Homeಮುಖಪುಟನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’...

ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ಕೋಮು ರಾಜಕಾರಣದ ಆಯಾಮವನ್ನು ‘ದಿ ವೈರ್‌‌’ ವರದಿ ಬಯಲಿಗೆಳೆದಿದೆ. (ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ.)

- Advertisement -
- Advertisement -

(ಇದು ‘ಎಲ್ಲರ ಕನ್ನಡ’ದ ಪ್ರಾಯೋಗಿಕ ವರದಿಯಾಗಿದೆ)

ದ್ವೇಶವನ್ನು ವ್ಯವಸ್ತಿತವಾಗಿ ಹರಡಲೆಂದೇ ಬಿಜೆಪಿ ತನ್ನದೇ ಆದ ಅಪ್ಲಿಕೇಶನ್‌ ಚಾಲ್ತಿಗೆ ತಂದಿರುವ ಆತಂಕಕಾರಿ ವಿಶಯವನ್ನು ದಿ ವೈರ್‌ ಸುದ್ದಿ ಜಾಲತಾಣ ಹೊರಗೆಳೆದಿದೆ. ಆಯುಶ್ಮಾನ್‌ ಕೌಲ್‌ ಹಾಗೂ ದೇವೇಶ್‌ ಕುಮಾರ್‌ ಮಾಡಿರುವ ವಿಶೇಶ ವರದಿಯು ಹಲವು ಆತಂಕಕಾರಿ ಸಂಗತಿಗಳನ್ನು ಬಿಚ್ಚಿಟ್ಟಿದೆ. ತನ್ನ ರಾಜಕೀಯ ವಿರೋದಿಗಳ ವಿರುದ್ದ ದ್ವೇಶ ಹರಡಲು, ಅವರಿಗೆ ಕಿರುಕುಳ ನೀಡಲು ಈ ಅಪ್ಲಿಕೇಶನ್‌ಗಳು ಬಳಕೆಯಾಗುತ್ತಿವೆ ಎಂಬ ವಿಚಾರವನ್ನು ‘ದಿ ವೈರ್‌’ ವರದಿ ಬಯಲಿಗೆಳೆದಿದೆ.

ಆರತಿ ಶರ್‍ಮಾ ಎಂಬವರು 2020ರ ಏಪ್ರಿಲ್‌ ತಿಂಗಳಲ್ಲಿ ಬಿಜೆಪಿ ಐಟಿ ಸೆಲ್‌ ವಿರುದ್ದ ಅಸಮಾದಾನ ಹೊರಹಾಕಿ ಸರಣಿ ಟ್ವೀಟ್ ಮಾಡಿದ್ದರು. ಅದರ ಜಾಡು ಹಿಡಿದು ಹೊರಟ ದಿ ವೈರ್‌‌, ಬಿಜೆಪಿ ಐಟಿ ಸೆಲ್‌ ಚಾಲ್ತಿಗೆ ತಂದಿದ್ದ ಟೆಕ್‌ ಪಾಗ್‌ (Tek Fog) ಎಂಬ ಅಪ್ಲಿಕೇಶನ್‌ ಮಾಡುತ್ತಿದ್ದ ಕಾರ್‍ಯವೈಕರಿಯನ್ನು ಹೊರಗೆಡವಿದೆ.

Tek Fog ಅಪ್ಲಿಕೇಶನ್ ಮೂಲಕ ಆಡಳಿತ ರೂಡ ಬಿಜೆಪಿಯ ವಿರೋದಿ ರಾಜಕೀಯ ಪಕ್ಷಗಳನ್ನು ಟೀಕಿಸಲು, ಸರ್ಕಾರವನ್ನು ವಿಮರ್‍ಶಿಸುವವರ ವಿರುದ್ದ ವ್ಯಕ್ತಿಗತ ಟ್ರಾಲ್ ಮಾಡಲು ಸ್ವಯಂಚಾಲಿತ ತಂತ್ರಗ್ನಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರತಿ ಶರ್‍ಮಾ ಅವರ ಸರಣಿ ಟ್ವೀಟ್‌ನಲ್ಲಿ ಹೇಳಲಾಗಿತ್ತು.

ಈ ಟ್ವಿಟರ್ ಕಾತೆಯನ್ನು ಸಂಪರ್ಕಿಸಿರುವ ದಿ ವೈರ್ ತಂಡಕ್ಕೆ ಅಪ್ಲಿಕೇಶನ್ ನಿರ್‍ವಹಿಸುವ ರಹಸ್ಯ ಕೆಲಸಗಳ ಕುರಿತು ಮಾಹಿತಿ ದೊರೆತಿದ್ದು, ಬಿಜೆಪಿ ಪರವಾಗಿರುವ ವಾಟ್ಸಪ್ ಗುಂಪುಗಳನ್ನು ರಚಿಸುವುದು, ಐಟಿ ಸೆಲ್ ಉದ್ಯೋಗಿಗಳಿಗೆ ಟ್ರೆಂಡಿಂಗ್‌ ಹ್ಯಾಶ್‌ಟ್ಯಾಗ್‌ಗಳನ್ನು ರಚಿಸಿಕೊಡುವುದು, ವಿರೋದಿಗಳನ್ನು ಗುರಿಮಾಡಿಸಲು ವಿಶಯಗಳನ್ನು ಕೊಡುವುದು ಮೊದಲಾದ ಹಲವು ಕೆಲಸವನ್ನು ಈ ಆಪ್ ಮೂಲಕ ನಿರ್‍ವಹಿಸಲಾಗುತ್ತಿತ್ತು ಎನ್ನಲಾಗಿದೆ.

“2019ರ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಸರ್‍ಕಾರಿ ಉದ್ಯೋಗ ನೀಡುವುದಾಗಿ ಆಮಿಶಗಳನ್ನು ನೀಡಲಾಗಿತ್ತು” ಎಂಬ ಆರೋಪವನ್ನೂ ಆ ಟ್ವಿಟ್ಟರ್ ಕಾತೆ ಮಾಡಿತ್ತು. ಹೀಗಾಗಿ ಅಸಮಾದಾನಗೊಂಡು ಕಾತೆಯಲ್ಲಿ ಬೇಸರ ವ್ಯಕ್ತಪಡಿಸಲಾಗಿತ್ತು.

ಎರಡು ವರ್‍ಶಗಳ ಕಾಲ ತನಿಕೆ ನಡೆಸಿರುವ ದಿ ವೈರ್‌ ಹಲವು ಮಾಹಿತಿಗಳನ್ನು ಕಲೆ ಹಾಕಿದೆ. ಈ ಆಪ್‌ ಒಂದು ಪಕ್ಶದಪರ ಹೇಗೆ ಕೆಲಸ ಮಾಡಿದೆ ಎನ್ಬುದನ್ನು ವೈರ್‌ ವಿಶ್ಲೇಶಿಸಿದೆ.

1. ಟ್ವಿಟ್ಟರ್‌‌ನ ‘ಟ್ರೆಂಡಿಂಗ್‌’ ಫೇಸ್‌ಬುಕ್‌ನ ಟ್ರೆಂಡ್‌ ವಿಬಾಗವನ್ನು ಹೈಜಾಕ್‌ ಮಾಡುವುದು:

ಇದರ ಅರ್ತವೇನು?

ಅಪ್ಲಿಕೇಶನ್ ಆಪರೇಟರ್‌ಗಳೇ ವ್ಯಕ್ತಿಗಳು ಅತವಾ ಗುಂಪುಗಳ ಟ್ವೀಟ್‌ಗಳನ್ನು, ಪೋಸ್ಟ್‌ಗಳನ್ನು ‘ತಂತಾನೇ- ರೀಟ್ವೀಟ್’ ಅಥವಾ ‘ತಂತಾನೇ- ಹಂಚಿಕೊಳ್ಳಬಹುದು. ಆಪರೇಟರ್‌ಗಳು ವಾಸ್ತವದಲ್ಲಿ ಇರುವುದಕ್ಕಿಂತ ಅತಿರೇಕದ ನಿರೂಪಣೆ ಹಾಗೂ ರಾಜಕೀಯ ಅಬಿಯಾನವು ಕಾಣಿಸಿಕೊಳ್ಳುವಂತೆ ನೋಡಿಕೊಳ್ಳುವುದು.

ಸಮಸ್ಯೆಯೇನು?

ಯಾವುದು ನಿಯಂತ್ರಿಸಲ್ಪಡುತ್ತಿದೆ ಯಾವುದು ನಿಜವಾಗಿದೆ ಎಂಬುದನ್ನು ತಿಳಿಯದಂತಾಗುತ್ತೇವೆ. ಸದ್ಯದ ಟ್ರೆಂಡ್‌ಗಳನ್ನು ಬುಡಮೇಲು ಮಾಡಿ ಕೆಲವು ಗುಂಪುಗಳ, ಕೆಲವು ವ್ಯಕ್ತಿಗಳನ್ನು ಗುರಿಮಾಡಲಾಗುತ್ತದೆ. ಕಿರುಕುಳ ನೀಡಲಾಗುತ್ತದೆ.

ವೈರ್‌ಗೆ ಸಿಕ್ಕಿರುವ ಆಧಾರ

#CongressAgainstLabourers, #कर्मयोगी ಟ್ರೆಂಡಿಂಗ್‌ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗುವ ಮೊದಲು ಒದಗಿಸಲಾದ ಮೂಲಗಳು ಅನುಮಾನಾಸ್ಪದ, ಅನದಿಕೃತವಾಗಿದ್ದು ಆನ್‌ಲೈನ್‌ ವೇದಿಕೆಗಳನ್ನು ಮೇಲ್ವಿಚಾರಣೆ ಮಾಡಲಾಗಿದೆ.

2. ನಿಶ್ಕ್ರಿಯ ವಾಟ್ಸ್‌ಆಪ್‌‌ ಖಾತೆಗಳ ಪಿಶಿಂಗ್‌ (ಪಾಸ್‌ವರ್ಡ್‌ಗಳು ಮತ್ತು ಕ್ರೆಡಿಟ್ ಕಾರ್ಡ್ ಸಂಕ್ಯೆಗಳಂತಹ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಲು ವ್ಯಕ್ತಿಗಳನ್ನು ಪ್ರೇರೇಪಿಸುವ ಸಲುವಾಗಿ ಪ್ರತಿಶ್ಟಿತ ಕಂಪನಿಗಳಿಂದ ಇಮೇಲ್‌ಗಳನ್ನು ಕಳುಹಿಸುವ ಮೋಸದ ಅಬ್ಯಾಸ):

ಇದರ ಅರ್ತವೇನು?

ಆಪ್ ಆಪರೇಟರ್‌ಗಳು ಕಾಸಗಿ ವ್ಯಕ್ತಿಯ ‘ನಿಶ್ಕ್ರಿಯ’ ವಾಟ್ಸ್‌ಅಪ್‌‌ ಕಾತೆಗಳನ್ನು ಹೈಜಾಕ್ ಮಾಡಬಹುದು. ‘ಪದೇ ಪದೇ ಸಂಪರ್‍ಕಿಸುವ’ ಅತವಾ ‘ಎಲ್ಲಾ ಸಂಪರ್‍ಕಗಳಿಗೆ’ ಸಂದೇಶ ಕಳುಹಿಸಲು ಕಾಸಗಿ ವ್ಯಕ್ತಿಯ ಪೋನ್‌ ನಂಬರ್‌ಗಳನ್ನು ಬಳಸಬಹುದು.

ನಿಮ್ಮ ವೈಯಕ್ತಿಕ ಮಾಹಿತಿ ಮತ್ತು ಸಂಪರ್‍ಕ ಪಟ್ಟಿಯನ್ನು ಟೆಕ್ ಪಾಗ್ ಅಪ್ಲಿಕೇಶನ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ. ಮುಂದೆ ನಡೆಸಬಹುದಾದ ಕಿರುಕುಳ ಮತ್ತು ಟ್ರೋಲಿಂಗ್ ಅಬಿಯಾನಗಳಿಗೆ ಬಳಸಲಾಗುತ್ತದೆ.

ನಾನೇಕೆ ಚಿಂತೆಪಡಬೇಕು?

ಇದು ನಿಮ್ಮ ಕಾಸಗಿತನದ ಹಕ್ಕನ್ನು ಉಲ್ಲಂಗಿಸಿದೆ.

ವೈರ್‌ಗೆ ಲಭ್ಯವಾದ ಆಧಾರ

ವಾಟ್ಸ್‌ಅಪ್‌ನ ಶೋಶಣೆಯ ರಿಯಲ್‌ ಟೈಮ್‌ ತೋರಿಸಲು ಮೂಲವನ್ನು ಕೇಳಲಾಯಿತು. ಪ್ರಾತಿಕ್ಷಿಕೆಯ ಮೂಲಕ ಹೈಜಾಕ್‌ ಮಾಡುವ ರೀತಿಯನ್ನು ದೃಡಪಡಿಸಿಕೊಳ್ಳಲಾಗಿದೆ.

3. ಉದ್ದೇಶಿತ ಕಿರುಕುಳಕ್ಕಾಗಿ ಕಾಸಗಿ ನಾಗರಿಕರ ಡೇಟಾಬೇಸ್ ಬಳಸುವುದು

ಇದರ ಅರ್ತವೇನು?

ಕಾಸಗಿ ನಾಗರಿಕರ ಉದ್ಯೋಗ, ದರ್ಮ, ಬಾಷೆ, ವಯಸ್ಸು, ಲಿಂಗ, ರಾಜಕೀಯ ಒಲವು ಅಷ್ಟೇ ಅಲ್ಲದೆ ಚರ್ಮದ ಬಣ್ಣ, ಸ್ತನದ ಗಾತ್ರದಂತಹ ದೈಹಿಕ ಗುಣಲಕ್ಷಣಗಳಿಗೆ ಅನುಗುಣವಾಗಿಯೂ ಡೇಟ್‌‌ಬೇಸ್‌ ಅನ್ನು ವರ್ಗೀಕರಿಸಲಾಗಿದೆ.

ನಾನೇಕೆ ಚಿಂತಿಸಬೇಕು?

ವಿಶುವಲ್‌ ಪುರಾವೆ

ವೈರ್‌ ಹೇಗೆ ಕಚಿತಪಡಿಸಿಕೊಂಡಿದೆ?

ಅಪ್ಲಿಕೇಶನ್‌ನಲ್ಲಿ ತೋರಿಸಲಾದ ಉದ್ದೇಶಿತ ಗುಂಪುಗಳಲ್ಲಿ ಒಂದಾದ ‘ಮಹಿಳಾ ಪತ್ರಕರ್‍ತರಿಗೆ’ ಕಳುಹಿಸಲಾದ ಪ್ರತ್ಯುತ್ತರಗಳನ್ನು ಮೇಲ್ವಿಚಾರಣೆ ಮಾಡಲಾಗಿದೆ.

ಈ ರೀತಿಯಾಗಿ ಈ ವರದಿ ಪ್ರಕಟಗೊಂಡ ನಂತರ ದೊಡ್ಡ ಚರ್ಚೆಗಳು ಆರಂಬವಾಗಿವೆ. ಬಿಜೆಪಿಯು ಚುನಾವಣೆಯ ಹೊಸ್ತಿಲಲ್ಲಿ ಎಂತಹ ಹೀನಕೃತ್ಯಕ್ಕಿಳಿದಿದೆ ಎಂದು ಹಲವರು ವಿರೋದ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿರಿ: ಛತ್ತೀಸ್‌ಗಡ: ಗ್ರಾಮಸ್ಥರಿಂದ ಮುಸ್ಲಿಮರನ್ನು ಬಹಿಷ್ಕರಿಸುವ ಪ್ರತಿಜ್ಞೆ ಮಾಡಿಸಿದ ದುಷ್ಕರ್ಮಿಗಳು; ತನಿಖೆಗೆ ಪೊಲೀಸ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ‘ಎಲ್ಲರ ಎಂದರೆ ಮಹಾಪ್ರಾಣ ಅಕ್ಕರಗಳನ್ನು ಬಳಸದಿರುವುದೊಂದೇ ಅಲ್ಲ.
    ಆದಶ್ಟು ಕನ್ನಡ ಬೇರಿನ ಪದಗಳನ್ನು ಬಳಸುವುದು.
    ಮೇಲುನೋಟಕ್ಕೆ “ವಿಜಾತಿಯ” ಒತ್ತಕ್ಶರ” ಗಳಿಲ್ಲದ ಪದಗಳು.
    ಎತ್ತಗೆ:
    ದ್ವೇಶ…ಹಗೆತನ

    ಪ್ರತ್ಯುತ್ತರ..ಮರುಹೇಳಿಕೆ/ ಮರುಉತ್ತರ
    ಹೀನಕೃತ್ಯ..ಕೇಡುಕಿನ ಕೆಲಸ
    ….

  2. ಎಲ್ಲರ ಕನ್ನಡ ಎಂದರೆ, ಕೇವಲ ಮಹಾಪ್ರಾಣ ಗಳನ್ನು ಕಯ್ಬಿಡುವುದಲ್ಲ.
    ಹೆಚ್ಚು ಕನ್ನಡ ಬೇರಿನ ಪದಗಳ ಬಳಕೆ.
    ಎತ್ತುಗೆ,
    ಹೀನಕೃತ್ಯ..ಕೆಡುಕಿನ ಕೆಲಸ.
    ಕನ್ನಡಪದಗಳಲ್ಲಿ ವಿಜಾತಿಯ ಒತ್ತಕ಼್ಶರ ಇರುವುದಿಲ್ಲ.

  3. ದನ್ಯವಾದಗಳು
    “ಹ್ಯಾಶ್‌ಟ್ಯಾಗ್‌ಗಳನ್ನು ರಚಿಸಿಕೊಡುವುದು, ವಿರೋಧಿಗಳನ್ನು”….ಇಲ್ಲಿ ಒಂದೇ ಒಂದು ಮಹಾಪ್ರಾಣ ನುಸುಳಿದೆ. ದಯವಿಟ್ಟು ತಿದ್ದಿ.

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...