Homeಮುಖಪುಟಪಾಂಡಿಚೇರಿ ನಂತರ ಮಹಾರಾಷ್ಟ್ರ ಸರ್ಕಾರ ಪತನಕ್ಕೆ ಬಿಜೆಪಿ ಯತ್ನ: ಶಿವಸೇನೆ ಆರೋಪ

ಪಾಂಡಿಚೇರಿ ನಂತರ ಮಹಾರಾಷ್ಟ್ರ ಸರ್ಕಾರ ಪತನಕ್ಕೆ ಬಿಜೆಪಿ ಯತ್ನ: ಶಿವಸೇನೆ ಆರೋಪ

- Advertisement -
- Advertisement -

ಪಾಂಡಿಚೇರಿ ಸರ್ಕಾರ ಪತನದ ನಂತರ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನ ಮಾಡಲು ಬಿಜೆಪಿಯು ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದೆ ಎಂದು ಶಿವಸೇನೆ ಪಕ್ಷ ಆರೋಪಿಸಿದೆ.

ಪಕ್ಷದ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ “ಪಾಂಡಿಚೇರಿಯಲ್ಲಿ ಕಾಂಗ್ರೆಸ್-ಡಿಎಂಕೆ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯು ಗವರ್ನರ್ ಆಗಿದ್ದ ಕಿರಣ್ ಬೇಡಿಯನ್ನು ಬಳಸಿಕೊಂಡಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿಯೂ ಸರ್ಕಾರ ಬೀಳಿಸುವ ಕನಸು ಕಾಣುತ್ತಿದೆ. ಆದರೆ ಅದು ಎಂದಿಗೂ ಸಾಧ್ಯವಾಗುವುದಿಲ್ಲ” ಎಂದು ಬರೆಯಲಾಗಿದೆ.

ಇನ್ನು ನಾಲ್ಕು ತಿಂಗಳಲ್ಲಿ ಪಾಂಡಿಚೇರಿಯಲ್ಲಿ ಅಸೆಂಬ್ಲಿ ಚುನಾವಣೆಗಳಿದ್ದವು. ಅಲ್ಲಿಯವರೆಗೂ ಬಿಜೆಪಿ ಕಾಯಬಹುದಿತ್ತು. ಆದರೆ ಅವರ ಅಧಿಕಾರ ಕಸಿದುಕೊಳ್ಳುವ ಹೆಗ್ಗಳಿಕೆಗಾಗಿ ಸರ್ಕಾರ ಉರುಳಿಸಿದರು ಎಂದು ಸಾಮ್ನಾದಲ್ಲಿ ಆರೋಪಿಸಲಾಗಿದೆ.

ಈಗ ಪಾಂಡಿಚೇರಿ ಸರ್ಕಾರ ಪತನವಾಗಿದೆ. ಮುಂದಿನ ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಆರಂಭಿಸುವ ಯತ್ನದಲ್ಲಿದ್ದಾರೆ ಎಂದು ಬಿಜೆಪಿಯೊಳಗಿನ ಮೂಲಗಳು ತಿಳಿಸಿವೆ. ಮಧ್ಯಪ್ರದೇಶ ಸರ್ಕಾರ ಪತನಗೊಂಡ ನಂತರ ಸಹ ಇದೇ ರೀತಿಯ ಪ್ರಯತ್ನಗಳನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ ಮಾಡಿತ್ತು. ಆನಂತರ ಬಿಹಾರ ಚುನಾವಣೆ ನಂತರವೂ ಈ ಕುರಿತು ಮಾತುಕತೆಗಳು ನಡೆಯುತ್ತಿದ್ದವು. ಈಗ ಪಾಂಡಿಚೇರಿ ಹಿನ್ನೆಲೆಯಲ್ಲಿ ಅದೇ ಮಾತುಗಳನ್ನಾಡುತ್ತಿದ್ದಾರೆ. ಆದರೆ ದೆಹಲಿ ಬಹಳ ದೂರದಲ್ಲಿದೆ ಎಂಬ ಮಾತಿನ ರೀತಿ ಮಹಾರಾಷ್ಟ್ರವು ಅವರಿಗೆ ಬಹಳ ದೂರದಲ್ಲಿದೆ ಎಂಬುದು ಅರ್ಥವಾಗಲಿ ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.

ಮಧ್ಯಪ್ರದೇಶ ಮತ್ತು ಪಾಂಡಿಚೇರಿಯಲ್ಲಿ ಕೇವಲ ಕಾಂಗ್ರೆಸ್ ಆಳ್ವಿಕೆಯಲ್ಲಿತ್ತು. ಆದರೆ ಮಹಾರಾಷ್ಟ್ರದಲ್ಲಿ ಅದಕ್ಕೆ ಶಿವಸೇನೆಯ ರಕ್ಷಣೆಯಿದೆ ಎಂಬುದನ್ನು ಬಿಜೆಪಿ ಮರೆಯಬಾರದು ಎಂದು ಶಿವಸೇನೆ ಎಚ್ಚರಿಕೆ ನೀಡಿದೆ.

ಪಾಂಡಿಚೇರಿಯಲ್ಲಿ ಕಿರಣ್ ಬೇಡಿಯವರನ್ನು ಬಳಸಿಕೊಂಡ ನಂತರ ಬೀಸಾಡಲಾಗಿದೆ. ಅಂದರೆ ಒಗ್ಗರಣೆಗೆ ಹಾಕಿದ ನಂತರ ಕರಿಬೇವನ್ನು ಬೀಸಾಡಿದ ಹಾಗೆ. ಅದು ತನ್ನ ಆಹಾರಕ್ಕೆ ತನ್ನ ಪರಿಮಳ ಕೊಟ್ಟ ನಂತರ ಏನು ಉಪಯೋಗ ಎಂಬ ರೀತಿಯಲ್ಲಿ. ಇದನ್ನು ಮಹಾರಾಷ್ಟ್ರ ರಾಜ್ಯಪಾಲರು ಸಹ ಆದಷ್ಟು ಬೇಗ ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಶಿವಸೇನೆ ಎಚ್ಚರಿಕೆ ನೀಡಿದೆ.


ಇದನ್ನೂ ಓದಿ: ಪ್ರಿಯಾಂಕ ಗಾಂಧಿ ಭಾಷಣದ ನಡುವೆ ಅತ್ಯಾಚಾರ ಸಂತ್ರಸ್ತೆಯ ತಾಯಿಯ ಘೋಷಣೆ: ಮುಂದೇನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...