Homeಕರ್ನಾಟಕಜನಕ್ಕೆ ಬದುಕಿನ ಚಿಂತೆಯಾದರೆ ಬಿಜೆಪಿಗೆ ಸಿದ್ದರಾಮಯ್ಯನವರದ್ದೇ ಚಿಂತೆ

ಜನಕ್ಕೆ ಬದುಕಿನ ಚಿಂತೆಯಾದರೆ ಬಿಜೆಪಿಗೆ ಸಿದ್ದರಾಮಯ್ಯನವರದ್ದೇ ಚಿಂತೆ

- Advertisement -
- Advertisement -

’ನಿಂತ್ರೆ ಕುಂತ್ರೆ ನಿಂದೆ ಧ್ಯಾನ, ಜೀವಕ್ಕಿಲ್ಲ ಸಮಾಧಾನ’ ಎಂಬ ಸಿನಿಮಾ ಹಾಡಿನಂತೆ ರಾಜ್ಯದ ಬಿಜೆಪಿ ಮುಖಂಡರಿಗೆ ಮೂರು ಹೊತ್ತೂ ವಿಪಕ್ಷ ನಾಯಕ ಸಿದ್ದರಾಮಯ್ಯನವರದೇ ಧ್ಯಾನ; ಇಲ್ಲದಿದ್ದರೆ ಅವರ ಜೀವಕ್ಕೆ ಸಮಾಧಾನ ಎಂಬುದೇ ಇಲ್ಲವಾಗಿದೆ. ಸಿದ್ದರಾಮಯ್ಯನವರು ಏನು ತಿನ್ನುತ್ತಾರೆ, ಸಿದ್ದರಾಮಯ್ಯನವರ ರ್‍ಯಾಲಿಗೆ ಎಷ್ಟು ಜನ ಸೇರುತ್ತಾರೆ? ಸಿದ್ದರಾಮಯ್ಯನವರು ಎಲ್ಲಿ ಚುನಾವಣೆಗೆ ನಿಲ್ಲುತ್ತಾರೆ, ಸಿದ್ದರಾಮಯ್ಯನವರ ನಿಜ ಕನಸುಗಳೇನು? ಹೀಗೆ ಪದೇಪದೇ ಅವರ ಸುತ್ತಲೇ ಚರ್ಚೆ ನಡೆಸುತ್ತಾ ಜನರನ್ನು ಬಾಧಿಸುತ್ತಿರುವ ಸಮಸ್ಯೆಗಳಿಗೆ ಬೆನ್ನುತಿರುಗಿಸುತ್ತಿದ್ದಾರೆ.

ಆಡಳಿತ ಪಕ್ಷವಾದ ಬಿಜೆಪಿಯು ಈ ಮೂರೂವರೆ ವರ್ಷದಲ್ಲಿ ತಾನು ಮಾಡಿದ ಅಭಿವೃದ್ದಿ ಕೆಲಸಗಳು, ಸಾಧನೆಗಳನ್ನು ಮುಂದಿಟ್ಟುಕೊಂಡು ಮುಂದಿನ ಚುನಾವಣೆಯನ್ನು ಎದುರಿಸಬೇಕಾದ್ದು ನ್ಯಾಯಯುತ ಮಾರ್ಗ. ಆದರೆ ಅದನ್ನು ಬಿಟ್ಟು ಸಿದ್ದರಾಮಯ್ಯರವರ ಹಿಂದೆ ಬಿದ್ದಿರುವುದನ್ನು ನೋಡಿದರೆ ಒಂದೋ ಅವರು ಯಾವುದೇ ಅಭಿವೃದ್ದಿ ಕೆಲಸ ಮಾಡಿಲ್ಲದಿರುವುದೇ ಅವರ ಸಾಧನೆ ಎಂದರ್ಥ! ಇಲ್ಲವೇ ಸಿದ್ದರಾಮಯ್ಯನವರು ರಾಜ್ಯದ ಪ್ರಭಾವಿ ಮಾಸ್ ಲೀಡರ್ ಆಗಿದ್ದು, ಮುಂದಿನ ಚುನಾವಣೆಯಲ್ಲಿ ತಾವು ಗೆಲ್ಲುವುದಲ್ಲದೆ ಕಾಂಗ್ರೆಸ್ ಪಕ್ಷವನ್ನು ಬಹುಮತದಿಂದ ಅಧಿಕಾರಕ್ಕೆ ತರುತ್ತಾರೆ ಎಂಬ ಭಯ ಕಾಡುತ್ತಿರುವ ಸಾಧ್ಯತೆಯೂ ಇದೆ. ಇವೆರೆಡೂ ಅಲ್ಲದಿದ್ದರೆ ದಿನವಿಡೀ ಸಿದ್ದರಾಮಯ್ಯನವರ ಭಜನೆ ಮಾಡುವುದಾದರೂ ಏತಕ್ಕೆ?

2013ರಲ್ಲಿ ಸಿದ್ದರಾಮಯ್ಯನವರು ಸರ್ಕಾರ ರಚಿಸಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಅವರ ಕಾರಿನ ಮೇಲೆ ಕಾಗೆ ಕೂತಿದೆ, ಅದುದರಿಂದ ಅಧಿಕಾರ ಕಳೆದುಕೊಳ್ಳುತ್ತಾರೆ, ನಿದ್ದೆರಾಮಯ್ಯ ಇತ್ಯಾದಿಯಾಗಿ ಅವರನ್ನು ಇಲ್ಲಸಲ್ಲದ ರೀತಿಯಲ್ಲಿ ಮಾಧ್ಯಮಗಳ ಮೂಲಕ ಟೀಕಿಸಲಾಯಿತು. ಆಗ ಆರಂಭವಾದ ಅವರ ಮೇಲಿನ ಚರ್ಚೆ, ಟೀಕೆ, ಆರೋಪ, ನಿಂದನೆ 2018ರಲ್ಲಿ ಅವರು ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೂ ನಿಂತಿಲ್ಲ. ಅವರು ಸಿಎಂ ಆಗಿ ಪೂರ್ಣಾವಧಿ ಅಧಿಕಾರ ಪೂರೈಸಿದ ನಂತರ ಮೂವರು ವ್ಯಕ್ತಿಗಳು ರಾಜ್ಯಕ್ಕೆ ಸಿಎಂ ಆಗಿದ್ದಾರೆ. ಆದರೂ ಇಂದಿಗೆ ಅತಿ ಹೆಚ್ಚು ಚರ್ಚೆಯಲ್ಲಿರುವುದು, ಮಾಧ್ಯಮಗಳ ಮತ್ತು ಬಿಜೆಪಿಯವರ ಬಾಯಿಗೆ ಆಹಾರವಾಗುತ್ತಿರುವುದು ಮಾತ್ರ ಸಿದ್ದರಾಮಯ್ಯನವರು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗಿಂತಲೂ ಹೆಚ್ಚಾಗಿ ಮಾಧ್ಯಮಗಳು ಸಿದ್ದರಾಮಯ್ಯನವರ ಕುರಿತೇ ಮಾತನಾಡುತ್ತಿವೆ. ಇದು ಅರೋಗ್ಯಕರ ಮತ್ತು ಸಮಾಜಮುಖಿ ಟೀಕೆಯಾಗಿದ್ದರೆ ಒಳ್ಳೆಯದಾಗಿತ್ತು. ಆದರೆ ಅದು ಬಹುತೇಕ ನಿಂದನೆಯ ಮತ್ತು ಸುಳ್ಳು ಆರೋಪಗಳ ದನಿಯನ್ನೇ ಹೊಂದಿರುವುದು ಪದೇಪದೇ ಸಾಬೀತಾಗಿದೆ.

2017ರಲ್ಲಿ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಮೀನು ತಿಂದು ಧರ್ಮಸ್ಥಳಕ್ಕೆ ಹೋಗಿದ್ದಾರೆ ಎಂದು ವಿವಾದ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು, ’ಬರೀ ಮೀನಲ್ಲ, ಕೋಳಿ ಸಹ ತಿಂದು ಹೋಗಿದ್ದೆ ಏನಿವಾಗ’ ಎಂದು ದಿಟ್ಟವಾಗಿ ಉತ್ತರಿಸಿದ್ದರು. ಅಲ್ಲಿಂದ ಆರಂಭವಾಗಿ ತೀರಾ ಇತ್ತೀಚಿನವರೆಗೂ ಅವರು ಏನು ತಿನ್ನುತ್ತಾರೆ ಎಂಬುದು ಚರ್ಚೆ ಆಗುತ್ತಲೇ ಇದೆ. ಇತ್ತೀಚೆಗೆ ಪತ್ರಕರ್ತನೊಬ್ಬ, ’ಸರ್ ಕೊಡಗಿನಲ್ಲಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದರೆಂದು ಬಿಜೆಪಿಯವರು ಆರೋಪಿಸುತ್ತಾರೆ’ ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದರು. ’ತಿನ್ನುವುದು ನನ್ನಿಷ್ಟ, ನೀನ್ಯಾವನಯ್ಯ ಕೇಳಕ್ಕೆ’ ಎಂದು ಗುಡುಗಿದ್ದರು. ’ನೀನ್ಯಾವನಯ್ಯ ಕೇಳಕ್ಕೆ’ ಎಂಬ ಮಾತು ಸ್ವಲ್ಪ ಕಾಲ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್ ಆಗಿತ್ತು.

ಇನ್ನು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವಿನ ಸಂಬಂಧ ಚೆನ್ನಾಗಿಲ್ಲ; ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ ಎಂಬ ನಿರೂಪಣೆಯನ್ನು ಬಿಜೆಪಿ ಮತ್ತು ಮಾಧ್ಯಮಗಳು ಮತ್ತೆಮತ್ತೆ ತೇಲಿಬಿಡುತ್ತಿರುತ್ತವೆ. ತಿಂಗಳುಗಟ್ಟಲೆ ಆ ವಿಚಾರ ಚರ್ಚಿಸುತ್ತಿದ್ದವು. ಕಾಂಗ್ರೆಸ್ ಪಕ್ಷದ ಉಸಾಬರಿ ಬಿಜೆಪಿಗ್ಯಾಕೆ? ಅವರ ಪಕ್ಷದಲ್ಲಿ ಹುಳುಕುಗಳಿಲ್ಲವೇ? ಬಸನಗೌಡ ಯತ್ನಾಳ್ ಪ್ರತಿದಿನ ಬಿಜೆಪಿಗೆ ಬೈಯ್ಯುವುದು ಯಾಕೆ? ಎಂದು ಹಲವರು ಅದಕ್ಕೆ ಪ್ರತಿಕ್ರಿಯೆ ನೀಡಿದ್ದು ಉಂಟು.

ಇದನ್ನೂ ಓದಿ: ಕೋಲಾರ ಕ್ಷೇತ್ರವೆ ಏಕೆ?: ಕಾರಣ ವಿವರಿಸಿದ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರವೇ ಇಲ್ಲ ಎಂದು ಬಿಜೆಪಿ ಪ್ರಚಾರ ನಡೆಸಿತು. ಕಳೆದ ಚುನಾವಣೆಯಲ್ಲಿ ಬಾದಾಮಿಯಲ್ಲಿ ಕಡಿಮೆ ಅಂತರದಲ್ಲಿ ಸಿದ್ದರಾಮಯ್ಯನವರು ಗೆದ್ದಿದ್ದು, ಅಲ್ಲಿ ಈ ಬಾರಿ ಅವರನ್ನು ಜನ ಸೋಲಿಸುತ್ತಾರೆ; ಸಿದ್ದರಾಮಯ್ಯ ಎಲ್ಲೇ ನಿಂತರೂ ಸೋಲಿಸುತ್ತಾರೆ ಎಂಬ ಕಥನ ಕಟ್ಟಿತು. ಆಡಳಿತರೂಢ ಬಿಜೆಪಿಗೆ ಸಿದ್ದರಾಮಯ್ಯನವರ ಗೆಲುವು ಕಟ್ಟಿಕೊಂಡು ಏನಾಗಬೇಕು ಅಲ್ಲವೇ? ಕೊನೆಗೆ ಸಿದ್ದರಾಮಯ್ಯನವರು ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಸಿದ್ದರಾಮಯ್ಯನವರಿಗೆ ನಿಲ್ಲಲೊಂದು ಕ್ಷೇತ್ರವಿಲ್ಲ, ಕ್ಷೇತ್ರಕ್ಕಾಗಿ ಅಲೆದಾಟ ಎಂಬ ಬಿಜೆಪಿ ಮೂದಲಿಕೆಗೆ ಬ್ರೇಕ್ ಬಿದ್ದಿದೆ. ಹಾಗೆ ನೋಡಿದರೆ ಸದರಿ ಮುಖ್ಯಮಂತ್ರಿ ಬೊಮ್ಮಾಯಿಯವರೂ ಸೇರಿದಂತೆ ಹಲವು ಬಿಜೆಪಿ ಶಾಸಕರು ತಮ್ಮ ಮೂಲವಲ್ಲದ ವಲಸೆ ಕ್ಷೇತ್ರಗಳಿಂದ ಗೆದ್ದುಬರುತ್ತಿದ್ದಾರೆ! ಹಲವರು ಸೋಲುವ ಭೀತಿಯಲ್ಲಿಯೂ ಇದ್ದಾರೆ. ನಮ್ಮ ಚುನಾವಣಾ ವ್ಯವಸ್ಥೆಯಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸುವ ಅವಕಾಶ ಇದ್ದಾಗ ಅದನ್ನು ಗೇಲಿ ಮಾಡುವ, ಸೋಲುಗಳನ್ನು ಆಡಿಕೊಳ್ಳುವ ಪರಿಪಾಠ ಯಾವ ಪಕ್ಷಕ್ಕೂ ಶೋಭೆ ತರುವುದಿಲ್ಲ!

ಸಿದ್ದರಾಮಯ್ಯನವರು ಮುಸ್ಲಿಮರ ತುಷ್ಟೀಕರಣ ಮಾಡುತ್ತಾರೆ, ಟಿಪ್ಪು ಜಯಂತಿ ಆರಂಭಿಸಿದ್ದಾರೆ, ಸಿದ್ರಾಮುಲ್ಲಾಖಾನ್ ಎಂದೆಲ್ಲಾ ನೀಚಮಟ್ಟದ ಅಪಪ್ರಚಾರ ಮಾಡಲಾಯಿತು. ಅಷ್ಟಕ್ಕೆ ಸುಮ್ಮನಿರಲಾರದೆ ಈಗ ’ಸಿದ್ದು ನಿಜಕನಸುಗಳು’ ಎಂಬ ಪುಸ್ತಕ ಬರೆಯುವಲ್ಲಿಗೆ ಬಂದು ನಿಂತಿದೆ ಬಿಜೆಪಿ. ಆದರೆ ಈ ಹುಚ್ಚಾಟಕ್ಕೆ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಒಟ್ಟಿನಲ್ಲಿ ಸಿದ್ದರಾಮಯ್ಯನವರ ವಿರುದ್ಧ ಸದಾ ಒಂದಿಲ್ಲೊಂದು ವಿವಾದ ಸೃಷ್ಟಿಸುವುದು ಬಿಜೆಪಿಯ ಗುರಿಯಾಗಿದೆ. ಬಹುಪಾಲು ಮಾಧ್ಯಮಗಳು ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಹಾಗಾದರೆ ಸಿದ್ದರಾಮಯ್ಯನವರನ್ನು ಬಿಜೆಪಿ ಈ ಪರಿ ಗುರಿ ಮಾಡುತ್ತಿರುವುದು ಯಾಕಾಗಿ?

“ಏಕೆಂದರೆ ಸಿದ್ದರಾಮಯ್ಯನವರು ಇಂದಿಗೂ ರಾಜ್ಯದ ಹಲವಾರು ಸಮಯದಾಯಗಳು ಹೊತ್ತು ಮೆರೆಸುವ ನಿಜವಾದ ಮಾಸ್ ಲೀಡರ್ ಆಗಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಮತ್ತು ಮಾಜಿ ಸಿಎಂ ಯಡಿಯೂರಪ್ಪ ಸಹ ಮಾಸ್ ಲೀಡರ್‌ಗಳೇ. ಆದರೆ ಅವರ ಬೆನ್ನಿಗೆ ಒಂದು ಪ್ರಬಲ ಜಾತಿಯಿತ್ತು. ಆದರೆ ಸಿದ್ದರಾಮಯ್ಯನವರು ಕುರುಬ ಸಮುದಾಯಕ್ಕೆ ಸೇರಿದವರಾದರೂ ಕೇವಲ ಕುರುಬರು ಮಾತ್ರವಲ್ಲದೆ, ದಲಿತರು, ಮುಸ್ಲಿಮರು ಮತ್ತು ಇತರೆ ಹಿಂದುಳಿದ ವರ್ಗದ ಸಮುದಾಯಗಳು ಅವರನ್ನು ತಮ್ಮ ನಾಯಕರೆಂದು ಒಪ್ಪಿಕೊಂಡಿದ್ದಾರೆ. 2018ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಲಾರದೆ ಹೋದರೂ ಹಿಂದಿನ ಚುನಾವಣೆಗಿಂತ 1.4% ಹೆಚ್ಚಿನ ಮತಗಳನ್ನು ಪಡೆದಿದ್ದು ಮತ್ತು ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿದ ಸಂದರ್ಭದಲ್ಲಿ ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿ ಸೇರಿದ್ದ ಲಕ್ಷಾಂತರ ಜನ ಅವರ ಜನಪ್ರಿಯತೆಗೆ ಸಾಕ್ಷಿ ನುಡಿಯುತ್ತವೆ. 2018ರ ಚುನಾವಣೆಯಲ್ಲಿ ಬಿಜೆಪಿ 36.35% ಮತಗಳನ್ನು ಪಡೆದರೆ ಕಾಂಗ್ರೆಸ್ 38.14% ಮತಗಳನ್ನು ಪಡೆದಿತ್ತು. ಸಿದ್ದರಾಮೋತ್ಸವದಲ್ಲಿ 8 ಲಕ್ಷದವರೆಗೂ ಜನ ಸೇರಿದ್ದರು ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಕರ್ನಾಟಕದ ಕೆಲವೇ ಪ್ರದೇಶಗಳಿಗೆ ಮಾತ್ರವಲ್ಲದೆ ಇಡೀ ರಾಜ್ಯದ ಜನರನ್ನು ಪ್ರಭಾವಿಸುವ ಶಕ್ತಿ ಹೊಂದಿದ್ದಾರೆ. ಹಾಗಾಗಿಯೇ ಸಿದ್ದರಾಮಯ್ಯನವರನ್ನು ಮಣಿಸದೆ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಮತ್ತು ಅಧಿಕಾರ ಪಡೆಯಲು ಸಾಧ್ಯವಿಲ್ಲ ಎಂಬ ತೀರ್ಮಾನಕ್ಕೆ ಬಿಜೆಪಿ ಬಂದಿದ್ದು, ಅದಕ್ಕಾಗಿ ಇಷ್ಟೆಲ್ಲ ಕಸರತ್ತುಗಳನ್ನು ನಡೆಸುತ್ತಿದೆ.

“ಕರ್ನಾಟಕ ದಲ್ಲಿ ಬಿಜೆಪಿ ವರ್ಸಸ್ ಕಾಂಗ್ರೆಸ್ ಹೋರಾಟ ಎಂಬುದರ ಬದಲಿಗೆ, ಬಿಜೆಪಿ ವರ್ಸಸ್ ಸಿದ್ದರಾಮಯ್ಯ ಹೋರಾಟ ಎಂಬಂತಾಗಿಬಿಟ್ಟಿದೆ. ಏಕೆಂದರೆ ಸಿದ್ದರಾಮಯ್ಯನವರು ಇಲ್ಲ ಅಂದರೆ ಕಾಂಗ್ರೆಸ್ ಅನ್ನು ಸುಲಭವಾಗಿ ಎದುರಿಸಬಹುದು ಎಂಬುದು ಬಿಜೆಪಿಯವರಿಗೆ ಚೆನ್ನಾಗಿ ಗೊತ್ತಿದೆ. ಹಾಗಾಗಿ ಅವರೊಬ್ಬರನ್ನು ಸ್ವಲ್ಪವಾದರೂ ವೀಕ್ ಮಾಡಿದರೆ ಸಾಕು ಎಂದು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ. ಆದರೆ ಅದರಲ್ಲಿ ಅವರು ಸಫಲವಾಗುತ್ತಿಲ್ಲ ಎನ್ನುತ್ತಾರೆ” ಅಜೀಂ ಪ್ರೇಮ್‌ಜಿ ವಿವಿ ಪ್ರಾಧ್ಯಾಫಕರು ಮತ್ತು ರಾಜಕೀಯ ವಿಶ್ಲೇಷಕರಾದ ಎ.ನಾರಾಯಣರವರು.

“ಸೈಕಲಾಜಿಕಲಿ ಸಿದ್ದರಾಮಯ್ಯನವರ ಸ್ಥಾನಮಾನ ಸ್ವಲ್ಪ ಕುಗ್ಗುವ ಹಾಗೆ ನೋಡಿಕೊಂಡರೆ ಮತ್ತು ಜನರಿಗೆ ಮಾನಸಿಕವಾಗಿ ಅವರ ವಿರುದ್ಧ ಒಂದು ಸಂದೇಶ ಹೋಗುವ ಹಾಗೆ ಮಾಡಿದರೆ ಅಷ್ಟರಮಟ್ಟಿಗೆ ಕಾಂಗ್ರೆಸ್‌ಅನ್ನು ಮಣಿಸುವುದು ಸುಲಭ ಎಂದು ಬಿಜೆಪಿ ನಂಬಿದೆ. ಈಗಷ್ಟೇ ಅಲ್ಲ, ಹಿಂದಿನಿಂದಲೂ ಅದನ್ನೇ ಅವರು ಮಾಡಿಕೊಂಡು ಬರುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿಯೂ ಇದೇ ಗೇಮ್ ನಡೆಸಲಾಯಿತು. ಎಲ್ಲಾ ಸಮುದಾಯಗಳನ್ನು ಸಿದ್ದರಾಮಯ್ಯನವರ ವಿರುದ್ಧ ಎತ್ತಿಕಟ್ಟಲು ಪ್ರಯತ್ನಿಸಿದರು. ಅದನ್ನು ಈ ಬಾರಿಯೂ ಮಾಡಲು ಯತ್ನಿಸುತ್ತಿದ್ದಾರೆ” ಎಂದರು.

ಈ ಕುರಿತು ‘ನ್ಯಾಯಪಥ’ದೊಂದಿಗೆ ಮಾತನಾಡಿದ ಕೆಪಿಸಿಸಿ ವಕ್ತಾರರಾದ ಲಕ್ಷ್ಮಣ್‌ರವರು, “ಸಿದ್ದರಾಮಯ್ಯನವರು ನಮ್ಮ ರಾಜ್ಯದ ಮಾಸ್ ಲೀಡರ್ ಆಗಿದ್ದಾರೆ. ಅವರ ವೈಯಕ್ತಿಕ ವರ್ಚಸ್ಸಿನ ಮೇಲೆ 224 ಕ್ಷೇತ್ರಗಳಲ್ಲಿಯೂ ಅಭಿಮಾನಿಗಳು, ಅನುಯಾಯಿಗಳಿದ್ದಾರೆ. ಪ್ರತಿ ಕ್ಷೇತ್ರದಲ್ಲಿಯೂ ಅವರು ಹೇಳಿದವರಿಗೆ ಮತ ಚಲಾಯಿಸುವ ಕನಿಷ್ಟ 15 ಸಾವಿರದಷ್ಟು ಮತದಾರರಿದ್ದಾರೆ. 2013-17ರವರೆಗೂ ಅವರು ಕೊಟ್ಟಂತ ಕಾರ್ಯಕ್ರಮಗಳ ಮಹತ್ವ 2018ರ ಚುನಾವಣೆಯಲ್ಲಿ ಜನರಿಗೆ ಅಷ್ಟಾಗಿ ಗೊತ್ತಾಗಲಿಲ್ಲ. ಆದರೆ ಇತ್ತೀಚಿಗಿನ ಬಿಜೆಪಿ ಸರ್ಕಾರದ ದುರಾಡಳಿತ ನೋಡಿದ ಜನರಿಗೆ ಸಿದ್ದರಾಮಯ್ಯನವರ ಜನಪರ ಆಡಳಿತ ಮನದಟ್ಟಾಗಿದೆ. ಹಾಗಾಗಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ಬೇಕೆಂದು ಜನ ಬಯಸುತ್ತಿದ್ದಾರೆ. ಇದೇ ಕಾರಣಕ್ಕಾಗಿ ಸಿದ್ದರಾಮಯ್ಯನವರನ್ನು ತೇಜೋವಧೆ ಮಾಡಲು, ಖಳನಾಯಕನನ್ನಾಗಿ ಬಿಂಬಿಸಲು ಬಿಜೆಪಿ ಮುಂದಾಗಿದೆ” ಎಂದರು.

“ಪ್ರತಿ ವಿಧಾನಸಭಾ ಕ್ಷೇತ್ರದ ಗ್ರೌಂಡ್ ರಿಪೋರ್ಟ್ ನೋಡಿದಾಗ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 60ಕ್ಕಿಂತ ಹೆಚ್ಚು ಸೀಟು ಗೆಲ್ಲುವುದು ಕಷ್ಟ ಎಂಬ ಅರಿವಾಗಿದೆ. ಕಾಂಗ್ರೆಸ್ ಬಹುಮತ ಪಡೆಯುವ ಅವಕಾಶ ಇರುವುದರಿಂದ ಅದು ಬಿಜೆಪಿಗೆ ತಲೆನೋವಾಗಿದೆ. ಸಿದ್ದರಾಮಯ್ಯನವರನ್ನು ಹಣದಿಂದ ಕೊಳ್ಳುವುದಕ್ಕಾಗಲಿ, ಐಟಿ, ಇಡಿ ಗುಮ್ಮ ತೋರಿಸಿ ಬೆದರಿಸುವುದಕ್ಕಾಗಲಿ ಬಿಜೆಪಿಗೆ ಸಾಧ್ಯವಿಲ್ಲವಾದ್ದರಿಂದ ಅವರ ಚಾರಿತ್ರ್ಯ ಹರಣಕ್ಕೆ ಮುಂದಾಗಿದೆ. ಆ ಮೂಲಕ, ಯಾರಿಗೆ ಮತ ಹಾಕಬೇಕೆಂದು ಇನ್ನೂ ನಿರ್ಧರಿಸದೆ ಬೇಲಿ ಮೇಲೆ ಕುಳಿತಿರುವ ಜನರನ್ನು ಒಲಿಸಿಕೊಳ್ಳಲು ಹರಸಾಹಸ ಪಡುತ್ತಿದೆ. ಆದರೆ ಅದು ಸಾಧ್ಯವಾಗುವುದಿಲ್ಲ. ಇದೇ ರೀತಿ ದೇಶಮಟ್ಟದಲ್ಲಿ ರಾಹುಲ್ ಗಾಂಧಿ ಮೇಲೆ ಅವಹೇಳನ ಮಾಡಲಾಗುತ್ತಿದೆ. ಈ ಮುಂಚೆ ಅವರಿಗೆ ಏನೂ ಗೊತ್ತಿಲ್ಲ, ಪಪ್ಪು ಎಂದು ಕರೆಯುತ್ತಿದ್ದರು. ಆದರೆ ಭಾರತ್ ಜೋಡೊ ಯಾತ್ರೆ ರಾಹುಲ್ ಗಾಂಧಿಯವರ ವರ್ಚಸ್ಸನ್ನು ಜನರೆದರು ಅನಾವರಣ ಮಾಡಿತು. ಜನರ ಭಾವನೆ ಸಂಪೂರ್ಣ ಬದಲಾಗಿದೆ” ಎಂದರು.

ಬಿಜೆಪಿ ಟಿಪ್ಪು ಸುಲ್ತಾನನ ಕುರಿತಾಗಿ ಇತಿಹಾಸ ತಿರುಚುವ ಕೆಲಸ ಮಾಡುತ್ತಿದೆ. ನೆಹರೂರವರ, ಗಾಂಧೀಜಿಯವರ ಚಾರಿತ್ರ್ಯ ಹರಣ ಮಾಡಲು ಯತ್ನಿಸುತ್ತಿದೆ. ಆ ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಮಣಿಸಿ ಪಾರಮ್ಯ ಮೆರೆಯುವ ಕೆಲಸ ಮಾಡುತ್ತಿದೆ. ಇದರಲ್ಲಿ ತಕ್ಕಮಟ್ಟಿಗೆ ಯಶಸ್ಸು ಕೂಡ ಸಾಧಿಸಿದೆ ಎನ್ನಬಹುದು. ಆದರೆ ಅದಕ್ಕೆ ಅದೇ ಮಟ್ಟದ ವಿರೋಧವನ್ನೂ ಎದರಿಸುತ್ತಿದೆ. ಈಗ ಸಿದ್ದರಾಮಯ್ಯನವರನ್ನು ಅದೇ ಮಾದರಿಯಲ್ಲಿ ತೇಜೋವಧೆ ಮಾಡಲು ಮುಂದಾಗಿದೆ. ಆದರೆ ಸಿದ್ದರಾಮಯ್ಯನವರ ರಾಜಕೀಯ ಇನ್ನೂ ಜೀವಂತವಾಗಿದ್ದು ಗಟ್ಟಿದನಿಯಲ್ಲಿ ತಮ್ಮ ಟೀಕಾಕಾರನ್ನು ಎದರಿಸುತ್ತಿದ್ದಾರೆ. ಈ ರಾಜ್ಯ ಕಂಡ ಅತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಒಬ್ಬರು ಎಂದು ತಿಳಿದ ಕೋಟ್ಯಂತರ ಜನ ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಬಿಜೆಪಿಗೆ ತಮ್ಮ ಅಪಪ್ರಚಾರದ ನರೆಟಿವ್‌ನಲ್ಲಿ ಇನ್ನೂ ನಿರೀಕ್ಷಿತ ಮಟ್ಟದ ಯಶಸ್ಸು ಸಿಕ್ಕಿಲ್ಲ. ಕರ್ನಾಟಕದ ಮಹತ್ವದ ಚುನಾವಣೆಗೆ ಇನ್ನು 3-4 ತಿಂಗಳು ಮಾತ್ರ ಉಳಿದಿರುವುದರಿಂದ ಈ ಪ್ರಹಸನ ಮತ್ತಷ್ಟು ಜೋರಾಗಲಿದೆ. ಇದರಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ಕಾಲವೇ ನಿರ್ಣಯಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...