Homeಕರ್ನಾಟಕ7 ಸೀಟುಗಳಲ್ಲಿ ಮಾತ್ರ ಬಿಜೆಪಿ ಗ್ಯಾರಂಟಿ: ಬಿಜೆಪಿ ಕೋರ್ ಕಮಿಟಿ ಅಂದಾಜು

7 ಸೀಟುಗಳಲ್ಲಿ ಮಾತ್ರ ಬಿಜೆಪಿ ಗ್ಯಾರಂಟಿ: ಬಿಜೆಪಿ ಕೋರ್ ಕಮಿಟಿ ಅಂದಾಜು

- Advertisement -
- Advertisement -

ಅನರ್ಹತೆ ಎತ್ತಿ ಹಿಡಿದು, ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿಲು ಅವಕಾಶ ನೀಡಿದ ಸುಪ್ರೀಂಕೋರ್ಟಿನ ತೀರ್ಪಿನ ನಂತರ ಅನರ್ಹ ಶಾಸಕರು ದೆಹಲಿಯಲ್ಲೇ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ರನ್ನು ಭೇಟಿ ಮಾಡಿದ್ದಾರೆ. ನಂತರ ಬೆಂಗಳೂರಿಗೆ ಬಂದವರು ಸೀದಾ ಯಡಿಯೂರಪ್ಪನವರ ಜೊತೆ ಸಭೆ ನಡೆಸಿದ್ದಾರೆ. ಅಲ್ಲಿಂದ ಯಡಿಯೂರಪ್ಪನವರು ಹೋಗಿದ್ದು ಬಿಜೆಪಿ ಕೋರ್ ಕಮಿಟಿ ಸಭೆಗೆ. ಅಲ್ಲಿ ನಡೆದ ಚರ್ಚೆಯಲ್ಲಿ ಕಮಿಟಿ ಯಾವ ಅಭಿಪ್ರಾಯಕ್ಕೆ ಬಂದಿತು ಎಂಬುದು ನಾನುಗೌರಿ.ಕಾಂಗೆ ಬಿಜೆಪಿ ಮೂಲಗಳು ತಿಳಿಸಿವೆ.

ಚುನಾವಣೆಗೆ ಹೋಗುತ್ತಿರುವ ಒಟ್ಟು 15 ಕ್ಷೇತ್ರಗಳಲ್ಲಿ ಬಿಜೆಪಿ ಎಷ್ಟರ ಮಟ್ಟಿಗೆ ವಿಜಯ ಸಾಧಿಸಬಹುದು ಎಂಬುದು ಕೋರ್ ಕಮಿಟಿಯ ಚರ್ಚೆಗಳಲ್ಲಿ ಒಂದು ಮುಖ್ಯ ಅಜೆಂಡಾ ಆಗಿತ್ತು. ಅನರ್ಹರು ಸ್ಪರ್ಧೆ ಮಾಡಬಹುದು ಎಂದು ಹೇಳಿರುವುದರಿಂದ, ಯಾವ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಬೇಕು ಎಂಬುದು ಚರ್ಚೆಯ ಮತ್ತೊಂದು ಅಂಶವಾಗಿತ್ತು. ರೋಷನ್ ಬೇಗ್ ಹೊರತುಪಡಿಸಿದರೆ ಮಿಕ್ಕೆಲ್ಲರನ್ನೂ ಬಿಜೆಪಿ ಪುರಸ್ಕರಿಸಬೇಕು ಎಂಬುದರ ಬಗ್ಗೆ ಯಾರಿಗೂ ಭಿನ್ನ ಅಭಿಪ್ರಾಯ ಇರಲಿಲ್ಲ.

ರೋಷನ್ ಬೇಗ್ ಐಎಂಎ ಕೇಸಿನಲ್ಲಿ ಭಾಗಿಯಾಗಿರುವುದು, ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿರುವುದು ಮಾತ್ರವಲ್ಲದೇ, ಆರೆಸ್ಸೆಸ್ ಮೂಲದವರಿಗೆ (ಮುಖ್ಯವಾಗಿ ಬಿ.ಎಲ್.ಸಂತೋಷ್‌ಗೆ) ಅವರ ಮೇಲೆ ನಿರ್ದಿಷ್ಟವಾದ ಬೇರೆ ಸಿಟ್ಟೂ ಇದೆಯೆಂದು ಹೇಳಲಾಗುತ್ತಿದೆ.

ಉಳಿದಂತೆ ಇನ್ನೂ ಮೂರು ಕ್ಷೇತ್ರಗಳಲ್ಲಿ ಅನರ್ಹ ಶಾಸಕರಿಗೇ ಟಿಕೆಟ್ ನೀಡಲು ಇನ್ನೂ ಸಹಮತ ಏರ್ಪಟ್ಟಿಲ್ಲ. ಅವುಗಳೆಂದರೆ ಹುಣಸೂರು, ಅಥಣಿ ಮತ್ತು ರಾಣಿಬೆನ್ನೂರು.

ಇನ್ನೆಲ್ಲಾ ಕ್ಷೇತ್ರಗಳಲ್ಲೂ ಅನರ್ಹರಿಗೇ ಟಿಕೆಟ್ ನೀಡಲಾಗುತ್ತದೆ. ಆದರೆ, ಗೆಲುವಿನ ಗ್ಯಾರಂಟಿ ಇರುವುದು 10 ಕ್ಷೇತ್ರಗಳಲ್ಲಿ ಎಂದು ಬಿಜೆಪಿಯ ವತಿಯಿಂದ ಬಹಿರಂಗವಾಗಿ ಹೇಳಲಾಗುತ್ತಿದೆಯಾದರೂ, ಒಳಗೆ ಚರ್ಚೆ ನಡೆದಿರುವುದು 7 ಕ್ಷೇತ್ರಗಳಲ್ಲಿ ಮಾತ್ರ ಆ ಸಾಧ್ಯತೆ ಇದೆ ಎಂದು.

ಇದನ್ನೂ ಓದಿ: ಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

ಸರ್ಕಾರ ಸ್ವಂತಬಲದ ಮೇಲೆ ಉಳಿದುಕೊಳ್ಳಬೇಕೆಂದರೆ, 8ರಲ್ಲಿ ಗೆಲ್ಲಬೇಕು. ಆ ಖಾತ್ರಿ ಇಲ್ಲವಾದುದರಿಂದಲೇ ಜೆಡಿಎಸ್ ಬೆಂಬಲ ಪಡೆಯುವ ವಿಷಯಕ್ಕೆ ಬಿಜೆಪಿಯು ‘ಬೇಡವೇ ಬೇಡ’ ಎಂಬ ಧೋರಣೆ ತೋರುತ್ತಿಲ್ಲ. ದೇವೇಗೌಡರ ನಿನ್ನೆಯ ಮಾತುಗಳೂ ಅದಕ್ಕೆ ಪುಷ್ಟಿ ಕೊಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...