Homeಕರ್ನಾಟಕಬಿಜೆಪಿಯ ಮತ್ತೊಂದು ವಿಕೆಟ್ ಪತನ ಸಾಧ್ಯತೆ; ಸಂಗಣ್ಣ ಕರಡಿ ಬಿಜೆಪಿ ಬಿಟ್ಟು ಜೆಡಿಎಸ್‌ನತ್ತ ಹೆಜ್ಜೆ?

ಬಿಜೆಪಿಯ ಮತ್ತೊಂದು ವಿಕೆಟ್ ಪತನ ಸಾಧ್ಯತೆ; ಸಂಗಣ್ಣ ಕರಡಿ ಬಿಜೆಪಿ ಬಿಟ್ಟು ಜೆಡಿಎಸ್‌ನತ್ತ ಹೆಜ್ಜೆ?

- Advertisement -
- Advertisement -

ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಪಕ್ಷ ತೊರೆಯುವ ನಾಯಕರ ಸಂಖ್ಯೆ ದಿನನಿತ್ಯ ಹೆಚ್ಚಾಗುತ್ತಲೇ ಇದೆ. ಮಾಜಿ ಉಪಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಬಿಜೆಪಿಗೆ ರಾಜೀನಾಮೆ ತೀರ್ಮಾಣದ ಬೆನ್ನಲ್ಲೇ ಇದೀಗ ಹಾಲಿ ಸಂಸದರೊಬ್ಬರು ಬಿಜೆಪಿ ಬಿಡುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.

ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ನೀಡಲು ಪಕ್ಷದ ವರಿಷ್ಠರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಂಸದ ಸಂಗಣ್ಣ ಕರಡಿ ಭಾನುವಾರ ಬೆಂಬಲಿಗರ ಹಾಗೂ ಹಿತೈಷಿಗಳ ಸಭೆ ಕರೆದಿದ್ದಾರೆ. ಈ ಸಭೆಯ ಬಳಿಕ ಅವರು ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಸಮಧಾನಗೊಂಡಿರುವ ಸಂಗಣ್ಣ ಅವರಿಗೆ ಶನಿವಾರ ತಡರಾತ್ರಿ ಫೋನ್‌ ಕರೆ ಮಾಡಿ ”ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ. ಭಾನುವಾರ ಎಲ್ಲವೂ ಪರಿಹಾರವಾಗಲಿದೆ” ಎಂದಿದ್ದಾರೆ. ಹಾಗಾಗಿ ಸಂಗಣ್ಣ ಕರಡಿ ಅವರು ವರಿಷ್ಠರಿಂದ ಏನು ಸಂದೇಶ ಬರಲಿದೆ ಎನ್ನುವುದನ್ನೂ ತಿಳಿದುಕೊಳ್ಳಲು ಕಾಯುತ್ತಿದ್ದಾರೆ.

”ರಾಜ್ಯ ನಾಯಕರು ಈ ಮೊದಲು ನನಗೆ ಟಿಕೆಟ್‌ ನೀಡಲಾಗುವುದು ಎಂದು ಭರವಸೆ ಕೊಟ್ಟಿದ್ದರು. ಬೊಮ್ಮಾಯಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ನನಗೇ ಟಿಕೆಟ್‌ ನೀಡುವಂತೆ ಕೇಂದ್ರ ನಾಯಕರಿಗೆ ಶಿಫಾರಸು ಮಾಡಿದ್ದಾರೆ. ಪಕ್ಷದ ಆಂತರಿಕ ಸಮೀಕ್ಷೆಯ ವರದಿ ಕೂಡ ನನ್ನ ಪರವಾಗಿಯೇ ಬಂದಿದೆ. ಆದ್ದರಿಂದ ನನಗೇ ಟಿಕೆಟ್‌ ಕೊಡಬೇಕು” ಎಂದು ಸಂಗಣ್ಣ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಕೊನೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ

ಆದರೆ ವರಿಷ್ಠರು ‘ಹಾಲಿ ಸಂಸದರು ಮತ್ತು ಅವರ ಕುಟುಂಬಕ್ಕೆ ಟಿಕೆಟ್ ನೀಡುವುದಿಲ್ಲ’ ಎಂದು ಹೇಳಿದ್ದು ಕರಡಿ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಬಿಜೆಪಿ ತೊರೆದು ಪಕ್ಷೇತರ ಅಥವಾ ಜೆಡಿಎಸ್‌ನಿಂದ ಸ್ಪರ್ಧೆ ಮಾಡಲು ಒಲವು ಹೊಂದಿದ್ದಾರೆ ಎಂದು ಹೇಲಲಾಗುತ್ತಿದೆ. ಇದೇ ಕಾರಣಕ್ಕಾಗಿ ಜೆಡಿಎಸ್‌ ಕೊಪ್ಪಳ ಕ್ಷೇತ್ರದ ಟಿಕೆಟ್‌ ಘೋಷಣೆ ಬಾಕಿ ಉಳಿಸಲಾಗಿದೆ ಎಂದು ಜೆಡಿಎಸ್‌ ಮುಖಂಡರು ತಿಳಿಸಿದ್ದಾರೆ.

ಸಂಗಣ್ಣ ಕರಡಿ ರಾಜಕೀಯ ಹಾದಿ..

ಸಂಗಣ್ಣ ಕರಡಿ ಅವರು 1994ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸೌಧ ಪ್ರವೇಶಿಸಿದರು.  ಆ ನಂತರ 1999ರಲ್ಲಿ ಜೆಡಿಯು, 2008ರಲ್ಲಿ ಜನತಾದಳ, 2011ರ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದರು. 2004 ಮತ್ತು 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತರು. ಬಳಿಕ 2014ರಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾದ ಕರಡಿ, 2019ರಲ್ಲಿ ಪುನರಾಯ್ಕೆಯಾದರು.

ಕೊಪ್ಪಳ ವಿಧಾನಸಭಾ ಕ್ಷೇತ್ರದ ರಾಜಕಾರಣದಲ್ಲಿ ಹಿಂದಿನ ಮೂರು ದಶಕಗಳಲ್ಲಿ ನಡೆದ 7 ಚುನಾವಣೆಗಳಲ್ಲಿ ಸಂಗಣ್ಣ 4 ಬಾರಿ ಶಾಸಕರಾದರೆ, ಕಾಂಗ್ರೆಸ್‌ನ ಹಿಟ್ನಾಳ ಕುಟುಂಬದ ಕೆ. ಬಸವರಾಜ ಒಂದು ಸಲ ಮತ್ತು ರಾಘವೇಂದ್ರ ಹಿಟ್ನಾಳ ಎರಡು ಸಲ ಶಾಸಕರಾಗಿದ್ದಾರೆ. ಹೀಗಾಗಿ ಇಲ್ಲಿನ ರಾಜಕಾರಣ ಎರಡು ಕುಟುಂಬಗಳಿಗೆ ಮಾತ್ರ ಸೀಮಿತವಾಗಿದೆ. ಈ ಬಾರಿ ಇನ್ನೊಂದು ಕುಟುಂಬದ ಪಾಲಾಗಲು ಅವಕಾಶ ನೀಡಬಾರದು ಎಂದು ಸಂಗಣ್ಣ ಟಿಕೆಟ್‌ ತಮಗೇ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಮತ್ತೋರ್ವ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ವಿ. ಚಂದ್ರಶೇಖರ್‌ ಕೂಡ ತಮ್ಮ ನಿವಾಸದಲ್ಲಿ ಪ್ರತ್ಯೇಕವಾಗಿ ಬೆಂಬಲಿಗರ ಸಭೆ ಕರೆದಿದ್ದಾರೆ. ಹೀಗಾಗಿ ಈ ಇಬ್ಬರೂ ನಾಯಕರ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...