Homeಕರ್ನಾಟಕಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

- Advertisement -
- Advertisement -

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. 

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹ ನೀಡಬೇಕು, ಈ ಮೂಲಕ ಯುವ ರೈತರ ಮದುವೆಯನ್ನು ಪ್ರೋತ್ಸಾಹಿಸುವ ಕೆಲಸ ಇನ್ನಾದರೂ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೆಲೆ ಸರ್ಕಾರಿ ಕೆಲಸಕ್ಕೆ ನೇಮಕಾತಿ ಆಗುವುದು ತೀರಾ ವಿಳಂಬವಾಗಿದೆ. ಇದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಸರ್ಕಾರದ ನೀತಿಯಿಂದಾಗಿ ಖಾಸಗಿ ಕಂಪನಿಗಳು ಕರ್ನಾಟಕಕ್ಕೆ ಉದ್ಯಮ ಸ್ಥಾಪನೆಗಾಗಿ ಬರುತ್ತಿಲ್ಲ ಎಂದು ಆರೋಪಿಸಿದರು.

ರೈತರ ಬೆಳೆಗಳಿಗೆ ಬೆಂಬಲ ಬೆಲೆ ಇಲ್ಲ, ಸಮರ್ಪಕವಾಗಿ ಬೆಳೆ ಬೆಳೆಯಲು ನೀರು ಇಲ್ಲ. ಕೃಷಿ ನಂಬಿಕೊಂಡಿರುವವರ ಬದುಕು ಮೂರಾ ಬಟ್ಟೆಯಾಗಿದೆ. ಇತ್ತ ಕೃಷಿಯನ್ನು ನಂಬಿಕೊಂಡು ಬದುಕು ಕಟ್ಟಿಕೊಳ್ಳಬೇಕೆಂದಿರುವ ಯುವ ರೈತರಿಗೆ ಹೆಣ್ಣು ಸಿಗುತ್ತಿಲ್ಲ. ಇದರಿಂದ ಯುವ ರೈತರಿಗೆ ಬದುಕಿನ ಗ್ಯಾರಂಟಿ ಇಲ್ಲವಾಗಿದೆ ಎಂದು ವಿಷಾದಿಸಿದರು.

ರೈತರನ್ನು ಮದುವೆಯಾಗುವ ಹುಡುಗಿಯರಿಗೆ ₹5 ಲಕ್ಷ ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವನ್ನು ಕೆಆರ್‌ಆರ್‌ಎಸ್ ಒತ್ತಾಯಿಸಿದೆ.

ರೈತ ಯುವಕರನ್ನು ಮದುವೆಯಾಗುವ ಹುಡುಗಿಯರ ಸಂಖ್ಯೆ ತೀವ್ರವಾಗಿ ಕಡಿಮೆಯಾಗುತ್ತಿದೆ ಮತ್ತು ಇದು ಒಂದು ಉದಯೋನ್ಮುಖ ಸಾಮಾಜಿಕ ಸಮಸ್ಯೆಯಾಗಿದ್ದು, ಸರ್ಕಾರ ಇನ್ನೂ ಇದರ ಬಗ್ಗೆ ಗಮನ ಹರಿಸಿಲ್ಲ ಎಂದು ಕೆಆರ್‌ಆರ್‌ಎಸ್ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ಇದೇ ತಿಂಗಳ 5ನೇ ತಾರೀಖಿನಂದು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಸಹ ಈ ಬೇಡಿಕೆಯನ್ನು ಸರ್ಕಾರದ ಮುಂದೆ ಇಟ್ಟಿತ್ತು.  

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಕೃಷಿಯಲ್ಲಿ ತೊಡಗಿರುವ ಹುಡುಗರನ್ನು ಮದುವೆಯಾಗುವ ಹುಡುಗಿಯರ ಸಂಖ್ಯೆ ತೀವ್ರ ಮಟ್ಟದಲ್ಲಿ ಇಳಿಕೆ ಆಗಿದೆ. ಇದು ಹೊಸ ರೀತಿಯ ಸಾಮಾಜಿಕ ಸಮಸ್ಯೆಯಾಗಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದ್ದರು. 

ಇನ್ನು ಯುವ ಕೃಷಿಕರನ್ನು ಮದುವೆಯಾಗುವ ವಧುಗಳಿಗೆ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಸರ್ಕಾರವನ್ನು ಈ ಮೂಲಕ ಒತ್ತಾಯಿಸುತ್ತಿದೆ. ಇದು ವೈವಾಹಿಕ ಮೈತ್ರಿಗಳನ್ನು ಪ್ರೋತ್ಸಾಹಿಸುವ ಪ್ರಯತ್ನವಾಗಿದೆ ಎಂದು ಹೇಳಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...

ಸಂಪೂರ್ಣ ಗೋಹತ್ಯೆ ನಿಷೇಧದ ಜೊತೆಗೆ ‘ರಾಷ್ಟ್ರೀಯ ಮಾತೃ ಸ್ಥಾನಮಾನ ನೀಡಬೇಕು: ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್

"ಗೋವನ್ನು ರಾಷ್ಟ್ರಮಾತೆ ಅಥವಾ ರಾಜಮಾತೆ" ಎಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮೂಲಕ ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಸಂಸತ್ತಿನಲ್ಲಿ ಹಲವರನ್ನು ಅಚ್ಚರಿಗೊಳಿಸಿದರು. ಕಲಾಪದ ಶೂನ್ಯ ವೇಳೆಯಲ್ಲಿ ಅವರು...