Homeಕರ್ನಾಟಕಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಸೇರಿಸಲು ಕುಟುಂಬಸ್ಥರ ಆಗ್ರಹ

- Advertisement -
- Advertisement -

ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಹಾಗೂ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತನ್ನೀರಾ ಮೈನಾ ವಿರುದ್ದ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೃತನ ಸಹೋದರ ಜೀವನ್ ನೀಡಿದ ದೂರಿನ ಮೇರೆಗೆ ತನ್ನೀರಾ ಮೈನಾ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ 108 (ಆತ್ಮಹತ್ಯೆಗೆ ಪ್ರಚೋದನೆ), 3(5) (ಅಪರಾಧಿಕ ಒಳಸಂಚು), 351 (2) (ಬೆದರಿಕೆ), 352 (ಉದ್ದೇಶಪೂರ್ವ ಅವಮಾನ) ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

“ಮೃತ ವಿನಯ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಪತ್ನಿ ಹಾಗೂ ಒಂದು ಹೆಣ್ಣು ಮಗುವಿದೆ. ಸದಾ ಸಾಮಾಜಿಕ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದರು. ಇದಕ್ಕಾಗಿ ‘ಕೊಡಗಿನ ಸಮಸ್ಯೆಗಳು ಹಾಗೂ ಪರಿಹಾರಗಳು’ ಎಂಬ ಹೆಸರಿನಲ್ಲಿ ವಾಟ್ಸಾಪ್ ಗ್ರೂಪ್‌ ರಚಿಸಿದ್ದರು. ಈ ಗ್ರೂಪ್‌ಗೆ ವಿನಯ್‌ ಸಹ ಅಡ್ಮಿನ್ ಆಗಿದ್ದರು. ಕಳೆದ ಫೆಬ್ರವರಿಯಲ್ಲಿ ತನ್ನಿರಾ ಮೈನಾ ಅವರು ಗ್ರೂಪ್ ಅಡ್ಮಿನ್ ಆದ ತನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿರುವುದಾಗಿ ವಿನಯ್ ತನಗೆ ಕರೆ ಮಾಡಿ ಹೇಳಿದ್ದ” ಎಂದು ಸಹೋದರ ಜೀವನ್ ತಿಳಿಸಿದ್ದಾರೆ.

“ನ್ಯಾಯಾಲಯದಿಂದ ತಡೆಯಾಜ್ಞೆ ತಂದರೂ ತನ್ನೀರಾ ಅವರು ಪೊಲೀಸರ ಸಹಾಯದಿಂದ ಕುಟುಂಬಸ್ಥರು ಹಾಗೂ ಸ್ನೇಹಿತರ ಬಳಿ ವಿನಯ್ ಬಗ್ಗೆ ವಿಚಾರಿಸಿ ರೌಡಿ ಪಟ್ಟಿಯಲ್ಲಿ ಹಾಕುವುದಾಗಿ ಬೆದರಿಸಿದ್ದರು” ಎಂದು ದೂರಿನಲ್ಲಿ ಜೀವನ್ ಆರೋಪಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಹೆಸರು ಕೈಬಿಟ್ಟಿದ್ದಕ್ಕೆ ಆಕ್ರೋಶ

ಸಹೋದರ ಸಾವಿಗೆ ಕಾಂಗ್ರೆಸ್ ಶಾಸಕರಾದ ಎ.ಎಸ್‌ ಪೊನ್ನಣ್ಣ ಹಾಗೂ ಮಂಥರ್‌ಗೌಡ ಕಾರಣರಾಗಿದ್ದಾರೆ. ಹೀಗಿದ್ದರೂ ಎಫ್‌ಐಆರ್‌ನಲ್ಲಿ ಅವರ ಹೆಸರುಗಳನ್ನು ಕೈ ಬಿಡಲಾಗಿದೆ. ಪೊಲೀಸರು ಒತ್ತಡದಿಂದ ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ನಮೂದಿಸಿಲ್ಲ. ಅವರ ಹೆಸರುಗಳನ್ನೂ ಎಫ್‌ಐಆರ್‌ನಲ್ಲಿ ಸೇರಿಸುವವರೆಗೂ ಸಹೋದರನ ಮೃತದೇಹ ಕೊಂಡೊಯ್ಯುದಿಲ್ಲ” ಎಂದು ಜೀವನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತನ್ನೀರಾ ಮೈನಾಗೆ ನೋಟಿಸ್ ನೀಡಲು ಸಿದ್ದತೆ

ವಿನಯ್ ಆತ್ಮಹತ್ಯೆ ‌ಪ್ರಕರಣದ ತನಿಖೆಯನ್ನು ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಆರಂಭಿಸಿದ್ದಾರೆ. ತನ್ನೀರಾ ಮೈನಾಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರಕರಣದ ಕುರಿತು ಪ್ರಾಥಮಿಕ ಮಾಹಿತಿ ಕಲೆ ಹಾಕಲಾಗಿದೆ. ವಿನಯ್ ಅವರ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ಬರಹವನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.

ವಿನಯ್ ಅವರು ಆತ್ಮಹತ್ಯೆ ‌ಮಾಡಿಕೊಳ್ಳುವ ಮೊದಲು ಯಾರ ಜೊತೆ ಮೊಬೈಲ್‌ನಲ್ಲಿ ಮಾತನಾಡಿದ್ದರು. ಅವರ ಮೊಬೈಲ್‌ನಲ್ಲಿ ಏನೆಲ್ಲಾ ದಾಖಲೆಗಳಿವೆ ಎಂಬುದನ್ನೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾಗಿ ವರದಿ ತಿಳಿಸಿದೆ.

ಕಾನೂನು ತಜ್ಞರ ಮೊರೆ ಹೋದ ಪೊಲೀಸರು

ವಿನಯ್ ಸಾವಿಗೆ ಸಂಬಂಧಿಸಿದಂತೆ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂಥರ್‌ಗೌಡ ವಿರುದ್ಧವೂ ಎಫ್‌ಐಆರ್ ದಾಖಲಿಸುವಂತೆ ಬಿಜೆಪಿ ಹಾಗೂ ವಿನಯ್ ಕುಟುಂಬದ ಸದಸ್ಯರು ಆಗ್ರಹಿಸಿ ಎರಡನೇ ಬಾರಿಗೆ ದೂರು ನೀಡಿದ್ದು, ಹೆಣ್ಣೂರು ಪೊಲೀಸರು ಕಾನೂನು ತಜ್ಞರ ಮೊರೆ ಹೋಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಪ್ರತಿಭಟನಾಕಾರರಿಗೆ ಗುಂಡಿಕ್ಕುವ ಬೆದರಿಕೆ: ಬಿಜೆಪಿ ನಾಯಕನ ವಿರುದ್ಧ FIR

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...