Homeಮುಖಪುಟಸದನದಲ್ಲಿ ಸಿಡಿ ಗಲಾಟೆ: ಏಕಪತ್ನಿ ವ್ರತಸ್ಥರ ಪ್ರಶ್ನೆ - ಬಿಜೆಪಿ, ಕಾಂಗ್ರೆಸ್ ಗದ್ದಲ

ಸದನದಲ್ಲಿ ಸಿಡಿ ಗಲಾಟೆ: ಏಕಪತ್ನಿ ವ್ರತಸ್ಥರ ಪ್ರಶ್ನೆ – ಬಿಜೆಪಿ, ಕಾಂಗ್ರೆಸ್ ಗದ್ದಲ

- Advertisement -
- Advertisement -

ವಿಧಾನಸಭಾ ಅಧಿವೇಶನದಲ್ಲಿ ಕಳೆದ ಕೆಲ ದಿನಗಳಿಂದ ಸಿಡಿ ಪ್ರಕರಣದ್ದೇ ಸದ್ದು. ಬೇರೆಲ್ಲಾ ವಿಷಯಗಳ ಚರ್ಚೆಯನ್ನು ಬಿಜೆಪಿಯವರ ಸಿಡಿ ಪ್ರಕರಣ ಹಾಳು ಮಾಡಿದೆ. ಕಾಂಗ್ರೆಸ್ ಸದಸ್ಯರು ಸಿಡಿಗಳನ್ನು ಕೈಯಲ್ಲಿ ಹಿಡಿದು ಇಂದು ಕೂಡ ಧರಣಿ ನಡೆಸಿದ್ದಾರೆ.

ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದಲ್ಲಿ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸದಸ್ಯರು ಕಲಾಪ ನಡೆಯದಂತೆ ಘೋಷಣೆ ಕೂಗಿದ್ದಾರೆ. ಧಿಕ್ಕಾರಗಳ ನಡುವೆಯೇ ಮುಖ್ಯಮಂತ್ರಿಗಳು ತಮ್ಮ ಮಾತು ಮುಂದುವರೆಸಿದ್ದರು.

ರಮೇಶ್ ಜಾರಕಿಹೊಳಿ ಜೊತೆಗೆ, ತಮ್ಮ ವಿರುದ್ಧದ ಸುದ್ದಿ ಪ್ರಕಟಿಸಬಾರದು ಎಂದು ನ್ಯಾಯಾಲಯದಿಂದ ಆದೇಶ ತಂದಿದ್ದ 6 ಮಂದಿ ಸಚಿವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಇದಕ್ಕೆ ಪ್ರತಿಕ್ರಿಯಿಸಿದ್ದ ಸಚಿವರಾದ ಸುಧಾಕರ್‌ ಮತ್ತು ಬಿ.ಸಿ.ಪಾಟೀಲ್ ‘ಬೇರೆಯವರೇನು ಏಕಪತ್ನಿ ವ್ರತಸ್ಥರಾ..?, ‘ಎಲ್ಲರೂ ಶ್ರೀರಾಮಚಂದ್ರರಲ್ಲ’ ಎಂದಿದ್ದರು.

ಇದನ್ನೂ ಓದಿ: ‘ಬಾಂಬೆ ತಂಡ’ದ ಶಾಸಕರ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ: ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

ಸಚಿವರ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಕರ್ನಾಟಕ ಕಾಂಗ್ರೆಸ್, #BJPblueBoys ಬಂಡತನದ ಮೂಲಕ ತಮ್ಮ ನೈತಿಕ ದಿವಾಳಿತನ ಪ್ರದರ್ಶಿಸಿದ್ದಾರೆ ಎಂದು ಟ್ವೀಟ್ ಮಾಡಿದೆ.

“ಬೇರೆಯವರೇನು ಏಕಪತ್ನಿ ವ್ರತಸ್ಥರಾ? ಎಂದಿರುವ ಡಾ.ಕೆ.ಸುಧಾಕರ್‌, ಎಲ್ಲರೂ ಶ್ರೀರಾಮಚಂದ್ರರಲ್ಲ ಎಂದಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಈ ಸಮರ್ಥನೆಗಳ ಮೂಲಕ ಬಿಜೆಪಿಗರು ತಾವು ಕಂಡವರ ಮನೆಯ ಹೆಣ್ಣುಮಕ್ಕಳನ್ನ ಮಂಚಕ್ಕೆ ಕರೆದು ಅತ್ಯಾಚಾರ ಮಾಡುವವರು ಎನ್ನುವುದನ್ನ ಒಪ್ಪಿಕೊಂಡಿದ್ದಾರೆ” ಎಂದು ಕಿಡಿಕಾರಿದೆ.

ಜೊತೆಗೆ #BJPblueBoys ಬಂಡತನದ ಮೂಲಕ ತಮ್ಮ ನೈತಿಕ ದಿವಾಳಿತನ ಪ್ರದರ್ಶಿಸಿದ್ದಾರೆ ಎಂದು ಹೊಸ ಹ್ಯಾಶ್‌ಟ್ಯಾಗ್ ಬಳಸಿದೆ.

ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಬೇಕು. ಸಂತ್ರಸ್ತ ಯುವತಿಗೆ ನ್ಯಾಯ ನೀಡಬೇಕು ಎಂದಿರುವ ಕಾಂಗ್ರೆಸ್, ಪ್ರಕರಣದ ತನಿಖೆಯನ್ನು ಸ್ವತಂತ್ರ ಸಂಸ್ಥೆ ನಡೆಸಬೇಕು ಎಂದು ಆಗ್ರಹಿಸಿದೆ.

’ರಾಜಕೀಯಕ್ಕೆ ರಾಮನ ಹೆಸರು ಬಳಸುವ ನೀವು, ರಾಮನ ಆದರ್ಶ ಏಕೆ ಪಾಲಿಸುತ್ತಿಲ್ಲ? ಕಳಂಕಿತರಾದ 6 ಸಿಡಿ ಸಚಿವರ ರಾಜೀನಾಮೆ ಪಡೆದು ರಾಮನ ಮೇಲೆ ನಿಮಗಿರುವ ನೈಜ ಗೌರವ ನಿರೂಪಿಸಿ ಎಂದು ಕರ್ನಾಟಕ ಬಿಜೆಪಿಯನ್ನು ಆಗ್ರಹಿಸಿದೆ. ತನಿಖೆ ಎಂಬ “ಅಗ್ನಿಪರೀಕ್ಷೆ”ಯಲ್ಲಿ ಗೆದ್ದು ಪವಿತ್ರರು ಎಂದು ಈ ಆರು ಮಂದಿ ಸಿಡಿ ಸಚಿವರು ಸಾಬೀತುಪಡಿಸಲಿ’ ಎಂದಿದೆ.

‌ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ಯುವತಿಯೊಬ್ಬರಿಗೆ ಕೆಲಸದ ಆಮಿವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿಡಿಯೋ ಸಿ.ಡಿ ಜೊತೆಗೆ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಚಿವರಾದ ಡಾ. ಕೆ. ಸುಧಾಕರ್, ಎಸ್​.ಟಿ. ಸೋಮಶೇಖರ್, ನಾರಾಯಣ ಗೌಡ, ಶಿವರಾಮ್ ಹೆಬ್ಬಾರ್, ಬಿ.ಸಿ ಪಾಟೀಲ್, ಭೈರತಿ ಬಸವರಾಜ್ ತಮ್ಮ ವಿರುದ್ಧ ಯಾವುದೆ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು.


ಇದನ್ನೂ ಓದಿ: ಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...