Homeಕರ್ನಾಟಕಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಸೇರಿಸಲು ಕುಟುಂಬಸ್ಥರ ಆಗ್ರಹ

- Advertisement -
- Advertisement -

ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಹಾಗೂ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತನ್ನೀರಾ ಮೈನಾ ವಿರುದ್ದ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೃತನ ಸಹೋದರ ಜೀವನ್ ನೀಡಿದ ದೂರಿನ ಮೇರೆಗೆ ತನ್ನೀರಾ ಮೈನಾ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ 108 (ಆತ್ಮಹತ್ಯೆಗೆ ಪ್ರಚೋದನೆ), 3(5) (ಅಪರಾಧಿಕ ಒಳಸಂಚು), 351 (2) (ಬೆದರಿಕೆ), 352 (ಉದ್ದೇಶಪೂರ್ವ ಅವಮಾನ) ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

“ಮೃತ ವಿನಯ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಪತ್ನಿ ಹಾಗೂ ಒಂದು ಹೆಣ್ಣು ಮಗುವಿದೆ. ಸದಾ ಸಾಮಾಜಿಕ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದರು. ಇದಕ್ಕಾಗಿ ‘ಕೊಡಗಿನ ಸಮಸ್ಯೆಗಳು ಹಾಗೂ ಪರಿಹಾರಗಳು’ ಎಂಬ ಹೆಸರಿನಲ್ಲಿ ವಾಟ್ಸಾಪ್ ಗ್ರೂಪ್‌ ರಚಿಸಿದ್ದರು. ಈ ಗ್ರೂಪ್‌ಗೆ ವಿನಯ್‌ ಸಹ ಅಡ್ಮಿನ್ ಆಗಿದ್ದರು. ಕಳೆದ ಫೆಬ್ರವರಿಯಲ್ಲಿ ತನ್ನಿರಾ ಮೈನಾ ಅವರು ಗ್ರೂಪ್ ಅಡ್ಮಿನ್ ಆದ ತನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿರುವುದಾಗಿ ವಿನಯ್ ತನಗೆ ಕರೆ ಮಾಡಿ ಹೇಳಿದ್ದ” ಎಂದು ಸಹೋದರ ಜೀವನ್ ತಿಳಿಸಿದ್ದಾರೆ.

“ನ್ಯಾಯಾಲಯದಿಂದ ತಡೆಯಾಜ್ಞೆ ತಂದರೂ ತನ್ನೀರಾ ಅವರು ಪೊಲೀಸರ ಸಹಾಯದಿಂದ ಕುಟುಂಬಸ್ಥರು ಹಾಗೂ ಸ್ನೇಹಿತರ ಬಳಿ ವಿನಯ್ ಬಗ್ಗೆ ವಿಚಾರಿಸಿ ರೌಡಿ ಪಟ್ಟಿಯಲ್ಲಿ ಹಾಕುವುದಾಗಿ ಬೆದರಿಸಿದ್ದರು” ಎಂದು ದೂರಿನಲ್ಲಿ ಜೀವನ್ ಆರೋಪಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಹೆಸರು ಕೈಬಿಟ್ಟಿದ್ದಕ್ಕೆ ಆಕ್ರೋಶ

ಸಹೋದರ ಸಾವಿಗೆ ಕಾಂಗ್ರೆಸ್ ಶಾಸಕರಾದ ಎ.ಎಸ್‌ ಪೊನ್ನಣ್ಣ ಹಾಗೂ ಮಂಥರ್‌ಗೌಡ ಕಾರಣರಾಗಿದ್ದಾರೆ. ಹೀಗಿದ್ದರೂ ಎಫ್‌ಐಆರ್‌ನಲ್ಲಿ ಅವರ ಹೆಸರುಗಳನ್ನು ಕೈ ಬಿಡಲಾಗಿದೆ. ಪೊಲೀಸರು ಒತ್ತಡದಿಂದ ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ನಮೂದಿಸಿಲ್ಲ. ಅವರ ಹೆಸರುಗಳನ್ನೂ ಎಫ್‌ಐಆರ್‌ನಲ್ಲಿ ಸೇರಿಸುವವರೆಗೂ ಸಹೋದರನ ಮೃತದೇಹ ಕೊಂಡೊಯ್ಯುದಿಲ್ಲ” ಎಂದು ಜೀವನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತನ್ನೀರಾ ಮೈನಾಗೆ ನೋಟಿಸ್ ನೀಡಲು ಸಿದ್ದತೆ

ವಿನಯ್ ಆತ್ಮಹತ್ಯೆ ‌ಪ್ರಕರಣದ ತನಿಖೆಯನ್ನು ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಆರಂಭಿಸಿದ್ದಾರೆ. ತನ್ನೀರಾ ಮೈನಾಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರಕರಣದ ಕುರಿತು ಪ್ರಾಥಮಿಕ ಮಾಹಿತಿ ಕಲೆ ಹಾಕಲಾಗಿದೆ. ವಿನಯ್ ಅವರ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ಬರಹವನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.

ವಿನಯ್ ಅವರು ಆತ್ಮಹತ್ಯೆ ‌ಮಾಡಿಕೊಳ್ಳುವ ಮೊದಲು ಯಾರ ಜೊತೆ ಮೊಬೈಲ್‌ನಲ್ಲಿ ಮಾತನಾಡಿದ್ದರು. ಅವರ ಮೊಬೈಲ್‌ನಲ್ಲಿ ಏನೆಲ್ಲಾ ದಾಖಲೆಗಳಿವೆ ಎಂಬುದನ್ನೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾಗಿ ವರದಿ ತಿಳಿಸಿದೆ.

ಕಾನೂನು ತಜ್ಞರ ಮೊರೆ ಹೋದ ಪೊಲೀಸರು

ವಿನಯ್ ಸಾವಿಗೆ ಸಂಬಂಧಿಸಿದಂತೆ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂಥರ್‌ಗೌಡ ವಿರುದ್ಧವೂ ಎಫ್‌ಐಆರ್ ದಾಖಲಿಸುವಂತೆ ಬಿಜೆಪಿ ಹಾಗೂ ವಿನಯ್ ಕುಟುಂಬದ ಸದಸ್ಯರು ಆಗ್ರಹಿಸಿ ಎರಡನೇ ಬಾರಿಗೆ ದೂರು ನೀಡಿದ್ದು, ಹೆಣ್ಣೂರು ಪೊಲೀಸರು ಕಾನೂನು ತಜ್ಞರ ಮೊರೆ ಹೋಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...