Homeಮುಖಪುಟನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

ನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

- Advertisement -
- Advertisement -

ನಿತೀಶ್ ಕುಮಾರ್ ಮತ್ತು ಅವರ ಜೆಡಿಯು ಪಕ್ಷವನ್ನು ಎನ್‌ಡಿಎ ತೆಕ್ಕೆಗೆ ಮರಳಿ ಕರೆತಂದಿರುವುದರಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ ಎಂದು ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಹೇಳಿದರು.

ಬಿಹಾರದಿಂದ ಬಿಜೆಪಿಯ ಗೆಲ್ಲುವ ಸ್ಥಾನಗಳಲ್ಲಿ ಭಾರಿ ವ್ಯತ್ಯಾಸವಾಗುವುದಿಲ್ಲ. ಆದರೆ, ಈ ಬೆಳವಣಿಗೆ ಪ್ರತಿಪಕ್ಷಗಳ ಮಾನಸಿಕ ಸ್ಥೈರ್ಯವನ್ನು ಕಡಿಮೆಯಾಗಿಸಿದೆ ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಮುನ್ನ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ, ಕಳೆದ ವರ್ಷ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ವಿರೋಧ ಪಕ್ಷಗಳನ್ನು ಮುನ್ನಡೆಸಿದ್ದ ನಿತೀಶ್ ಕುಮಾರ್ ಅವರು ಇಂಡಿಯಾ ಬಣವನ್ನು ತೊರೆದು ಎನ್‌ಡಿಎ ಸೇರಿದ್ದಾರೆ. ಹಲವಾರು ಸಂದರ್ಭಗಳಲ್ಲಿ ಪರಸ್ಪರ ಕೆಸರೆರಚಾಟದ ಹೊರತಾಗಿಯೂ, ಜೆಡಿಯು ಮತ್ತು ಬಿಜೆಪಿ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ತೋರುತ್ತದೆ. ಆದರೆ, ನಿತೀಶ್ ಕುಮಾರ್ ಅವರು ಇಂಡಿಯಾ ಬಣದಿಂದ ನಿರ್ಗಮಿಸಿದ್ದರಿಂದ ಮೈತ್ರಿಗೆ ಯಾವುದೇ ಹಾನಿಯಾಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಯಾರೊಂದಿಗೆ ಸ್ಪರ್ಧಿಸಿದರೂ, ಅದು 20ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದರು.

ನಿತೀಶ್ ಕುಮಾರ್ ಅವರನ್ನು ಬಿಜೆಪಿಯು ವಾಪಸ್ ಕರೆಸಿಕೊಳ್ಳುವ ಮೂಲಕ ಗೆಲ್ಲುವ ಯುದ್ಧದಲ್ಲಿ ಸೋಲುವ ತಂತ್ರಕ್ಕೆ ಹೊರಟಿದೆ. ಬಿಜೆಪಿಯ ಸಂಖ್ಯೆಯೂ ಕಡಿಮೆಯಾಗಲಿದೆ. ಏಕೆಂದರೆ ಅವರು ಜೆಡಿಯು ಜೊತೆ ಸೀಟುಗಳನ್ನು ಹಂಚಿಕೊಳ್ಳುತ್ತಾರೆ. ಈ ನಿರ್ಧಾರದಿಂದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬೆಲೆ ತೆರಬೇಕಾಗುತ್ತದೆ; ಇದು ಬಿಜೆಪಿಗೆ ತಿಳಿದಿದೆ’ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಗೆ ಯಾರು ಸಲಹೆ ನೀಡುತ್ತಿದ್ದಾರೊ ಗೊತ್ತಿಲ್ಲ:

ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ರಾಹುಲ್ ಗಾಂಧಿ ತೆಗೆದುಕೊಂಡಿರುವ ಸಮಯ ತಪ್ಪಾಗಿದೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. “ಈಗ ಅವರು ಪ್ರಧಾನ ಕಚೇರಿಯಲ್ಲಿರಬೇಕು; ಅವರು ಫಿಲ್ಡ್‌ನಲ್ಲಿ ಇರಬೇಕಾದಾಗ, ಪ್ರಧಾನ ಕಚೇರಿಯಲ್ಲಿದ್ದರು. ಪ್ರಧಾನ ಕಚೇರಿಯಲ್ಲಿ ಅವರ ಅಗತ್ಯವಿದ್ದಾಗ, ಈಗ ಯಾತ್ರೆಯಲ್ಲಿದ್ದಾರೆ. ಇದು ಅವರ ಸಮಯದ ಉತ್ತಮ ಬಳಕೆ ಎಂದು ನಾನು ಭಾವಿಸುವುದಿಲ್ಲ’ ಎಂದು ಪ್ರಶಾಂತ್ ಕಿಶೋರ್ ಹೇಳಿದರು.

ಇಂಡಿಯಾ ಬ್ಲಾಕ್ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಏಕೆಂದರೆ, ಸಾಕಷ್ಟು ತಡವಾಗಿ ಅಸ್ತಿತ್ವಕ್ಕೆ ಬಂದಿತು. ‘2021 ಅಥವಾ 2022 ರಲ್ಲಿ ಅವರು ಒಟ್ಟಿಗೆ ಸೇರುವುದನ್ನು ಯಾವುದು ತಡೆಯಿತು? 2024 ರಲ್ಲಿ ಚುನಾವಣೆ ನಡೆಯಲಿದೆ ಮತ್ತು ಸೀಟು ಹಂಚಿಕೆ ನಡೆಯಲಿದೆ ಎಂದು ಅವರಿಗೆಲ್ಲ ಮೊದಲೆ ತಿಳಿದಿತ್ತು’ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2024ಕ್ಕೂ ಮೋದಿಯೆ ಪ್ರಧಾನಿ:

ರಾಮಮಂದಿರವು ಹೊಸ ಮತಗಳನ್ನು ಸೇರಿಸುವುದಿಲ್ಲ; ಆದರೆ ಮತಗಳನ್ನು ಕ್ರೋಢೀಕರಿಸುತ್ತದೆ. ನರೇಂದ್ರ ಮೋದಿ ಅವರ ಶಕ್ತಿ ಅವರು ಮತ್ತು ಅವರ ಕಾರ್ಯಸೂಚಿಗಳು ಪ್ರತಿ 5 ವರ್ಷಗಳಿಗೊಮ್ಮೆ ವಿಕಸನಗೊಳ್ಳುತ್ತವೆ. 2002ರಲ್ಲಿ ಅವರು ಹಿಂದೂ ಹೃದಯ ಸಾಮ್ರಾಟ್ ಆಗಿದ್ದರು. 2007ರ ಹೊತ್ತಿಗೆ ಅವರು ಗುಜರಾತ್‌ನಲ್ಲಿ ಅಭಿವೃದ್ಧಿಯನ್ನು ತರಬಲ್ಲ ಈ ಸಮರ್ಥ ಆಡಳಿತಗಾರರಾದರು. 2014ರ ಹೊತ್ತಿಗೆ ಅವರು ಭಾರತವನ್ನು ಬದಲಾಯಿಸಬಲ್ಲ ವ್ಯಕ್ತಿಯಾದರು. 2019, ಅವರು ಭಾರತದ ಕಥೆಗಳಿಗೆ ದೊಡ್ಡ ಹೆಮ್ಮೆ, ಧೈರ್ಯ ಮತ್ತು ದೃಢತೆಯನ್ನು ತರಬಲ್ಲ ವ್ಯಕ್ತಿಯಾದರು. 2024 ರಲ್ಲಿ ಅವರನ್ನು ದೇಶಕ್ಕೆ ರಾಮನನ್ನು ತಂದ ವ್ಯಕ್ತಿ ಎಂದು ಗುರುತಿಸಲಾಗುತ್ತದೆ. ಬಿಜೆಪಿ ಮಾಡುವುದೆಲ್ಲವೂ ಮೋದಿಯ ಈ ಬ್ರ್ಯಾಂಡಿಂಗ್‌ಗೆ ಅಧೀನವಾಗಿದೆ… ಅವರು ಬಿಜೆಪಿಯ ಇಂದಿರಾಗಾಂಧಿ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ಹೊಸದಾಗಿ ಮತದಾನ ನಡೆಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...