Homeಮುಖಪುಟ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಪ್ರಯತ್ನ’: ಪ್ರಕರಣ ದಾಖಲಿಸಿದ ಪಂಜಾಬ್ ಪೊಲೀಸರು

‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಪ್ರಯತ್ನ’: ಪ್ರಕರಣ ದಾಖಲಿಸಿದ ಪಂಜಾಬ್ ಪೊಲೀಸರು

- Advertisement -
- Advertisement -

ಬಿಜೆಪಿ ತನ್ನ ಶಾಸಕರಿಗೆ ಲಂಚ ನೀಡಲು ಯತ್ನಿಸುತ್ತಿದೆ ಎಂಬ ಆಮ್ ಆದ್ಮಿ ಪಕ್ಷದ ದೂರಿನ ಮೇರೆಗೆ ಪಂಜಾಬ್ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ. ತನ್ನ ಸರ್ಕಾರವನ್ನು ಉರುಳಿಸಲು ಬಿಜೆಪಿಯ ಪ್ರಯತ್ನದ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಆಡಳಿತರೂಢ ಎಎಪಿ ಪೊಲೀಸರಿಗೆ ಕೋರಿದೆ. ಬಿಜೆಪಿ ಕನಿಷ್ಠ 10 ಶಾಸಕರಿಗೆ ತಲಾ 25 ಕೋಟಿ ರೂ. ಆಫರ್ ಮಾಡಿದೆ ಎಂದು ಎಎಪಿ ಹೇಳಿಕೊಂಡಿದೆ.

ದೆಹಲಿಯಲ್ಲಿ ಈ ಹಿಂದೆ ಬಿಜೆಪಿಯ ಆಪರೇಷನ್ ಕಮಲ ವಿಫಲವಾಗಿತ್ತು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. ಎಎಪಿಯ ಆರೋಪವನ್ನು ರಾಜ್ಯ ಬಿಜೆಪಿ ನಿರಾಕರಿಸಿದ್ದು, “ಆಧಾರರಹಿತ ಮತ್ತು ಸುಳ್ಳಿನ ಕಂತೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜ್ಯ ಸರ್ಕಾರವನ್ನು ಉರುಳಿಸುತ್ತಿದೆ ಎಂದು ಬಿಜೆಪಿ ವಿರುದ್ಧ ಪಂಜಾಬ್ ಸಚಿವ ಹರ್ಪಾಲ್ ಚೀಮಾ ಮಾಡಿರುವ ಆಧಾರರಹಿತ ಆರೋಪವು ಪಂಜಾಬ್‌ನಲ್ಲಿ ಎಎಪಿ ದೊಡ್ಡ ವಿಭಜನೆಯತ್ತ ಹೋಗುತ್ತಿದೆ ಎಂಬುವುದನ್ನು ತೋರಿಸುತ್ತದೆ. ಕೇಜ್ರಿವಾಲ್ ಹಸ್ತಕ್ಷೇಪದಿಂದ ಪಕ್ಷವು ಛಿದ್ರವಾಗುವ ಹಂತದಲ್ಲಿದೆ” ಎಂದು ಬಿಜೆಪಿ ನಾಯಕ ಸುಭಾಷ್ ಶರ್ಮಾ ಹೇಳಿದ್ದಾರೆ.

“ಬಿಜೆಪಿಯು ಒಕ್ಕೂಟ ಸರ್ಕಾರದ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಂಡಿದ್ದು, ಬಿಜೆಪಿ ಪಕ್ಷ ಸೇರಿದರೆ ದೆಹಲಿ ಎಎಪಿ ಶಾಸಕರಿಗೆ ತಲಾ 20 ಕೋಟಿ ನೀಡುವುದಾಗಿ ಆಫರ್‌ ನೀಡಿದೆ” ಎಂದು ಈ ತಿಂಗಳ ಆರಂಭದಲ್ಲಿ ಎಎಪಿ ಆರೋಪಿಸಿತ್ತು.

ಇದನ್ನೂ ಓದಿ: ಡಿಸೆಂಬರ್ 2021 ರವರೆಗೆ ಬಾಕಿ ಉಳಿದ ವಿದ್ಯುತ್ ಬಿಲ್‌ಗಳನ್ನು ಮನ್ನಾ ಮಾಡಿದ ಪಂಜಾಬ್ ಸರ್ಕಾರ

“ಪಕ್ಷ ಬದಲಿಸಲು ಪ್ರತಿ ಶಾಸಕರಿಗೆ 25 ಕೋಟಿ ರೂ. ಬಿಜೆಪಿ ನೀಡುತ್ತಿದೆ. ಆಪರೇಷನ್ ಕಮಲವು ಕರ್ನಾಟಕದಲ್ಲಿ ಯಶಸ್ವಿಯಾಗಿರಬಹುದು, ಆದರೆ ದೆಹಲಿ ಶಾಸಕರು ದೃಢವಾಗಿ ಉಳಿದು ಬಿಜೆಪಿ ಕಾರ್ಯಾಚರಣೆಯನ್ನು ವಿಫಲಗೊಳಿಸಿದ್ದಾರೆ” ಎಂದು ಪಂಜಾಬ್ ಸಚಿವ ಚೀಮಾ ಹೇಳಿದ್ದಾರೆ.

“ಪಂಜಾಬ್‌ನಲ್ಲಿ ಸರ್ಕಾರ ಬದಲಾವಣೆಯಾದರೆ, ಶಾಸಕರಿಗೆ ದೊಡ್ಡ ಬಡ್ತಿಗಳು, ಹುದ್ದೆಗಳನ್ನು ನೀಡಲಾಗುವುದು ಬಿಜೆಪಿ ತನ್ನ ಶಾಸಕರಿಗೆ ಆಫರ್‌ ನೀಡಿರುವುದಾಗಿ” ಎಂದು ಸಚಿವ ಚೀಮಾ ಹೇಳಿದ್ದು, ಭಗವಂತ್ ಮಾನ್ ನೇತೃತ್ವದ ಸರ್ಕಾರವನ್ನು ಉರುಳಿಸಲು ಶಾಸಕರಿಗೆ ಹಲವಾರು ಕರೆಗಳು ಬಂದಿವೆ ಎಂದು ಪುನರುಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...