Homeಮುಖಪುಟನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

ನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

- Advertisement -
- Advertisement -

ನಿತೀಶ್ ಕುಮಾರ್ ಮತ್ತು ಅವರ ಜೆಡಿಯು ಪಕ್ಷವನ್ನು ಎನ್‌ಡಿಎ ತೆಕ್ಕೆಗೆ ಮರಳಿ ಕರೆತಂದಿರುವುದರಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ ಎಂದು ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಹೇಳಿದರು.

ಬಿಹಾರದಿಂದ ಬಿಜೆಪಿಯ ಗೆಲ್ಲುವ ಸ್ಥಾನಗಳಲ್ಲಿ ಭಾರಿ ವ್ಯತ್ಯಾಸವಾಗುವುದಿಲ್ಲ. ಆದರೆ, ಈ ಬೆಳವಣಿಗೆ ಪ್ರತಿಪಕ್ಷಗಳ ಮಾನಸಿಕ ಸ್ಥೈರ್ಯವನ್ನು ಕಡಿಮೆಯಾಗಿಸಿದೆ ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಮುನ್ನ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ, ಕಳೆದ ವರ್ಷ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ವಿರೋಧ ಪಕ್ಷಗಳನ್ನು ಮುನ್ನಡೆಸಿದ್ದ ನಿತೀಶ್ ಕುಮಾರ್ ಅವರು ಇಂಡಿಯಾ ಬಣವನ್ನು ತೊರೆದು ಎನ್‌ಡಿಎ ಸೇರಿದ್ದಾರೆ. ಹಲವಾರು ಸಂದರ್ಭಗಳಲ್ಲಿ ಪರಸ್ಪರ ಕೆಸರೆರಚಾಟದ ಹೊರತಾಗಿಯೂ, ಜೆಡಿಯು ಮತ್ತು ಬಿಜೆಪಿ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ತೋರುತ್ತದೆ. ಆದರೆ, ನಿತೀಶ್ ಕುಮಾರ್ ಅವರು ಇಂಡಿಯಾ ಬಣದಿಂದ ನಿರ್ಗಮಿಸಿದ್ದರಿಂದ ಮೈತ್ರಿಗೆ ಯಾವುದೇ ಹಾನಿಯಾಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಯಾರೊಂದಿಗೆ ಸ್ಪರ್ಧಿಸಿದರೂ, ಅದು 20ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದರು.

ನಿತೀಶ್ ಕುಮಾರ್ ಅವರನ್ನು ಬಿಜೆಪಿಯು ವಾಪಸ್ ಕರೆಸಿಕೊಳ್ಳುವ ಮೂಲಕ ಗೆಲ್ಲುವ ಯುದ್ಧದಲ್ಲಿ ಸೋಲುವ ತಂತ್ರಕ್ಕೆ ಹೊರಟಿದೆ. ಬಿಜೆಪಿಯ ಸಂಖ್ಯೆಯೂ ಕಡಿಮೆಯಾಗಲಿದೆ. ಏಕೆಂದರೆ ಅವರು ಜೆಡಿಯು ಜೊತೆ ಸೀಟುಗಳನ್ನು ಹಂಚಿಕೊಳ್ಳುತ್ತಾರೆ. ಈ ನಿರ್ಧಾರದಿಂದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬೆಲೆ ತೆರಬೇಕಾಗುತ್ತದೆ; ಇದು ಬಿಜೆಪಿಗೆ ತಿಳಿದಿದೆ’ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಗೆ ಯಾರು ಸಲಹೆ ನೀಡುತ್ತಿದ್ದಾರೊ ಗೊತ್ತಿಲ್ಲ:

ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ರಾಹುಲ್ ಗಾಂಧಿ ತೆಗೆದುಕೊಂಡಿರುವ ಸಮಯ ತಪ್ಪಾಗಿದೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. “ಈಗ ಅವರು ಪ್ರಧಾನ ಕಚೇರಿಯಲ್ಲಿರಬೇಕು; ಅವರು ಫಿಲ್ಡ್‌ನಲ್ಲಿ ಇರಬೇಕಾದಾಗ, ಪ್ರಧಾನ ಕಚೇರಿಯಲ್ಲಿದ್ದರು. ಪ್ರಧಾನ ಕಚೇರಿಯಲ್ಲಿ ಅವರ ಅಗತ್ಯವಿದ್ದಾಗ, ಈಗ ಯಾತ್ರೆಯಲ್ಲಿದ್ದಾರೆ. ಇದು ಅವರ ಸಮಯದ ಉತ್ತಮ ಬಳಕೆ ಎಂದು ನಾನು ಭಾವಿಸುವುದಿಲ್ಲ’ ಎಂದು ಪ್ರಶಾಂತ್ ಕಿಶೋರ್ ಹೇಳಿದರು.

ಇಂಡಿಯಾ ಬ್ಲಾಕ್ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಏಕೆಂದರೆ, ಸಾಕಷ್ಟು ತಡವಾಗಿ ಅಸ್ತಿತ್ವಕ್ಕೆ ಬಂದಿತು. ‘2021 ಅಥವಾ 2022 ರಲ್ಲಿ ಅವರು ಒಟ್ಟಿಗೆ ಸೇರುವುದನ್ನು ಯಾವುದು ತಡೆಯಿತು? 2024 ರಲ್ಲಿ ಚುನಾವಣೆ ನಡೆಯಲಿದೆ ಮತ್ತು ಸೀಟು ಹಂಚಿಕೆ ನಡೆಯಲಿದೆ ಎಂದು ಅವರಿಗೆಲ್ಲ ಮೊದಲೆ ತಿಳಿದಿತ್ತು’ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2024ಕ್ಕೂ ಮೋದಿಯೆ ಪ್ರಧಾನಿ:

ರಾಮಮಂದಿರವು ಹೊಸ ಮತಗಳನ್ನು ಸೇರಿಸುವುದಿಲ್ಲ; ಆದರೆ ಮತಗಳನ್ನು ಕ್ರೋಢೀಕರಿಸುತ್ತದೆ. ನರೇಂದ್ರ ಮೋದಿ ಅವರ ಶಕ್ತಿ ಅವರು ಮತ್ತು ಅವರ ಕಾರ್ಯಸೂಚಿಗಳು ಪ್ರತಿ 5 ವರ್ಷಗಳಿಗೊಮ್ಮೆ ವಿಕಸನಗೊಳ್ಳುತ್ತವೆ. 2002ರಲ್ಲಿ ಅವರು ಹಿಂದೂ ಹೃದಯ ಸಾಮ್ರಾಟ್ ಆಗಿದ್ದರು. 2007ರ ಹೊತ್ತಿಗೆ ಅವರು ಗುಜರಾತ್‌ನಲ್ಲಿ ಅಭಿವೃದ್ಧಿಯನ್ನು ತರಬಲ್ಲ ಈ ಸಮರ್ಥ ಆಡಳಿತಗಾರರಾದರು. 2014ರ ಹೊತ್ತಿಗೆ ಅವರು ಭಾರತವನ್ನು ಬದಲಾಯಿಸಬಲ್ಲ ವ್ಯಕ್ತಿಯಾದರು. 2019, ಅವರು ಭಾರತದ ಕಥೆಗಳಿಗೆ ದೊಡ್ಡ ಹೆಮ್ಮೆ, ಧೈರ್ಯ ಮತ್ತು ದೃಢತೆಯನ್ನು ತರಬಲ್ಲ ವ್ಯಕ್ತಿಯಾದರು. 2024 ರಲ್ಲಿ ಅವರನ್ನು ದೇಶಕ್ಕೆ ರಾಮನನ್ನು ತಂದ ವ್ಯಕ್ತಿ ಎಂದು ಗುರುತಿಸಲಾಗುತ್ತದೆ. ಬಿಜೆಪಿ ಮಾಡುವುದೆಲ್ಲವೂ ಮೋದಿಯ ಈ ಬ್ರ್ಯಾಂಡಿಂಗ್‌ಗೆ ಅಧೀನವಾಗಿದೆ… ಅವರು ಬಿಜೆಪಿಯ ಇಂದಿರಾಗಾಂಧಿ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ಹೊಸದಾಗಿ ಮತದಾನ ನಡೆಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...