Homeಕರ್ನಾಟಕಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ: ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಯಾವುದೇ ಜಾತಿ ಧರ್ಮಗಳನ್ನು ಪರಿಗಣಿಸದೆ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳವಾರ (ಸೆ.9) ಅವರು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮದ್ದೂರು ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೆಶವಾಗಿದೆ. ಮೈಸೂರಿನಲ್ಲಿ ‘ಚಾಮುಂಡಿ ಬೆಟ್ಟ ಚಲೋ’ ಹಮ್ಮಿಕೊಂಡಿದ್ದರು. ಆರ್‌ಎಸ್‌ಎಸ್ ಸಂಘಟನೆಯವರು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದವರು ಇದರಲ್ಲಿ ಪಾಲ್ಗೊಂಡು ಶಾಂತಿ ಕದಡುವ ಕೆಲಸ ಮಾಡುತ್ತಾರೆಂಬ ಕಾರಣಕ್ಕೆ ಪೊಲೀಸರು ಅನುಮತಿ ನೀಡಿಲ್ಲ. ಮದ್ದೂರಿನಲ್ಲಿ ಬಂದ್ ಮಾಡಲು ಕರೆ ಕೊಟ್ಟಿದ್ದಾರೆ. ಗಲಭೆಯಲ್ಲಿ ನಡೆಸುವವರು ಯಾವುದೇ ಪಕ್ಷ, ಸಮುದಾಯವರು ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಣಿಪುರ ಹಿಂಸಾಚಾರದ ಬಗ್ಗೆ ಬಿಜೆಪಿ ಧ್ವನಿ ಎತ್ತುವುದಿಲ್ಲ

ಬಿಜೆಪಿಯವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಾಗಿ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ. ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಯಾವುದೇ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ ಎಂದು ಮರುಪ್ರಶ್ನಿಸಿದರು. ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದು ಹೇಳಿದರು.

ಎಂಎಲ್‌ಸಿಗಳಿಗೂ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡುವ ಆಶ್ವಾಸನೆ

ಇಂದು ಆಡಳಿತ ಪಕ್ಷದ ವಿಧಾನಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ. ಈ ಹಿಂದೆ ಜಿಲ್ಲಾ ಶಾಸಕರೊಂದಿಗೆ ಸಭೆ ನಡೆಸಿದಂತೆ, ನಾಳೆ ಬೆಂಗಳೂರು ನಗರದ ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಯವ್ಯಯದಲ್ಲಿ 8000 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಶಾಸಕರಿಗೆ ನೀಡಿದಂತೆ ಎಂಎಲ್‌ಸಿಗಳಿಗೂ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಕೆಯಾಗಿದೆ. ಮೀಸಲಿರಿಸಿರುವ 8000 ಕೋಟಿ ರೂ.ಗಳಲ್ಲಿ ಎಂಎಲ್‌ಸಿಗಳಿಗೂ ಅನುದಾನ ನೀಡಲು ಪರಿಶೀಲಿಸುವುದಾಗಿ ಆಶ್ವಾಸನೆ ನೀಡಲಾಗಿದೆ ಎಂದು ತಿಳಿಸಿದರು.

ಮದ್ದೂರಿನ ಕಲ್ಲು ತೂರಾಟದಲ್ಲಿ ಹಿಂದುತ್ವ ಗುಂಪುಗಳೂ ಭಾಗಿಯಾಗಿವೆ: ಗೃಹ ಸಚಿವ ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...