Homeಮುಖಪುಟಬಂಗಾಳದಲ್ಲಿ ಹಿಂದುತ್ವದ ಉದಯ : ಮಮತಾ ಪಕ್ಷಕ್ಕೆ ಮರಣಗಂಟೆ

ಬಂಗಾಳದಲ್ಲಿ ಹಿಂದುತ್ವದ ಉದಯ : ಮಮತಾ ಪಕ್ಷಕ್ಕೆ ಮರಣಗಂಟೆ

ಬಂಗಾಳದಲ್ಲಿ ಬಿಜೆಪಿಯ ಕೇಸರಿ ಭಯೋತ್ಪಾದನೆಯ ಉದಯವು, ಎಡ ಪಕ್ಷಗಳ ಪುನರುತ್ಥಾನಕ್ಕೆ ನೆರವಾಗಬಹುದು... ಆದರೆ ಅದು ಮಮತಾ ನೇತೃತ್ವದ ಟಿಎಂಸಿಯ ಅಧ:ಪತನಕ್ಕೆ ಒಂದು ಮುನ್ನುಡಿಯಾಗಿದೆ.

- Advertisement -
- Advertisement -

| ಅರನಿ ಬಸು | ಸಂಶೋಧನಾ ವಿದ್ಯಾರ್ಥಿ

ಚರಿತ್ರೆಯನ್ನು ಸಂಯೋಜನಗೊಳಿಸುವ ಘಟನೆಗಳು ಇರುತ್ತವೆ. ಬಂಗಾಳದಲ್ಲಿ ಮೇ 23, 2019 ಅಂಥದ್ದೊಂದು. ಬಂಗಾಳದಲ್ಲಿ ಹಿಂದುತ್ವ ಬ್ರಿಗೇಡ್ ದೊಡ್ಡಮಟ್ಟದಲ್ಲಿ ಒಳಹೊಕ್ಕ ಮೇಲೆ, ಬರಲಿರುವ ದಿನಗಳಲ್ಲಿ ಇಲ್ಲಿನ ಸಮಾಜೋ-ಆರ್ಥಿಕ ವಿನ್ಯಾಸವೇ ತ್ವರಿತಗತಿಯಲ್ಲಿ ‘ಬಲ’ಕ್ಕೆ ಶಿಫ್ಟ್ ಆಗಬಹುದು. ಇದೇ ಹೊತ್ತಿಗೆ ಬಿಜೆಪಿಯ ಈ ಕ್ಷಿಪ್ರ ಉದಯವು, ಮಮತಾ ಬ್ಯಾನರ್ಜಿ ಮತ್ತವರ ಪಕ್ಷಕ್ಕೆ ಮರಣಗಂಟೆ ಆಗಲೂಬಹುದು.

ಬಿಜೆಪಿ ಹೀಗೆ ಬಂಗಾಳದಲ್ಲಿ ಗಟ್ಟಿಯಾಗಿ ಮತ್ತು ಅಗ್ರಸಿವ್ ಆಗಿ ನುಗ್ಗುತ್ತದೆ ಎಂದು ನಮ್ಮಲ್ಲಿ ಎಷ್ಟು ಜನ ಕಲ್ಪಿಸಿಕೊಂಡಿದ್ದೆವು? ಇಲ್ಲಿವರೆಗೆ ಬಂಗಾಳ ಮತ್ತು ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳು ಹಿಂದುತ್ವದ ಅಲೆಗೆ ವಿಚಲಿತರಾಗಿರಲಿಲ್ಲ. ಆದರೆ ಈಗ ಕೇಸರಿ ಅಲೆ ಬಂಗಾಳ ಹೊಕ್ಕಾಗಿದೆ, ಇದು ನಮಗೆ ಆತ್ಮವಿಮರ್ಶೆಯ ಕಾಲ. ಸದ್ಯಕ್ಕೆ ಇಲ್ಲಿ ಮೂರು ಪ್ರಶ್ನೆಗಳಿವೆ: 1) ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ 18 ಸೀಟು ಗಳಿಸಲು ಸಾಧ್ಯವಾದದ್ದು ಹೇಗೆ? 2) ಮಮತಾ ಬ್ಯಾನರ್ಜಿಗೆ ಕೈಕೊಟ್ಟಿದ್ದೇನು?. 3) ಬಂಗಾಳದಲ್ಲಿ ಮೊದಲ ಬಾರಿಗೆ ಸಿಪಿಎಂಗೆ ಒಂದೂ ಸೀಟು ಸಿಗಲಿಲ್ಲವೇಕೆ?

2019ರ ಫಲಿತಾಂಶಗಳು ಎರಡು ಅಂಶಗಳನ್ನು ಹೊರಹಾಕಿವೆ: ಜನರಿಗೆ ಮಮತಾ ನೇತೃತ್ವದ ಸರ್ಕಾರದ ಬಗ್ಗೆ ಅತೃಪ್ತಿಯಿತ್ತು… ಮತ್ತು ಎರಡನೇದಾಗಿ ಬಂಗಾಳದ ಜನತೆಗೆ ಕೇಸರಿ ಪಡೆಯನ್ನು ಅಪ್ಪಿಕೊಳ್ಳಲು ಯಾವ ಮುಜುಗುರವೂ ಇಲ್ಲ. ಎರಡೇ ಆಯ್ಕೆಗಳ ನಡುವೆ ಸಿಕ್ಕಿಕೊಂಡಾಗ ಸಿಪಿಎಂ ಸಹಜ ಆಯ್ಕೆ. ಆದರೆ ಅದರ ಸಂಘಟನೆಯ ಸತತ ವಿಘಟನೆಯ ಕಾರಣದಿಂದ ಅದು ಸಾಧ್ಯವಿಲ್ಲದ ಆಯ್ಕೆ.

ನಾವೀಗ ಕೊನೆ ಪ್ರಶ್ನೆಯತ್ತ ಗಮನ ಹರಿಸೋಣ. ಒಂದು ಕಾಲಕ್ಕೆ ಇಲ್ಲಿ ಗಟ್ಟಿ ತಳಹದಿ ಹೊಂದಿದ್ದ ಸಿಪಿಎಂಗೆ ಈಗ ನಾಯಕತ್ವದ ಕೊರತೆ, ಯುವಜನರ ಸಂಘಟನೆಯ ಕೊರತೆ ಮತ್ತು ತಳಮಟ್ಟದ ಸಂಪರ್ಕದ ಕೊರತೆ ಕಾಡುತ್ತಿವೆ. ಇಲ್ಲಿ ಲಕ್ಷಾಂತರ ಜನ ತಮ್ಮನ್ನು ಗುರುತಿಸಿಕೊಳ್ಳಬಯಸುವ ಯುವ ನಾಯಕರ ಕೊರತೆ ಸಿಪಿಎಂನಲ್ಲಿ ತುಂಬಾ ಇದೆ. ಈ ಸಲ ಸ್ವಾತಂತ್ರ್ಯಾ ನಂತರ ಅತಿ ಹೆಚ್ಚಿನ ಮತದಾನ (ಶೆ. 67.11) ಆಗಿದೆ. ಈ ದೃಷ್ಟಿಯಲ್ಲಿ ಈ ಲಕ್ಷಾಂತರ ಜನ ಯಾರಿಗೆ ಮತ ಹಾಕಿದರು? ಬಂಗಾಳದಲ್ಲಿ ಎಡಪಕ್ಷಗಳಿಗೆ ಹಾಕಿರುವ ಸಾಧ್ಯತೆಗಳೇ ಇಲ್ಲ. ಯುವ ನಾಯಕರ ಕೊರತೆ ಮತ್ತು ಒಂದು ಸ್ಪಷ್ಟ ಅಜೆಂಡಾದ ಕೊರತೆಯ ಕಾರಣಕ್ಕೆ. ಅದು ದುರಾದೃಷ್ಟ ಅನಿಸಿದರೂ ಬಂಗಾಳದಲ್ಲಿ ಸಿಪಿಎಂ ಒಂದೂ ಸೀಟೂ ಗೆಲ್ಲಲಿಲ್ಲ ಎನ್ನುವುದು ಅತಾರ್ಕಿಕವಂತೂ ಅಲ್ಲ.

ಎರಡನೇ ಪ್ರಶ್ನೆಗೆ ಬರುವುದಾದರೆ, ಯಾವುದೇ ಯೋಜನೆಗಳ ಜಾರಿಯ ಬಗ್ಗೆ ಕಾಳಜಿ ವಹಿಸದೇ ವೋಟ್‍ವ್ಯಾಂಕ್ ರಾಜಕಾರಣವನ್ನು ದೂರದಿಂದ (ಸುರಂಗ ದೃಷ್ಟಿ) ಅರ್ಥೈಸಿಕೊಂಡಿದ್ದೇ ಮಮತಾರಿಗೆ ಮುಳುವಾಯಿತು. ಪಶ್ಚಿಮ ಬಂಗಾಳದಲ್ಲಿ ಒಂದು ಬಲವಾದ ಅಲ್ಪಸಂಖ್ಯಾತ ಸಮುದಾಯವಿದೆ. ಬಾಬ್ರಿ ಮಸೀದಿ ಉರುಳಿದಾಗ ಈ ರಾಜ್ಯದಲ್ಲಿ ಯಾವುದೇ ಕೋಮು ಕಂಪನ ಸಂಭವಿಸಿರಲಿಲ್ಲ. ಆದರೆ ಈ 8-9 ವರ್ಷಗಳಲ್ಲಿ ಟಿಎಂಸಿ ಮಾಡಿದ ಓಲೈಸುವಿಕೆ ರಾಜಕೀಯ ಮತದಾರರಿಗೆ ಇಷ್ಟವಾಗಿಲ್ಲ ಅನಿಸುತ್ತದೆ. ಉದ್ಯೋಗ ಸೃಷಿಯಲ್ಲಿ ವಿಫಲತೆ, ರಾಜ್ಯದ ಒಳಭಾಗಗಳಲ್ಲಿ ದೌರ್ಜನ್ಯ ಮತ್ತು ಹಿಂಸೆಯ ಯತ್ನಗಳಿಂದಾಗಿ ಬೇಸರಗೊಂಡ ಹಿಂದೂಗಳು ಈ ಸಲ ಕೋಮುವಾದಿ ಹಿನ್ನೆಲೆಯಲ್ಲಿ ಬಿಜೆಪಿಗೆ ಮತ ಹಾಕಿದ್ದಾರೆ.

ಇದರ ಜೊತೆಗೆ ಬಿಜೆಪಿಯ ಸಂಘಟನಾ ಶಕ್ತಿ ಟಿಎಂಸಿ ಮತ್ತು ಸಿಪಿಎಂಗಿಂತ ಪ್ರಬಲವಾಗಿತ್ತು. ಹಿಂದುತ್ವ ಎಂಬ ‘ಮೇವನ್ನು’ ಹಿಡಿದು ಬಂದ ಅವರು, ಮತದಾರರ ನಾಡಿಮಿಡಿತವನ್ನು ಸರಿಯಾಗಿಯೇ ಗ್ರಹಿಸಿದರು, ಸರಿಯಾದ ಸಂದರ್ಭಕ್ಕೆ ಅವರನ್ನು ಹಿಡಿದುಕೊಂಡು ಪರಿಸ್ಥಿಯ ಲಾಭ ಪಡೆದುಕೊಂಡರು. ಈ ಐದು ವರ್ಷ ತಾವು ಎಂತಹ ಆಡಳಿತ ಕೊಟ್ಟೆವು ಎಂಬುದನನ್ನೇನೂ ಹೇಳಲಿಲ್ಲ, ಬದಲಿಗೆ ಏಕೀಕೃತ ಭಾರತದ ವಿಷಯವನ್ನು ‘ಮಾರಿದರು’. ಈಗ ಮತ್ತೆ ಮೊದಲ ಪ್ರಶ್ನೆ, ಅಂದರೆ ಬಿಜೆಪಿಗೆ 18 ಸೀಟು ಸಿಕ್ಕಿದ್ದು ಹೇಗೆ ಎಂಬುದಕ್ಕೆ ಬರೋಣ. ಅದಕ್ಕೆ ಕಾರಣ: ಟಿಎಂಸಿಯ ವಿಫಲಗೊಂಡ ಓಲೈಸುವಿಕೆಯ ನೀತಿ-ಕಾರ್ಯಕ್ರಮಗಳು ಮತ್ತು ಸಿಪಿಎಂ ಸಾರ್ವಜನಿಕ ಜೀವನದೊಂದಿಗೇ ಅದೃಶ್ಯವಾದದ್ದು.

ಮುಂದಿನ ದಾರಿಯ ಬಗ್ಗೆ ಯೋಚಿಸಿದಾಗ, ಬಂಗಾಳದಲ್ಲಿ ಬಿಜೆಪಿಯ ಕೇಸರಿ ಭಯೋತ್ಪಾದನೆಯ ಉದಯವು, ಎಡ ಪಕ್ಷಗಳ ಪುನರುತ್ಥಾನಕ್ಕೆ ನೆರವಾಗಬಹುದು… ಆದರೆ ಅದು ಮಮತಾ ನೇತೃತ್ವದ ಟಿಎಂಸಿಯ ಅಧ:ಪತನಕ್ಕೆ ಒಂದು ಮುನ್ನುಡಿಯಾಗಿದೆ. ಒಮ್ಮೆ ಬಿಜೆಪಿ ಬಂಗಾಳದಲ್ಲಿ ತನ್ನ ಕೋಮು ಭಯೋತ್ಪಾದನೆಯನ್ನು ಶುರು ಮಾಡಿದರೆ, ಆಡಳಿತದ ಬಗ್ಗೆ ಅದರ ನಿಷ್ಠೆ ಎಂಥದ್ದು ಎಂಬುದು ಜನತೆಗೆ ಅರ್ಥವಾಗಲಿದೆ. ಆಗವರು, ಸಾರ್ವಜನಿಕವಾಗಿ ಅಂತಹ ವೇಷವಿಲ್ಲದಿದ್ದರೂ ಅಂತರಾಳದಲ್ಲಿ ಕೋಮುವಾದಿಯೇ ಆಗಿರುವ ಟಿಎಂಸಿಯ ಆಶ್ರಯದ ಮೊರೆ ಹೋಗಲಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...