HomeUncategorizedಬಿಜೆಪಿ ಸಂಸದ ಪಿ.ಸಿ ಮೋಹನ್ ವಿರುದ್ಧ ತಿರುಗಿ ಬಿದ್ದ ಸ್ವಪಕ್ಷದ ಕಾರ್ಯಕರ್ತರು: ಧಿಕ್ಕಾರ ಕೂಗಿ ಆಕ್ರೋಶ

ಬಿಜೆಪಿ ಸಂಸದ ಪಿ.ಸಿ ಮೋಹನ್ ವಿರುದ್ಧ ತಿರುಗಿ ಬಿದ್ದ ಸ್ವಪಕ್ಷದ ಕಾರ್ಯಕರ್ತರು: ಧಿಕ್ಕಾರ ಕೂಗಿ ಆಕ್ರೋಶ

- Advertisement -
- Advertisement -

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ವಿವಿದೆಡೆ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಅವರದ್ದೇ ಪಕ್ಷದ ಕಾರ್ಯಕರ್ತರು ತಿರುಗಿ ಬೀಳುತ್ತಿದ್ದಾರೆ. ಇದರಿಂದ ಬಹಿರಂಗ ಸಭೆಗಳಲ್ಲಿ ಅಭ್ಯರ್ಥಿಗಳು ಮುಜುಗರಕ್ಕೊಳಗಾಗುವ ಪರಿಸ್ಥಿತಿ ಎದುರಾಗಿದೆ.

ಗುರುವಾರ(ಮಾ.28) ಶಾಂತಿನಗರದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಹಾಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿಯಾಗಿರುವ ಪಿ.ಸಿ ಮೋಹನ್ ವಿರುದ್ದ ಧಿಕ್ಕಾರ ಕೂಗಿ ಬಿಜೆಪಿ ಕಾರ್ಯರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿಮ್ಮನ್ನು ಮೂರಿ ಬಾರಿ ಸಂಸದರನ್ನಾಗಿ ಮಾಡಿ ಲೋಕಸಭೆಗೆ ಕಳಿಸಿದ್ದೇವೆ, ನಮ್ಮ ಪ್ರದೇಶಕ್ಕೆ ಏನು ಮಾಡಿದ್ದೀರಾ? ನಿಮ್ಮ ಸಾಧನೆ ಏನು? ನಾವು ಮೋದಿಯವರನ್ನು ನೋಡಿ ನಿಮಗೆ ಓಟು ಕೊಟ್ಟೆವು. ಆದರೆ, ನೀವು ನಮಗೆ ಏನು ಮಾಡಿದ್ದೀರಾ?” ಎಂದು ಬಿಜೆಪಿ ಕಾರ್ಯಕರ್ತರು ಕೇಳಿದರು.

ಕೇಂದ್ರ ಸರ್ಕಾರದ ಕೆಲವು ಯೋಜನೆಗಳನ್ನು ಉಲ್ಲೇಖಿಸುತ್ತಾ ಇದಕ್ಕೆ ಸಮಜಾಯಿಷಿ ನೀಡಲು ಸಂಸದ ಪಿ.ಸಿ ಮೋಹನ್ ಯತ್ನಿಸಿದರು. ಆದರೆ, ಕಾರ್ಯಕರ್ತರು ಸುಮ್ಮನಾಗದೆ ಧಿಕ್ಕಾರ ಕೂಗಿದರು. ಈ ನಡುವೆ ಪಿ.ಸಿ ಮೋಹನ್ ಅಭಿಮಾನಿಗಳು ಬಿಜೆಪಿ ಕಾರ್ಯಕರ್ತರೊಂದಿಗೆ ವಾಗ್ವಾದಕ್ಕೆ ಇಳಿದರು. ಇದರಿಂದ ಜಗಳ ತಾರಕಕ್ಕೇರಿತು. ಪಿ.ಸಿ ಮೋಹನ್ ಬಿಜೆಪಿ ಕಾರ್ಯಕರ್ತರನ್ನು ಎಷ್ಟೇ ಸಮಾಧಾನಿಸಲು ಯತ್ನಿಸಿದರಾದರೂ, ಅವರು ಸಮಾಧಾನಗೊಳ್ಳಲಿಲ್ಲ. ಕೊನೆಗೆ ಬೇರೆ ದಾರಿ ಕಾಣದೆ ಚುನಾವಣಾ ಪ್ರಚಾರವನ್ನು ಅರ್ಧಕ್ಕೆ ಮೊಟಕುಗೊಳಿಸಿ ಸ್ಥಳದಿಂದ ತೆರಳಿದರು.

4ನೇ ಬಾರಿ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ಪಿ.ಸಿ ಮೋಹನ್

ಅಲ್ಪಸಂಖ್ಯಾತರೇ ಹೆಚ್ಚಿರುವ ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ 4ನೇ ಬಾರಿ ಪಿ.ಸಿ ಮೋಹನ್ ಕಣಕ್ಕೆ ಇಳಿದಿದ್ದಾರೆ. ಬೆಂಗಳೂರಿನ ಹೃದಯ ಭಾಗದ 8 ವಿಧಾನಸಭಾ ಕ್ಷೇತ್ರಗಳು ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದ್ದು, 2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯಾದಾಗಿನಿಂದ ಈ ಕ್ಷೇತ್ರದಲ್ಲಿ ನಡೆದ ಎಲ್ಲ ಲೋಕಸಭಾ ಚುನಾವಣೆಗಳನ್ನು ಬಿಜೆಪಿ ಗೆದ್ದುಕೊಂಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೆಂಟ್ರಲ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 5 ಮತ್ತು ಬಿಜೆಪಿ 3ರಲ್ಲಿ ಗೆಲುವು ಸಾಧಿಸಿದೆ. ಸಚಿವರಾದ ಕೆ.ಜೆ.ಜಾರ್ಜ್ (ಸರ್ವಜ್ಞ ನಗರ), ದಿನೇಶ್ ಗುಂಡೂರಾವ್ (ಗಾಂಧಿನಗರ), ಝಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ರಿಝ್ವಾನ್ ಅರ್ಷದ್ (ಶಿವಾಜಿನಗರ), ಎನ್.ಎ.ಹ್ಯಾರಿಸ್ (ಶಾಂತಿನಗರ) ಕಾಂಗ್ರೆಸ್ ಶಾಸಕರು. ಸುರೇಶ್ ಕುಮಾರ್ (ರಾಜಾಜಿನಗರ), ಎಸ್ ರಘು (ಸಿವಿ ರಾಮನ್ ನಗರ) ಮತ್ತು ಮಂಜುಳಾ ಲಿಂಬಾವಳಿ (ಮಹದೇವಪುರ) ಬಿಜೆಪಿ ಶಾಸಕರಾಗಿದ್ದಾರೆ.

ಕಾಂಗ್ರೆಸ್‌ನಿಂದ ಈ ಬಾರಿ ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಪುತ್ರ ಮನ್ಸೂರ್ ಅಲಿ ಖಾನ್‌ ಸ್ಪರ್ಧಿಸುತ್ತಿದ್ದಾರೆ. ಪಿ.ಸಿ ಮೋಹನ್‌ ಸ್ಪರ್ಧೆಗೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿರುವ ಹಿನ್ನೆಲೆ, ಮನ್ಸೂರ್ ಅಲಿ ಖಾನ್ ಅವರಿಗೆ ಗೆಲ್ಲುವ ಅವಕಾಶವಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ.

ಇದನ್ನೂ ಓದಿ : ‘ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಕುಟುಂಬದವರು ಎಲ್ಲಿದ್ದರು..?’: ಡಿಕೆ ಶಿವಕುಮಾರ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...