Homeಮುಖಪುಟಬಂಗಾಳದಲ್ಲಿ ಹಿಂದುತ್ವದ ಉದಯ : ಮಮತಾ ಪಕ್ಷಕ್ಕೆ ಮರಣಗಂಟೆ

ಬಂಗಾಳದಲ್ಲಿ ಹಿಂದುತ್ವದ ಉದಯ : ಮಮತಾ ಪಕ್ಷಕ್ಕೆ ಮರಣಗಂಟೆ

ಬಂಗಾಳದಲ್ಲಿ ಬಿಜೆಪಿಯ ಕೇಸರಿ ಭಯೋತ್ಪಾದನೆಯ ಉದಯವು, ಎಡ ಪಕ್ಷಗಳ ಪುನರುತ್ಥಾನಕ್ಕೆ ನೆರವಾಗಬಹುದು... ಆದರೆ ಅದು ಮಮತಾ ನೇತೃತ್ವದ ಟಿಎಂಸಿಯ ಅಧ:ಪತನಕ್ಕೆ ಒಂದು ಮುನ್ನುಡಿಯಾಗಿದೆ.

- Advertisement -
- Advertisement -

| ಅರನಿ ಬಸು | ಸಂಶೋಧನಾ ವಿದ್ಯಾರ್ಥಿ

ಚರಿತ್ರೆಯನ್ನು ಸಂಯೋಜನಗೊಳಿಸುವ ಘಟನೆಗಳು ಇರುತ್ತವೆ. ಬಂಗಾಳದಲ್ಲಿ ಮೇ 23, 2019 ಅಂಥದ್ದೊಂದು. ಬಂಗಾಳದಲ್ಲಿ ಹಿಂದುತ್ವ ಬ್ರಿಗೇಡ್ ದೊಡ್ಡಮಟ್ಟದಲ್ಲಿ ಒಳಹೊಕ್ಕ ಮೇಲೆ, ಬರಲಿರುವ ದಿನಗಳಲ್ಲಿ ಇಲ್ಲಿನ ಸಮಾಜೋ-ಆರ್ಥಿಕ ವಿನ್ಯಾಸವೇ ತ್ವರಿತಗತಿಯಲ್ಲಿ ‘ಬಲ’ಕ್ಕೆ ಶಿಫ್ಟ್ ಆಗಬಹುದು. ಇದೇ ಹೊತ್ತಿಗೆ ಬಿಜೆಪಿಯ ಈ ಕ್ಷಿಪ್ರ ಉದಯವು, ಮಮತಾ ಬ್ಯಾನರ್ಜಿ ಮತ್ತವರ ಪಕ್ಷಕ್ಕೆ ಮರಣಗಂಟೆ ಆಗಲೂಬಹುದು.

ಬಿಜೆಪಿ ಹೀಗೆ ಬಂಗಾಳದಲ್ಲಿ ಗಟ್ಟಿಯಾಗಿ ಮತ್ತು ಅಗ್ರಸಿವ್ ಆಗಿ ನುಗ್ಗುತ್ತದೆ ಎಂದು ನಮ್ಮಲ್ಲಿ ಎಷ್ಟು ಜನ ಕಲ್ಪಿಸಿಕೊಂಡಿದ್ದೆವು? ಇಲ್ಲಿವರೆಗೆ ಬಂಗಾಳ ಮತ್ತು ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳು ಹಿಂದುತ್ವದ ಅಲೆಗೆ ವಿಚಲಿತರಾಗಿರಲಿಲ್ಲ. ಆದರೆ ಈಗ ಕೇಸರಿ ಅಲೆ ಬಂಗಾಳ ಹೊಕ್ಕಾಗಿದೆ, ಇದು ನಮಗೆ ಆತ್ಮವಿಮರ್ಶೆಯ ಕಾಲ. ಸದ್ಯಕ್ಕೆ ಇಲ್ಲಿ ಮೂರು ಪ್ರಶ್ನೆಗಳಿವೆ: 1) ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ 18 ಸೀಟು ಗಳಿಸಲು ಸಾಧ್ಯವಾದದ್ದು ಹೇಗೆ? 2) ಮಮತಾ ಬ್ಯಾನರ್ಜಿಗೆ ಕೈಕೊಟ್ಟಿದ್ದೇನು?. 3) ಬಂಗಾಳದಲ್ಲಿ ಮೊದಲ ಬಾರಿಗೆ ಸಿಪಿಎಂಗೆ ಒಂದೂ ಸೀಟು ಸಿಗಲಿಲ್ಲವೇಕೆ?

2019ರ ಫಲಿತಾಂಶಗಳು ಎರಡು ಅಂಶಗಳನ್ನು ಹೊರಹಾಕಿವೆ: ಜನರಿಗೆ ಮಮತಾ ನೇತೃತ್ವದ ಸರ್ಕಾರದ ಬಗ್ಗೆ ಅತೃಪ್ತಿಯಿತ್ತು… ಮತ್ತು ಎರಡನೇದಾಗಿ ಬಂಗಾಳದ ಜನತೆಗೆ ಕೇಸರಿ ಪಡೆಯನ್ನು ಅಪ್ಪಿಕೊಳ್ಳಲು ಯಾವ ಮುಜುಗುರವೂ ಇಲ್ಲ. ಎರಡೇ ಆಯ್ಕೆಗಳ ನಡುವೆ ಸಿಕ್ಕಿಕೊಂಡಾಗ ಸಿಪಿಎಂ ಸಹಜ ಆಯ್ಕೆ. ಆದರೆ ಅದರ ಸಂಘಟನೆಯ ಸತತ ವಿಘಟನೆಯ ಕಾರಣದಿಂದ ಅದು ಸಾಧ್ಯವಿಲ್ಲದ ಆಯ್ಕೆ.

ನಾವೀಗ ಕೊನೆ ಪ್ರಶ್ನೆಯತ್ತ ಗಮನ ಹರಿಸೋಣ. ಒಂದು ಕಾಲಕ್ಕೆ ಇಲ್ಲಿ ಗಟ್ಟಿ ತಳಹದಿ ಹೊಂದಿದ್ದ ಸಿಪಿಎಂಗೆ ಈಗ ನಾಯಕತ್ವದ ಕೊರತೆ, ಯುವಜನರ ಸಂಘಟನೆಯ ಕೊರತೆ ಮತ್ತು ತಳಮಟ್ಟದ ಸಂಪರ್ಕದ ಕೊರತೆ ಕಾಡುತ್ತಿವೆ. ಇಲ್ಲಿ ಲಕ್ಷಾಂತರ ಜನ ತಮ್ಮನ್ನು ಗುರುತಿಸಿಕೊಳ್ಳಬಯಸುವ ಯುವ ನಾಯಕರ ಕೊರತೆ ಸಿಪಿಎಂನಲ್ಲಿ ತುಂಬಾ ಇದೆ. ಈ ಸಲ ಸ್ವಾತಂತ್ರ್ಯಾ ನಂತರ ಅತಿ ಹೆಚ್ಚಿನ ಮತದಾನ (ಶೆ. 67.11) ಆಗಿದೆ. ಈ ದೃಷ್ಟಿಯಲ್ಲಿ ಈ ಲಕ್ಷಾಂತರ ಜನ ಯಾರಿಗೆ ಮತ ಹಾಕಿದರು? ಬಂಗಾಳದಲ್ಲಿ ಎಡಪಕ್ಷಗಳಿಗೆ ಹಾಕಿರುವ ಸಾಧ್ಯತೆಗಳೇ ಇಲ್ಲ. ಯುವ ನಾಯಕರ ಕೊರತೆ ಮತ್ತು ಒಂದು ಸ್ಪಷ್ಟ ಅಜೆಂಡಾದ ಕೊರತೆಯ ಕಾರಣಕ್ಕೆ. ಅದು ದುರಾದೃಷ್ಟ ಅನಿಸಿದರೂ ಬಂಗಾಳದಲ್ಲಿ ಸಿಪಿಎಂ ಒಂದೂ ಸೀಟೂ ಗೆಲ್ಲಲಿಲ್ಲ ಎನ್ನುವುದು ಅತಾರ್ಕಿಕವಂತೂ ಅಲ್ಲ.

ಎರಡನೇ ಪ್ರಶ್ನೆಗೆ ಬರುವುದಾದರೆ, ಯಾವುದೇ ಯೋಜನೆಗಳ ಜಾರಿಯ ಬಗ್ಗೆ ಕಾಳಜಿ ವಹಿಸದೇ ವೋಟ್‍ವ್ಯಾಂಕ್ ರಾಜಕಾರಣವನ್ನು ದೂರದಿಂದ (ಸುರಂಗ ದೃಷ್ಟಿ) ಅರ್ಥೈಸಿಕೊಂಡಿದ್ದೇ ಮಮತಾರಿಗೆ ಮುಳುವಾಯಿತು. ಪಶ್ಚಿಮ ಬಂಗಾಳದಲ್ಲಿ ಒಂದು ಬಲವಾದ ಅಲ್ಪಸಂಖ್ಯಾತ ಸಮುದಾಯವಿದೆ. ಬಾಬ್ರಿ ಮಸೀದಿ ಉರುಳಿದಾಗ ಈ ರಾಜ್ಯದಲ್ಲಿ ಯಾವುದೇ ಕೋಮು ಕಂಪನ ಸಂಭವಿಸಿರಲಿಲ್ಲ. ಆದರೆ ಈ 8-9 ವರ್ಷಗಳಲ್ಲಿ ಟಿಎಂಸಿ ಮಾಡಿದ ಓಲೈಸುವಿಕೆ ರಾಜಕೀಯ ಮತದಾರರಿಗೆ ಇಷ್ಟವಾಗಿಲ್ಲ ಅನಿಸುತ್ತದೆ. ಉದ್ಯೋಗ ಸೃಷಿಯಲ್ಲಿ ವಿಫಲತೆ, ರಾಜ್ಯದ ಒಳಭಾಗಗಳಲ್ಲಿ ದೌರ್ಜನ್ಯ ಮತ್ತು ಹಿಂಸೆಯ ಯತ್ನಗಳಿಂದಾಗಿ ಬೇಸರಗೊಂಡ ಹಿಂದೂಗಳು ಈ ಸಲ ಕೋಮುವಾದಿ ಹಿನ್ನೆಲೆಯಲ್ಲಿ ಬಿಜೆಪಿಗೆ ಮತ ಹಾಕಿದ್ದಾರೆ.

ಇದರ ಜೊತೆಗೆ ಬಿಜೆಪಿಯ ಸಂಘಟನಾ ಶಕ್ತಿ ಟಿಎಂಸಿ ಮತ್ತು ಸಿಪಿಎಂಗಿಂತ ಪ್ರಬಲವಾಗಿತ್ತು. ಹಿಂದುತ್ವ ಎಂಬ ‘ಮೇವನ್ನು’ ಹಿಡಿದು ಬಂದ ಅವರು, ಮತದಾರರ ನಾಡಿಮಿಡಿತವನ್ನು ಸರಿಯಾಗಿಯೇ ಗ್ರಹಿಸಿದರು, ಸರಿಯಾದ ಸಂದರ್ಭಕ್ಕೆ ಅವರನ್ನು ಹಿಡಿದುಕೊಂಡು ಪರಿಸ್ಥಿಯ ಲಾಭ ಪಡೆದುಕೊಂಡರು. ಈ ಐದು ವರ್ಷ ತಾವು ಎಂತಹ ಆಡಳಿತ ಕೊಟ್ಟೆವು ಎಂಬುದನನ್ನೇನೂ ಹೇಳಲಿಲ್ಲ, ಬದಲಿಗೆ ಏಕೀಕೃತ ಭಾರತದ ವಿಷಯವನ್ನು ‘ಮಾರಿದರು’. ಈಗ ಮತ್ತೆ ಮೊದಲ ಪ್ರಶ್ನೆ, ಅಂದರೆ ಬಿಜೆಪಿಗೆ 18 ಸೀಟು ಸಿಕ್ಕಿದ್ದು ಹೇಗೆ ಎಂಬುದಕ್ಕೆ ಬರೋಣ. ಅದಕ್ಕೆ ಕಾರಣ: ಟಿಎಂಸಿಯ ವಿಫಲಗೊಂಡ ಓಲೈಸುವಿಕೆಯ ನೀತಿ-ಕಾರ್ಯಕ್ರಮಗಳು ಮತ್ತು ಸಿಪಿಎಂ ಸಾರ್ವಜನಿಕ ಜೀವನದೊಂದಿಗೇ ಅದೃಶ್ಯವಾದದ್ದು.

ಮುಂದಿನ ದಾರಿಯ ಬಗ್ಗೆ ಯೋಚಿಸಿದಾಗ, ಬಂಗಾಳದಲ್ಲಿ ಬಿಜೆಪಿಯ ಕೇಸರಿ ಭಯೋತ್ಪಾದನೆಯ ಉದಯವು, ಎಡ ಪಕ್ಷಗಳ ಪುನರುತ್ಥಾನಕ್ಕೆ ನೆರವಾಗಬಹುದು… ಆದರೆ ಅದು ಮಮತಾ ನೇತೃತ್ವದ ಟಿಎಂಸಿಯ ಅಧ:ಪತನಕ್ಕೆ ಒಂದು ಮುನ್ನುಡಿಯಾಗಿದೆ. ಒಮ್ಮೆ ಬಿಜೆಪಿ ಬಂಗಾಳದಲ್ಲಿ ತನ್ನ ಕೋಮು ಭಯೋತ್ಪಾದನೆಯನ್ನು ಶುರು ಮಾಡಿದರೆ, ಆಡಳಿತದ ಬಗ್ಗೆ ಅದರ ನಿಷ್ಠೆ ಎಂಥದ್ದು ಎಂಬುದು ಜನತೆಗೆ ಅರ್ಥವಾಗಲಿದೆ. ಆಗವರು, ಸಾರ್ವಜನಿಕವಾಗಿ ಅಂತಹ ವೇಷವಿಲ್ಲದಿದ್ದರೂ ಅಂತರಾಳದಲ್ಲಿ ಕೋಮುವಾದಿಯೇ ಆಗಿರುವ ಟಿಎಂಸಿಯ ಆಶ್ರಯದ ಮೊರೆ ಹೋಗಲಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....