Homeಕರ್ನಾಟಕಪ್ರಾಮಾಣಿಕ ಪಶ್ಚಾತಾಪವಿಲ್ಲದ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ; ಹಾನಿ ತಪ್ಪಿಸುವ ರಕ್ಷಣಾತ್ಮಕ ಆಟ: ಸಚಿವ ಪ್ರಿಯಾಂಕ್...

ಪ್ರಾಮಾಣಿಕ ಪಶ್ಚಾತಾಪವಿಲ್ಲದ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ; ಹಾನಿ ತಪ್ಪಿಸುವ ರಕ್ಷಣಾತ್ಮಕ ಆಟ: ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಪ್ರಾಮಾಣಿಕ ಪಶ್ಚಾತಾಪವಿಲ್ಲದೆ ಕೇಳುವ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ, ಎದುರಾದ ಹಾನಿಯಿಂದ ತಪ್ಪಿಸಿಕೊಳ್ಳುವ ರಕ್ಷಣಾತ್ಮಕ ಆಟವಷ್ಟೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಹೇಳಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುವ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, “ಕ್ಷಮೆ ಕೇಳುವುದರಲ್ಲಿ ಎರಡು ವಿಧ. ನೈಜ ಕ್ಷಮೆ ಮತ್ತು ಬಿಜೆಪಿಗರ ನಕಲಿ ಕ್ಷಮೆ! ನೈಜ ಕ್ಷಮೆಯ ಹಿಂದೆ ಪಶ್ಚಾತಾಪವಿರುತ್ತದೆ, ವಿಚಾರ ಪಕ್ವತೆ ಇರುತ್ತದೆ, ಜಾಗೃತಿ ಇರುತ್ತದೆ, ತಪ್ಪೆಸಗಿದ್ದಕ್ಕೆ ಗಿಲ್ಟ್ ಇರುತ್ತದೆ.

ಆದರೆ, ಬಿಜೆಪಿಯವರ ನಕಲಿ ಕ್ಷಮೆಗೆ ಕಾರಣಗಳೇ ಬೇರೆ, ಬಿಜೆಪಿಗರ ಕ್ಷಮೆಯಲ್ಲಿ ಪಶ್ಚಾತಾಪವಿರುವ ಬದಲು ಅಹಂಕಾರವಿರುತ್ತದೆ, ಅವರ ಕ್ಷಮೆಯ ಹಿಂದೆ ಅವಕಾಶವಾದಿತನ ಇರುತ್ತದೆ ಅಥವಾ ಕಾನೂನಿನ ಭಯವಿರುತ್ತದೆ, ಇಲ್ಲವೇ ಜನಾಕ್ರೋಶದ ಒತ್ತಡ ಇರುತ್ತದೆ ಅಷ್ಟೇ.” ಎಂದು ಅವರು ಹೇಳಿದ್ದಾರೆ.

ಬಿಜೆಪಿಗರದ್ದು ಸ್ವಯಂಪ್ರೇರಣೆಯ, ಜ್ಞಾನೋದಯದ ಕ್ಷಮೆ ಅಲ್ಲವೇ ಅಲ್ಲ. ಬಿಜೆಪಿಗರ ಮನಃಪೂರ್ವಕವಲ್ಲದ ದುರಹಂಕಾರದ ಕ್ಷಮೆಗೆ ಉದಾಹರಣೆ ಹಲವು ಇವೆ ಎಂದು ಅವರು ಹೇಳಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಘನಂದಾರಿ ಕೆಲಸ ಮಾಡಿದವರಂತೆ ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುತ್ತಾರೆ ಎಂದರೆ ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಟ ಪ್ರಕಾಶ್ ರಾಜ್ ಅವರನ್ನು ಅವಹೇಳನ ಮಾಡಿದ್ದ ಪ್ರತಾಪ್ ಸಿಂಹ ಕಾನೂನಿನ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ.
ಸೋಫಿಯಾ ಖುರೇಶಿಯವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ವಿಜಯ್ ಷಾ ಜನಾಕ್ರೋಶಕ್ಕೆ ಕ್ಷಮೆ ಕೇಳಿದ್ದಾರೆ.
ನನಗೆ ನಾಯಿ ಎಂದಿದ್ದ ನಾರಾಯಣಸ್ವಾಮಿಯವರು ಜನಾಕ್ರೋಶದ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯವರು ಕ್ಷಮೆ ಕೇಳುವುದರಲ್ಲಿ ಸಾವರ್ಕರ್ ಅವರ ಬದ್ಧತೆಯನ್ನಾದರೂ ತೋರಿಸಬೇಕು ಎಂದು ಹೇಳಿರುವ ಅವರು, “ಸಾವರ್ಕರ್ ಮನಃಪೂರ್ವಕವಾಗಿ ಬ್ರಿಟಿಷರ ಕ್ಷಮೆ ಕೇಳಿ, ನಂತರ ಬ್ರಿಟಿಷರ ಜೊತೆ ನಿಂತು ಕೆಲಸ ಮಾಡಿದ್ದ ಅವರ ಪ್ರಾಮಾಣಿಕತೆಯನ್ನು ಅನುಸರಿಸಬೇಕು” ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....