Homeಕರ್ನಾಟಕಬಿಜೆಪಿ ತೆಕ್ಕೆಗೆ ಬಿಬಿಎಂಪಿ : ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ಆಯ್ಕೆ

ಬಿಜೆಪಿ ತೆಕ್ಕೆಗೆ ಬಿಬಿಎಂಪಿ : ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ಆಯ್ಕೆ

- Advertisement -
- Advertisement -

ನಾಲ್ಕು ವರ್ಷಗಳಿಂದ ಬಿಬಿಎಂಪಿ ಮೇಯರ್ ಹುದ್ದೆ ಮೇಲೆ ಆಸೆಗಣ್ಣಿನಿಂದ ಕಾಯುತ್ತಿದ್ದ ಬಿಜೆಪಿಗೆ ಕೊನೆಗೂ ಗೆಲುವು ಸಿಕ್ಕಿದ್ದು ಇಂದು ನಡೆದ ಮೇಯರ್, ಉಪ ಮೇಯರ್ ಆಯ್ಕೆಯಲ್ಲಿ ಪ್ರಚಂಡ ಜಯ ಸಾಧಿಸಿದೆ.

೮೨ನೇ ವಾರ್ಡ್‌‌ನ ಆರ್‌.ಎಸ್‌.ಎಸ್ ನಿಷ್ಠ ಎಂದೇ ಹೆಸರುವಾಸಿಯಾದ ಗೌತಮ್ ಕುಮಾರ್‌ ಜೈನ್ ರವರು ಬಿಬಿಎಂಪಿಯ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸತ್ಯನಾರಾಯಣ್ ರವರ ವಿರುದ್ಧ ೧೭ ಮತಗಳ ಅಂತರದಿಂದ ಗೆದ್ದು ಮೇಯರ್ ಪಟ್ಟಕ್ಕೇರಿದ್ದಾರೆ.

ಬಿಜೆಪಿಯ ಗೌತಮ್ ಕುಮಾರ್‌ ಜೈನ್ ಪರವಾಗಿ ೧೨೯ ಮತಗಳು ಬಿದ್ದರೆ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿ ಪರವಾಗಿ ೧೧೨ ಮತಗಳು ಮಾತ್ರ ಬಿದ್ದಿವೆ. ಆ ಮೂಲಕ ಜೋಗು ಪಾಳ್ಯದ ಗೌತಮ್ ಕುಮಾರ್ ಮೇಯರ್ ಆಗಿ ಆಯ್ಕೆಯಾದರು. ಇನ್ನು ಉಪಮೇಯರ್ ಆಗಿ ಹೊಸಹಳ್ಳಿ ವಾರ್ಡ್‌‌ನ ಮಹಾಲಕ್ಷ್ಮಿ ಆಯ್ಕೆಯಾಗಿದ್ದಾರೆ. ಇವರು ವಿ ಸೋಮಣ್ಣರವರ ಆಪ್ತ ರವೀಂದ್ರರವರ ಮಗಳಾಗಿದ್ದಾರೆ.

ಆರಂಭದಲ್ಲಿ ಗೌತಮ್ ಕುಮಾರ್ ಒತ್ತಡಕ್ಕೆ ಸಿಲುಕಿದ್ದರು ಏಕೆಂದರೆ ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಪದ್ಮನಾಭರೆಡ್ಡಿಯವರು ಸಹ ನಾಮಪತ್ರ ಸಲ್ಲಿಸಿದ್ದರು. ಆದರೆ ಬಿಜೆಪಿ ನಾಯಕರು ಅವರ ಮನವೊಲಿಸಿ ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾದರು.

ಮೇಯರ್ ವಿರುದ್ಧ ಭಾರೀ ಅಪಸ್ವರ

ನೂತನ್ ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ರವರು ಆಯ್ಕೆಯಾಗುತ್ತಿದ್ದಂತೆಯೇ ಅಪಸ್ವರ ಜೋರಾಗಿ ಕೇಳಿಬಂದಿದೆ. ಬಿಜೆಪಿಯು ಈ ಬಾರಿ ಒಕ್ಕಲಿಗ ಸಮುದಾಯದ ವ್ಯಕ್ತಿಯನ್ನು ಮೇಯರ್ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ಕೊನೆ ಕ್ಷಣದಲ್ಲಿ ಜೈನ ಸಮುದಾಯದವರನ್ನು ಮೇಯರ್‌ ಮಾಡಿರುವುದು ಸರಿಯಲ್ಲ ಎಂದು ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಿಂದ ಒಕ್ಕಲಿಗ ಸಮುದಾಯದ ಎಲ್.ಶ್ರೀನಿವಾಸ್ ಮತ್ತು ಮುನೀಂದ್ರಕುಮಾರ್‌ರವರು ಮೇಯರ್ ಹುದ್ದೆಯ ಮೇಲೆ ಕಣ್ಣಿಟ್ಟಿದ್ದರು.

ಪರಭಾಷೆಯ ವ್ಯಕ್ತಿ ಬೆಂಗಳೂರಿನ ಮೇಯರ್‌ ಆಗುವುದು ಬೇಡ: ಕನ್ನಡಿಗರ ಆಗ್ರಹ

ಇದೇ ಸಮಯದಲ್ಲಿ ಕನ್ನಡ ಹೋರಾಟಗಾರರು ಸಹ ಗೌತಮ್ ಕುಮಾರ್‌ ಜೈನ್‌ರವರ ಆಯ್ಕೆಯನ್ನು ವಿರೋಧಿಸಿದ್ದಾರೆ. ಕನ್ನಡ ಹೋರಾಟಗಾರರನ್ನು ಜೈಲಿಗೆ ಕಳಿಸಿದ ಮಾರ್ವಾಡಿ ಸಮುದಾಯದ ವ್ಯಕ್ತಿಯನ್ನು ಮೇಯರ್ ಮಾಡಿದ ಬಿಜೆಪಿ ಕನ್ನಡ ವಿರೋಧಿ ಕ್ರಮ ಖಂಡಿಸಿ ಇಂದು ಸಂಜೆ ೬ ಗಂಟಗೆ ಟ್ವಿಟ್ಟರ್ ಅಭಿಯಾನವನ್ನು ಸಹ ಹಮ್ಮಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...