Homeಕರ್ನಾಟಕಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ ಗೆಲುವು: ಡಿ.ಕೆ.ಶಿವಕುಮಾರ್ ಆರೋಪ

ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ ಗೆಲುವು: ಡಿ.ಕೆ.ಶಿವಕುಮಾರ್ ಆರೋಪ

ಬಿಜೆಪಿಯವರು 15 ವರ್ಷಗಳಿಂದ ಹುಬ್ಬಳ್ಳಿ-ಧಾರವಾಡದಲ್ಲಿ ಆಡಳಿತ ಮಾಡುತ್ತಿದ್ದು, ಹಾಲಿ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಇಲ್ಲಿನವರೇ ಆಗಿದ್ದರು. ಇಲ್ಲಿ ತಮಗೆ ಬೇಕಾದ ರೀತಿಯಲ್ಲಿ ಮೀಸಲಾತಿ ನಿಗದಿ ಮಾಡಿದ್ದಾರೆ: ಡಿ.ಕೆ.ಶಿವಕುಮಾರ್

- Advertisement -
- Advertisement -

ಕಲಬುರಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಫಲಿತಾಂಶ ಸಮಾಧಾನ ತಂದಿದೆ. ತರೀಕೆರೆ, ಬೆಳಗಾವಿಯಲ್ಲಿ ನಾವು ಮೊದಲ ಬಾರಿಗೆ ಚಿಹ್ನೆ ಮೇಲೆ ಸ್ಪರ್ಧೆ ಮಾಡಿದ್ದೆವು. ಹೀಗಾಗಿ ನಾವು ಧೃತಿಗೆಡುವ ಅಗತ್ಯವಿಲ್ಲ. ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಗೆದ್ದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ನಮಗೆ ಸಂಖ್ಯೆ ಕಡಿಮೆ ಬಂದಿರಬಹುದು, ನಮ್ಮ ಪಕ್ಷದ ಐವರು ಬಂಡಾಯ ಸದಸ್ಯರು ಗೆದ್ದಿದ್ದು, ಎಲ್ಲ ಒಟ್ಟಾಗಿ ಸೇರಿಸಿದರೆ ಕಾಂಗ್ರೆಸ್ ವಿಚಾರ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚು ಬೆಂಬಲ ಸಿಗುತ್ತದೆ. ಬಿಜೆಪಿಯವರು 15 ವರ್ಷಗಳಿಂದ ಆಡಳಿತ ಮಾಡುತ್ತಿದ್ದು, ಹಾಲಿ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಇಲ್ಲಿನವರೇ ಆಗಿದ್ದರು. ಇಲ್ಲಿ ತಮಗೆ ಬೇಕಾದ ರೀತಿಯಲ್ಲಿ ಮೀಸಲಾತಿ ನಿಗದಿ ಮಾಡಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿದರು.

ನಮಗೆ ಸಂಖ್ಯಾಬಲ ಇಲ್ಲದಿದ್ದರೂ ಮತದಾರರು ನಮಗೆ ಉತ್ತಮ ಫಲಿತಾಂಶ ನೀಡಿದ್ದಾರೆ. ನಾವು ಜನರ ಸೇವೆ ಮುಂದುವರೆಸಿಕೊಂಡು ಹೋಗುತ್ತೇವೆ. ನಮ್ಮ ಸದಸ್ಯರು ಜನರ ಸೇವೆ ಮಾಡುತ್ತಾರೆ. ನಮ್ಮ ಬಂಡಾಯ ಅಭ್ಯರ್ಥಿಗಳು ಕರೆ ಮಾಡಿ ನಾವು ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲೇ ಉಳಿಯುತ್ತೇವೆ ಎಂದಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಎಲ್‌ಪಿಜಿ ಬೆಲೆ ಏರಿಕೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ವಿಶೇಷ ವಿಡಿಯೋ ಬಿಡುಗಡೆ

ಈ ಫಲಿತಾಂಶ ಬಿಜೆಪಿ ಸರ್ಕಾರದ ಆಡಳಿತದ ಪರ ಬಂದಿದೆಯಾ? ಅಥವಾ ವಿರೋಧವಾಗಿ ಬಂದಿದೆಯಾ? ಎಂದು ಜಗದೀಶ್ ಶೆಟ್ಟರ್ ಅವರೇ ಹೇಳಬೇಕು. ಅವರೇ ಸರ್ಟಿಫಿಕೇಟ್ ನೀಡಲಿ. ಮುಂದೆಯೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಬಳ್ಳಾರಿ, ತೀರ್ಥಹಳ್ಳಿ, ರಾಮನಗರದಲ್ಲಿ ಫಲಿತಾಂಶ ಬಂದು ನಾಲ್ಕು ತಿಂಗಳಾಗಿದೆ. ಜನರ ಕೈಗೆ ಅಧಿಕಾರ ನೀಡಬೇಕು. ಹೀಗಾಗಿ ಶೀಘ್ರ ಉಳಿದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದರು.

ನಾವು ಟಿಕೆಟ್ ಹಂಚಿಕೆಯಲ್ಲಿ ಎಡವಿದ್ದೇವೆ. ಅದು ನಮ್ಮ ತಪ್ಪು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಲ್ಲಿನ ವಿಚಾರ, ಅಭ್ಯರ್ಥಿ ಶಕ್ತಿ ಮುಖ್ಯವಾಗುತ್ತದೆ. ವಿಧಾನಸಭೆ ಹಾಗೂ ಸಂಸತ್ ಚುನಾವಣೆಯಲ್ಲಿ ಬೇರೆ ವಿಚಾರ ಮುಖ್ಯವಾಗುತ್ತದೆ. ಪಕ್ಷಗಳು ಏನೇ ಮಾಡಿದರೂ ಮತದಾರರು ಅವರದೇ ಲೆಕ್ಕಾಚಾರ ಮಾಡಿರುತ್ತಾರೆ. ನಮ್ಮ ಪಕ್ಷದಲ್ಲಿದ್ದವರು ಕೆಲವರು ಬೇರೆ ಪಕ್ಷಗಳಿಂದ ನಿಂತು ಗೆದ್ದಿದ್ದಾರೆ. ನಮಗೆ ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲರೂ ಒಂದು. ಬೇಧ-ಭಾವ ಏನಿದ್ದರೂ ಬಿಜೆಪಿಯಲ್ಲಿದೆ. ನಮ್ಮ ನಾಯಕರು ಚುನಾವಣೆ ಪ್ರಚಾರಕ್ಕೆ ವಾರ್ಡ್, ವಾರ್ಡ್‌ಗೂ ತೆರಳಿದ್ದಾರೆ. ಬಿಜೆಪಿಯವರಂತೆ ನಮಗೆ ಧನಶಕ್ತಿ ಇಲ್ಲದಿರಬಹುದು. ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಾಯಕತ್ವ ಬದಲಾವಣೆ ಮಾಡುತ್ತಿರುವುದು, ರಾಜ್ಯಗಳಲ್ಲಿ ಅವರ ನಾಯಕತ್ವ ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯವಾಗಿದೆ, ಭ್ರಷ್ಟಾಚಾರ ಹೆಚ್ಚಾಗಿದೆ, ಉತ್ತಮ ಆಡಳಿತ ನೀಡಲು ಸಾಧ್ಯವಾಗಿಲ್ಲ ಎಂಬುದಕ್ಕೆ ಸಾಕ್ಷಿ. ಇದೇ ಕಾರಣಕ್ಕೆ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಆರೋಗ್ಯ ಸಚಿವರನ್ನು ಬದಲಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಂದ 4 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದು, ಸಾವಿನ ಸಂಖ್ಯೆಯ ಆಡಿಟ್ ಮಾಡಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲ ಮೃತರ ಕುಟುಂಬಗಳಿಗೂ ಪರಿಹಾರ ನೀಡಬೇಕು ಎಂಬುದು ನಮ್ಮ ಬೇಡಿಕೆ. ಈ ವಿಚಾರವನ್ನು ನಾವು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಪಾಲಿಕೆ ಚುನಾವಣಾ ಫಲಿತಾಂಶ: ಕಲಬುರಗಿ ಕಾಂಗ್ರೆಸ್‌ಗೆ, ಬೆಳಗಾವಿ, ಹು-ಧಾರವಾಡ ಬಿಜೆಪಿಗೆ, ಕಾಣೆಯಾದ ಜೆಡಿಎಸ್

ನೂತನ ಮುಖ್ಯಮಂತ್ರಿಗಳು ಕೋವಿಡ್ ಸಮಯದಲ್ಲಿ ಅನ್ಯಾಯಕ್ಕೆ ಒಳಗಾದವರಿಗೆ, ಆಸ್ಪತ್ರೆಯಲ್ಲಿ ಲಕ್ಷಾಂತರ ರೂಪಾಯಿ ಹಣ ವೆಚ್ಚ ಮಾಡಿದವರಿಗೆ ಸಹಾಯ ಮಾಡಲಿ, ಸತ್ತವರಿಗೆ ಪರಿಹಾರ ನೀಡಲಿ, ಅಸಂಘಟಿತ ಕಾರ್ಮಿಕರು, ರೈತರಿಗೆ ಆಗಿರುವ ನಷ್ಟ ತುಂಬಿಕೊಡಲಿ. ಮಹದಾಯಿ, ಕೃಷ್ಣ, ಮೇಕೆದಾಟು ವಿಚಾರದಲ್ಲಿ ಇಷ್ಟು ದಿನ ಬೊಮ್ಮಾಯಿ ಅವರು, ಶೆಟ್ಟರ್ ಅವರು ಏನು ಹೇಳುತ್ತಿದ್ದರು! ಈಗ ಅಧಿಕಾರ ಅವರ ಕೈಯಲ್ಲೇ ಇದೆ. ಈಗ ಏನು ಮಾಡುತ್ತೀರಾ ಎಂದು ಅವರನ್ನೇ ಕೇಳಿ ಎಂದು ಹೇಳಿದರು.

ನಾನು, ದೇಶಪಾಂಡೆ ಅವರು, ಧ್ರುವನಾರಾಯಣ ಅವರು, ಶಿವಾನಂದ ಪಾಟೀಲ್ ಅವರು, ಹುಬ್ಬಳ್ಳಿ-ಧಾರವಾಡದ ಎಲ್ಲ ಪ್ರಬುದ್ಧ ಮತದಾರರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಸಾಷ್ಟಾಂಗ ನಮಸ್ಕಾರ ಸಲ್ಲಿಸಲು ಬಂದಿದ್ದೇವೆ. ನಿಮ್ಮ ವಿಶ್ವಾಸ ಹಾಗೂ ನಂಬಿಕೆಯನ್ನು ಉಳಿಸಿಕೊಂಡು ಹೋಗುತ್ತೇವೆ ಎಂದು ಭರವಸೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...