Homeಕರ್ನಾಟಕಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ ಗೆಲುವು: ಡಿ.ಕೆ.ಶಿವಕುಮಾರ್ ಆರೋಪ

ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ ಗೆಲುವು: ಡಿ.ಕೆ.ಶಿವಕುಮಾರ್ ಆರೋಪ

ಬಿಜೆಪಿಯವರು 15 ವರ್ಷಗಳಿಂದ ಹುಬ್ಬಳ್ಳಿ-ಧಾರವಾಡದಲ್ಲಿ ಆಡಳಿತ ಮಾಡುತ್ತಿದ್ದು, ಹಾಲಿ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಇಲ್ಲಿನವರೇ ಆಗಿದ್ದರು. ಇಲ್ಲಿ ತಮಗೆ ಬೇಕಾದ ರೀತಿಯಲ್ಲಿ ಮೀಸಲಾತಿ ನಿಗದಿ ಮಾಡಿದ್ದಾರೆ: ಡಿ.ಕೆ.ಶಿವಕುಮಾರ್

- Advertisement -
- Advertisement -

ಕಲಬುರಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಫಲಿತಾಂಶ ಸಮಾಧಾನ ತಂದಿದೆ. ತರೀಕೆರೆ, ಬೆಳಗಾವಿಯಲ್ಲಿ ನಾವು ಮೊದಲ ಬಾರಿಗೆ ಚಿಹ್ನೆ ಮೇಲೆ ಸ್ಪರ್ಧೆ ಮಾಡಿದ್ದೆವು. ಹೀಗಾಗಿ ನಾವು ಧೃತಿಗೆಡುವ ಅಗತ್ಯವಿಲ್ಲ. ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಗೆದ್ದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ನಮಗೆ ಸಂಖ್ಯೆ ಕಡಿಮೆ ಬಂದಿರಬಹುದು, ನಮ್ಮ ಪಕ್ಷದ ಐವರು ಬಂಡಾಯ ಸದಸ್ಯರು ಗೆದ್ದಿದ್ದು, ಎಲ್ಲ ಒಟ್ಟಾಗಿ ಸೇರಿಸಿದರೆ ಕಾಂಗ್ರೆಸ್ ವಿಚಾರ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚು ಬೆಂಬಲ ಸಿಗುತ್ತದೆ. ಬಿಜೆಪಿಯವರು 15 ವರ್ಷಗಳಿಂದ ಆಡಳಿತ ಮಾಡುತ್ತಿದ್ದು, ಹಾಲಿ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಇಲ್ಲಿನವರೇ ಆಗಿದ್ದರು. ಇಲ್ಲಿ ತಮಗೆ ಬೇಕಾದ ರೀತಿಯಲ್ಲಿ ಮೀಸಲಾತಿ ನಿಗದಿ ಮಾಡಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿದರು.

ನಮಗೆ ಸಂಖ್ಯಾಬಲ ಇಲ್ಲದಿದ್ದರೂ ಮತದಾರರು ನಮಗೆ ಉತ್ತಮ ಫಲಿತಾಂಶ ನೀಡಿದ್ದಾರೆ. ನಾವು ಜನರ ಸೇವೆ ಮುಂದುವರೆಸಿಕೊಂಡು ಹೋಗುತ್ತೇವೆ. ನಮ್ಮ ಸದಸ್ಯರು ಜನರ ಸೇವೆ ಮಾಡುತ್ತಾರೆ. ನಮ್ಮ ಬಂಡಾಯ ಅಭ್ಯರ್ಥಿಗಳು ಕರೆ ಮಾಡಿ ನಾವು ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲೇ ಉಳಿಯುತ್ತೇವೆ ಎಂದಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಎಲ್‌ಪಿಜಿ ಬೆಲೆ ಏರಿಕೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ವಿಶೇಷ ವಿಡಿಯೋ ಬಿಡುಗಡೆ

ಈ ಫಲಿತಾಂಶ ಬಿಜೆಪಿ ಸರ್ಕಾರದ ಆಡಳಿತದ ಪರ ಬಂದಿದೆಯಾ? ಅಥವಾ ವಿರೋಧವಾಗಿ ಬಂದಿದೆಯಾ? ಎಂದು ಜಗದೀಶ್ ಶೆಟ್ಟರ್ ಅವರೇ ಹೇಳಬೇಕು. ಅವರೇ ಸರ್ಟಿಫಿಕೇಟ್ ನೀಡಲಿ. ಮುಂದೆಯೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಬಳ್ಳಾರಿ, ತೀರ್ಥಹಳ್ಳಿ, ರಾಮನಗರದಲ್ಲಿ ಫಲಿತಾಂಶ ಬಂದು ನಾಲ್ಕು ತಿಂಗಳಾಗಿದೆ. ಜನರ ಕೈಗೆ ಅಧಿಕಾರ ನೀಡಬೇಕು. ಹೀಗಾಗಿ ಶೀಘ್ರ ಉಳಿದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದರು.

ನಾವು ಟಿಕೆಟ್ ಹಂಚಿಕೆಯಲ್ಲಿ ಎಡವಿದ್ದೇವೆ. ಅದು ನಮ್ಮ ತಪ್ಪು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಲ್ಲಿನ ವಿಚಾರ, ಅಭ್ಯರ್ಥಿ ಶಕ್ತಿ ಮುಖ್ಯವಾಗುತ್ತದೆ. ವಿಧಾನಸಭೆ ಹಾಗೂ ಸಂಸತ್ ಚುನಾವಣೆಯಲ್ಲಿ ಬೇರೆ ವಿಚಾರ ಮುಖ್ಯವಾಗುತ್ತದೆ. ಪಕ್ಷಗಳು ಏನೇ ಮಾಡಿದರೂ ಮತದಾರರು ಅವರದೇ ಲೆಕ್ಕಾಚಾರ ಮಾಡಿರುತ್ತಾರೆ. ನಮ್ಮ ಪಕ್ಷದಲ್ಲಿದ್ದವರು ಕೆಲವರು ಬೇರೆ ಪಕ್ಷಗಳಿಂದ ನಿಂತು ಗೆದ್ದಿದ್ದಾರೆ. ನಮಗೆ ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲರೂ ಒಂದು. ಬೇಧ-ಭಾವ ಏನಿದ್ದರೂ ಬಿಜೆಪಿಯಲ್ಲಿದೆ. ನಮ್ಮ ನಾಯಕರು ಚುನಾವಣೆ ಪ್ರಚಾರಕ್ಕೆ ವಾರ್ಡ್, ವಾರ್ಡ್‌ಗೂ ತೆರಳಿದ್ದಾರೆ. ಬಿಜೆಪಿಯವರಂತೆ ನಮಗೆ ಧನಶಕ್ತಿ ಇಲ್ಲದಿರಬಹುದು. ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಾಯಕತ್ವ ಬದಲಾವಣೆ ಮಾಡುತ್ತಿರುವುದು, ರಾಜ್ಯಗಳಲ್ಲಿ ಅವರ ನಾಯಕತ್ವ ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯವಾಗಿದೆ, ಭ್ರಷ್ಟಾಚಾರ ಹೆಚ್ಚಾಗಿದೆ, ಉತ್ತಮ ಆಡಳಿತ ನೀಡಲು ಸಾಧ್ಯವಾಗಿಲ್ಲ ಎಂಬುದಕ್ಕೆ ಸಾಕ್ಷಿ. ಇದೇ ಕಾರಣಕ್ಕೆ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಆರೋಗ್ಯ ಸಚಿವರನ್ನು ಬದಲಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಂದ 4 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದು, ಸಾವಿನ ಸಂಖ್ಯೆಯ ಆಡಿಟ್ ಮಾಡಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲ ಮೃತರ ಕುಟುಂಬಗಳಿಗೂ ಪರಿಹಾರ ನೀಡಬೇಕು ಎಂಬುದು ನಮ್ಮ ಬೇಡಿಕೆ. ಈ ವಿಚಾರವನ್ನು ನಾವು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಪಾಲಿಕೆ ಚುನಾವಣಾ ಫಲಿತಾಂಶ: ಕಲಬುರಗಿ ಕಾಂಗ್ರೆಸ್‌ಗೆ, ಬೆಳಗಾವಿ, ಹು-ಧಾರವಾಡ ಬಿಜೆಪಿಗೆ, ಕಾಣೆಯಾದ ಜೆಡಿಎಸ್

ನೂತನ ಮುಖ್ಯಮಂತ್ರಿಗಳು ಕೋವಿಡ್ ಸಮಯದಲ್ಲಿ ಅನ್ಯಾಯಕ್ಕೆ ಒಳಗಾದವರಿಗೆ, ಆಸ್ಪತ್ರೆಯಲ್ಲಿ ಲಕ್ಷಾಂತರ ರೂಪಾಯಿ ಹಣ ವೆಚ್ಚ ಮಾಡಿದವರಿಗೆ ಸಹಾಯ ಮಾಡಲಿ, ಸತ್ತವರಿಗೆ ಪರಿಹಾರ ನೀಡಲಿ, ಅಸಂಘಟಿತ ಕಾರ್ಮಿಕರು, ರೈತರಿಗೆ ಆಗಿರುವ ನಷ್ಟ ತುಂಬಿಕೊಡಲಿ. ಮಹದಾಯಿ, ಕೃಷ್ಣ, ಮೇಕೆದಾಟು ವಿಚಾರದಲ್ಲಿ ಇಷ್ಟು ದಿನ ಬೊಮ್ಮಾಯಿ ಅವರು, ಶೆಟ್ಟರ್ ಅವರು ಏನು ಹೇಳುತ್ತಿದ್ದರು! ಈಗ ಅಧಿಕಾರ ಅವರ ಕೈಯಲ್ಲೇ ಇದೆ. ಈಗ ಏನು ಮಾಡುತ್ತೀರಾ ಎಂದು ಅವರನ್ನೇ ಕೇಳಿ ಎಂದು ಹೇಳಿದರು.

ನಾನು, ದೇಶಪಾಂಡೆ ಅವರು, ಧ್ರುವನಾರಾಯಣ ಅವರು, ಶಿವಾನಂದ ಪಾಟೀಲ್ ಅವರು, ಹುಬ್ಬಳ್ಳಿ-ಧಾರವಾಡದ ಎಲ್ಲ ಪ್ರಬುದ್ಧ ಮತದಾರರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಸಾಷ್ಟಾಂಗ ನಮಸ್ಕಾರ ಸಲ್ಲಿಸಲು ಬಂದಿದ್ದೇವೆ. ನಿಮ್ಮ ವಿಶ್ವಾಸ ಹಾಗೂ ನಂಬಿಕೆಯನ್ನು ಉಳಿಸಿಕೊಂಡು ಹೋಗುತ್ತೇವೆ ಎಂದು ಭರವಸೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...