Homeಮುಖಪುಟಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

- Advertisement -
- Advertisement -

ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಪುದುಶ್ಶೇರಿಯ ಕಲಾದಿತ್ತರ ನಿವಾಸಿ ಅಶ್ವಿನ್ ರಾಜ್ ಬಂಧಿತ ಆರೋಪಿ. ಈತ ಬಿಜೆಪಿ-ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಕಸಬಾ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದು, ಶೀಘ್ರದಲ್ಲೇ ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ.

ಪುದುಶ್ಶೇರಿಯ ಸುರಭಿ ನಗರದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅಶ್ವಿನ್ ರಾಜ್ ಮತ್ತು ಇತರ ಇಬ್ಬರು ಸುಮಾರು 10 ಜನರಿದ್ದ ಕ್ಯಾರೋಲ್ ಗುಂಪಿನ ಮೇಲೆ ಹಲ್ಲೆ ನಡೆಸಿ, ಆ ಪ್ರದೇಶದಲ್ಲಿ ಇಂತಹ ಪ್ರದರ್ಶನಗಳನ್ನು ಅನುಮತಿಸುವುದಿಲ್ಲ ಎಂದು ಕೂಗಿದ್ದಾರೆ.

ಕ್ಯಾರೋಲ್ ಗುಂಪು ಬಳಿ ಇದ್ದ ಡ್ರಮ್‌ನಲ್ಲಿ ‘ಸಿಪಿಐ(ಎಂ)’ ಎಂದು ಬರೆದಿದ್ದಕ್ಕೆ ವಾಗ್ವಾದ ನಡೆದು, ನಂತರ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ದಾಳಿಕೋರರು ಬ್ಯಾಂಡ್ ಸೆಟ್ ಮತ್ತು ಇತರ ಸಂಗೀತ ಉಪಕರಣಗಳಿಗೆ ಹಾನಿ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಘಟನೆ ಸಂಬಂಧ ಕ್ಯಾರೋಲ್ ಗುಂಪು ಕಸಬಾ ಪೊಲೀಸರಿಗೆ ದೂರು ನೀಡಿತ್ತು. ಈ ದಾಳಿಯನ್ನು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ನಡೆಸಿದ್ದಾರೆ ಎಂದು ಆರೋಪಿಸಿತ್ತು.

ಘಟನಾ ಸ್ಥಳಕ್ಕೆ ರಾತ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಹೆಚ್ಚಿನ ತಪ್ಪಿಸಿಕೊಳ್ಳುವಲ್ಲಿ ತಾವು0 ಯಶಸ್ವಿಯಾಗಿದ್ದೇವೆ ಎಂದು ಕ್ಯಾರೋಲ್ ಗುಂಪು ಹೇಳಿಕೊಂಡಿದ್ದು, ದಾಳಿಕೋರರು ಕೋಲುಗಳನ್ನು ಹಿಡಿದು ಸಿದ್ದರಾಗಿದ್ದರು. ನಮ್ಮ ಪ್ರದರ್ಶನ ತಡೆಯಲು ಪ್ರಯತ್ನಿಸಿದರು ಎಂದು ತಿಳಿಸಿದೆ.

ಕಸಬಾ ಇನ್ಸ್‌ಪೆಕ್ಟರ್ ಎಂ. ಸುಜಿತ್ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ದೃಢಪಡಿಸಿದ್ದಾರೆ.

ದಾಳಿಗೊಳಗಾದವರು 10 ರಿಂದ 15 ವರ್ಷ ವಯಸ್ಸಿನ ಮಕ್ಕಳು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪುದುಶ್ಶೇರಿ ಪ್ರದೇಶ ಸಮಿತಿಯ ನಾಯಕರು ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಮಕ್ಕಳ ಕೋರಿಕೆಯ ಮೇರೆಗೆ ಬ್ಯಾಂಡ್ ಏರ್ಪಡಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಕೋಮು ಸಾಮರಸ್ಯವನ್ನು ಕದಡಲು ಮತ್ತು ಪ್ರದೇಶದ ಶಾಂತಿಯುತ ವಾತಾವರಣವನ್ನು ಹಾಳುಗೆಡವಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷವೂ ಪಾಲಕ್ಕಾಡ್‌ನ ಸರ್ಕಾರಿ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಅಡ್ಡಿಪಡಿಸಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್‌ನ ಇಬ್ಬರು ನಾಯಕರು ಮತ್ತು ಬಜರಂಗದಳದ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಮೂವರು ಆರೋಪಿಗಳು ನಲ್ಲೇಪಿಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ಶಿಕ್ಷಕರನ್ನು ನಿಂದಿಸಿ, ಕ್ರಿಸ್‌ಮಸ್ ಮಾತ್ರ ಏಕೆ ಆಚರಿಸಲಾಗುತ್ತಿದೆ ಎಂದು ಪ್ರಶ್ನಿಸಿದ್ದರು ಮತ್ತು ಶ್ರೀ ಕೃಷ್ಣ ಜಯಂತಿಯನ್ನು ಕೂಡ ಆಚರಿಸಬೇಕೆಂದು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...