Homeಮುಖಪುಟನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

ನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

- Advertisement -
- Advertisement -

ನಿತೀಶ್ ಕುಮಾರ್ ಮತ್ತು ಅವರ ಜೆಡಿಯು ಪಕ್ಷವನ್ನು ಎನ್‌ಡಿಎ ತೆಕ್ಕೆಗೆ ಮರಳಿ ಕರೆತಂದಿರುವುದರಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ ಎಂದು ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಹೇಳಿದರು.

ಬಿಹಾರದಿಂದ ಬಿಜೆಪಿಯ ಗೆಲ್ಲುವ ಸ್ಥಾನಗಳಲ್ಲಿ ಭಾರಿ ವ್ಯತ್ಯಾಸವಾಗುವುದಿಲ್ಲ. ಆದರೆ, ಈ ಬೆಳವಣಿಗೆ ಪ್ರತಿಪಕ್ಷಗಳ ಮಾನಸಿಕ ಸ್ಥೈರ್ಯವನ್ನು ಕಡಿಮೆಯಾಗಿಸಿದೆ ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಮುನ್ನ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ, ಕಳೆದ ವರ್ಷ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ವಿರೋಧ ಪಕ್ಷಗಳನ್ನು ಮುನ್ನಡೆಸಿದ್ದ ನಿತೀಶ್ ಕುಮಾರ್ ಅವರು ಇಂಡಿಯಾ ಬಣವನ್ನು ತೊರೆದು ಎನ್‌ಡಿಎ ಸೇರಿದ್ದಾರೆ. ಹಲವಾರು ಸಂದರ್ಭಗಳಲ್ಲಿ ಪರಸ್ಪರ ಕೆಸರೆರಚಾಟದ ಹೊರತಾಗಿಯೂ, ಜೆಡಿಯು ಮತ್ತು ಬಿಜೆಪಿ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ತೋರುತ್ತದೆ. ಆದರೆ, ನಿತೀಶ್ ಕುಮಾರ್ ಅವರು ಇಂಡಿಯಾ ಬಣದಿಂದ ನಿರ್ಗಮಿಸಿದ್ದರಿಂದ ಮೈತ್ರಿಗೆ ಯಾವುದೇ ಹಾನಿಯಾಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಯಾರೊಂದಿಗೆ ಸ್ಪರ್ಧಿಸಿದರೂ, ಅದು 20ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದರು.

ನಿತೀಶ್ ಕುಮಾರ್ ಅವರನ್ನು ಬಿಜೆಪಿಯು ವಾಪಸ್ ಕರೆಸಿಕೊಳ್ಳುವ ಮೂಲಕ ಗೆಲ್ಲುವ ಯುದ್ಧದಲ್ಲಿ ಸೋಲುವ ತಂತ್ರಕ್ಕೆ ಹೊರಟಿದೆ. ಬಿಜೆಪಿಯ ಸಂಖ್ಯೆಯೂ ಕಡಿಮೆಯಾಗಲಿದೆ. ಏಕೆಂದರೆ ಅವರು ಜೆಡಿಯು ಜೊತೆ ಸೀಟುಗಳನ್ನು ಹಂಚಿಕೊಳ್ಳುತ್ತಾರೆ. ಈ ನಿರ್ಧಾರದಿಂದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬೆಲೆ ತೆರಬೇಕಾಗುತ್ತದೆ; ಇದು ಬಿಜೆಪಿಗೆ ತಿಳಿದಿದೆ’ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಗೆ ಯಾರು ಸಲಹೆ ನೀಡುತ್ತಿದ್ದಾರೊ ಗೊತ್ತಿಲ್ಲ:

ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ರಾಹುಲ್ ಗಾಂಧಿ ತೆಗೆದುಕೊಂಡಿರುವ ಸಮಯ ತಪ್ಪಾಗಿದೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. “ಈಗ ಅವರು ಪ್ರಧಾನ ಕಚೇರಿಯಲ್ಲಿರಬೇಕು; ಅವರು ಫಿಲ್ಡ್‌ನಲ್ಲಿ ಇರಬೇಕಾದಾಗ, ಪ್ರಧಾನ ಕಚೇರಿಯಲ್ಲಿದ್ದರು. ಪ್ರಧಾನ ಕಚೇರಿಯಲ್ಲಿ ಅವರ ಅಗತ್ಯವಿದ್ದಾಗ, ಈಗ ಯಾತ್ರೆಯಲ್ಲಿದ್ದಾರೆ. ಇದು ಅವರ ಸಮಯದ ಉತ್ತಮ ಬಳಕೆ ಎಂದು ನಾನು ಭಾವಿಸುವುದಿಲ್ಲ’ ಎಂದು ಪ್ರಶಾಂತ್ ಕಿಶೋರ್ ಹೇಳಿದರು.

ಇಂಡಿಯಾ ಬ್ಲಾಕ್ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಏಕೆಂದರೆ, ಸಾಕಷ್ಟು ತಡವಾಗಿ ಅಸ್ತಿತ್ವಕ್ಕೆ ಬಂದಿತು. ‘2021 ಅಥವಾ 2022 ರಲ್ಲಿ ಅವರು ಒಟ್ಟಿಗೆ ಸೇರುವುದನ್ನು ಯಾವುದು ತಡೆಯಿತು? 2024 ರಲ್ಲಿ ಚುನಾವಣೆ ನಡೆಯಲಿದೆ ಮತ್ತು ಸೀಟು ಹಂಚಿಕೆ ನಡೆಯಲಿದೆ ಎಂದು ಅವರಿಗೆಲ್ಲ ಮೊದಲೆ ತಿಳಿದಿತ್ತು’ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2024ಕ್ಕೂ ಮೋದಿಯೆ ಪ್ರಧಾನಿ:

ರಾಮಮಂದಿರವು ಹೊಸ ಮತಗಳನ್ನು ಸೇರಿಸುವುದಿಲ್ಲ; ಆದರೆ ಮತಗಳನ್ನು ಕ್ರೋಢೀಕರಿಸುತ್ತದೆ. ನರೇಂದ್ರ ಮೋದಿ ಅವರ ಶಕ್ತಿ ಅವರು ಮತ್ತು ಅವರ ಕಾರ್ಯಸೂಚಿಗಳು ಪ್ರತಿ 5 ವರ್ಷಗಳಿಗೊಮ್ಮೆ ವಿಕಸನಗೊಳ್ಳುತ್ತವೆ. 2002ರಲ್ಲಿ ಅವರು ಹಿಂದೂ ಹೃದಯ ಸಾಮ್ರಾಟ್ ಆಗಿದ್ದರು. 2007ರ ಹೊತ್ತಿಗೆ ಅವರು ಗುಜರಾತ್‌ನಲ್ಲಿ ಅಭಿವೃದ್ಧಿಯನ್ನು ತರಬಲ್ಲ ಈ ಸಮರ್ಥ ಆಡಳಿತಗಾರರಾದರು. 2014ರ ಹೊತ್ತಿಗೆ ಅವರು ಭಾರತವನ್ನು ಬದಲಾಯಿಸಬಲ್ಲ ವ್ಯಕ್ತಿಯಾದರು. 2019, ಅವರು ಭಾರತದ ಕಥೆಗಳಿಗೆ ದೊಡ್ಡ ಹೆಮ್ಮೆ, ಧೈರ್ಯ ಮತ್ತು ದೃಢತೆಯನ್ನು ತರಬಲ್ಲ ವ್ಯಕ್ತಿಯಾದರು. 2024 ರಲ್ಲಿ ಅವರನ್ನು ದೇಶಕ್ಕೆ ರಾಮನನ್ನು ತಂದ ವ್ಯಕ್ತಿ ಎಂದು ಗುರುತಿಸಲಾಗುತ್ತದೆ. ಬಿಜೆಪಿ ಮಾಡುವುದೆಲ್ಲವೂ ಮೋದಿಯ ಈ ಬ್ರ್ಯಾಂಡಿಂಗ್‌ಗೆ ಅಧೀನವಾಗಿದೆ… ಅವರು ಬಿಜೆಪಿಯ ಇಂದಿರಾಗಾಂಧಿ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ಹೊಸದಾಗಿ ಮತದಾನ ನಡೆಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...