Homeಮುಖಪುಟಕೇಜ್ರಿವಾಲ್‌ ಕೊಲೆಗೆ ಬಿಜೆಪಿ ಬಯಸಿದೆ: ಎಎಪಿ ಆರೋಪ

ಕೇಜ್ರಿವಾಲ್‌ ಕೊಲೆಗೆ ಬಿಜೆಪಿ ಬಯಸಿದೆ: ಎಎಪಿ ಆರೋಪ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದ ಪ್ರತಿಭಟನಾಕಾರರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಮೇಲೆ ದಾಳಿಗೆ ಯತ್ನಿಸಿದ್ದಾರೆಂಬುದು ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದ ಪ್ರತಿಭಟನಾಕಾರರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಕಾಶ್ಮೀರ ಫೈಲ್ಸ್ ಚಿತ್ರದ ಕುರಿತು ಕೇಜ್ರಿವಾಲ್‌ ಅವರು ನೀಡಿದ ಹೇಳಿಕೆ ವಿರೋಧಿಸಿ ಪ್ರತಿಭಟನೆ ನಡೆಸಲಾಗಿದ್ದು, ಪಂಜಾಬ್ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಕೇಜ್ರಿವಾಲ್ ಅವರನ್ನು ಬಿಜೆಪಿ ಕೊಲ್ಲಲು ಬಯಸಿದೆ ಎಂದು ಆಮ್‌ ಆದ್ಮಿ ಪಾರ್ಟಿ (ಎಎಪಿ) ಆರೋಪಿಸಿದೆ.

ಪಂಜಾಬ್ ವಿಧಾನಸಭೆಯಲ್ಲಿ ಎಎಪಿ ಗೆಲುವು ಬಿಜೆಪಿಯನ್ನು ಕಂಗೆಡಿಸಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಪಂಜಾಬ್ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಾಗದ ಕಾರಣ, ಬಿಜೆಪಿ ಈಗ ಅವರನ್ನು ಕೊಲ್ಲಲು ಬಯಸಿದೆ ಎಂದಿದ್ದಾರೆ.

ಬುಧವಾರ ಮುಖ್ಯಮಂತ್ರಿಯವರ ಮನೆ ಮೇಲೆ ನಡೆದ ದಾಳಿಯು, ಪೊಲೀಸರ ಸಹಾಯದಿಂದ ಕೇಜ್ರಿವಾಲ್ ಅವರನ್ನು ಬಿಜೆಪಿ ಕೊಲ್ಲಲು ಬಯಸುತ್ತಿದೆ ಎಂಬುದನ್ನು ತೋರಿಸುತ್ತದೆ. ಇದರ ವಿರುದ್ಧ ನಾವು ಔಪಚಾರಿಕ ದೂರು ನೀಡುತ್ತೇವೆ ಎಂದು ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

“ಕೇಜ್ರಿವಾಲ್ ಮೇಲೆ ನಡೆದಿರುವ ಜೀವ ಬೆದರಿಕೆಯ ದಾಳಿ ಇದಾಗಿದೆ. ದಾಳಿಯನ್ನು ವ್ಯವಸ್ಥಿತವಾಗಿ ಯೋಜಿಸಲಾಗಿದೆ” ಎಂದು ಅವರು ದೂರಿದ್ದಾರೆ.

“ಎಎಪಿ ಸಮಾಜದ ಎಲ್ಲಾ ವರ್ಗಗಳಿಂದ ಬೆಂಬಲ ಪಡೆಯುತ್ತಿರುವುದರಿಂದ ಬಿಜೆಪಿ ಪ್ಯಾನಿಕ್ ಮೋಡ್‌ನಲ್ಲಿದೆ. ಬಿಜೆಪಿಯ ಗೂಂಡಾಗಳಿಂದ ಕೇಜ್ರಿವಾಲ್-ಜಿ ಮೇಲಾದ ದಾಳಿಯು ಭಾರತದ ಜನರ ಮೇಲಿನ ದಾಳಿಯಾಗಿದೆ. ಜನರು ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು ಸಂಸದರ ನೇತೃತ್ವದಲ್ಲಿ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಕಾರ್ಯಕರ್ತರು ಬುಧವಾರ ದೆಹಲಿ ಮುಖ್ಯಮಂತ್ರಿಯವರ ನಿವಾಸದ ಬಳಿ ಘೋಷಣೆಗಳನ್ನು ಕೂಗಿದರು. ಕಾಶ್ಮೀರಿ ಪಂಡಿತರ ದುಸ್ಥಿತಿಯನ್ನು ಕೇಜ್ರಿವಾಲ್ ಅಣಕಿಸಿದ್ದಾರೆಂದು ಆರೋಪಿಸಿ, ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.

ಸೂರ್ಯ ಸೇರಿದಂತೆ ಕೆಲವು ಸದಸ್ಯರು ಸಿಎಂ ನಿವಾಸದ ಮುಖ್ಯ ಗೇಟ್ ತಲುಪಲು ಯಶಸ್ವಿಯಾದರು. ಸ್ಟೀಲ್ ಬಾಗಿಲಿಗೆ ಬಣ್ಣ ಎಸೆದರು. ಗೇಟ್ ಬಳಿ ಅಳವಡಿಸಲಾದ ಸಿಸಿಟಿವಿಯನ್ನು ಹಾನಿಗೊಳಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೂರ್ಯ, “ಅವರು (ಕೇಜ್ರಿವಾಲ್) ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ಅಸತ್ಯ ಎಂದು ಲೇವಡಿ ಮಾಡಿದರು. ಬೇಷರತ್ ಕ್ಷಮೆಯಾಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಅವರು ಕ್ಷಮೆಯಾಚಿಸುವವರೆಗೂ ನಮ್ಮ ಪ್ರತಿಭಟನೆಗಳು ಮುಂದುವರೆಯುತ್ತವೆ” ಎಂದಿದ್ದಾರೆ.

“ಈ ಪ್ರತಿಭಟನೆಯು ಚಲನಚಿತ್ರದ ಪರವಾಗಿ ಅಥವಾ ‘ದಿ ಕಾಶ್ಮೀರ ಫೈಲ್ಸ್’ ಬಗ್ಗೆ ಅಲ್ಲ. ಈ ಪ್ರತಿಭಟನೆಯು ಕಾಶ್ಮೀರದಲ್ಲಿನ ಹಿಂದೂಗಳ ನರಮೇಧವನ್ನು ನಿರಾಕರಿಸುವ ಕೇಜ್ರಿವಾಲ್ ಅವರ ಅಮಾನವೀಯ ಮನಸ್ಥಿತಿಯ ವಿರುದ್ಧವಾಗಿದೆ” ಎಂದು ಸೂರ್ಯ ಹೇಳಿದರು.

‘ಇದು ಕೇಜ್ರಿವಾಲ್ ಅವರನ್ನು ಕೊಲ್ಲುವ ಪ್ರಯತ್ನವಾಗಿದೆ’ ಎಂಬ ಸಿಸೋಡಿಯಾ ಹೇಳಿಕೆಯನ್ನು ಉಲ್ಲೇಖಿಸಿದ ಸೂರ್ಯ, “ನಾವು ಅವರನ್ನು (ಕೇಜ್ರಿವಾಲ್) ಭೇಟಿ ಮಾಡಿ ನಮ್ಮ ದುಃಖವನ್ನು ವ್ಯಕ್ತಪಡಿಸಲು ಬಯಸಿದ್ದೇವೆ. ಇದು ಕೇಜ್ರಿವಾಲ್ ಅವರನ್ನು ಹತ್ಯೆ ಮಾಡುವ ಯತ್ನ ಎಂದಿರುವುದು ಉನ್ಮಾದ ಮತ್ತು ಕಲ್ಪನೆಯಿಂದ ಕೂಡಿದೆ” ಎಂದಿದ್ದಾರೆ.

ಎಎಪಿ ಶಾಸಕ ಅತಿಶಿ ಪೊಲೀಸರ ನಿಷ್ಕ್ರಿಯತೆಯನ್ನು ಪ್ರಶ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಿಎಂ ಮನೆಗೆ ಹೇಗೆ ತಲುಪಲು ಸಾಧ್ಯವಾಯಿತು ಎಂದು ಕೇಳಿದ್ದಾರೆ. “ಶಾಕಿಂಗ್! ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಆಕ್ರೋಶ ವ್ಯಕ್ತಪಡಿಸಿದಾಗ ದೆಹಲಿ ಪೊಲೀಸರು ಏನು ಮಾಡುತ್ತಿದ್ದರು?” ಎಂದು ಟ್ವೀಟ್ ಮಾಡಿದ್ದಾರೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 70 ಮಂದಿಯನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 11.30 ರ ಸುಮಾರಿಗೆ ಐಪಿ ಕಾಲೇಜು ಬಳಿಯ ಲಿಂಕ್ ರಸ್ತೆಯಲ್ಲಿರುವ ಸಿಎಂ ನಿವಾಸದ ಹೊರಗೆ ಬಿಜೆವೈಎಂನ ಸುಮಾರು 150-200 ಪ್ರತಿಭಟನಾಕಾರರು ಧರಣಿ ಆರಂಭಿಸಿದರು ಎಂದು ಪೊಲೀಸ್ ಉಪ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ಮಾಹಿತಿ ನೀಡಿದ್ದಾರೆ.

“ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ದೆಹಲಿ ಸಿಎಂ ನೀಡಿದ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಸಿಎಂ ನಿವಾಸದ ಹೊರಗೆ ಬಂದು ಗದ್ದಲ ಎಬ್ಬಿಸಿ ಘೋಷಣೆಗಳನ್ನು ಕೂಗಿದರು. ಸಿಎಂ ಮನೆ ಬಾಗಿಲಿಗೂ ಬಣ್ಣ ಎರಚಿದ್ದಾರೆ. ಬೂಮ್ ತಡೆಗೋಡೆ ಮತ್ತು ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾವನ್ನೂ ಧ್ವಂಸಗೊಳಿಸಲಾಗಿದೆ” ಎಂದು ಹೇಳಿದರು.

ಕಳೆದ ಗುರುವಾರ, ದೆಹಲಿ ಅಸೆಂಬ್ಲಿಯಲ್ಲಿ ಮಾತನಾಡುವಾಗ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್‌ ಸಿನಿಮಾ ಸಂಬಂಧ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಬೇಕು ಎಂಬ ಬಿಜೆಪಿ ಶಾಸಕರ ಬೇಡಿಕೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಅವರು, “ನೀವು ಇದಕ್ಕಾಗಿಯೇ ರಾಜಕೀಯ ಸೇರಿದ್ದೀರಾ? ಚಿತ್ರ ನಿರ್ಮಾಪಕರು ಕೋಟಿಗಟ್ಟಲೆ ಹಣ ಗಳಿಸುತ್ತಿದ್ದರೆ, ಬಿಜೆಪಿ ಸದಸ್ಯರು ಸಿನಿಮಾ ಪ್ರಚಾರಕ್ಕೆ ಇಳಿದು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ” ಎಂದು ಟೀಕಿಸಿದ್ದರು.

“ಇದಕ್ಕಾಗಿಯೇ ನೀವು ರಾಜಕೀಯಕ್ಕೆ ಬಂದಿದ್ದೀರಾ? ಸಿನಿಮಾಗಳ ಪೋಸ್ಟರ್ ಹಾಕಲು? ನಿಮ್ಮ ಕೆಲಸದ ಬಗ್ಗೆ ನಿಮ್ಮ ಮಕ್ಕಳಿಗೆ ಕೇಳಿದಾಗ ನೀವು ಏನು ಹೇಳುತ್ತೀರಿ. ಚಿತ್ರ ಕಾ ಪೋಸ್ಟರ್ ಲಗಾತಾ ಹೂಂ? (ನಾನು ಚಲನಚಿತ್ರ ಪೋಸ್ಟರ್‌ಗಳನ್ನು ಹಾಕಿದ್ದೇನೆ) ಎನ್ನುವಿರಾ?” ಎಂದು ಕೇಜ್ರಿವಾಲ್ ಕುಟುಕಿದ್ದರು.

ಮುಂದುವರಿದು, “ನಿಜವಾಗಲೂ ಸಾರ್ವಜನಿಕ ಹಿತಾಸಕ್ತಿಯಿಂದ ಸಿನಿಮಾ ಮಾಡಿದ್ದರೆ ಸಿನಿಮಾ ನಿರ್ಮಾಪಕರು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಬೇಕು” ಎಂದು ಕೇಜ್ರಿವಾಲ್ ಆಗ್ರಹಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿತ್ತು.

ಕಾಶ್ಮೀರಿ ಪಂಡಿತರ ನಿರ್ಗಮನವನ್ನು “ದೊಡ್ಡ ದುರಂತ” ಮತ್ತು “ಅನ್ಯಾಯ” ಎಂದು ಕರೆದಿರುವ ಕೇಜ್ರಿವಾಲ್, “ಬಿಜೆಪಿಗೆ ಕಾಶ್ಮೀರ ಫೈಲ್‌ಗಳು ಮುಖ್ಯವಾಗಿದೆ. ನನಗೆ ಕಾಶ್ಮೀರಿ ಪಂಡಿತರು ಹೆಚ್ಚು ಮುಖ್ಯ. ಕಾಶ್ಮೀರದಿಂದ ಪಂಡಿತರು ವಲಸೆ ಬಂದಾಗ 1993ರಲ್ಲಿ 233 ಪಂಡಿತರು ದೆಹಲಿ ಸರ್ಕಾರಕ್ಕೆ ಗುತ್ತಿಗೆ ಶಿಕ್ಷಕರಾಗಿ ಸೇರಿದ್ದರು. ನಮ್ಮ ಸರ್ಕಾರ ಬಂದಾಗ ಅವರನ್ನೆಲ್ಲ ಖಾಯಂ ಮಾಡಿದೆವು. ನಾವು ಅವರ ಮೇಲೆ ಸಿನಿಮಾ ಮಾಡಿಲ್ಲ” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: 2022ರ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಕೆಲಸ ಮಾಡಲಿರುವ ಪ್ರಶಾಂತ್ ಕಿಶೋರ್?: ಮೇ ತಿಂಗಳಲ್ಲಿ ಘೋಷಣೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...