Homeಮುಖಪುಟಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

- Advertisement -
- Advertisement -

ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಪುದುಶ್ಶೇರಿಯ ಕಲಾದಿತ್ತರ ನಿವಾಸಿ ಅಶ್ವಿನ್ ರಾಜ್ ಬಂಧಿತ ಆರೋಪಿ. ಈತ ಬಿಜೆಪಿ-ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಕಸಬಾ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದು, ಶೀಘ್ರದಲ್ಲೇ ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ.

ಪುದುಶ್ಶೇರಿಯ ಸುರಭಿ ನಗರದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅಶ್ವಿನ್ ರಾಜ್ ಮತ್ತು ಇತರ ಇಬ್ಬರು ಸುಮಾರು 10 ಜನರಿದ್ದ ಕ್ಯಾರೋಲ್ ಗುಂಪಿನ ಮೇಲೆ ಹಲ್ಲೆ ನಡೆಸಿ, ಆ ಪ್ರದೇಶದಲ್ಲಿ ಇಂತಹ ಪ್ರದರ್ಶನಗಳನ್ನು ಅನುಮತಿಸುವುದಿಲ್ಲ ಎಂದು ಕೂಗಿದ್ದಾರೆ.

ಕ್ಯಾರೋಲ್ ಗುಂಪು ಬಳಿ ಇದ್ದ ಡ್ರಮ್‌ನಲ್ಲಿ ‘ಸಿಪಿಐ(ಎಂ)’ ಎಂದು ಬರೆದಿದ್ದಕ್ಕೆ ವಾಗ್ವಾದ ನಡೆದು, ನಂತರ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ದಾಳಿಕೋರರು ಬ್ಯಾಂಡ್ ಸೆಟ್ ಮತ್ತು ಇತರ ಸಂಗೀತ ಉಪಕರಣಗಳಿಗೆ ಹಾನಿ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಘಟನೆ ಸಂಬಂಧ ಕ್ಯಾರೋಲ್ ಗುಂಪು ಕಸಬಾ ಪೊಲೀಸರಿಗೆ ದೂರು ನೀಡಿತ್ತು. ಈ ದಾಳಿಯನ್ನು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ನಡೆಸಿದ್ದಾರೆ ಎಂದು ಆರೋಪಿಸಿತ್ತು.

ಘಟನಾ ಸ್ಥಳಕ್ಕೆ ರಾತ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಹೆಚ್ಚಿನ ತಪ್ಪಿಸಿಕೊಳ್ಳುವಲ್ಲಿ ತಾವು0 ಯಶಸ್ವಿಯಾಗಿದ್ದೇವೆ ಎಂದು ಕ್ಯಾರೋಲ್ ಗುಂಪು ಹೇಳಿಕೊಂಡಿದ್ದು, ದಾಳಿಕೋರರು ಕೋಲುಗಳನ್ನು ಹಿಡಿದು ಸಿದ್ದರಾಗಿದ್ದರು. ನಮ್ಮ ಪ್ರದರ್ಶನ ತಡೆಯಲು ಪ್ರಯತ್ನಿಸಿದರು ಎಂದು ತಿಳಿಸಿದೆ.

ಕಸಬಾ ಇನ್ಸ್‌ಪೆಕ್ಟರ್ ಎಂ. ಸುಜಿತ್ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ದೃಢಪಡಿಸಿದ್ದಾರೆ.

ದಾಳಿಗೊಳಗಾದವರು 10 ರಿಂದ 15 ವರ್ಷ ವಯಸ್ಸಿನ ಮಕ್ಕಳು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪುದುಶ್ಶೇರಿ ಪ್ರದೇಶ ಸಮಿತಿಯ ನಾಯಕರು ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಮಕ್ಕಳ ಕೋರಿಕೆಯ ಮೇರೆಗೆ ಬ್ಯಾಂಡ್ ಏರ್ಪಡಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಕೋಮು ಸಾಮರಸ್ಯವನ್ನು ಕದಡಲು ಮತ್ತು ಪ್ರದೇಶದ ಶಾಂತಿಯುತ ವಾತಾವರಣವನ್ನು ಹಾಳುಗೆಡವಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷವೂ ಪಾಲಕ್ಕಾಡ್‌ನ ಸರ್ಕಾರಿ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಅಡ್ಡಿಪಡಿಸಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್‌ನ ಇಬ್ಬರು ನಾಯಕರು ಮತ್ತು ಬಜರಂಗದಳದ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಮೂವರು ಆರೋಪಿಗಳು ನಲ್ಲೇಪಿಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ಶಿಕ್ಷಕರನ್ನು ನಿಂದಿಸಿ, ಕ್ರಿಸ್‌ಮಸ್ ಮಾತ್ರ ಏಕೆ ಆಚರಿಸಲಾಗುತ್ತಿದೆ ಎಂದು ಪ್ರಶ್ನಿಸಿದ್ದರು ಮತ್ತು ಶ್ರೀ ಕೃಷ್ಣ ಜಯಂತಿಯನ್ನು ಕೂಡ ಆಚರಿಸಬೇಕೆಂದು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...