Homeಮುಖಪುಟನೀತಿಗೆಟ್ಟ ರಾಜಕೀಯದ ಮೂಲಕ ಗುಜರಾತ್‌ನಲ್ಲಿ ಬಿಜೆಪಿ ಗೆದ್ದಿದೆ: ಎಚ್‌.ಸಿ.ಮಹದೇವಪ್ಪ

ನೀತಿಗೆಟ್ಟ ರಾಜಕೀಯದ ಮೂಲಕ ಗುಜರಾತ್‌ನಲ್ಲಿ ಬಿಜೆಪಿ ಗೆದ್ದಿದೆ: ಎಚ್‌.ಸಿ.ಮಹದೇವಪ್ಪ

- Advertisement -
- Advertisement -

“ನೀತಿಗೆಟ್ಟ ರಾಜಕಾರಣದ ಮೂಲಕ ಬಿಜೆಪಿ ಗುಜರಾತ್‌ನಲ್ಲಿ ಜಯ ಸಾಧಿಸಿದೆ” ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಆರೋಪಿಸಿದ್ದಾರೆ.

ಗುಜರಾತ್‌ ಚುನಾವಣಾ ಫಲಿತಾಂಶದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, “ಈ ಬಾರಿ ಕಾಂಗ್ರೆಸ್ ಪಕ್ಷವು ಬಹುಮತ ಪಡೆಯಲಿದೆ ಎಂಬ ಸುಳಿವು ಸಿಕ್ಕ ಕೂಡಲೇ ಬಿಜೆಪಿಯವರು ಇನ್ನಿಲ್ಲದ ಕೀಳು ರಾಜಕೀಯವನ್ನು ಮಾಡಲು ಆರಂಭಿಸಿದರು” ಎಂದು ಆರೋಪಿಸಿದ್ದಾರೆ.

“ಗುಜರಾತ್ ಕಾಂಗ್ರೆಸ್‌ನ ಪ್ರಮುಖ ನಾಯಕರಾಗಿದ್ದ ಅಲ್ಪೇಶ್ ಠಾಕೂರ್ ಅವರನ್ನು ತಮ್ಮ ಎಲ್ಲಾ ನೀತಿಗೆಟ್ಟ ಪ್ರಯತ್ನಗಳ ಮೂಲಕ ಬಿಜೆಪಿ ತನ್ನೊಳಗೆ ಸೇರಿಸಿಕೊಂಡಿತು. ನಂತರ ಪಾಟೀದಾರ್ ಹೋರಾಟದ ರುವಾರಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿದ್ದ ಹಾರ್ದಿಕ ಪಟೇಲ್ ಅವರನ್ನು ಇ.ಡಿ., ಐ.ಟಿ. ದಾಳಿಗಳ ಮೂಲಕ ಬಿಜೆಪಿ ಸೇರಿಸಿಕೊಂಡಿತು” ಎಂದು ದೂರಿದ್ದಾರೆ.

“ಇದಿಷ್ಟು ಸಾಲದು ಎಂಬಂತೆ ಈ ಬಾರಿ ಗುಜರಾತ್‌ನಲ್ಲಿ ಗೆಲುವು ಕಾಣಲಿದ್ದ ಸುಮಾರು 60ಕ್ಕೂ ಹೆಚ್ಚಿನ ಜನ ಕಾಂಗ್ರೆಸ್ ನಾಯಕರನ್ನು ಬಿಜೆಪಿ ತನ್ನೊಳಗೆ ಸೇರಿಸಿಕೊಳ್ಳುವ ಮೂಲಕ ಅಕ್ಷರಶಃ ನೀತಿಗೆಟ್ಟ ರಾಜಕೀಯವನ್ನು ಮಾಡಿತು” ಎಂದಿದ್ದಾರೆ.

“ಗುಜರಾತ್‌ನಲ್ಲಿ ಬಿಜೆಪಿ ಬಹುಮತವನ್ನು ಪಡೆದುಕೊಂಡಿದೆ. 2017ನೇ ಚುನಾವಣೆಯಲ್ಲಿ 82 ಸೀಟುಗಳನ್ನು ಕಾಂಗ್ರೆಸ್ ಪಡೆದಿತ್ತು. ಬಿಜೆಪಿ 100ರ ಒಳಗೆ ಕುಸಿದಿತ್ತು. ನಿಜಕ್ಕೂ ಹೇಳಬೇಕೆಂದರೆ ಈ ಬಾರಿ ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷ ಬಹುಮತವನ್ನು ಪಡೆದೇ ತೀರುತ್ತಿತ್ತು. ಆದರೆ ಬಿಜೆಪಿ ನೀತಿಗೆಟ್ಟ ರಾಜಕಾರಣ ಮಾಡಿತು” ಎಂದು ಟೀಕಿಸಿದ್ದಾರೆ.

“ನಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳುವಂತೆ ಚುನಾವಣೆಗಳನ್ನು ನೇರವಾಗಿ ಎದುರಿಸುವ ಧಮ್ಮು, ತಾಕತ್ತು ಇಲ್ಲದ ಬಿಜೆಪಿಗರು ಕಾಂಗ್ರೆಸಿಗರನ್ನೇ ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ನಾವು ಕಾಂಗ್ರೆಸ್ ಸೋಲಿಸಿದೆವು ಎಂದರೆ ಎಲ್ಲಿಂದ ನಗಬೇಕು ಹೇಳಿ?” ಎಂದು ವ್ಯಂಗ್ಯವಾಡಿದ್ದಾರೆ.

“ಅದಕ್ಕಿಂತಲೂ ಮುಖ್ಯವಾಗಿ ರಾಜಕೀಯ ಪಕ್ಷವೊಂದನ್ನು ತೊರೆದು ಸಿದ್ಧಾಂತ ಇಲ್ಲದೇ ಅವಕಾಶವಾದಿತನದಿಂದ ವರ್ತಿಸಿದರೆ ಪಕ್ಷ ದುರ್ಬಲಗೊಳ್ಳುತ್ತದೆ. ಗುಜರಾತ್ ಚುನಾವಣೆಯಲ್ಲಿ ಈ ಬಾರಿ ಉಂಟಾದ ಸೋಲು ಇಂತಹ ಸಿದ್ದಾಂತ ರಹಿತ ವ್ಯಕ್ತಿಗಳ ದ್ರೋಹದ ಫಲವೇ ಆಗಿದೆ” ಎಂದು ವಿಷಾದಿಸಿದ್ದಾರೆ.

“ಹೀಗೆ ಹೇಳಿದರೆ ನೀವು ಮತ್ತು ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲಿಲ್ಲವೇ ಎಂದು ಕೆಲವರು ಬಾಯಿ ಚಟಕ್ಕೆ ಮಾತನಾಡುತ್ತಾರೆ. ಆದರೆ ಜೆಡಿಎಸ್‌ನಿಂದ ನಾವು ಹೊರಗೆ ಬರಲಿಲ್ಲ, ಎಲ್ಲಿ ಹಿಂದುಳಿದವರಿಗೆ ದೊಡ್ಡ ಹುದ್ದೆ ಕೊಡಬೇಕಾಗುತ್ತದೋ ಎಂದು ಅವರೇ ನಮ್ಮನ್ನು ಪಕ್ಷದಿಂದ ಹೊರಹಾಕಿದರು. ಇದನ್ನು ತಿಳಿಯದೇ ಮಾತನಾಡುವವರು ಅರ್ಥ ಮಾಡಿಕೊಂಡರೆ ಒಳ್ಳೆಯದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...