Homeಕರ್ನಾಟಕಬಿಜೆಪಿಯ ಮತ್ತೊಂದು ವಿಕೆಟ್ ಪತನ ಸಾಧ್ಯತೆ; ಸಂಗಣ್ಣ ಕರಡಿ ಬಿಜೆಪಿ ಬಿಟ್ಟು ಜೆಡಿಎಸ್‌ನತ್ತ ಹೆಜ್ಜೆ?

ಬಿಜೆಪಿಯ ಮತ್ತೊಂದು ವಿಕೆಟ್ ಪತನ ಸಾಧ್ಯತೆ; ಸಂಗಣ್ಣ ಕರಡಿ ಬಿಜೆಪಿ ಬಿಟ್ಟು ಜೆಡಿಎಸ್‌ನತ್ತ ಹೆಜ್ಜೆ?

- Advertisement -
- Advertisement -

ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಪಕ್ಷ ತೊರೆಯುವ ನಾಯಕರ ಸಂಖ್ಯೆ ದಿನನಿತ್ಯ ಹೆಚ್ಚಾಗುತ್ತಲೇ ಇದೆ. ಮಾಜಿ ಉಪಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಬಿಜೆಪಿಗೆ ರಾಜೀನಾಮೆ ತೀರ್ಮಾಣದ ಬೆನ್ನಲ್ಲೇ ಇದೀಗ ಹಾಲಿ ಸಂಸದರೊಬ್ಬರು ಬಿಜೆಪಿ ಬಿಡುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.

ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ನೀಡಲು ಪಕ್ಷದ ವರಿಷ್ಠರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಂಸದ ಸಂಗಣ್ಣ ಕರಡಿ ಭಾನುವಾರ ಬೆಂಬಲಿಗರ ಹಾಗೂ ಹಿತೈಷಿಗಳ ಸಭೆ ಕರೆದಿದ್ದಾರೆ. ಈ ಸಭೆಯ ಬಳಿಕ ಅವರು ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಸಮಧಾನಗೊಂಡಿರುವ ಸಂಗಣ್ಣ ಅವರಿಗೆ ಶನಿವಾರ ತಡರಾತ್ರಿ ಫೋನ್‌ ಕರೆ ಮಾಡಿ ”ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ. ಭಾನುವಾರ ಎಲ್ಲವೂ ಪರಿಹಾರವಾಗಲಿದೆ” ಎಂದಿದ್ದಾರೆ. ಹಾಗಾಗಿ ಸಂಗಣ್ಣ ಕರಡಿ ಅವರು ವರಿಷ್ಠರಿಂದ ಏನು ಸಂದೇಶ ಬರಲಿದೆ ಎನ್ನುವುದನ್ನೂ ತಿಳಿದುಕೊಳ್ಳಲು ಕಾಯುತ್ತಿದ್ದಾರೆ.

”ರಾಜ್ಯ ನಾಯಕರು ಈ ಮೊದಲು ನನಗೆ ಟಿಕೆಟ್‌ ನೀಡಲಾಗುವುದು ಎಂದು ಭರವಸೆ ಕೊಟ್ಟಿದ್ದರು. ಬೊಮ್ಮಾಯಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ನನಗೇ ಟಿಕೆಟ್‌ ನೀಡುವಂತೆ ಕೇಂದ್ರ ನಾಯಕರಿಗೆ ಶಿಫಾರಸು ಮಾಡಿದ್ದಾರೆ. ಪಕ್ಷದ ಆಂತರಿಕ ಸಮೀಕ್ಷೆಯ ವರದಿ ಕೂಡ ನನ್ನ ಪರವಾಗಿಯೇ ಬಂದಿದೆ. ಆದ್ದರಿಂದ ನನಗೇ ಟಿಕೆಟ್‌ ಕೊಡಬೇಕು” ಎಂದು ಸಂಗಣ್ಣ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಕೊನೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ

ಆದರೆ ವರಿಷ್ಠರು ‘ಹಾಲಿ ಸಂಸದರು ಮತ್ತು ಅವರ ಕುಟುಂಬಕ್ಕೆ ಟಿಕೆಟ್ ನೀಡುವುದಿಲ್ಲ’ ಎಂದು ಹೇಳಿದ್ದು ಕರಡಿ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಬಿಜೆಪಿ ತೊರೆದು ಪಕ್ಷೇತರ ಅಥವಾ ಜೆಡಿಎಸ್‌ನಿಂದ ಸ್ಪರ್ಧೆ ಮಾಡಲು ಒಲವು ಹೊಂದಿದ್ದಾರೆ ಎಂದು ಹೇಲಲಾಗುತ್ತಿದೆ. ಇದೇ ಕಾರಣಕ್ಕಾಗಿ ಜೆಡಿಎಸ್‌ ಕೊಪ್ಪಳ ಕ್ಷೇತ್ರದ ಟಿಕೆಟ್‌ ಘೋಷಣೆ ಬಾಕಿ ಉಳಿಸಲಾಗಿದೆ ಎಂದು ಜೆಡಿಎಸ್‌ ಮುಖಂಡರು ತಿಳಿಸಿದ್ದಾರೆ.

ಸಂಗಣ್ಣ ಕರಡಿ ರಾಜಕೀಯ ಹಾದಿ..

ಸಂಗಣ್ಣ ಕರಡಿ ಅವರು 1994ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸೌಧ ಪ್ರವೇಶಿಸಿದರು.  ಆ ನಂತರ 1999ರಲ್ಲಿ ಜೆಡಿಯು, 2008ರಲ್ಲಿ ಜನತಾದಳ, 2011ರ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದರು. 2004 ಮತ್ತು 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತರು. ಬಳಿಕ 2014ರಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾದ ಕರಡಿ, 2019ರಲ್ಲಿ ಪುನರಾಯ್ಕೆಯಾದರು.

ಕೊಪ್ಪಳ ವಿಧಾನಸಭಾ ಕ್ಷೇತ್ರದ ರಾಜಕಾರಣದಲ್ಲಿ ಹಿಂದಿನ ಮೂರು ದಶಕಗಳಲ್ಲಿ ನಡೆದ 7 ಚುನಾವಣೆಗಳಲ್ಲಿ ಸಂಗಣ್ಣ 4 ಬಾರಿ ಶಾಸಕರಾದರೆ, ಕಾಂಗ್ರೆಸ್‌ನ ಹಿಟ್ನಾಳ ಕುಟುಂಬದ ಕೆ. ಬಸವರಾಜ ಒಂದು ಸಲ ಮತ್ತು ರಾಘವೇಂದ್ರ ಹಿಟ್ನಾಳ ಎರಡು ಸಲ ಶಾಸಕರಾಗಿದ್ದಾರೆ. ಹೀಗಾಗಿ ಇಲ್ಲಿನ ರಾಜಕಾರಣ ಎರಡು ಕುಟುಂಬಗಳಿಗೆ ಮಾತ್ರ ಸೀಮಿತವಾಗಿದೆ. ಈ ಬಾರಿ ಇನ್ನೊಂದು ಕುಟುಂಬದ ಪಾಲಾಗಲು ಅವಕಾಶ ನೀಡಬಾರದು ಎಂದು ಸಂಗಣ್ಣ ಟಿಕೆಟ್‌ ತಮಗೇ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಮತ್ತೋರ್ವ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ವಿ. ಚಂದ್ರಶೇಖರ್‌ ಕೂಡ ತಮ್ಮ ನಿವಾಸದಲ್ಲಿ ಪ್ರತ್ಯೇಕವಾಗಿ ಬೆಂಬಲಿಗರ ಸಭೆ ಕರೆದಿದ್ದಾರೆ. ಹೀಗಾಗಿ ಈ ಇಬ್ಬರೂ ನಾಯಕರ ನಡೆ ಕುತೂಹಲಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...