Homeಮುಖಪುಟನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’...

ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ಕೋಮು ರಾಜಕಾರಣದ ಆಯಾಮವನ್ನು ‘ದಿ ವೈರ್‌‌’ ವರದಿ ಬಯಲಿಗೆಳೆದಿದೆ. (ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ.)

- Advertisement -
- Advertisement -

(ಇದು ‘ಎಲ್ಲರ ಕನ್ನಡ’ದ ಪ್ರಾಯೋಗಿಕ ವರದಿಯಾಗಿದೆ)

ದ್ವೇಶವನ್ನು ವ್ಯವಸ್ತಿತವಾಗಿ ಹರಡಲೆಂದೇ ಬಿಜೆಪಿ ತನ್ನದೇ ಆದ ಅಪ್ಲಿಕೇಶನ್‌ ಚಾಲ್ತಿಗೆ ತಂದಿರುವ ಆತಂಕಕಾರಿ ವಿಶಯವನ್ನು ದಿ ವೈರ್‌ ಸುದ್ದಿ ಜಾಲತಾಣ ಹೊರಗೆಳೆದಿದೆ. ಆಯುಶ್ಮಾನ್‌ ಕೌಲ್‌ ಹಾಗೂ ದೇವೇಶ್‌ ಕುಮಾರ್‌ ಮಾಡಿರುವ ವಿಶೇಶ ವರದಿಯು ಹಲವು ಆತಂಕಕಾರಿ ಸಂಗತಿಗಳನ್ನು ಬಿಚ್ಚಿಟ್ಟಿದೆ. ತನ್ನ ರಾಜಕೀಯ ವಿರೋದಿಗಳ ವಿರುದ್ದ ದ್ವೇಶ ಹರಡಲು, ಅವರಿಗೆ ಕಿರುಕುಳ ನೀಡಲು ಈ ಅಪ್ಲಿಕೇಶನ್‌ಗಳು ಬಳಕೆಯಾಗುತ್ತಿವೆ ಎಂಬ ವಿಚಾರವನ್ನು ‘ದಿ ವೈರ್‌’ ವರದಿ ಬಯಲಿಗೆಳೆದಿದೆ.

ಆರತಿ ಶರ್‍ಮಾ ಎಂಬವರು 2020ರ ಏಪ್ರಿಲ್‌ ತಿಂಗಳಲ್ಲಿ ಬಿಜೆಪಿ ಐಟಿ ಸೆಲ್‌ ವಿರುದ್ದ ಅಸಮಾದಾನ ಹೊರಹಾಕಿ ಸರಣಿ ಟ್ವೀಟ್ ಮಾಡಿದ್ದರು. ಅದರ ಜಾಡು ಹಿಡಿದು ಹೊರಟ ದಿ ವೈರ್‌‌, ಬಿಜೆಪಿ ಐಟಿ ಸೆಲ್‌ ಚಾಲ್ತಿಗೆ ತಂದಿದ್ದ ಟೆಕ್‌ ಪಾಗ್‌ (Tek Fog) ಎಂಬ ಅಪ್ಲಿಕೇಶನ್‌ ಮಾಡುತ್ತಿದ್ದ ಕಾರ್‍ಯವೈಕರಿಯನ್ನು ಹೊರಗೆಡವಿದೆ.

Tek Fog ಅಪ್ಲಿಕೇಶನ್ ಮೂಲಕ ಆಡಳಿತ ರೂಡ ಬಿಜೆಪಿಯ ವಿರೋದಿ ರಾಜಕೀಯ ಪಕ್ಷಗಳನ್ನು ಟೀಕಿಸಲು, ಸರ್ಕಾರವನ್ನು ವಿಮರ್‍ಶಿಸುವವರ ವಿರುದ್ದ ವ್ಯಕ್ತಿಗತ ಟ್ರಾಲ್ ಮಾಡಲು ಸ್ವಯಂಚಾಲಿತ ತಂತ್ರಗ್ನಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರತಿ ಶರ್‍ಮಾ ಅವರ ಸರಣಿ ಟ್ವೀಟ್‌ನಲ್ಲಿ ಹೇಳಲಾಗಿತ್ತು.

ಈ ಟ್ವಿಟರ್ ಕಾತೆಯನ್ನು ಸಂಪರ್ಕಿಸಿರುವ ದಿ ವೈರ್ ತಂಡಕ್ಕೆ ಅಪ್ಲಿಕೇಶನ್ ನಿರ್‍ವಹಿಸುವ ರಹಸ್ಯ ಕೆಲಸಗಳ ಕುರಿತು ಮಾಹಿತಿ ದೊರೆತಿದ್ದು, ಬಿಜೆಪಿ ಪರವಾಗಿರುವ ವಾಟ್ಸಪ್ ಗುಂಪುಗಳನ್ನು ರಚಿಸುವುದು, ಐಟಿ ಸೆಲ್ ಉದ್ಯೋಗಿಗಳಿಗೆ ಟ್ರೆಂಡಿಂಗ್‌ ಹ್ಯಾಶ್‌ಟ್ಯಾಗ್‌ಗಳನ್ನು ರಚಿಸಿಕೊಡುವುದು, ವಿರೋದಿಗಳನ್ನು ಗುರಿಮಾಡಿಸಲು ವಿಶಯಗಳನ್ನು ಕೊಡುವುದು ಮೊದಲಾದ ಹಲವು ಕೆಲಸವನ್ನು ಈ ಆಪ್ ಮೂಲಕ ನಿರ್‍ವಹಿಸಲಾಗುತ್ತಿತ್ತು ಎನ್ನಲಾಗಿದೆ.

“2019ರ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಸರ್‍ಕಾರಿ ಉದ್ಯೋಗ ನೀಡುವುದಾಗಿ ಆಮಿಶಗಳನ್ನು ನೀಡಲಾಗಿತ್ತು” ಎಂಬ ಆರೋಪವನ್ನೂ ಆ ಟ್ವಿಟ್ಟರ್ ಕಾತೆ ಮಾಡಿತ್ತು. ಹೀಗಾಗಿ ಅಸಮಾದಾನಗೊಂಡು ಕಾತೆಯಲ್ಲಿ ಬೇಸರ ವ್ಯಕ್ತಪಡಿಸಲಾಗಿತ್ತು.

ಎರಡು ವರ್‍ಶಗಳ ಕಾಲ ತನಿಕೆ ನಡೆಸಿರುವ ದಿ ವೈರ್‌ ಹಲವು ಮಾಹಿತಿಗಳನ್ನು ಕಲೆ ಹಾಕಿದೆ. ಈ ಆಪ್‌ ಒಂದು ಪಕ್ಶದಪರ ಹೇಗೆ ಕೆಲಸ ಮಾಡಿದೆ ಎನ್ಬುದನ್ನು ವೈರ್‌ ವಿಶ್ಲೇಶಿಸಿದೆ.

1. ಟ್ವಿಟ್ಟರ್‌‌ನ ‘ಟ್ರೆಂಡಿಂಗ್‌’ ಫೇಸ್‌ಬುಕ್‌ನ ಟ್ರೆಂಡ್‌ ವಿಬಾಗವನ್ನು ಹೈಜಾಕ್‌ ಮಾಡುವುದು:

ಇದರ ಅರ್ತವೇನು?

ಅಪ್ಲಿಕೇಶನ್ ಆಪರೇಟರ್‌ಗಳೇ ವ್ಯಕ್ತಿಗಳು ಅತವಾ ಗುಂಪುಗಳ ಟ್ವೀಟ್‌ಗಳನ್ನು, ಪೋಸ್ಟ್‌ಗಳನ್ನು ‘ತಂತಾನೇ- ರೀಟ್ವೀಟ್’ ಅಥವಾ ‘ತಂತಾನೇ- ಹಂಚಿಕೊಳ್ಳಬಹುದು. ಆಪರೇಟರ್‌ಗಳು ವಾಸ್ತವದಲ್ಲಿ ಇರುವುದಕ್ಕಿಂತ ಅತಿರೇಕದ ನಿರೂಪಣೆ ಹಾಗೂ ರಾಜಕೀಯ ಅಬಿಯಾನವು ಕಾಣಿಸಿಕೊಳ್ಳುವಂತೆ ನೋಡಿಕೊಳ್ಳುವುದು.

ಸಮಸ್ಯೆಯೇನು?

ಯಾವುದು ನಿಯಂತ್ರಿಸಲ್ಪಡುತ್ತಿದೆ ಯಾವುದು ನಿಜವಾಗಿದೆ ಎಂಬುದನ್ನು ತಿಳಿಯದಂತಾಗುತ್ತೇವೆ. ಸದ್ಯದ ಟ್ರೆಂಡ್‌ಗಳನ್ನು ಬುಡಮೇಲು ಮಾಡಿ ಕೆಲವು ಗುಂಪುಗಳ, ಕೆಲವು ವ್ಯಕ್ತಿಗಳನ್ನು ಗುರಿಮಾಡಲಾಗುತ್ತದೆ. ಕಿರುಕುಳ ನೀಡಲಾಗುತ್ತದೆ.

ವೈರ್‌ಗೆ ಸಿಕ್ಕಿರುವ ಆಧಾರ

#CongressAgainstLabourers, #कर्मयोगी ಟ್ರೆಂಡಿಂಗ್‌ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗುವ ಮೊದಲು ಒದಗಿಸಲಾದ ಮೂಲಗಳು ಅನುಮಾನಾಸ್ಪದ, ಅನದಿಕೃತವಾಗಿದ್ದು ಆನ್‌ಲೈನ್‌ ವೇದಿಕೆಗಳನ್ನು ಮೇಲ್ವಿಚಾರಣೆ ಮಾಡಲಾಗಿದೆ.

2. ನಿಶ್ಕ್ರಿಯ ವಾಟ್ಸ್‌ಆಪ್‌‌ ಖಾತೆಗಳ ಪಿಶಿಂಗ್‌ (ಪಾಸ್‌ವರ್ಡ್‌ಗಳು ಮತ್ತು ಕ್ರೆಡಿಟ್ ಕಾರ್ಡ್ ಸಂಕ್ಯೆಗಳಂತಹ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಲು ವ್ಯಕ್ತಿಗಳನ್ನು ಪ್ರೇರೇಪಿಸುವ ಸಲುವಾಗಿ ಪ್ರತಿಶ್ಟಿತ ಕಂಪನಿಗಳಿಂದ ಇಮೇಲ್‌ಗಳನ್ನು ಕಳುಹಿಸುವ ಮೋಸದ ಅಬ್ಯಾಸ):

ಇದರ ಅರ್ತವೇನು?

ಆಪ್ ಆಪರೇಟರ್‌ಗಳು ಕಾಸಗಿ ವ್ಯಕ್ತಿಯ ‘ನಿಶ್ಕ್ರಿಯ’ ವಾಟ್ಸ್‌ಅಪ್‌‌ ಕಾತೆಗಳನ್ನು ಹೈಜಾಕ್ ಮಾಡಬಹುದು. ‘ಪದೇ ಪದೇ ಸಂಪರ್‍ಕಿಸುವ’ ಅತವಾ ‘ಎಲ್ಲಾ ಸಂಪರ್‍ಕಗಳಿಗೆ’ ಸಂದೇಶ ಕಳುಹಿಸಲು ಕಾಸಗಿ ವ್ಯಕ್ತಿಯ ಪೋನ್‌ ನಂಬರ್‌ಗಳನ್ನು ಬಳಸಬಹುದು.

ನಿಮ್ಮ ವೈಯಕ್ತಿಕ ಮಾಹಿತಿ ಮತ್ತು ಸಂಪರ್‍ಕ ಪಟ್ಟಿಯನ್ನು ಟೆಕ್ ಪಾಗ್ ಅಪ್ಲಿಕೇಶನ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ. ಮುಂದೆ ನಡೆಸಬಹುದಾದ ಕಿರುಕುಳ ಮತ್ತು ಟ್ರೋಲಿಂಗ್ ಅಬಿಯಾನಗಳಿಗೆ ಬಳಸಲಾಗುತ್ತದೆ.

ನಾನೇಕೆ ಚಿಂತೆಪಡಬೇಕು?

ಇದು ನಿಮ್ಮ ಕಾಸಗಿತನದ ಹಕ್ಕನ್ನು ಉಲ್ಲಂಗಿಸಿದೆ.

ವೈರ್‌ಗೆ ಲಭ್ಯವಾದ ಆಧಾರ

ವಾಟ್ಸ್‌ಅಪ್‌ನ ಶೋಶಣೆಯ ರಿಯಲ್‌ ಟೈಮ್‌ ತೋರಿಸಲು ಮೂಲವನ್ನು ಕೇಳಲಾಯಿತು. ಪ್ರಾತಿಕ್ಷಿಕೆಯ ಮೂಲಕ ಹೈಜಾಕ್‌ ಮಾಡುವ ರೀತಿಯನ್ನು ದೃಡಪಡಿಸಿಕೊಳ್ಳಲಾಗಿದೆ.

3. ಉದ್ದೇಶಿತ ಕಿರುಕುಳಕ್ಕಾಗಿ ಕಾಸಗಿ ನಾಗರಿಕರ ಡೇಟಾಬೇಸ್ ಬಳಸುವುದು

ಇದರ ಅರ್ತವೇನು?

ಕಾಸಗಿ ನಾಗರಿಕರ ಉದ್ಯೋಗ, ದರ್ಮ, ಬಾಷೆ, ವಯಸ್ಸು, ಲಿಂಗ, ರಾಜಕೀಯ ಒಲವು ಅಷ್ಟೇ ಅಲ್ಲದೆ ಚರ್ಮದ ಬಣ್ಣ, ಸ್ತನದ ಗಾತ್ರದಂತಹ ದೈಹಿಕ ಗುಣಲಕ್ಷಣಗಳಿಗೆ ಅನುಗುಣವಾಗಿಯೂ ಡೇಟ್‌‌ಬೇಸ್‌ ಅನ್ನು ವರ್ಗೀಕರಿಸಲಾಗಿದೆ.

ನಾನೇಕೆ ಚಿಂತಿಸಬೇಕು?

ವಿಶುವಲ್‌ ಪುರಾವೆ

ವೈರ್‌ ಹೇಗೆ ಕಚಿತಪಡಿಸಿಕೊಂಡಿದೆ?

ಅಪ್ಲಿಕೇಶನ್‌ನಲ್ಲಿ ತೋರಿಸಲಾದ ಉದ್ದೇಶಿತ ಗುಂಪುಗಳಲ್ಲಿ ಒಂದಾದ ‘ಮಹಿಳಾ ಪತ್ರಕರ್‍ತರಿಗೆ’ ಕಳುಹಿಸಲಾದ ಪ್ರತ್ಯುತ್ತರಗಳನ್ನು ಮೇಲ್ವಿಚಾರಣೆ ಮಾಡಲಾಗಿದೆ.

ಈ ರೀತಿಯಾಗಿ ಈ ವರದಿ ಪ್ರಕಟಗೊಂಡ ನಂತರ ದೊಡ್ಡ ಚರ್ಚೆಗಳು ಆರಂಬವಾಗಿವೆ. ಬಿಜೆಪಿಯು ಚುನಾವಣೆಯ ಹೊಸ್ತಿಲಲ್ಲಿ ಎಂತಹ ಹೀನಕೃತ್ಯಕ್ಕಿಳಿದಿದೆ ಎಂದು ಹಲವರು ವಿರೋದ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿರಿ: ಛತ್ತೀಸ್‌ಗಡ: ಗ್ರಾಮಸ್ಥರಿಂದ ಮುಸ್ಲಿಮರನ್ನು ಬಹಿಷ್ಕರಿಸುವ ಪ್ರತಿಜ್ಞೆ ಮಾಡಿಸಿದ ದುಷ್ಕರ್ಮಿಗಳು; ತನಿಖೆಗೆ ಪೊಲೀಸ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ‘ಎಲ್ಲರ ಎಂದರೆ ಮಹಾಪ್ರಾಣ ಅಕ್ಕರಗಳನ್ನು ಬಳಸದಿರುವುದೊಂದೇ ಅಲ್ಲ.
    ಆದಶ್ಟು ಕನ್ನಡ ಬೇರಿನ ಪದಗಳನ್ನು ಬಳಸುವುದು.
    ಮೇಲುನೋಟಕ್ಕೆ “ವಿಜಾತಿಯ” ಒತ್ತಕ್ಶರ” ಗಳಿಲ್ಲದ ಪದಗಳು.
    ಎತ್ತಗೆ:
    ದ್ವೇಶ…ಹಗೆತನ

    ಪ್ರತ್ಯುತ್ತರ..ಮರುಹೇಳಿಕೆ/ ಮರುಉತ್ತರ
    ಹೀನಕೃತ್ಯ..ಕೇಡುಕಿನ ಕೆಲಸ
    ….

  2. ಎಲ್ಲರ ಕನ್ನಡ ಎಂದರೆ, ಕೇವಲ ಮಹಾಪ್ರಾಣ ಗಳನ್ನು ಕಯ್ಬಿಡುವುದಲ್ಲ.
    ಹೆಚ್ಚು ಕನ್ನಡ ಬೇರಿನ ಪದಗಳ ಬಳಕೆ.
    ಎತ್ತುಗೆ,
    ಹೀನಕೃತ್ಯ..ಕೆಡುಕಿನ ಕೆಲಸ.
    ಕನ್ನಡಪದಗಳಲ್ಲಿ ವಿಜಾತಿಯ ಒತ್ತಕ಼್ಶರ ಇರುವುದಿಲ್ಲ.

  3. ದನ್ಯವಾದಗಳು
    “ಹ್ಯಾಶ್‌ಟ್ಯಾಗ್‌ಗಳನ್ನು ರಚಿಸಿಕೊಡುವುದು, ವಿರೋಧಿಗಳನ್ನು”….ಇಲ್ಲಿ ಒಂದೇ ಒಂದು ಮಹಾಪ್ರಾಣ ನುಸುಳಿದೆ. ದಯವಿಟ್ಟು ತಿದ್ದಿ.

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...