Homeಕರ್ನಾಟಕಬಿಜೆಪಿ ತೆಕ್ಕೆಗೆ ಬಿಬಿಎಂಪಿ : ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ಆಯ್ಕೆ

ಬಿಜೆಪಿ ತೆಕ್ಕೆಗೆ ಬಿಬಿಎಂಪಿ : ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ಆಯ್ಕೆ

- Advertisement -
- Advertisement -

ನಾಲ್ಕು ವರ್ಷಗಳಿಂದ ಬಿಬಿಎಂಪಿ ಮೇಯರ್ ಹುದ್ದೆ ಮೇಲೆ ಆಸೆಗಣ್ಣಿನಿಂದ ಕಾಯುತ್ತಿದ್ದ ಬಿಜೆಪಿಗೆ ಕೊನೆಗೂ ಗೆಲುವು ಸಿಕ್ಕಿದ್ದು ಇಂದು ನಡೆದ ಮೇಯರ್, ಉಪ ಮೇಯರ್ ಆಯ್ಕೆಯಲ್ಲಿ ಪ್ರಚಂಡ ಜಯ ಸಾಧಿಸಿದೆ.

೮೨ನೇ ವಾರ್ಡ್‌‌ನ ಆರ್‌.ಎಸ್‌.ಎಸ್ ನಿಷ್ಠ ಎಂದೇ ಹೆಸರುವಾಸಿಯಾದ ಗೌತಮ್ ಕುಮಾರ್‌ ಜೈನ್ ರವರು ಬಿಬಿಎಂಪಿಯ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸತ್ಯನಾರಾಯಣ್ ರವರ ವಿರುದ್ಧ ೧೭ ಮತಗಳ ಅಂತರದಿಂದ ಗೆದ್ದು ಮೇಯರ್ ಪಟ್ಟಕ್ಕೇರಿದ್ದಾರೆ.

ಬಿಜೆಪಿಯ ಗೌತಮ್ ಕುಮಾರ್‌ ಜೈನ್ ಪರವಾಗಿ ೧೨೯ ಮತಗಳು ಬಿದ್ದರೆ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿ ಪರವಾಗಿ ೧೧೨ ಮತಗಳು ಮಾತ್ರ ಬಿದ್ದಿವೆ. ಆ ಮೂಲಕ ಜೋಗು ಪಾಳ್ಯದ ಗೌತಮ್ ಕುಮಾರ್ ಮೇಯರ್ ಆಗಿ ಆಯ್ಕೆಯಾದರು. ಇನ್ನು ಉಪಮೇಯರ್ ಆಗಿ ಹೊಸಹಳ್ಳಿ ವಾರ್ಡ್‌‌ನ ಮಹಾಲಕ್ಷ್ಮಿ ಆಯ್ಕೆಯಾಗಿದ್ದಾರೆ. ಇವರು ವಿ ಸೋಮಣ್ಣರವರ ಆಪ್ತ ರವೀಂದ್ರರವರ ಮಗಳಾಗಿದ್ದಾರೆ.

ಆರಂಭದಲ್ಲಿ ಗೌತಮ್ ಕುಮಾರ್ ಒತ್ತಡಕ್ಕೆ ಸಿಲುಕಿದ್ದರು ಏಕೆಂದರೆ ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಪದ್ಮನಾಭರೆಡ್ಡಿಯವರು ಸಹ ನಾಮಪತ್ರ ಸಲ್ಲಿಸಿದ್ದರು. ಆದರೆ ಬಿಜೆಪಿ ನಾಯಕರು ಅವರ ಮನವೊಲಿಸಿ ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾದರು.

ಮೇಯರ್ ವಿರುದ್ಧ ಭಾರೀ ಅಪಸ್ವರ

ನೂತನ್ ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ರವರು ಆಯ್ಕೆಯಾಗುತ್ತಿದ್ದಂತೆಯೇ ಅಪಸ್ವರ ಜೋರಾಗಿ ಕೇಳಿಬಂದಿದೆ. ಬಿಜೆಪಿಯು ಈ ಬಾರಿ ಒಕ್ಕಲಿಗ ಸಮುದಾಯದ ವ್ಯಕ್ತಿಯನ್ನು ಮೇಯರ್ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ಕೊನೆ ಕ್ಷಣದಲ್ಲಿ ಜೈನ ಸಮುದಾಯದವರನ್ನು ಮೇಯರ್‌ ಮಾಡಿರುವುದು ಸರಿಯಲ್ಲ ಎಂದು ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಿಂದ ಒಕ್ಕಲಿಗ ಸಮುದಾಯದ ಎಲ್.ಶ್ರೀನಿವಾಸ್ ಮತ್ತು ಮುನೀಂದ್ರಕುಮಾರ್‌ರವರು ಮೇಯರ್ ಹುದ್ದೆಯ ಮೇಲೆ ಕಣ್ಣಿಟ್ಟಿದ್ದರು.

ಪರಭಾಷೆಯ ವ್ಯಕ್ತಿ ಬೆಂಗಳೂರಿನ ಮೇಯರ್‌ ಆಗುವುದು ಬೇಡ: ಕನ್ನಡಿಗರ ಆಗ್ರಹ

ಇದೇ ಸಮಯದಲ್ಲಿ ಕನ್ನಡ ಹೋರಾಟಗಾರರು ಸಹ ಗೌತಮ್ ಕುಮಾರ್‌ ಜೈನ್‌ರವರ ಆಯ್ಕೆಯನ್ನು ವಿರೋಧಿಸಿದ್ದಾರೆ. ಕನ್ನಡ ಹೋರಾಟಗಾರರನ್ನು ಜೈಲಿಗೆ ಕಳಿಸಿದ ಮಾರ್ವಾಡಿ ಸಮುದಾಯದ ವ್ಯಕ್ತಿಯನ್ನು ಮೇಯರ್ ಮಾಡಿದ ಬಿಜೆಪಿ ಕನ್ನಡ ವಿರೋಧಿ ಕ್ರಮ ಖಂಡಿಸಿ ಇಂದು ಸಂಜೆ ೬ ಗಂಟಗೆ ಟ್ವಿಟ್ಟರ್ ಅಭಿಯಾನವನ್ನು ಸಹ ಹಮ್ಮಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...