Homeಮುಖಪುಟಕೇರಳದಲ್ಲಿ ಹಿಂದೂಗಳ ಬೆಂಬಲದಿಂದ BJP 10ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ: ನಳಿನ್ ಕುಮಾರ್ ಕಟೀಲ್

ಕೇರಳದಲ್ಲಿ ಹಿಂದೂಗಳ ಬೆಂಬಲದಿಂದ BJP 10ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ: ನಳಿನ್ ಕುಮಾರ್ ಕಟೀಲ್

- Advertisement -
- Advertisement -

ಏಪ್ರಿಲ್ 6 ರಂದು ಕೇರಳದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಉತ್ತಮ ಸಾಧನೆ ಮಾಡಲಿದೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪುತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರ ಹೆಸರು ಕೇಳಿಬಂದಿದೆ. ಅಭಿವೃದ್ದಿ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಎಲ್‌ಡಿಎಫ್‌ ಭ್ರಷ್ಟಾಚಾರದಲ್ಲಿ ತೊಡಗಿದೆ. ಹಿಂದೂಗಳ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಯಲ್ಲಿ ಹಿಂದೂಗಳ ಮೇಲೆ ಈ ಸರ್ಕಾರ ದೌರ್ಜನ್ಯ ನಡೆಸುತ್ತಿದೆ. ಈ ಎಲ್ಲಾ ಕಾರಣದಿಂದ ಜನ ಬಿಜೆಪಿ ಕಡೆ ವಾಲುತ್ತಿದ್ದು ಈ ಚುನಾವಣೆಯಲ್ಲಿ ನಾವು 10 ಕ್ಕೂ ಅಧಿಕ ಸ್ಥಾನಗಳಲ್ಲಿ ಜಯ ಗಳಿಸುತ್ತೇವೆ” ಎಂದಿದ್ದಾರೆ.

ಕಳೆದೆರಡು ಚುಣಾವಣೆಗಳಲ್ಲಿ ಕೇರಳದ ಉಸ್ತುವಾರಿ ವಹಿಸಿಕೊಂಡು ಬಹಳ ಹತ್ತಿರದಿಂದ ನೋಡಿದ ಕಾರಣಕ್ಕೆ ನಾನು ಈ ಮಾತು ಹೇಳುತ್ತಿದ್ದೇನೆ. ಈ ಬಾರಿ ಜನ ಎಲ್‌ಡಿಎಫ್ ಮತ್ತು ಯುಡಿಎಫ್ ಎರಡನ್ನು ತಿರಸ್ಕರಿಸುತ್ತಾರೆ ಎಂದು ಕಟೀಲ್ ಹೇಳಿದ್ದಾರೆ.

“ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಸರ್ಕಾರದ ಸೋಲಾರ್ ಹಗರಣನ್ನು ಮುಂದಿಟ್ಟುಕೊಂಡು ಎಡಪಕ್ಷಗಳು ಉತ್ತಮ ಸಾಧನೆ ಮಾಡಿದ್ದವು. ಆದರೆ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದಿದ್ದ ಎಡಪಕ್ಷಗಳು ನಿರಂತರ ಭ್ರಷ್ಟಾಚಾರದಲ್ಲೇ ತೊಡಗಿಕೊಂಡಿವೆ. ಹಾಗಾಗಿ ಅವರು ಈ ಬಾರಿ ಸೋಲಲಿದ್ದಾರೆ ಎಂದಿದ್ದಾರೆ.

ಇನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಇ. ಶ್ರೀಧರನ್‌ ಕೆಲದಿನಗಳ ಹಿಂದೆ “ಬಿಜೆಪಿಗೆ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವ ಉತ್ತಮ ನಿರೀಕ್ಷೆಗಳಿವೆ. ಇದು ಸಂಪೂರ್ಣ ಬಹುಮತವಾಗಿರಬಹುದು ಅಥವಾ ಕಿಂಗ್‌ಮೇಕರ್‌ಗಳಾಗುವಷ್ಟು ಸಂಖ್ಯೆಯಲ್ಲಿ ಶಾಸಕಕರು ಇಲ್ಲಿ ಗೆಲ್ಲಲಿದ್ದಾರೆ” ಎಂದು ಹೇಳಿದ್ದರು.

ಕೇರಳ ಬಿಜೆಪಿಯ ಮುಖಂಡ ಹಾಗೂ ಪಕ್ಷದ ಏಕೈಕ ಶಾಸಕ ಒ. ರಾಜಗೋಪಾಲ್ ಮಾತನಾಡಿ “ಕೇರಳವು ಬೇರೆಯೆ ರೀತಿಯ ರಾಜ್ಯವಾಗಿದೆ. ಕೇರಳದ ಸಾಕ್ಷರತೆಯ ಪ್ರಮಾಣ 90% ಆಗಿದ್ದು, ಅವರು ಯೋಚಿಸುತ್ತಾರೆ ಮತ್ತು ಸಂವಹನ ನಡೆಸುತ್ತಾರೆ. ಇವು ವಿದ್ಯಾವಂತರ ಅಭ್ಯಾಸಗಳಾಗಿದ್ದು, ಅದೂ ಕೂಡ ಇಲ್ಲಿ ಬಿಜೆಪಿ ಬೆಳೆಯದಿರಲು ಒಂದು ಸಮಸ್ಯೆಯಾಗಿದೆ’’ ಎಂಬ ಹೇಳಿಕೆ ನೀಡುವ ಮೂಲಕ ಗಮನಸೆಳೆದಿದ್ದರು.


ಇದನ್ನೂ ಓದಿ: ಕೇರಳದಲ್ಲಿ ಸಾಕ್ಷರತೆಯಿದೆ, ಜನ ಯೋಚಿಸುತ್ತಾರೆ ಹಾಗಾಗಿ ಪಕ್ಷ ಬೆಳೆದಿಲ್ಲ: ಬಿಜೆಪಿಯ ಏಕೈಕ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...