Homeಕರ್ನಾಟಕಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ ಗೆಲುವು: ಡಿ.ಕೆ.ಶಿವಕುಮಾರ್ ಆರೋಪ

ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ ಗೆಲುವು: ಡಿ.ಕೆ.ಶಿವಕುಮಾರ್ ಆರೋಪ

ಬಿಜೆಪಿಯವರು 15 ವರ್ಷಗಳಿಂದ ಹುಬ್ಬಳ್ಳಿ-ಧಾರವಾಡದಲ್ಲಿ ಆಡಳಿತ ಮಾಡುತ್ತಿದ್ದು, ಹಾಲಿ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಇಲ್ಲಿನವರೇ ಆಗಿದ್ದರು. ಇಲ್ಲಿ ತಮಗೆ ಬೇಕಾದ ರೀತಿಯಲ್ಲಿ ಮೀಸಲಾತಿ ನಿಗದಿ ಮಾಡಿದ್ದಾರೆ: ಡಿ.ಕೆ.ಶಿವಕುಮಾರ್

- Advertisement -
- Advertisement -

ಕಲಬುರಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಫಲಿತಾಂಶ ಸಮಾಧಾನ ತಂದಿದೆ. ತರೀಕೆರೆ, ಬೆಳಗಾವಿಯಲ್ಲಿ ನಾವು ಮೊದಲ ಬಾರಿಗೆ ಚಿಹ್ನೆ ಮೇಲೆ ಸ್ಪರ್ಧೆ ಮಾಡಿದ್ದೆವು. ಹೀಗಾಗಿ ನಾವು ಧೃತಿಗೆಡುವ ಅಗತ್ಯವಿಲ್ಲ. ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಗೆದ್ದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ನಮಗೆ ಸಂಖ್ಯೆ ಕಡಿಮೆ ಬಂದಿರಬಹುದು, ನಮ್ಮ ಪಕ್ಷದ ಐವರು ಬಂಡಾಯ ಸದಸ್ಯರು ಗೆದ್ದಿದ್ದು, ಎಲ್ಲ ಒಟ್ಟಾಗಿ ಸೇರಿಸಿದರೆ ಕಾಂಗ್ರೆಸ್ ವಿಚಾರ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚು ಬೆಂಬಲ ಸಿಗುತ್ತದೆ. ಬಿಜೆಪಿಯವರು 15 ವರ್ಷಗಳಿಂದ ಆಡಳಿತ ಮಾಡುತ್ತಿದ್ದು, ಹಾಲಿ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಇಲ್ಲಿನವರೇ ಆಗಿದ್ದರು. ಇಲ್ಲಿ ತಮಗೆ ಬೇಕಾದ ರೀತಿಯಲ್ಲಿ ಮೀಸಲಾತಿ ನಿಗದಿ ಮಾಡಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿದರು.

ನಮಗೆ ಸಂಖ್ಯಾಬಲ ಇಲ್ಲದಿದ್ದರೂ ಮತದಾರರು ನಮಗೆ ಉತ್ತಮ ಫಲಿತಾಂಶ ನೀಡಿದ್ದಾರೆ. ನಾವು ಜನರ ಸೇವೆ ಮುಂದುವರೆಸಿಕೊಂಡು ಹೋಗುತ್ತೇವೆ. ನಮ್ಮ ಸದಸ್ಯರು ಜನರ ಸೇವೆ ಮಾಡುತ್ತಾರೆ. ನಮ್ಮ ಬಂಡಾಯ ಅಭ್ಯರ್ಥಿಗಳು ಕರೆ ಮಾಡಿ ನಾವು ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲೇ ಉಳಿಯುತ್ತೇವೆ ಎಂದಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಎಲ್‌ಪಿಜಿ ಬೆಲೆ ಏರಿಕೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ವಿಶೇಷ ವಿಡಿಯೋ ಬಿಡುಗಡೆ

ಈ ಫಲಿತಾಂಶ ಬಿಜೆಪಿ ಸರ್ಕಾರದ ಆಡಳಿತದ ಪರ ಬಂದಿದೆಯಾ? ಅಥವಾ ವಿರೋಧವಾಗಿ ಬಂದಿದೆಯಾ? ಎಂದು ಜಗದೀಶ್ ಶೆಟ್ಟರ್ ಅವರೇ ಹೇಳಬೇಕು. ಅವರೇ ಸರ್ಟಿಫಿಕೇಟ್ ನೀಡಲಿ. ಮುಂದೆಯೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಬಳ್ಳಾರಿ, ತೀರ್ಥಹಳ್ಳಿ, ರಾಮನಗರದಲ್ಲಿ ಫಲಿತಾಂಶ ಬಂದು ನಾಲ್ಕು ತಿಂಗಳಾಗಿದೆ. ಜನರ ಕೈಗೆ ಅಧಿಕಾರ ನೀಡಬೇಕು. ಹೀಗಾಗಿ ಶೀಘ್ರ ಉಳಿದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದರು.

ನಾವು ಟಿಕೆಟ್ ಹಂಚಿಕೆಯಲ್ಲಿ ಎಡವಿದ್ದೇವೆ. ಅದು ನಮ್ಮ ತಪ್ಪು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಲ್ಲಿನ ವಿಚಾರ, ಅಭ್ಯರ್ಥಿ ಶಕ್ತಿ ಮುಖ್ಯವಾಗುತ್ತದೆ. ವಿಧಾನಸಭೆ ಹಾಗೂ ಸಂಸತ್ ಚುನಾವಣೆಯಲ್ಲಿ ಬೇರೆ ವಿಚಾರ ಮುಖ್ಯವಾಗುತ್ತದೆ. ಪಕ್ಷಗಳು ಏನೇ ಮಾಡಿದರೂ ಮತದಾರರು ಅವರದೇ ಲೆಕ್ಕಾಚಾರ ಮಾಡಿರುತ್ತಾರೆ. ನಮ್ಮ ಪಕ್ಷದಲ್ಲಿದ್ದವರು ಕೆಲವರು ಬೇರೆ ಪಕ್ಷಗಳಿಂದ ನಿಂತು ಗೆದ್ದಿದ್ದಾರೆ. ನಮಗೆ ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲರೂ ಒಂದು. ಬೇಧ-ಭಾವ ಏನಿದ್ದರೂ ಬಿಜೆಪಿಯಲ್ಲಿದೆ. ನಮ್ಮ ನಾಯಕರು ಚುನಾವಣೆ ಪ್ರಚಾರಕ್ಕೆ ವಾರ್ಡ್, ವಾರ್ಡ್‌ಗೂ ತೆರಳಿದ್ದಾರೆ. ಬಿಜೆಪಿಯವರಂತೆ ನಮಗೆ ಧನಶಕ್ತಿ ಇಲ್ಲದಿರಬಹುದು. ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಾಯಕತ್ವ ಬದಲಾವಣೆ ಮಾಡುತ್ತಿರುವುದು, ರಾಜ್ಯಗಳಲ್ಲಿ ಅವರ ನಾಯಕತ್ವ ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯವಾಗಿದೆ, ಭ್ರಷ್ಟಾಚಾರ ಹೆಚ್ಚಾಗಿದೆ, ಉತ್ತಮ ಆಡಳಿತ ನೀಡಲು ಸಾಧ್ಯವಾಗಿಲ್ಲ ಎಂಬುದಕ್ಕೆ ಸಾಕ್ಷಿ. ಇದೇ ಕಾರಣಕ್ಕೆ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಆರೋಗ್ಯ ಸಚಿವರನ್ನು ಬದಲಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಂದ 4 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದು, ಸಾವಿನ ಸಂಖ್ಯೆಯ ಆಡಿಟ್ ಮಾಡಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲ ಮೃತರ ಕುಟುಂಬಗಳಿಗೂ ಪರಿಹಾರ ನೀಡಬೇಕು ಎಂಬುದು ನಮ್ಮ ಬೇಡಿಕೆ. ಈ ವಿಚಾರವನ್ನು ನಾವು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಪಾಲಿಕೆ ಚುನಾವಣಾ ಫಲಿತಾಂಶ: ಕಲಬುರಗಿ ಕಾಂಗ್ರೆಸ್‌ಗೆ, ಬೆಳಗಾವಿ, ಹು-ಧಾರವಾಡ ಬಿಜೆಪಿಗೆ, ಕಾಣೆಯಾದ ಜೆಡಿಎಸ್

ನೂತನ ಮುಖ್ಯಮಂತ್ರಿಗಳು ಕೋವಿಡ್ ಸಮಯದಲ್ಲಿ ಅನ್ಯಾಯಕ್ಕೆ ಒಳಗಾದವರಿಗೆ, ಆಸ್ಪತ್ರೆಯಲ್ಲಿ ಲಕ್ಷಾಂತರ ರೂಪಾಯಿ ಹಣ ವೆಚ್ಚ ಮಾಡಿದವರಿಗೆ ಸಹಾಯ ಮಾಡಲಿ, ಸತ್ತವರಿಗೆ ಪರಿಹಾರ ನೀಡಲಿ, ಅಸಂಘಟಿತ ಕಾರ್ಮಿಕರು, ರೈತರಿಗೆ ಆಗಿರುವ ನಷ್ಟ ತುಂಬಿಕೊಡಲಿ. ಮಹದಾಯಿ, ಕೃಷ್ಣ, ಮೇಕೆದಾಟು ವಿಚಾರದಲ್ಲಿ ಇಷ್ಟು ದಿನ ಬೊಮ್ಮಾಯಿ ಅವರು, ಶೆಟ್ಟರ್ ಅವರು ಏನು ಹೇಳುತ್ತಿದ್ದರು! ಈಗ ಅಧಿಕಾರ ಅವರ ಕೈಯಲ್ಲೇ ಇದೆ. ಈಗ ಏನು ಮಾಡುತ್ತೀರಾ ಎಂದು ಅವರನ್ನೇ ಕೇಳಿ ಎಂದು ಹೇಳಿದರು.

ನಾನು, ದೇಶಪಾಂಡೆ ಅವರು, ಧ್ರುವನಾರಾಯಣ ಅವರು, ಶಿವಾನಂದ ಪಾಟೀಲ್ ಅವರು, ಹುಬ್ಬಳ್ಳಿ-ಧಾರವಾಡದ ಎಲ್ಲ ಪ್ರಬುದ್ಧ ಮತದಾರರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಸಾಷ್ಟಾಂಗ ನಮಸ್ಕಾರ ಸಲ್ಲಿಸಲು ಬಂದಿದ್ದೇವೆ. ನಿಮ್ಮ ವಿಶ್ವಾಸ ಹಾಗೂ ನಂಬಿಕೆಯನ್ನು ಉಳಿಸಿಕೊಂಡು ಹೋಗುತ್ತೇವೆ ಎಂದು ಭರವಸೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...