Homeಕರ್ನಾಟಕಬಿಜೆಪಿ ತೆಕ್ಕೆಗೆ ಬಿಬಿಎಂಪಿ : ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ಆಯ್ಕೆ

ಬಿಜೆಪಿ ತೆಕ್ಕೆಗೆ ಬಿಬಿಎಂಪಿ : ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ಆಯ್ಕೆ

- Advertisement -
- Advertisement -

ನಾಲ್ಕು ವರ್ಷಗಳಿಂದ ಬಿಬಿಎಂಪಿ ಮೇಯರ್ ಹುದ್ದೆ ಮೇಲೆ ಆಸೆಗಣ್ಣಿನಿಂದ ಕಾಯುತ್ತಿದ್ದ ಬಿಜೆಪಿಗೆ ಕೊನೆಗೂ ಗೆಲುವು ಸಿಕ್ಕಿದ್ದು ಇಂದು ನಡೆದ ಮೇಯರ್, ಉಪ ಮೇಯರ್ ಆಯ್ಕೆಯಲ್ಲಿ ಪ್ರಚಂಡ ಜಯ ಸಾಧಿಸಿದೆ.

೮೨ನೇ ವಾರ್ಡ್‌‌ನ ಆರ್‌.ಎಸ್‌.ಎಸ್ ನಿಷ್ಠ ಎಂದೇ ಹೆಸರುವಾಸಿಯಾದ ಗೌತಮ್ ಕುಮಾರ್‌ ಜೈನ್ ರವರು ಬಿಬಿಎಂಪಿಯ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸತ್ಯನಾರಾಯಣ್ ರವರ ವಿರುದ್ಧ ೧೭ ಮತಗಳ ಅಂತರದಿಂದ ಗೆದ್ದು ಮೇಯರ್ ಪಟ್ಟಕ್ಕೇರಿದ್ದಾರೆ.

ಬಿಜೆಪಿಯ ಗೌತಮ್ ಕುಮಾರ್‌ ಜೈನ್ ಪರವಾಗಿ ೧೨೯ ಮತಗಳು ಬಿದ್ದರೆ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿ ಪರವಾಗಿ ೧೧೨ ಮತಗಳು ಮಾತ್ರ ಬಿದ್ದಿವೆ. ಆ ಮೂಲಕ ಜೋಗು ಪಾಳ್ಯದ ಗೌತಮ್ ಕುಮಾರ್ ಮೇಯರ್ ಆಗಿ ಆಯ್ಕೆಯಾದರು. ಇನ್ನು ಉಪಮೇಯರ್ ಆಗಿ ಹೊಸಹಳ್ಳಿ ವಾರ್ಡ್‌‌ನ ಮಹಾಲಕ್ಷ್ಮಿ ಆಯ್ಕೆಯಾಗಿದ್ದಾರೆ. ಇವರು ವಿ ಸೋಮಣ್ಣರವರ ಆಪ್ತ ರವೀಂದ್ರರವರ ಮಗಳಾಗಿದ್ದಾರೆ.

ಆರಂಭದಲ್ಲಿ ಗೌತಮ್ ಕುಮಾರ್ ಒತ್ತಡಕ್ಕೆ ಸಿಲುಕಿದ್ದರು ಏಕೆಂದರೆ ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಪದ್ಮನಾಭರೆಡ್ಡಿಯವರು ಸಹ ನಾಮಪತ್ರ ಸಲ್ಲಿಸಿದ್ದರು. ಆದರೆ ಬಿಜೆಪಿ ನಾಯಕರು ಅವರ ಮನವೊಲಿಸಿ ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾದರು.

ಮೇಯರ್ ವಿರುದ್ಧ ಭಾರೀ ಅಪಸ್ವರ

ನೂತನ್ ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ರವರು ಆಯ್ಕೆಯಾಗುತ್ತಿದ್ದಂತೆಯೇ ಅಪಸ್ವರ ಜೋರಾಗಿ ಕೇಳಿಬಂದಿದೆ. ಬಿಜೆಪಿಯು ಈ ಬಾರಿ ಒಕ್ಕಲಿಗ ಸಮುದಾಯದ ವ್ಯಕ್ತಿಯನ್ನು ಮೇಯರ್ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ಕೊನೆ ಕ್ಷಣದಲ್ಲಿ ಜೈನ ಸಮುದಾಯದವರನ್ನು ಮೇಯರ್‌ ಮಾಡಿರುವುದು ಸರಿಯಲ್ಲ ಎಂದು ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಿಂದ ಒಕ್ಕಲಿಗ ಸಮುದಾಯದ ಎಲ್.ಶ್ರೀನಿವಾಸ್ ಮತ್ತು ಮುನೀಂದ್ರಕುಮಾರ್‌ರವರು ಮೇಯರ್ ಹುದ್ದೆಯ ಮೇಲೆ ಕಣ್ಣಿಟ್ಟಿದ್ದರು.

ಪರಭಾಷೆಯ ವ್ಯಕ್ತಿ ಬೆಂಗಳೂರಿನ ಮೇಯರ್‌ ಆಗುವುದು ಬೇಡ: ಕನ್ನಡಿಗರ ಆಗ್ರಹ

ಇದೇ ಸಮಯದಲ್ಲಿ ಕನ್ನಡ ಹೋರಾಟಗಾರರು ಸಹ ಗೌತಮ್ ಕುಮಾರ್‌ ಜೈನ್‌ರವರ ಆಯ್ಕೆಯನ್ನು ವಿರೋಧಿಸಿದ್ದಾರೆ. ಕನ್ನಡ ಹೋರಾಟಗಾರರನ್ನು ಜೈಲಿಗೆ ಕಳಿಸಿದ ಮಾರ್ವಾಡಿ ಸಮುದಾಯದ ವ್ಯಕ್ತಿಯನ್ನು ಮೇಯರ್ ಮಾಡಿದ ಬಿಜೆಪಿ ಕನ್ನಡ ವಿರೋಧಿ ಕ್ರಮ ಖಂಡಿಸಿ ಇಂದು ಸಂಜೆ ೬ ಗಂಟಗೆ ಟ್ವಿಟ್ಟರ್ ಅಭಿಯಾನವನ್ನು ಸಹ ಹಮ್ಮಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...