Homeಮುಖಪುಟನೀತಿಗೆಟ್ಟ ರಾಜಕೀಯದ ಮೂಲಕ ಗುಜರಾತ್‌ನಲ್ಲಿ ಬಿಜೆಪಿ ಗೆದ್ದಿದೆ: ಎಚ್‌.ಸಿ.ಮಹದೇವಪ್ಪ

ನೀತಿಗೆಟ್ಟ ರಾಜಕೀಯದ ಮೂಲಕ ಗುಜರಾತ್‌ನಲ್ಲಿ ಬಿಜೆಪಿ ಗೆದ್ದಿದೆ: ಎಚ್‌.ಸಿ.ಮಹದೇವಪ್ಪ

- Advertisement -
- Advertisement -

“ನೀತಿಗೆಟ್ಟ ರಾಜಕಾರಣದ ಮೂಲಕ ಬಿಜೆಪಿ ಗುಜರಾತ್‌ನಲ್ಲಿ ಜಯ ಸಾಧಿಸಿದೆ” ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಆರೋಪಿಸಿದ್ದಾರೆ.

ಗುಜರಾತ್‌ ಚುನಾವಣಾ ಫಲಿತಾಂಶದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, “ಈ ಬಾರಿ ಕಾಂಗ್ರೆಸ್ ಪಕ್ಷವು ಬಹುಮತ ಪಡೆಯಲಿದೆ ಎಂಬ ಸುಳಿವು ಸಿಕ್ಕ ಕೂಡಲೇ ಬಿಜೆಪಿಯವರು ಇನ್ನಿಲ್ಲದ ಕೀಳು ರಾಜಕೀಯವನ್ನು ಮಾಡಲು ಆರಂಭಿಸಿದರು” ಎಂದು ಆರೋಪಿಸಿದ್ದಾರೆ.

“ಗುಜರಾತ್ ಕಾಂಗ್ರೆಸ್‌ನ ಪ್ರಮುಖ ನಾಯಕರಾಗಿದ್ದ ಅಲ್ಪೇಶ್ ಠಾಕೂರ್ ಅವರನ್ನು ತಮ್ಮ ಎಲ್ಲಾ ನೀತಿಗೆಟ್ಟ ಪ್ರಯತ್ನಗಳ ಮೂಲಕ ಬಿಜೆಪಿ ತನ್ನೊಳಗೆ ಸೇರಿಸಿಕೊಂಡಿತು. ನಂತರ ಪಾಟೀದಾರ್ ಹೋರಾಟದ ರುವಾರಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿದ್ದ ಹಾರ್ದಿಕ ಪಟೇಲ್ ಅವರನ್ನು ಇ.ಡಿ., ಐ.ಟಿ. ದಾಳಿಗಳ ಮೂಲಕ ಬಿಜೆಪಿ ಸೇರಿಸಿಕೊಂಡಿತು” ಎಂದು ದೂರಿದ್ದಾರೆ.

“ಇದಿಷ್ಟು ಸಾಲದು ಎಂಬಂತೆ ಈ ಬಾರಿ ಗುಜರಾತ್‌ನಲ್ಲಿ ಗೆಲುವು ಕಾಣಲಿದ್ದ ಸುಮಾರು 60ಕ್ಕೂ ಹೆಚ್ಚಿನ ಜನ ಕಾಂಗ್ರೆಸ್ ನಾಯಕರನ್ನು ಬಿಜೆಪಿ ತನ್ನೊಳಗೆ ಸೇರಿಸಿಕೊಳ್ಳುವ ಮೂಲಕ ಅಕ್ಷರಶಃ ನೀತಿಗೆಟ್ಟ ರಾಜಕೀಯವನ್ನು ಮಾಡಿತು” ಎಂದಿದ್ದಾರೆ.

“ಗುಜರಾತ್‌ನಲ್ಲಿ ಬಿಜೆಪಿ ಬಹುಮತವನ್ನು ಪಡೆದುಕೊಂಡಿದೆ. 2017ನೇ ಚುನಾವಣೆಯಲ್ಲಿ 82 ಸೀಟುಗಳನ್ನು ಕಾಂಗ್ರೆಸ್ ಪಡೆದಿತ್ತು. ಬಿಜೆಪಿ 100ರ ಒಳಗೆ ಕುಸಿದಿತ್ತು. ನಿಜಕ್ಕೂ ಹೇಳಬೇಕೆಂದರೆ ಈ ಬಾರಿ ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷ ಬಹುಮತವನ್ನು ಪಡೆದೇ ತೀರುತ್ತಿತ್ತು. ಆದರೆ ಬಿಜೆಪಿ ನೀತಿಗೆಟ್ಟ ರಾಜಕಾರಣ ಮಾಡಿತು” ಎಂದು ಟೀಕಿಸಿದ್ದಾರೆ.

“ನಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳುವಂತೆ ಚುನಾವಣೆಗಳನ್ನು ನೇರವಾಗಿ ಎದುರಿಸುವ ಧಮ್ಮು, ತಾಕತ್ತು ಇಲ್ಲದ ಬಿಜೆಪಿಗರು ಕಾಂಗ್ರೆಸಿಗರನ್ನೇ ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ನಾವು ಕಾಂಗ್ರೆಸ್ ಸೋಲಿಸಿದೆವು ಎಂದರೆ ಎಲ್ಲಿಂದ ನಗಬೇಕು ಹೇಳಿ?” ಎಂದು ವ್ಯಂಗ್ಯವಾಡಿದ್ದಾರೆ.

“ಅದಕ್ಕಿಂತಲೂ ಮುಖ್ಯವಾಗಿ ರಾಜಕೀಯ ಪಕ್ಷವೊಂದನ್ನು ತೊರೆದು ಸಿದ್ಧಾಂತ ಇಲ್ಲದೇ ಅವಕಾಶವಾದಿತನದಿಂದ ವರ್ತಿಸಿದರೆ ಪಕ್ಷ ದುರ್ಬಲಗೊಳ್ಳುತ್ತದೆ. ಗುಜರಾತ್ ಚುನಾವಣೆಯಲ್ಲಿ ಈ ಬಾರಿ ಉಂಟಾದ ಸೋಲು ಇಂತಹ ಸಿದ್ದಾಂತ ರಹಿತ ವ್ಯಕ್ತಿಗಳ ದ್ರೋಹದ ಫಲವೇ ಆಗಿದೆ” ಎಂದು ವಿಷಾದಿಸಿದ್ದಾರೆ.

“ಹೀಗೆ ಹೇಳಿದರೆ ನೀವು ಮತ್ತು ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲಿಲ್ಲವೇ ಎಂದು ಕೆಲವರು ಬಾಯಿ ಚಟಕ್ಕೆ ಮಾತನಾಡುತ್ತಾರೆ. ಆದರೆ ಜೆಡಿಎಸ್‌ನಿಂದ ನಾವು ಹೊರಗೆ ಬರಲಿಲ್ಲ, ಎಲ್ಲಿ ಹಿಂದುಳಿದವರಿಗೆ ದೊಡ್ಡ ಹುದ್ದೆ ಕೊಡಬೇಕಾಗುತ್ತದೋ ಎಂದು ಅವರೇ ನಮ್ಮನ್ನು ಪಕ್ಷದಿಂದ ಹೊರಹಾಕಿದರು. ಇದನ್ನು ತಿಳಿಯದೇ ಮಾತನಾಡುವವರು ಅರ್ಥ ಮಾಡಿಕೊಂಡರೆ ಒಳ್ಳೆಯದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...