Homeಕರ್ನಾಟಕಪ್ರಾಮಾಣಿಕ ಪಶ್ಚಾತಾಪವಿಲ್ಲದ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ; ಹಾನಿ ತಪ್ಪಿಸುವ ರಕ್ಷಣಾತ್ಮಕ ಆಟ: ಸಚಿವ ಪ್ರಿಯಾಂಕ್...

ಪ್ರಾಮಾಣಿಕ ಪಶ್ಚಾತಾಪವಿಲ್ಲದ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ; ಹಾನಿ ತಪ್ಪಿಸುವ ರಕ್ಷಣಾತ್ಮಕ ಆಟ: ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಪ್ರಾಮಾಣಿಕ ಪಶ್ಚಾತಾಪವಿಲ್ಲದೆ ಕೇಳುವ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ, ಎದುರಾದ ಹಾನಿಯಿಂದ ತಪ್ಪಿಸಿಕೊಳ್ಳುವ ರಕ್ಷಣಾತ್ಮಕ ಆಟವಷ್ಟೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಹೇಳಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುವ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, “ಕ್ಷಮೆ ಕೇಳುವುದರಲ್ಲಿ ಎರಡು ವಿಧ. ನೈಜ ಕ್ಷಮೆ ಮತ್ತು ಬಿಜೆಪಿಗರ ನಕಲಿ ಕ್ಷಮೆ! ನೈಜ ಕ್ಷಮೆಯ ಹಿಂದೆ ಪಶ್ಚಾತಾಪವಿರುತ್ತದೆ, ವಿಚಾರ ಪಕ್ವತೆ ಇರುತ್ತದೆ, ಜಾಗೃತಿ ಇರುತ್ತದೆ, ತಪ್ಪೆಸಗಿದ್ದಕ್ಕೆ ಗಿಲ್ಟ್ ಇರುತ್ತದೆ.

ಆದರೆ, ಬಿಜೆಪಿಯವರ ನಕಲಿ ಕ್ಷಮೆಗೆ ಕಾರಣಗಳೇ ಬೇರೆ, ಬಿಜೆಪಿಗರ ಕ್ಷಮೆಯಲ್ಲಿ ಪಶ್ಚಾತಾಪವಿರುವ ಬದಲು ಅಹಂಕಾರವಿರುತ್ತದೆ, ಅವರ ಕ್ಷಮೆಯ ಹಿಂದೆ ಅವಕಾಶವಾದಿತನ ಇರುತ್ತದೆ ಅಥವಾ ಕಾನೂನಿನ ಭಯವಿರುತ್ತದೆ, ಇಲ್ಲವೇ ಜನಾಕ್ರೋಶದ ಒತ್ತಡ ಇರುತ್ತದೆ ಅಷ್ಟೇ.” ಎಂದು ಅವರು ಹೇಳಿದ್ದಾರೆ.

ಬಿಜೆಪಿಗರದ್ದು ಸ್ವಯಂಪ್ರೇರಣೆಯ, ಜ್ಞಾನೋದಯದ ಕ್ಷಮೆ ಅಲ್ಲವೇ ಅಲ್ಲ. ಬಿಜೆಪಿಗರ ಮನಃಪೂರ್ವಕವಲ್ಲದ ದುರಹಂಕಾರದ ಕ್ಷಮೆಗೆ ಉದಾಹರಣೆ ಹಲವು ಇವೆ ಎಂದು ಅವರು ಹೇಳಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಘನಂದಾರಿ ಕೆಲಸ ಮಾಡಿದವರಂತೆ ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುತ್ತಾರೆ ಎಂದರೆ ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಟ ಪ್ರಕಾಶ್ ರಾಜ್ ಅವರನ್ನು ಅವಹೇಳನ ಮಾಡಿದ್ದ ಪ್ರತಾಪ್ ಸಿಂಹ ಕಾನೂನಿನ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ.
ಸೋಫಿಯಾ ಖುರೇಶಿಯವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ವಿಜಯ್ ಷಾ ಜನಾಕ್ರೋಶಕ್ಕೆ ಕ್ಷಮೆ ಕೇಳಿದ್ದಾರೆ.
ನನಗೆ ನಾಯಿ ಎಂದಿದ್ದ ನಾರಾಯಣಸ್ವಾಮಿಯವರು ಜನಾಕ್ರೋಶದ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯವರು ಕ್ಷಮೆ ಕೇಳುವುದರಲ್ಲಿ ಸಾವರ್ಕರ್ ಅವರ ಬದ್ಧತೆಯನ್ನಾದರೂ ತೋರಿಸಬೇಕು ಎಂದು ಹೇಳಿರುವ ಅವರು, “ಸಾವರ್ಕರ್ ಮನಃಪೂರ್ವಕವಾಗಿ ಬ್ರಿಟಿಷರ ಕ್ಷಮೆ ಕೇಳಿ, ನಂತರ ಬ್ರಿಟಿಷರ ಜೊತೆ ನಿಂತು ಕೆಲಸ ಮಾಡಿದ್ದ ಅವರ ಪ್ರಾಮಾಣಿಕತೆಯನ್ನು ಅನುಸರಿಸಬೇಕು” ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...