Homeಮುಖಪುಟಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

ಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

- Advertisement -
- Advertisement -

ಜೂನ್ 9 ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ ಜಿತಿನ್ ಪ್ರಸಾದ್ ಕೇಂದ್ರ ಮಂತ್ರಿ ಪಿಯುಶ್ ಗೋಯಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆ ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯೆಂದು ಅನೇಕರು ಚರ್ಚಿಸುತ್ತಿದ್ದಾರೆ. ಒಂದು ಕಾಲದಲ್ಲಿ ರಾಹುಲ್ ಗಾಂಧಿಯ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮತ್ತು ಕೇಂದ್ರದಲ್ಲಿ ಎರಡು ಅವಧಿಗೆ ಮಂತ್ರಿಯಾಗಿದ್ದ ಜಿತಿನ್ ಪ್ರಸಾದ್ ಬಿಜೆಪಿಯತ್ತ ಮುಖ ಮಾಡಿದ್ದು ಯಾಕೆ ? ಜಿತಿನ್ ಪ್ರಸಾದ್ ಸೇರ್ಪಡೆಯ ಹಿಂದಿನ ಬಿಜೆಪಿಯ ರಾಜಕೀಯ ಲೆಕ್ಕಾಚಾರವೇನು?

ಜಿತಿನ್ ಪ್ರಸಾದ್ ಕಾಂಗ್ರೆಸ್ ತೊರೆಯಲು ಮುಂದಾಗಿದ್ದು ಯಾಕೆ ?

ಕಾಂಗ್ರೆಸ್ ನ ಹಿರಿಯ ನಾಯಕ ಜಿತಿನ್ ಪ್ರಸಾದ್ ಕಳೆದ ವರ್ಷ “ಪಕ್ಷದ ನಾಯಕತ್ವದಲ್ಲಿ ಅಮೂಲಾಗ್ರ ಬದಲಾವಣೆಯಾಗಬೇಕು. ನೆಹರು-ಗಾಂಧಿ ಪರಿವಾರದವರನ್ನು ಹೊರತುಪಡಿಸಿ ಇತರರು ಕಾಂಗ್ರೆಸ್ ನ ಅಧ್ಯಕ್ಷರಾಗಬೇಕು. ಸೋನಿಯಾ-ರಾಹುಲ್ ಆಪ್ತ ವಲಯವನ್ನು ಹೊರತುಪಡಿಸಿ ಇತರರಿಗೂ ಅಧಿಕಾರ ನೀಡಬೇಕೆಂದು” ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು. ಜಿತಿನ್ ಪ್ರಸಾದ್ ಜೊತೆಗೆ ಕಪಿಲ್ ಸಿಬಲ್, ಶಶಿ ತರೂರ್ ಸೇರಿ ಉಳಿದ 22 ನಾಯಕರೂ ಸಹ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು. G-23 ಎಂದು ಕರೆಯಲಾಗುವ ಈ ನಾಯಕರ ಗುಂಪನ್ನು ಕಾಂಗ್ರೆಸ್ ಹೈಕಮಾಂಡ್ ಕ್ರಮೇಣ ಕಡೆಗಣನೆ ಮಾಡುತ್ತಲೇ ಬಂದಿದೆ. ನಡುವೆ ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆ ಉಸ್ತುವಾರಿಯನ್ನು ಜಿತಿನ್ ಪ್ರಸಾದ್ ಅವರಿಗೆ ನೀಡಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಒಂದೇ ಒಂದು ಕ್ಷೇತ್ರದಲ್ಲಿ ಸಹ ಗೆಲುವು ಸಾಧಿಸಿಲ್ಲ. ಇದೆಲ್ಲ ಬೆಳವಣಿಗೆಯಿಂದ ಜಿತಿನ್ ಪ್ರಸಾದ್ ಕಾಂಗ್ರೆಸ್ ಪಕ್ಷದಲ್ಲಿ ಮೂಲೆ ಗುಂಪಾಗಿದ್ದಾರೆ. 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ರೇಣುಕಾದೇವಿ ಶರ್ಮ ವಿರುದ್ಧ ಸೋತ ನಂತರ ಜಿತಿನ್ ಪ್ರಸಾದ್ ಮತ್ತೆ ಚುನಾವಣೆಗಳಲ್ಲಿ ಗೆಲುವು ಸಾಧಿಸಿಲ್ಲ. ಮುಂದಿನ‌ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಜಿತಿನ್ ಪ್ರಸಾದ್ ಬಿಜೆಪಿಯಿಂದ ತಮ್ಮ ರಾಜಕೀಯ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ

ಇದನ್ನೂ ಓದಿ :‌ ನಮ್ಮ ವಿವಾಹಕ್ಕೆ ಕಾನೂನಿನ ಮಾನ್ಯತೆಯಿಲ್ಲ ಹಾಗಾಗಿ ವಿಚ್ಛೇದನದ ಪ್ರಶ್ನೆಯಿಲ್ಲ-  ಟಿಎಂಸಿ ಸಂಸದೆ ನುಸ್ರತ್

ಜಿತಿನ್ ಪ್ರಸಾದ್ ಸೇರ್ಪಡೆಯ ಹಿಂದಿನ ಬಿಜೆಪಿ ರಾಜಕೀಯ ಲೆಕ್ಕಾಚಾರವೇನು ?

ಜಿತಿನ್ ಪ್ರಸಾದ್ ಮೂಲತಃ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ರಾಜಕೀಯ ನಾಯಕ. ಉತ್ತರ ಪ್ರದೇಶದಲ್ಲಿ ಸರಿ ಸುಮಾರು 10% ಮತದಾರರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ.‌ 90 ರ ದಶಕದಿಂದಲೂ ಬ್ರಾಹ್ಮಣ ಸಮುದಾಯ ಬಿಜೆಪಿಯ ಬೆನ್ನಿಗೆ ನಿಂತಿದೆ. ಆದರೆ 2011 ರ ಉತ್ತರ ಪ್ರದೇಶ ಚುನಾವಣೆಯಲ್ಲಿ ರಜಪೂತ ಸಮುದಾಯಕ್ಕೆ ಸೇರಿದ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದು ಬ್ರಾಹ್ಮಣ ಸುಮುದಾಯಕ್ಕೆ ಸರಿ ಬಂದಿರಲಿಲ್ಲ. ಅದರ ನಡುವೆ ಗ್ಯಾಂಗ್‌ ಸ್ಟರ್ ವಿಕಾಸ್ ದುಬೆಯ ಹತ್ಯೆ ಕೂಡ ಬ್ರಾಹ್ಮಣ ಸಮುದಾಯ ಬಿಜೆಪಿ ಮೇಲೆ ಮುನಿಸಿಕೊಳ್ಳುವಂತೆ ಮಾಡಿತ್ತು. ಜೊತೆಗೆ ಯೋಗಿ ಆದಿತ್ಯನಾಥ್ ಮತ್ತು ರಾಜ್ಯದ ಇತರ ಬಿಜೆಪಿ ನಾಯಕರ ನಡುವಿನ ಸಂಬಂಧ ಹಳಸಿದೆ ಎಂದು ಹೇಳಲಾಗುತ್ತಿದೆ. ಪಕ್ಷದಿಂದ ದೂರ ಸರಿಯುತ್ತಿರುವ ಬಿಜೆಪಿಯ ಬ್ರಾಹ್ಮಣ ವೋಟ್ ಬ್ಯಾಂಕ್ ಅನ್ನು ಹಿಡಿದಿಡಲು ಜಿತಿನ್ ಪ್ರಸಾದ್ ಸೇರ್ಪಡೆ ಬಿಜೆಪಿಗೆ ಬಲ ತುಂಬಲಿದೆ ಎನ್ನಲಾಗಿದೆ.

ರೀಟಾ ಬಹುಗುಣ ಜೋಶಿಯವರನ್ನು ಬಿಜೆಪಿ ಹಿಂದೆ ಬ್ರಾಹ್ಮಣ ಸಮುದಾಯದ ನಾಯಕಿಯನ್ನಾಗಿ ಬಿಂಬಿಸಿತ್ತು. ಆದರೆ ರಿಟಾ ಬಹುಗುಣ ಜೋಶಿಯವರಿಂದ ಬಿಜೆಪಿಗೆ ಹೆಚ್ಚಿನ ಲಾಭವಾಗಿರಲಿಲ್ಲ. ಅವರು ಉತ್ತರ ಪ್ರದೇಶದಲ್ಲಿ ಹೆಚ್ಚು ಜನಪ್ರಿಯರಾಗಿ ಗುರುತಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈಗ ಜಿತಿನ್ ಪ್ರಸಾದ್ ಸೇರ್ಪಡೆ ಉತ್ತರ ಪ್ರದೇಶ ಬಿಜೆಪಿಗೆ ಬ್ರಾಹ್ಮಣ ಮತಬ್ಯಾಂಕ್ ಅನ್ನು ಸೆಳೆಯಲು ಒಂದಷ್ಟು ಬಲ ತುಂಬಲಿದೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ದಿನೇ ದಿನೇ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿದೆ. ಮತ್ತೊಂದೆಡೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಮಾಯವತಿಯ BSP ಕೆಲವೇ ಕೆಲವು ಕ್ಷೇತ್ರಗಳಲ್ಲಿ ಮತ್ತು ಕೆಲವು ಸಮುದಾಯಗಳಲ್ಲಿ‌ತಮ್ಮ ಪ್ರಭಾವವನ್ನು ಹೊಂದಿವೆ. 2022 ರಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಬಿಜಿಪಿ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸಿದೆ. ಕೋವಿಡ್ ನಿರ್ವಹಣೆಯಲ್ಲಿ ಯೋಗಿ ಆದಿತ್ನಾಥ್ ಸರ್ಕಾರದ ವೈಫಲ್ಯ ಪಕ್ಷಕ್ಕೆ ಹಿನ್ನಡೆಯನ್ನುಂಟು ಮಾಡುವ ಸಾದ್ಯತೆಯನ್ನು ಅರಿತ ಬಿಜೆಪಿ ಈಗ ಬೇರೆ ಬೇರೆ ಸಮುದಾಯಗಳ ನಾಯಕತ್ವವನ್ನು ಬಲಪಡಿಸಲು ಮುಂದಾಗಿದೆ. ಆ ಪ್ರಯತ್ನವಾಗಿ ಇಂದು ಜಿತಿನ್ ಪ್ರಸಾದ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದೆ. ಜಿತಿನ್ ಪ್ರಸಾದ್ ಸೇರ್ಪಡೆ ಬಿಜೆಪಿಗೆ ಎಷ್ಟು ನೆರವಾಗಲಿದೆ ಎಂದು ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ನಂತರವಷ್ಟೇ ತಿಳಿಯಬಹುದು.


ಇದನ್ನೂ ಓದಿ : ಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....