Homeಕರ್ನಾಟಕ7 ಸೀಟುಗಳಲ್ಲಿ ಮಾತ್ರ ಬಿಜೆಪಿ ಗ್ಯಾರಂಟಿ: ಬಿಜೆಪಿ ಕೋರ್ ಕಮಿಟಿ ಅಂದಾಜು

7 ಸೀಟುಗಳಲ್ಲಿ ಮಾತ್ರ ಬಿಜೆಪಿ ಗ್ಯಾರಂಟಿ: ಬಿಜೆಪಿ ಕೋರ್ ಕಮಿಟಿ ಅಂದಾಜು

- Advertisement -
- Advertisement -

ಅನರ್ಹತೆ ಎತ್ತಿ ಹಿಡಿದು, ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿಲು ಅವಕಾಶ ನೀಡಿದ ಸುಪ್ರೀಂಕೋರ್ಟಿನ ತೀರ್ಪಿನ ನಂತರ ಅನರ್ಹ ಶಾಸಕರು ದೆಹಲಿಯಲ್ಲೇ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ರನ್ನು ಭೇಟಿ ಮಾಡಿದ್ದಾರೆ. ನಂತರ ಬೆಂಗಳೂರಿಗೆ ಬಂದವರು ಸೀದಾ ಯಡಿಯೂರಪ್ಪನವರ ಜೊತೆ ಸಭೆ ನಡೆಸಿದ್ದಾರೆ. ಅಲ್ಲಿಂದ ಯಡಿಯೂರಪ್ಪನವರು ಹೋಗಿದ್ದು ಬಿಜೆಪಿ ಕೋರ್ ಕಮಿಟಿ ಸಭೆಗೆ. ಅಲ್ಲಿ ನಡೆದ ಚರ್ಚೆಯಲ್ಲಿ ಕಮಿಟಿ ಯಾವ ಅಭಿಪ್ರಾಯಕ್ಕೆ ಬಂದಿತು ಎಂಬುದು ನಾನುಗೌರಿ.ಕಾಂಗೆ ಬಿಜೆಪಿ ಮೂಲಗಳು ತಿಳಿಸಿವೆ.

ಚುನಾವಣೆಗೆ ಹೋಗುತ್ತಿರುವ ಒಟ್ಟು 15 ಕ್ಷೇತ್ರಗಳಲ್ಲಿ ಬಿಜೆಪಿ ಎಷ್ಟರ ಮಟ್ಟಿಗೆ ವಿಜಯ ಸಾಧಿಸಬಹುದು ಎಂಬುದು ಕೋರ್ ಕಮಿಟಿಯ ಚರ್ಚೆಗಳಲ್ಲಿ ಒಂದು ಮುಖ್ಯ ಅಜೆಂಡಾ ಆಗಿತ್ತು. ಅನರ್ಹರು ಸ್ಪರ್ಧೆ ಮಾಡಬಹುದು ಎಂದು ಹೇಳಿರುವುದರಿಂದ, ಯಾವ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಬೇಕು ಎಂಬುದು ಚರ್ಚೆಯ ಮತ್ತೊಂದು ಅಂಶವಾಗಿತ್ತು. ರೋಷನ್ ಬೇಗ್ ಹೊರತುಪಡಿಸಿದರೆ ಮಿಕ್ಕೆಲ್ಲರನ್ನೂ ಬಿಜೆಪಿ ಪುರಸ್ಕರಿಸಬೇಕು ಎಂಬುದರ ಬಗ್ಗೆ ಯಾರಿಗೂ ಭಿನ್ನ ಅಭಿಪ್ರಾಯ ಇರಲಿಲ್ಲ.

ರೋಷನ್ ಬೇಗ್ ಐಎಂಎ ಕೇಸಿನಲ್ಲಿ ಭಾಗಿಯಾಗಿರುವುದು, ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿರುವುದು ಮಾತ್ರವಲ್ಲದೇ, ಆರೆಸ್ಸೆಸ್ ಮೂಲದವರಿಗೆ (ಮುಖ್ಯವಾಗಿ ಬಿ.ಎಲ್.ಸಂತೋಷ್‌ಗೆ) ಅವರ ಮೇಲೆ ನಿರ್ದಿಷ್ಟವಾದ ಬೇರೆ ಸಿಟ್ಟೂ ಇದೆಯೆಂದು ಹೇಳಲಾಗುತ್ತಿದೆ.

ಉಳಿದಂತೆ ಇನ್ನೂ ಮೂರು ಕ್ಷೇತ್ರಗಳಲ್ಲಿ ಅನರ್ಹ ಶಾಸಕರಿಗೇ ಟಿಕೆಟ್ ನೀಡಲು ಇನ್ನೂ ಸಹಮತ ಏರ್ಪಟ್ಟಿಲ್ಲ. ಅವುಗಳೆಂದರೆ ಹುಣಸೂರು, ಅಥಣಿ ಮತ್ತು ರಾಣಿಬೆನ್ನೂರು.

ಇನ್ನೆಲ್ಲಾ ಕ್ಷೇತ್ರಗಳಲ್ಲೂ ಅನರ್ಹರಿಗೇ ಟಿಕೆಟ್ ನೀಡಲಾಗುತ್ತದೆ. ಆದರೆ, ಗೆಲುವಿನ ಗ್ಯಾರಂಟಿ ಇರುವುದು 10 ಕ್ಷೇತ್ರಗಳಲ್ಲಿ ಎಂದು ಬಿಜೆಪಿಯ ವತಿಯಿಂದ ಬಹಿರಂಗವಾಗಿ ಹೇಳಲಾಗುತ್ತಿದೆಯಾದರೂ, ಒಳಗೆ ಚರ್ಚೆ ನಡೆದಿರುವುದು 7 ಕ್ಷೇತ್ರಗಳಲ್ಲಿ ಮಾತ್ರ ಆ ಸಾಧ್ಯತೆ ಇದೆ ಎಂದು.

ಇದನ್ನೂ ಓದಿ: ಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

ಸರ್ಕಾರ ಸ್ವಂತಬಲದ ಮೇಲೆ ಉಳಿದುಕೊಳ್ಳಬೇಕೆಂದರೆ, 8ರಲ್ಲಿ ಗೆಲ್ಲಬೇಕು. ಆ ಖಾತ್ರಿ ಇಲ್ಲವಾದುದರಿಂದಲೇ ಜೆಡಿಎಸ್ ಬೆಂಬಲ ಪಡೆಯುವ ವಿಷಯಕ್ಕೆ ಬಿಜೆಪಿಯು ‘ಬೇಡವೇ ಬೇಡ’ ಎಂಬ ಧೋರಣೆ ತೋರುತ್ತಿಲ್ಲ. ದೇವೇಗೌಡರ ನಿನ್ನೆಯ ಮಾತುಗಳೂ ಅದಕ್ಕೆ ಪುಷ್ಟಿ ಕೊಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....