Homeಕರ್ನಾಟಕಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ ಗೆಲುವು: ಡಿ.ಕೆ.ಶಿವಕುಮಾರ್ ಆರೋಪ

ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ ಗೆಲುವು: ಡಿ.ಕೆ.ಶಿವಕುಮಾರ್ ಆರೋಪ

ಬಿಜೆಪಿಯವರು 15 ವರ್ಷಗಳಿಂದ ಹುಬ್ಬಳ್ಳಿ-ಧಾರವಾಡದಲ್ಲಿ ಆಡಳಿತ ಮಾಡುತ್ತಿದ್ದು, ಹಾಲಿ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಇಲ್ಲಿನವರೇ ಆಗಿದ್ದರು. ಇಲ್ಲಿ ತಮಗೆ ಬೇಕಾದ ರೀತಿಯಲ್ಲಿ ಮೀಸಲಾತಿ ನಿಗದಿ ಮಾಡಿದ್ದಾರೆ: ಡಿ.ಕೆ.ಶಿವಕುಮಾರ್

- Advertisement -
- Advertisement -

ಕಲಬುರಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಫಲಿತಾಂಶ ಸಮಾಧಾನ ತಂದಿದೆ. ತರೀಕೆರೆ, ಬೆಳಗಾವಿಯಲ್ಲಿ ನಾವು ಮೊದಲ ಬಾರಿಗೆ ಚಿಹ್ನೆ ಮೇಲೆ ಸ್ಪರ್ಧೆ ಮಾಡಿದ್ದೆವು. ಹೀಗಾಗಿ ನಾವು ಧೃತಿಗೆಡುವ ಅಗತ್ಯವಿಲ್ಲ. ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಗೆದ್ದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ನಮಗೆ ಸಂಖ್ಯೆ ಕಡಿಮೆ ಬಂದಿರಬಹುದು, ನಮ್ಮ ಪಕ್ಷದ ಐವರು ಬಂಡಾಯ ಸದಸ್ಯರು ಗೆದ್ದಿದ್ದು, ಎಲ್ಲ ಒಟ್ಟಾಗಿ ಸೇರಿಸಿದರೆ ಕಾಂಗ್ರೆಸ್ ವಿಚಾರ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚು ಬೆಂಬಲ ಸಿಗುತ್ತದೆ. ಬಿಜೆಪಿಯವರು 15 ವರ್ಷಗಳಿಂದ ಆಡಳಿತ ಮಾಡುತ್ತಿದ್ದು, ಹಾಲಿ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಇಲ್ಲಿನವರೇ ಆಗಿದ್ದರು. ಇಲ್ಲಿ ತಮಗೆ ಬೇಕಾದ ರೀತಿಯಲ್ಲಿ ಮೀಸಲಾತಿ ನಿಗದಿ ಮಾಡಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿದರು.

ನಮಗೆ ಸಂಖ್ಯಾಬಲ ಇಲ್ಲದಿದ್ದರೂ ಮತದಾರರು ನಮಗೆ ಉತ್ತಮ ಫಲಿತಾಂಶ ನೀಡಿದ್ದಾರೆ. ನಾವು ಜನರ ಸೇವೆ ಮುಂದುವರೆಸಿಕೊಂಡು ಹೋಗುತ್ತೇವೆ. ನಮ್ಮ ಸದಸ್ಯರು ಜನರ ಸೇವೆ ಮಾಡುತ್ತಾರೆ. ನಮ್ಮ ಬಂಡಾಯ ಅಭ್ಯರ್ಥಿಗಳು ಕರೆ ಮಾಡಿ ನಾವು ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲೇ ಉಳಿಯುತ್ತೇವೆ ಎಂದಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಎಲ್‌ಪಿಜಿ ಬೆಲೆ ಏರಿಕೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ವಿಶೇಷ ವಿಡಿಯೋ ಬಿಡುಗಡೆ

ಈ ಫಲಿತಾಂಶ ಬಿಜೆಪಿ ಸರ್ಕಾರದ ಆಡಳಿತದ ಪರ ಬಂದಿದೆಯಾ? ಅಥವಾ ವಿರೋಧವಾಗಿ ಬಂದಿದೆಯಾ? ಎಂದು ಜಗದೀಶ್ ಶೆಟ್ಟರ್ ಅವರೇ ಹೇಳಬೇಕು. ಅವರೇ ಸರ್ಟಿಫಿಕೇಟ್ ನೀಡಲಿ. ಮುಂದೆಯೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಬಳ್ಳಾರಿ, ತೀರ್ಥಹಳ್ಳಿ, ರಾಮನಗರದಲ್ಲಿ ಫಲಿತಾಂಶ ಬಂದು ನಾಲ್ಕು ತಿಂಗಳಾಗಿದೆ. ಜನರ ಕೈಗೆ ಅಧಿಕಾರ ನೀಡಬೇಕು. ಹೀಗಾಗಿ ಶೀಘ್ರ ಉಳಿದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದರು.

ನಾವು ಟಿಕೆಟ್ ಹಂಚಿಕೆಯಲ್ಲಿ ಎಡವಿದ್ದೇವೆ. ಅದು ನಮ್ಮ ತಪ್ಪು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಲ್ಲಿನ ವಿಚಾರ, ಅಭ್ಯರ್ಥಿ ಶಕ್ತಿ ಮುಖ್ಯವಾಗುತ್ತದೆ. ವಿಧಾನಸಭೆ ಹಾಗೂ ಸಂಸತ್ ಚುನಾವಣೆಯಲ್ಲಿ ಬೇರೆ ವಿಚಾರ ಮುಖ್ಯವಾಗುತ್ತದೆ. ಪಕ್ಷಗಳು ಏನೇ ಮಾಡಿದರೂ ಮತದಾರರು ಅವರದೇ ಲೆಕ್ಕಾಚಾರ ಮಾಡಿರುತ್ತಾರೆ. ನಮ್ಮ ಪಕ್ಷದಲ್ಲಿದ್ದವರು ಕೆಲವರು ಬೇರೆ ಪಕ್ಷಗಳಿಂದ ನಿಂತು ಗೆದ್ದಿದ್ದಾರೆ. ನಮಗೆ ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲರೂ ಒಂದು. ಬೇಧ-ಭಾವ ಏನಿದ್ದರೂ ಬಿಜೆಪಿಯಲ್ಲಿದೆ. ನಮ್ಮ ನಾಯಕರು ಚುನಾವಣೆ ಪ್ರಚಾರಕ್ಕೆ ವಾರ್ಡ್, ವಾರ್ಡ್‌ಗೂ ತೆರಳಿದ್ದಾರೆ. ಬಿಜೆಪಿಯವರಂತೆ ನಮಗೆ ಧನಶಕ್ತಿ ಇಲ್ಲದಿರಬಹುದು. ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಾಯಕತ್ವ ಬದಲಾವಣೆ ಮಾಡುತ್ತಿರುವುದು, ರಾಜ್ಯಗಳಲ್ಲಿ ಅವರ ನಾಯಕತ್ವ ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯವಾಗಿದೆ, ಭ್ರಷ್ಟಾಚಾರ ಹೆಚ್ಚಾಗಿದೆ, ಉತ್ತಮ ಆಡಳಿತ ನೀಡಲು ಸಾಧ್ಯವಾಗಿಲ್ಲ ಎಂಬುದಕ್ಕೆ ಸಾಕ್ಷಿ. ಇದೇ ಕಾರಣಕ್ಕೆ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಆರೋಗ್ಯ ಸಚಿವರನ್ನು ಬದಲಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಂದ 4 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದು, ಸಾವಿನ ಸಂಖ್ಯೆಯ ಆಡಿಟ್ ಮಾಡಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲ ಮೃತರ ಕುಟುಂಬಗಳಿಗೂ ಪರಿಹಾರ ನೀಡಬೇಕು ಎಂಬುದು ನಮ್ಮ ಬೇಡಿಕೆ. ಈ ವಿಚಾರವನ್ನು ನಾವು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಪಾಲಿಕೆ ಚುನಾವಣಾ ಫಲಿತಾಂಶ: ಕಲಬುರಗಿ ಕಾಂಗ್ರೆಸ್‌ಗೆ, ಬೆಳಗಾವಿ, ಹು-ಧಾರವಾಡ ಬಿಜೆಪಿಗೆ, ಕಾಣೆಯಾದ ಜೆಡಿಎಸ್

ನೂತನ ಮುಖ್ಯಮಂತ್ರಿಗಳು ಕೋವಿಡ್ ಸಮಯದಲ್ಲಿ ಅನ್ಯಾಯಕ್ಕೆ ಒಳಗಾದವರಿಗೆ, ಆಸ್ಪತ್ರೆಯಲ್ಲಿ ಲಕ್ಷಾಂತರ ರೂಪಾಯಿ ಹಣ ವೆಚ್ಚ ಮಾಡಿದವರಿಗೆ ಸಹಾಯ ಮಾಡಲಿ, ಸತ್ತವರಿಗೆ ಪರಿಹಾರ ನೀಡಲಿ, ಅಸಂಘಟಿತ ಕಾರ್ಮಿಕರು, ರೈತರಿಗೆ ಆಗಿರುವ ನಷ್ಟ ತುಂಬಿಕೊಡಲಿ. ಮಹದಾಯಿ, ಕೃಷ್ಣ, ಮೇಕೆದಾಟು ವಿಚಾರದಲ್ಲಿ ಇಷ್ಟು ದಿನ ಬೊಮ್ಮಾಯಿ ಅವರು, ಶೆಟ್ಟರ್ ಅವರು ಏನು ಹೇಳುತ್ತಿದ್ದರು! ಈಗ ಅಧಿಕಾರ ಅವರ ಕೈಯಲ್ಲೇ ಇದೆ. ಈಗ ಏನು ಮಾಡುತ್ತೀರಾ ಎಂದು ಅವರನ್ನೇ ಕೇಳಿ ಎಂದು ಹೇಳಿದರು.

ನಾನು, ದೇಶಪಾಂಡೆ ಅವರು, ಧ್ರುವನಾರಾಯಣ ಅವರು, ಶಿವಾನಂದ ಪಾಟೀಲ್ ಅವರು, ಹುಬ್ಬಳ್ಳಿ-ಧಾರವಾಡದ ಎಲ್ಲ ಪ್ರಬುದ್ಧ ಮತದಾರರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಸಾಷ್ಟಾಂಗ ನಮಸ್ಕಾರ ಸಲ್ಲಿಸಲು ಬಂದಿದ್ದೇವೆ. ನಿಮ್ಮ ವಿಶ್ವಾಸ ಹಾಗೂ ನಂಬಿಕೆಯನ್ನು ಉಳಿಸಿಕೊಂಡು ಹೋಗುತ್ತೇವೆ ಎಂದು ಭರವಸೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...