Homeಕರ್ನಾಟಕಬಿಜೆಪಿ ತೆಕ್ಕೆಗೆ ಬಿಬಿಎಂಪಿ : ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ಆಯ್ಕೆ

ಬಿಜೆಪಿ ತೆಕ್ಕೆಗೆ ಬಿಬಿಎಂಪಿ : ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ಆಯ್ಕೆ

- Advertisement -
- Advertisement -

ನಾಲ್ಕು ವರ್ಷಗಳಿಂದ ಬಿಬಿಎಂಪಿ ಮೇಯರ್ ಹುದ್ದೆ ಮೇಲೆ ಆಸೆಗಣ್ಣಿನಿಂದ ಕಾಯುತ್ತಿದ್ದ ಬಿಜೆಪಿಗೆ ಕೊನೆಗೂ ಗೆಲುವು ಸಿಕ್ಕಿದ್ದು ಇಂದು ನಡೆದ ಮೇಯರ್, ಉಪ ಮೇಯರ್ ಆಯ್ಕೆಯಲ್ಲಿ ಪ್ರಚಂಡ ಜಯ ಸಾಧಿಸಿದೆ.

೮೨ನೇ ವಾರ್ಡ್‌‌ನ ಆರ್‌.ಎಸ್‌.ಎಸ್ ನಿಷ್ಠ ಎಂದೇ ಹೆಸರುವಾಸಿಯಾದ ಗೌತಮ್ ಕುಮಾರ್‌ ಜೈನ್ ರವರು ಬಿಬಿಎಂಪಿಯ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸತ್ಯನಾರಾಯಣ್ ರವರ ವಿರುದ್ಧ ೧೭ ಮತಗಳ ಅಂತರದಿಂದ ಗೆದ್ದು ಮೇಯರ್ ಪಟ್ಟಕ್ಕೇರಿದ್ದಾರೆ.

ಬಿಜೆಪಿಯ ಗೌತಮ್ ಕುಮಾರ್‌ ಜೈನ್ ಪರವಾಗಿ ೧೨೯ ಮತಗಳು ಬಿದ್ದರೆ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿ ಪರವಾಗಿ ೧೧೨ ಮತಗಳು ಮಾತ್ರ ಬಿದ್ದಿವೆ. ಆ ಮೂಲಕ ಜೋಗು ಪಾಳ್ಯದ ಗೌತಮ್ ಕುಮಾರ್ ಮೇಯರ್ ಆಗಿ ಆಯ್ಕೆಯಾದರು. ಇನ್ನು ಉಪಮೇಯರ್ ಆಗಿ ಹೊಸಹಳ್ಳಿ ವಾರ್ಡ್‌‌ನ ಮಹಾಲಕ್ಷ್ಮಿ ಆಯ್ಕೆಯಾಗಿದ್ದಾರೆ. ಇವರು ವಿ ಸೋಮಣ್ಣರವರ ಆಪ್ತ ರವೀಂದ್ರರವರ ಮಗಳಾಗಿದ್ದಾರೆ.

ಆರಂಭದಲ್ಲಿ ಗೌತಮ್ ಕುಮಾರ್ ಒತ್ತಡಕ್ಕೆ ಸಿಲುಕಿದ್ದರು ಏಕೆಂದರೆ ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಪದ್ಮನಾಭರೆಡ್ಡಿಯವರು ಸಹ ನಾಮಪತ್ರ ಸಲ್ಲಿಸಿದ್ದರು. ಆದರೆ ಬಿಜೆಪಿ ನಾಯಕರು ಅವರ ಮನವೊಲಿಸಿ ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾದರು.

ಮೇಯರ್ ವಿರುದ್ಧ ಭಾರೀ ಅಪಸ್ವರ

ನೂತನ್ ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ರವರು ಆಯ್ಕೆಯಾಗುತ್ತಿದ್ದಂತೆಯೇ ಅಪಸ್ವರ ಜೋರಾಗಿ ಕೇಳಿಬಂದಿದೆ. ಬಿಜೆಪಿಯು ಈ ಬಾರಿ ಒಕ್ಕಲಿಗ ಸಮುದಾಯದ ವ್ಯಕ್ತಿಯನ್ನು ಮೇಯರ್ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ಕೊನೆ ಕ್ಷಣದಲ್ಲಿ ಜೈನ ಸಮುದಾಯದವರನ್ನು ಮೇಯರ್‌ ಮಾಡಿರುವುದು ಸರಿಯಲ್ಲ ಎಂದು ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಿಂದ ಒಕ್ಕಲಿಗ ಸಮುದಾಯದ ಎಲ್.ಶ್ರೀನಿವಾಸ್ ಮತ್ತು ಮುನೀಂದ್ರಕುಮಾರ್‌ರವರು ಮೇಯರ್ ಹುದ್ದೆಯ ಮೇಲೆ ಕಣ್ಣಿಟ್ಟಿದ್ದರು.

ಪರಭಾಷೆಯ ವ್ಯಕ್ತಿ ಬೆಂಗಳೂರಿನ ಮೇಯರ್‌ ಆಗುವುದು ಬೇಡ: ಕನ್ನಡಿಗರ ಆಗ್ರಹ

ಇದೇ ಸಮಯದಲ್ಲಿ ಕನ್ನಡ ಹೋರಾಟಗಾರರು ಸಹ ಗೌತಮ್ ಕುಮಾರ್‌ ಜೈನ್‌ರವರ ಆಯ್ಕೆಯನ್ನು ವಿರೋಧಿಸಿದ್ದಾರೆ. ಕನ್ನಡ ಹೋರಾಟಗಾರರನ್ನು ಜೈಲಿಗೆ ಕಳಿಸಿದ ಮಾರ್ವಾಡಿ ಸಮುದಾಯದ ವ್ಯಕ್ತಿಯನ್ನು ಮೇಯರ್ ಮಾಡಿದ ಬಿಜೆಪಿ ಕನ್ನಡ ವಿರೋಧಿ ಕ್ರಮ ಖಂಡಿಸಿ ಇಂದು ಸಂಜೆ ೬ ಗಂಟಗೆ ಟ್ವಿಟ್ಟರ್ ಅಭಿಯಾನವನ್ನು ಸಹ ಹಮ್ಮಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...