Homeಕರ್ನಾಟಕವಕ್ಫ್ ವಿವಾದ: ಬಿಜೆಪಿ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದ ಪ್ರಿಯಾಂಕ್ ಖರ್ಗೆ

ವಕ್ಫ್ ವಿವಾದ: ಬಿಜೆಪಿ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದ ಪ್ರಿಯಾಂಕ್ ಖರ್ಗೆ

- Advertisement -
- Advertisement -

ರಾಜ್ಯದಲ್ಲಿನ ವಕ್ಫ್ ವಿಷಯದಲ್ಲಿ ಬಿಜೆಪಿ ಆಧಾರರಹಿತ ಆರೋಪಗಳ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ಬಿಜೆಪಿ ಕಳೆದ ವಾರದಿಂದ ವಕ್ಫ್ ವಿಷಯದ ಬಗ್ಗೆ ಚರ್ಚೆ ನಡೆಸುತ್ತಿದೆ. ಆದರೆ, ಅವರು ಯಾವುದೇ ಸಾಕ್ಷ್ಯ, ದಾಖಲೆ ಅಥವಾ ಪುರಾವೆಗಳಿಲ್ಲದೆ ಮಾತನಾಡುತ್ತಿದ್ದಾರೆ. ಜನರ ದಿಕ್ಕು ತಪ್ಪಿಸುವುದೊಂದೇ ಅವರ ಉದ್ದೇಶ. ವಕ್ಫ್ ಹಗರಣದ ವರದಿಯನ್ನು ಹತ್ತಿಕ್ಕಲು ₹150 ಕೋಟಿ ಆಮಿಷ ಒಡ್ಡಿದ್ದಕ್ಕೆ ವಿಜಯೇಂದ್ರ ಕಾರಣವಾಗಿದ್ದು, ವಿವರಣೆ ನೀಡಬೇಕಿದೆ” ಎಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಹೇಳಿದರು.

“ಪ್ರತಿಪಕ್ಷದ ನಾಯಕ ಸಿ.ಟಿ. ರವಿ, ರಾಜ್ಯ ಬಿಜೆಪಿ ಅಧ್ಯಕ್ಷರು ಸೇರಿದಂತೆ ಹಲವು ಮುಖಂಡರು ವಕ್ಫ್ ಬಗ್ಗೆ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ. ಹಾವೇರಿ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಬೆಂಗಳೂರಿನ ಸಂಸದರೂ ಸೇರಿದಂತೆ ಬಿಜೆಪಿ ನಾಯಕರು ತಪ್ಪು ಮಾಹಿತಿ ನೀಡಿ, ನಂತರ ಅಳಿಸಿ, ತಮ್ಮ ಕೃತ್ಯವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಅವರ ಉದ್ದೇಶ. ಬಿಜೆಪಿಯ ದ್ವಂದ್ವ ನೀತಿ ಎದ್ದು ಕಾಣುತ್ತಿದೆ. ವಕ್ಫ್ ಸಮಸ್ಯೆಗೆ ಸಂಬಂಧಿಸಿದಂತೆ, ತಮ್ಮ ಪ್ರಣಾಳಿಕೆಯಲ್ಲಿ ಜಿಐಎಸ್ಎಸ್ ಮ್ಯಾಪಿಂಗ್ ನಡೆಸುವುದಾಗಿ ಮತ್ತು ಈ ಆಸ್ತಿಗಳನ್ನು ರಕ್ಷಿಸುವುದಾಗಿ ಹೇಳಲಾಗಿದೆ” ಎಂದು ಅವರು ಹೇಳಿದರು.

ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಜಿಐಎಸ್‌ಎಸ್ ಮ್ಯಾಪಿಂಗ್ ಮಾಡಲು ಮತ್ತು ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಲು ಪ್ರತಿ ರಾಜ್ಯಕ್ಕೆ 12 ಕೋಟಿ ವಿತರಿಸಲು ಕೇಂದ್ರ ಸರ್ಕಾರ ₹335 ಕೋಟಿಗಳನ್ನು ವ್ಯಯಿಸುವುದಾಗಿ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಕೋಟ್ಯಂತರ ರೂಪಾಯಿ ಲಂಚದ ಆಮಿಷ ಒಡ್ಡಿದ್ದರು ಎಂದು ನಾನು ಹೇಳಿಕೆ ನೀಡಿದ್ದೆ.

“ಸರ್ಕಾರ ಹಿಟ್‌ ಅಂಡ್ ರನ್‌ನಲ್ಲಿ ತೊಡಗಿದ್ದು, ಸಚಿವರು ತಮ್ಮ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿದ್ದಾರೆ” ಎಂದು ವಿಧಾನಸಭೆಯಲ್ಲಿ ವಿಜಯೇಂದ್ರ ಕಿಡಿಕಾರಿದರು.

“ಕಾಂಗ್ರೆಸ್ ಪಕ್ಷವಾಗಲಿ, ನಾನಾಗಲಿ ಈ ಆರೋಪಗಳನ್ನು ಮಾಡಿಲ್ಲ. ನಿಮ್ಮ ಪಕ್ಷದ ವಕ್ತಾರ ಮತ್ತು ನೇಮಕಗೊಂಡ ಅನ್ವರ್ ಮಾಣಿಪ್ಪಾಡಿ ಅವರು ಆರೋಪ ಮಾಡಿದ್ದಾರೆ. ಅನ್ವರ್ ಮಾಣಿಪ್ಪಾಡಿ ಕಾಂಗ್ರೆಸ್ ಸದಸ್ಯರೇ? ನಾನು ಪತ್ರಿಕೆಗಳಲ್ಲಿ ಬಂದ ಆರೋಪಗಳನ್ನು ಮಾತ್ರ ಉಲ್ಲೇಖಿಸಿದ್ದೇನೆ, ಅದನ್ನು ಬಿಜೆಪಿ ಮರೆತಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ತುಣುಕುಗಳು ಎಲ್ಲರಿಗೂ ನೋಡಲು ಲಭ್ಯವಿದೆ. ಈ ವೀಡಿಯೊಗಳನ್ನು ಪ್ರತಿಷ್ಠಿತ ಸುದ್ದಿ ವಾಹಿನಿಗಳಲ್ಲಿ ಪ್ರಸಾರ ಮಾಡಲಾಗಿದೆ. ವಿಡಿಯೋದಲ್ಲಿ ಇದು 2.5 ಲಕ್ಷ ಕೋಟಿ ರೂ.ಗಳ ಹಗರಣ ಎಂದು ಸ್ಪಷ್ಟವಾಗಿ ಹೇಳಲಾಗಿದ್ದು, ಅವರದೇ ಪಕ್ಷದವರೂ ಬೆಂಬಲಿಸುತ್ತಿಲ್ಲ ಎಂದು ಉಲ್ಲೇಖಿಸಲಾಗಿದೆ” ಎಂದು ಹೇಳಿದರು.

ನಾಯಕರ ಜತೆ ಚರ್ಚಿಸಿದ ಬಳಿಕ ಈ ಪ್ರಕರಣವನ್ನು ಬಯಲಿಗೆಳೆದಿದ್ದು, ಪ್ರಭಾವಿ ಮುಚ್ಚಿಹಾಕಿರುವಂತಿದೆ ಎಂದು ಅನ್ವರ್ ಮಾಣಿಪ್ಪಾಡಿ ಹೇಳಿದ್ದಾರೆ.

“ಅನ್ವರ್ ಮಾಣಿಪ್ಪಾಡಿ ಅವರು ಸಂಘದ ಬೆಂಬಲವನ್ನು ಹೊಂದಿದ್ದಾರೆ ಮತ್ತು ಈ ಸಮಸ್ಯೆಯನ್ನು ಅದರ ತಾರ್ಕಿಕ ತೀರ್ಮಾನಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು. ಇತ್ಯರ್ಥಕ್ಕಾಗಿ ವಿಜಯೇಂದ್ರ ಅವರನ್ನು ಸಂಪರ್ಕಿಸಿದರು ಮತ್ತು ನಿರ್ದಿಷ್ಟ ಮೊತ್ತವನ್ನು ನೀಡಿದರು ಎಂದು ಅವರು ಉಲ್ಲೇಖಿಸಿದ್ದಾರೆ. ಬಿಜೆಪಿ ಕಚೇರಿಯಲ್ಲೇ ಈ ಉತ್ತರಗಳು ಸಿಗುತ್ತವೆ; ನಮ್ಮ ಬಳಿಗೆ ಬರುವ ಅಗತ್ಯವಿಲ್ಲ. ಅನ್ವರ್ ಮಾಣಿಪ್ಪಾಡಿ ಕೂಡ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ವೈಯಕ್ತಿಕವಾಗಿ ದೊಡ್ಡ ಮೊತ್ತದ ಆಫರ್ ನೀಡಿದ್ದಾರೆ” ಎಂದು ಖರ್ಗೆ ಹೇಳಿದರು.

ನನ್ನನ್ನು ಎದುರಾದಾಗ ಅವರು ತಮ್ಮ ‘ಗನ್‌ಮ್ಯಾನ್’ನೊಂದಿಗೆ ಓಡಿಹೋದರು ಎಂದು ಅನ್ವರ್ ಮಾಣಿಪ್ಪಾಡಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ ಎಂದು ಅವರು ಹೇಳಿದರು.

“ಅನ್ವರ್ ಮಾಣಿಪ್ಪಾಡಿ ಅವರು ಪದೇಪದೆ ಈ ಆರೋಪ ಮಾಡುತ್ತಿದ್ದಾರೆ. ಇದರ ಹೊರತಾಗಿಯೂ ಕಾಂಗ್ರೆಸ್ ಸರ್ಕಾರ ಹಿಟ್ ಅಂಡ್ ರನ್ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ವಕ್ಫ್ ಆಸ್ತಿಯಲ್ಲಿ 4.5 ಲಕ್ಷ ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಅನ್ವರ್ ಮಾಣಿಪ್ಪಾಡಿ ಅವರು ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ವಿಜಯೇಂದ್ರ ಮತ್ತು ಕೆಲವು ಬಿಜೆಪಿ ನಾಯಕರು ಈ ಪ್ರಕರಣವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಪ್ರಧಾನಿ ಮತ್ತು ಇತರರಿಗೆ ಪತ್ರ ಬರೆದಿದ್ದಾರೆ. ಈ ಆರೋಪಗಳು ಪತ್ರಿಕೆಗಳಲ್ಲಿ ವ್ಯಾಪಕವಾಗಿ ವರದಿಯಾಗಿವೆ” ಎಂದು ಖರ್ಗೆ ಹೇಳಿದರು.

“ಈಗ ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವ ಬಿಜೆಪಿಯವರು ವರದಿ ಪ್ರಧಾನಿಗೆ ತಲುಪಿದರೂ ಸಿಬಿಐ ತನಿಖೆಗೆ ಏಕೆ ಆದೇಶಿಸಲಿಲ್ಲ ಎಂಬುದನ್ನು ವಿವರಿಸಬೇಕು” ಎಂದರು.

“ಅನ್ವರ್ ಮಾಣಿಪ್ಪಾಡಿ ಅವರು ಈ ಕುರಿತು ಮೂವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಸ್ತಾಪಿಸಿದಂತೆ ವಿಜಯೇಂದ್ರ ಸಾವಿರಾರು ಕೋಟಿ ಗಳಿಸಿರುವ ಕಾರಣ ₹150 ಕೋಟಿ ಬದಲು ₹1500 ಕೋಟಿ ಹಗರಣ ಆಗಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾನುವಾರ ಟೀಕಿಸಿದ್ದಾರೆ. ಈ ಲಂಚದ ಬಗ್ಗೆ ಜೋಶಿ ಅವರದೇ ನಾಯಕರ ಬಳಿ ಕೇಳಬೇಕು” ಎಂದು ಖರ್ಗೆ ಹೇಳಿದರು.

ಇದಕ್ಕೂ ಮುನ್ನ, ವಕ್ಫ್ ಹಗರಣವನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸಲಿ ಎಂದು ವಿಜಯೇಂದ್ರ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು. ವಕ್ಫ್ ಆಸ್ತಿ ಕಬಳಿಕೆ ತನಿಖೆಯನ್ನು ಹತ್ತಿಕ್ಕಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಹಿಂದಿನ ಸರ್ಕಾರದ ಅವಧಿಯಲ್ಲಿ ₹150 ಕೋಟಿ  ಮಾಜಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಲಂಚ ನೀಡಲು ಪ್ರಯತ್ನಿಸಿದ್ದರು ಎಂದು ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು.

ಆದರೆ, ವಕ್ಫ್ ಅತಿಕ್ರಮಣ ವರದಿಯನ್ನು ಹತ್ತಿಕ್ಕಲು ಕಾಂಗ್ರೆಸ್ ನಾಯಕರು ಲಂಚದ ಆಮಿಷ ಒಡ್ಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಲಂಚದ ಆರೋಪವನ್ನು ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ತಳ್ಳಿಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಸ್ಲಿಮರ ಬಗ್ಗೆ ನಿಜವಾದ ಕಾಳಜಿ ಇದ್ದರೆ ವಕ್ಫ್ ಒತ್ತುವರಿ ಕುರಿತ ವರದಿಯನ್ನು ಸಿಬಿಐಗೆ ಒಪ್ಪಿಸಲಿ ಎಂದು ಅನ್ವರ್ ಮಾಣಿಪ್ಪಾಡಿ ಹೇಳಿದರು.

ಇದನ್ನೂ ಓದಿ; ‘ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ’ಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...