Homeಮುಖಪುಟಒಡಿಶಾದಲ್ಲಿ ಬಿಜೆಪಿ-ಬಿಜೆಡಿ ಬೆಂಬಲಿಗರ ನಡುವೆ  ಘರ್ಷಣೆ: ಓರ್ವ ಮೃತ್ಯು, ಹಲವರಿಗೆ ಗಾಯ

ಒಡಿಶಾದಲ್ಲಿ ಬಿಜೆಪಿ-ಬಿಜೆಡಿ ಬೆಂಬಲಿಗರ ನಡುವೆ  ಘರ್ಷಣೆ: ಓರ್ವ ಮೃತ್ಯು, ಹಲವರಿಗೆ ಗಾಯ

- Advertisement -
- Advertisement -

ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಬಿಜು ಜನತಾದಳ (ಬಿಜೆಡಿ) ಮತ್ತು ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು, ಓರ್ವ ಮೃತಪಟ್ಟು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮೃತರನ್ನು ಶ್ರೀ ಕೃಷ್ಣ ಶರಣಾಪುರ ಗ್ರಾಮದ ನಿವಾಸಿ ದಿಲೀಪ್ ಕುಮಾರ್ ಪಹಾನ (28) ಎಂದು ಗುರುತಿಸಲಾಗಿದೆ. ಘರ್ಷಣೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿಲೀಪ್ ಕುಮಾರ್ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚುನಾವಣಾ ಪ್ರಚಾರಕ್ಕಾಗಿ ಪೋಸ್ಟರ್ ಅಳವಡಿಕೆ ವೇಳೆ ಕಲ್ಲಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಕೃಷ್ಣ ಶರಣಾಪುರ ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. ಬಿಜೆಡಿ ಮತ್ತು ಬಿಜೆಪಿ ಬೆಂಬಲಿಗರು ಹರಿತವಾದ ಆಯುಧಗಳನ್ನು ಬಳಸಿ ಹೊಡೆದಾಟ ನಡೆಸಿದ್ದಾರೆ. ಗಾಯಗೊಂಡವರು ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ.

ಬಿಜೆಪಿ ಕಾರ್ಯಕರ್ತನ ಸಾವಿನ ಬೆನ್ನಲ್ಲಿ ಬಿಜೆಪಿ ಬೆಂಬಲಿಗರು ಬಿಜೆಡಿ ಅಭ್ಯರ್ಥಿ ಹಾಗೂ ಕಲ್ಲಿಕೋಟೆ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಸೂರ್ಯಮಣಿ ಬೈದ್ಯ ಅವರ ನಿವಾಸದ ಬಳಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿಗೊಳಿಸಿದ್ದಾರೆ. ಪೊಲೀಸ್ ಠಾಣೆ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಘಟನೆಯನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಖಂಡಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕಲ್ಲಿಕೋಟೆ ಪ್ರದೇಶದಲ್ಲಿ ನಡೆದ ಅತ್ಯಂತ ದುರದೃಷ್ಟಕರ ಮತ್ತು ದುರಂತ ಹಿಂಸಾಚಾರದ ಘಟನೆಯಿಂದ ತೀವ್ರವಾಗಿ ದುಃಖಿತನಾಗಿದ್ದೇನೆ. ಇಂತಹ ಹಿಂಸಾಚಾರದ ಘಟನೆಗಳಿಗೆ ನಮ್ಮ ಪ್ರಜಾಪ್ರಭುತ್ವ ಮತ್ತು ನಾಗರಿಕ ಸಮಾಜದಲ್ಲಿ ಸ್ಥಾನವಿಲ್ಲ. ಈ ಘಟನೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬದ ಸದಸ್ಯರಿಗೆ ನನ್ನ ಆಳವಾದ ಸಂತಾಪಗಳು ಮತ್ತು ಗಾಯಗಳಿಗೆ ಒಳಗಾದವರು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಪ್ರಾರ್ಥಿಸುತ್ತೇನೆ. ಘಟನೆ ಬಗ್ಗೆ ಪೊಲೀಸರು  ಸೂಕ್ತವಾದ ಕ್ರಮವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಘರ್ಷಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಇಂತಹ ಘಟನೆಗಳು ಸಂಭವಿಸಬಾರದು ಎಂದು ಹೇಳಿದ್ದಾರೆ.

ಕಲ್ಲಿಕೋಟೆ ಕ್ಷೇತ್ರದಿಂದ ಶಾಸಕ ಸೂರ್ಯಮಣಿ ಬೈದ್ಯ ಪುನರಾಯ್ಕೆ ಬಯಸುತ್ತಿದ್ದರೆ, ಬಿಜೆಪಿಯು ಕ್ಷೇತ್ರದಲ್ಲಿ ಮಾಜಿ ಶಾಸಕ ಪೂರ್ಣಚಂದ್ರ ಸೇಠಿ ಅವರನ್ನು ಕಣಕ್ಕಿಳಿಸಿದೆ. ಕಲ್ಲಿಕೋಟೆಯಲ್ಲಿ ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಮೇ.20ರಂದು ನಿಗದಿಯಾಗಿದೆ.

ಒಡಿಶಾದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನಿಕುಂಜ ಬಿಹಾರಿ ಧಾಲ್ ಅವರು ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಕ್ಷಣವೇ ಶಾಂತಿಯನ್ನು ಪುನಃಸ್ಥಾಪಿಸಲು ಮತ್ತು ಚುನಾವಣಾ ಹಿಂಸಾಚಾರವನ್ನು ತಡೆಯಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಇದನ್ನು ಓದಿ: ಕೇಂದ್ರದಲ್ಲಿ ಸರ್ಕಾರ ರಚನೆಗೆ ‘ಇಂಡಿಯಾ ಮೈತ್ರಿಕೂಟ’ಕ್ಕೆ ಟಿಎಂಸಿಯಿಂದ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...