ಪ್ರಾಮಾಣಿಕ ಪಶ್ಚಾತಾಪವಿಲ್ಲದೆ ಕೇಳುವ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ, ಎದುರಾದ ಹಾನಿಯಿಂದ ತಪ್ಪಿಸಿಕೊಳ್ಳುವ ರಕ್ಷಣಾತ್ಮಕ ಆಟವಷ್ಟೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಹೇಳಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುವ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, “ಕ್ಷಮೆ ಕೇಳುವುದರಲ್ಲಿ ಎರಡು ವಿಧ. ನೈಜ ಕ್ಷಮೆ ಮತ್ತು ಬಿಜೆಪಿಗರ ನಕಲಿ ಕ್ಷಮೆ! ನೈಜ ಕ್ಷಮೆಯ ಹಿಂದೆ ಪಶ್ಚಾತಾಪವಿರುತ್ತದೆ, ವಿಚಾರ ಪಕ್ವತೆ ಇರುತ್ತದೆ, ಜಾಗೃತಿ ಇರುತ್ತದೆ, ತಪ್ಪೆಸಗಿದ್ದಕ್ಕೆ ಗಿಲ್ಟ್ ಇರುತ್ತದೆ.
ಆದರೆ, ಬಿಜೆಪಿಯವರ ನಕಲಿ ಕ್ಷಮೆಗೆ ಕಾರಣಗಳೇ ಬೇರೆ, ಬಿಜೆಪಿಗರ ಕ್ಷಮೆಯಲ್ಲಿ ಪಶ್ಚಾತಾಪವಿರುವ ಬದಲು ಅಹಂಕಾರವಿರುತ್ತದೆ, ಅವರ ಕ್ಷಮೆಯ ಹಿಂದೆ ಅವಕಾಶವಾದಿತನ ಇರುತ್ತದೆ ಅಥವಾ ಕಾನೂನಿನ ಭಯವಿರುತ್ತದೆ, ಇಲ್ಲವೇ ಜನಾಕ್ರೋಶದ ಒತ್ತಡ ಇರುತ್ತದೆ ಅಷ್ಟೇ.” ಎಂದು ಅವರು ಹೇಳಿದ್ದಾರೆ.
ಬಿಜೆಪಿಗರದ್ದು ಸ್ವಯಂಪ್ರೇರಣೆಯ, ಜ್ಞಾನೋದಯದ ಕ್ಷಮೆ ಅಲ್ಲವೇ ಅಲ್ಲ. ಬಿಜೆಪಿಗರ ಮನಃಪೂರ್ವಕವಲ್ಲದ ದುರಹಂಕಾರದ ಕ್ಷಮೆಗೆ ಉದಾಹರಣೆ ಹಲವು ಇವೆ ಎಂದು ಅವರು ಹೇಳಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಘನಂದಾರಿ ಕೆಲಸ ಮಾಡಿದವರಂತೆ ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುತ್ತಾರೆ ಎಂದರೆ ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಟ ಪ್ರಕಾಶ್ ರಾಜ್ ಅವರನ್ನು ಅವಹೇಳನ ಮಾಡಿದ್ದ ಪ್ರತಾಪ್ ಸಿಂಹ ಕಾನೂನಿನ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ.
ಸೋಫಿಯಾ ಖುರೇಶಿಯವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ವಿಜಯ್ ಷಾ ಜನಾಕ್ರೋಶಕ್ಕೆ ಕ್ಷಮೆ ಕೇಳಿದ್ದಾರೆ.
ನನಗೆ ನಾಯಿ ಎಂದಿದ್ದ ನಾರಾಯಣಸ್ವಾಮಿಯವರು ಜನಾಕ್ರೋಶದ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ ಎಂದು ಅವರು ಹೇಳಿದ್ದಾರೆ.
ಬಿಜೆಪಿಯವರು ಕ್ಷಮೆ ಕೇಳುವುದರಲ್ಲಿ ಸಾವರ್ಕರ್ ಅವರ ಬದ್ಧತೆಯನ್ನಾದರೂ ತೋರಿಸಬೇಕು ಎಂದು ಹೇಳಿರುವ ಅವರು, “ಸಾವರ್ಕರ್ ಮನಃಪೂರ್ವಕವಾಗಿ ಬ್ರಿಟಿಷರ ಕ್ಷಮೆ ಕೇಳಿ, ನಂತರ ಬ್ರಿಟಿಷರ ಜೊತೆ ನಿಂತು ಕೆಲಸ ಮಾಡಿದ್ದ ಅವರ ಪ್ರಾಮಾಣಿಕತೆಯನ್ನು ಅನುಸರಿಸಬೇಕು” ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್ ಹಾಸನ್ಗೆ ಹೈಕೋರ್ಟ್ ತರಾಟೆ
‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್ ಹಾಸನ್ಗೆ ಹೈಕೋರ್ಟ್ ತರಾಟೆ


💯💯💯💯💯👌💯💯💯💯💯