್ರ ಆ ಸಾಧ್ಯತೆ ಇದೆ ಎಂದು.

ಇದನ್ನೂ ಓದಿ: ಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

ಸರ್ಕಾರ ಸ್ವಂತಬಲದ ಮೇಲೆ ಉಳಿದುಕೊಳ್ಳಬೇಕೆಂದರೆ, 8ರಲ್ಲಿ ಗೆಲ್ಲಬೇಕು. ಆ ಖಾತ್ರಿ ಇಲ್ಲವಾದುದರಿಂದಲೇ ಜೆಡಿಎಸ್ ಬೆಂಬಲ ಪಡೆಯುವ ವಿಷಯಕ್ಕೆ ಬಿಜೆಪಿಯು ‘ಬೇಡವೇ ಬೇಡ’ ಎಂಬ ಧೋರಣೆ ತೋರುತ್ತಿಲ್ಲ. ದೇವೇಗೌಡರ ನಿನ್ನೆಯ ಮಾತುಗಳೂ ಅದಕ್ಕೆ ಪುಷ್ಟಿ ಕೊಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...