Homeಕರ್ನಾಟಕಪ್ರಾಮಾಣಿಕ ಪಶ್ಚಾತಾಪವಿಲ್ಲದ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ; ಹಾನಿ ತಪ್ಪಿಸುವ ರಕ್ಷಣಾತ್ಮಕ ಆಟ: ಸಚಿವ ಪ್ರಿಯಾಂಕ್...

ಪ್ರಾಮಾಣಿಕ ಪಶ್ಚಾತಾಪವಿಲ್ಲದ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ; ಹಾನಿ ತಪ್ಪಿಸುವ ರಕ್ಷಣಾತ್ಮಕ ಆಟ: ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಪ್ರಾಮಾಣಿಕ ಪಶ್ಚಾತಾಪವಿಲ್ಲದೆ ಕೇಳುವ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ, ಎದುರಾದ ಹಾನಿಯಿಂದ ತಪ್ಪಿಸಿಕೊಳ್ಳುವ ರಕ್ಷಣಾತ್ಮಕ ಆಟವಷ್ಟೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಹೇಳಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುವ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, “ಕ್ಷಮೆ ಕೇಳುವುದರಲ್ಲಿ ಎರಡು ವಿಧ. ನೈಜ ಕ್ಷಮೆ ಮತ್ತು ಬಿಜೆಪಿಗರ ನಕಲಿ ಕ್ಷಮೆ! ನೈಜ ಕ್ಷಮೆಯ ಹಿಂದೆ ಪಶ್ಚಾತಾಪವಿರುತ್ತದೆ, ವಿಚಾರ ಪಕ್ವತೆ ಇರುತ್ತದೆ, ಜಾಗೃತಿ ಇರುತ್ತದೆ, ತಪ್ಪೆಸಗಿದ್ದಕ್ಕೆ ಗಿಲ್ಟ್ ಇರುತ್ತದೆ.

ಆದರೆ, ಬಿಜೆಪಿಯವರ ನಕಲಿ ಕ್ಷಮೆಗೆ ಕಾರಣಗಳೇ ಬೇರೆ, ಬಿಜೆಪಿಗರ ಕ್ಷಮೆಯಲ್ಲಿ ಪಶ್ಚಾತಾಪವಿರುವ ಬದಲು ಅಹಂಕಾರವಿರುತ್ತದೆ, ಅವರ ಕ್ಷಮೆಯ ಹಿಂದೆ ಅವಕಾಶವಾದಿತನ ಇರುತ್ತದೆ ಅಥವಾ ಕಾನೂನಿನ ಭಯವಿರುತ್ತದೆ, ಇಲ್ಲವೇ ಜನಾಕ್ರೋಶದ ಒತ್ತಡ ಇರುತ್ತದೆ ಅಷ್ಟೇ.” ಎಂದು ಅವರು ಹೇಳಿದ್ದಾರೆ.

ಬಿಜೆಪಿಗರದ್ದು ಸ್ವಯಂಪ್ರೇರಣೆಯ, ಜ್ಞಾನೋದಯದ ಕ್ಷಮೆ ಅಲ್ಲವೇ ಅಲ್ಲ. ಬಿಜೆಪಿಗರ ಮನಃಪೂರ್ವಕವಲ್ಲದ ದುರಹಂಕಾರದ ಕ್ಷಮೆಗೆ ಉದಾಹರಣೆ ಹಲವು ಇವೆ ಎಂದು ಅವರು ಹೇಳಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಘನಂದಾರಿ ಕೆಲಸ ಮಾಡಿದವರಂತೆ ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುತ್ತಾರೆ ಎಂದರೆ ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಟ ಪ್ರಕಾಶ್ ರಾಜ್ ಅವರನ್ನು ಅವಹೇಳನ ಮಾಡಿದ್ದ ಪ್ರತಾಪ್ ಸಿಂಹ ಕಾನೂನಿನ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ.
ಸೋಫಿಯಾ ಖುರೇಶಿಯವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ವಿಜಯ್ ಷಾ ಜನಾಕ್ರೋಶಕ್ಕೆ ಕ್ಷಮೆ ಕೇಳಿದ್ದಾರೆ.
ನನಗೆ ನಾಯಿ ಎಂದಿದ್ದ ನಾರಾಯಣಸ್ವಾಮಿಯವರು ಜನಾಕ್ರೋಶದ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯವರು ಕ್ಷಮೆ ಕೇಳುವುದರಲ್ಲಿ ಸಾವರ್ಕರ್ ಅವರ ಬದ್ಧತೆಯನ್ನಾದರೂ ತೋರಿಸಬೇಕು ಎಂದು ಹೇಳಿರುವ ಅವರು, “ಸಾವರ್ಕರ್ ಮನಃಪೂರ್ವಕವಾಗಿ ಬ್ರಿಟಿಷರ ಕ್ಷಮೆ ಕೇಳಿ, ನಂತರ ಬ್ರಿಟಿಷರ ಜೊತೆ ನಿಂತು ಕೆಲಸ ಮಾಡಿದ್ದ ಅವರ ಪ್ರಾಮಾಣಿಕತೆಯನ್ನು ಅನುಸರಿಸಬೇಕು” ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...