Homeಮುಖಪುಟಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

ಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

- Advertisement -
- Advertisement -

ಜೂನ್ 9 ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ ಜಿತಿನ್ ಪ್ರಸಾದ್ ಕೇಂದ್ರ ಮಂತ್ರಿ ಪಿಯುಶ್ ಗೋಯಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆ ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯೆಂದು ಅನೇಕರು ಚರ್ಚಿಸುತ್ತಿದ್ದಾರೆ. ಒಂದು ಕಾಲದಲ್ಲಿ ರಾಹುಲ್ ಗಾಂಧಿಯ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮತ್ತು ಕೇಂದ್ರದಲ್ಲಿ ಎರಡು ಅವಧಿಗೆ ಮಂತ್ರಿಯಾಗಿದ್ದ ಜಿತಿನ್ ಪ್ರಸಾದ್ ಬಿಜೆಪಿಯತ್ತ ಮುಖ ಮಾಡಿದ್ದು ಯಾಕೆ ? ಜಿತಿನ್ ಪ್ರಸಾದ್ ಸೇರ್ಪಡೆಯ ಹಿಂದಿನ ಬಿಜೆಪಿಯ ರಾಜಕೀಯ ಲೆಕ್ಕಾಚಾರವೇನು?

ಜಿತಿನ್ ಪ್ರಸಾದ್ ಕಾಂಗ್ರೆಸ್ ತೊರೆಯಲು ಮುಂದಾಗಿದ್ದು ಯಾಕೆ ?

ಕಾಂಗ್ರೆಸ್ ನ ಹಿರಿಯ ನಾಯಕ ಜಿತಿನ್ ಪ್ರಸಾದ್ ಕಳೆದ ವರ್ಷ “ಪಕ್ಷದ ನಾಯಕತ್ವದಲ್ಲಿ ಅಮೂಲಾಗ್ರ ಬದಲಾವಣೆಯಾಗಬೇಕು. ನೆಹರು-ಗಾಂಧಿ ಪರಿವಾರದವರನ್ನು ಹೊರತುಪಡಿಸಿ ಇತರರು ಕಾಂಗ್ರೆಸ್ ನ ಅಧ್ಯಕ್ಷರಾಗಬೇಕು. ಸೋನಿಯಾ-ರಾಹುಲ್ ಆಪ್ತ ವಲಯವನ್ನು ಹೊರತುಪಡಿಸಿ ಇತರರಿಗೂ ಅಧಿಕಾರ ನೀಡಬೇಕೆಂದು” ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು. ಜಿತಿನ್ ಪ್ರಸಾದ್ ಜೊತೆಗೆ ಕಪಿಲ್ ಸಿಬಲ್, ಶಶಿ ತರೂರ್ ಸೇರಿ ಉಳಿದ 22 ನಾಯಕರೂ ಸಹ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು. G-23 ಎಂದು ಕರೆಯಲಾಗುವ ಈ ನಾಯಕರ ಗುಂಪನ್ನು ಕಾಂಗ್ರೆಸ್ ಹೈಕಮಾಂಡ್ ಕ್ರಮೇಣ ಕಡೆಗಣನೆ ಮಾಡುತ್ತಲೇ ಬಂದಿದೆ. ನಡುವೆ ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆ ಉಸ್ತುವಾರಿಯನ್ನು ಜಿತಿನ್ ಪ್ರಸಾದ್ ಅವರಿಗೆ ನೀಡಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಒಂದೇ ಒಂದು ಕ್ಷೇತ್ರದಲ್ಲಿ ಸಹ ಗೆಲುವು ಸಾಧಿಸಿಲ್ಲ. ಇದೆಲ್ಲ ಬೆಳವಣಿಗೆಯಿಂದ ಜಿತಿನ್ ಪ್ರಸಾದ್ ಕಾಂಗ್ರೆಸ್ ಪಕ್ಷದಲ್ಲಿ ಮೂಲೆ ಗುಂಪಾಗಿದ್ದಾರೆ. 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ರೇಣುಕಾದೇವಿ ಶರ್ಮ ವಿರುದ್ಧ ಸೋತ ನಂತರ ಜಿತಿನ್ ಪ್ರಸಾದ್ ಮತ್ತೆ ಚುನಾವಣೆಗಳಲ್ಲಿ ಗೆಲುವು ಸಾಧಿಸಿಲ್ಲ. ಮುಂದಿನ‌ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಜಿತಿನ್ ಪ್ರಸಾದ್ ಬಿಜೆಪಿಯಿಂದ ತಮ್ಮ ರಾಜಕೀಯ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ

ಇದನ್ನೂ ಓದಿ :‌ ನಮ್ಮ ವಿವಾಹಕ್ಕೆ ಕಾನೂನಿನ ಮಾನ್ಯತೆಯಿಲ್ಲ ಹಾಗಾಗಿ ವಿಚ್ಛೇದನದ ಪ್ರಶ್ನೆಯಿಲ್ಲ-  ಟಿಎಂಸಿ ಸಂಸದೆ ನುಸ್ರತ್

ಜಿತಿನ್ ಪ್ರಸಾದ್ ಸೇರ್ಪಡೆಯ ಹಿಂದಿನ ಬಿಜೆಪಿ ರಾಜಕೀಯ ಲೆಕ್ಕಾಚಾರವೇನು ?

ಜಿತಿನ್ ಪ್ರಸಾದ್ ಮೂಲತಃ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ರಾಜಕೀಯ ನಾಯಕ. ಉತ್ತರ ಪ್ರದೇಶದಲ್ಲಿ ಸರಿ ಸುಮಾರು 10% ಮತದಾರರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ.‌ 90 ರ ದಶಕದಿಂದಲೂ ಬ್ರಾಹ್ಮಣ ಸಮುದಾಯ ಬಿಜೆಪಿಯ ಬೆನ್ನಿಗೆ ನಿಂತಿದೆ. ಆದರೆ 2011 ರ ಉತ್ತರ ಪ್ರದೇಶ ಚುನಾವಣೆಯಲ್ಲಿ ರಜಪೂತ ಸಮುದಾಯಕ್ಕೆ ಸೇರಿದ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದು ಬ್ರಾಹ್ಮಣ ಸುಮುದಾಯಕ್ಕೆ ಸರಿ ಬಂದಿರಲಿಲ್ಲ. ಅದರ ನಡುವೆ ಗ್ಯಾಂಗ್‌ ಸ್ಟರ್ ವಿಕಾಸ್ ದುಬೆಯ ಹತ್ಯೆ ಕೂಡ ಬ್ರಾಹ್ಮಣ ಸಮುದಾಯ ಬಿಜೆಪಿ ಮೇಲೆ ಮುನಿಸಿಕೊಳ್ಳುವಂತೆ ಮಾಡಿತ್ತು. ಜೊತೆಗೆ ಯೋಗಿ ಆದಿತ್ಯನಾಥ್ ಮತ್ತು ರಾಜ್ಯದ ಇತರ ಬಿಜೆಪಿ ನಾಯಕರ ನಡುವಿನ ಸಂಬಂಧ ಹಳಸಿದೆ ಎಂದು ಹೇಳಲಾಗುತ್ತಿದೆ. ಪಕ್ಷದಿಂದ ದೂರ ಸರಿಯುತ್ತಿರುವ ಬಿಜೆಪಿಯ ಬ್ರಾಹ್ಮಣ ವೋಟ್ ಬ್ಯಾಂಕ್ ಅನ್ನು ಹಿಡಿದಿಡಲು ಜಿತಿನ್ ಪ್ರಸಾದ್ ಸೇರ್ಪಡೆ ಬಿಜೆಪಿಗೆ ಬಲ ತುಂಬಲಿದೆ ಎನ್ನಲಾಗಿದೆ.

ರೀಟಾ ಬಹುಗುಣ ಜೋಶಿಯವರನ್ನು ಬಿಜೆಪಿ ಹಿಂದೆ ಬ್ರಾಹ್ಮಣ ಸಮುದಾಯದ ನಾಯಕಿಯನ್ನಾಗಿ ಬಿಂಬಿಸಿತ್ತು. ಆದರೆ ರಿಟಾ ಬಹುಗುಣ ಜೋಶಿಯವರಿಂದ ಬಿಜೆಪಿಗೆ ಹೆಚ್ಚಿನ ಲಾಭವಾಗಿರಲಿಲ್ಲ. ಅವರು ಉತ್ತರ ಪ್ರದೇಶದಲ್ಲಿ ಹೆಚ್ಚು ಜನಪ್ರಿಯರಾಗಿ ಗುರುತಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈಗ ಜಿತಿನ್ ಪ್ರಸಾದ್ ಸೇರ್ಪಡೆ ಉತ್ತರ ಪ್ರದೇಶ ಬಿಜೆಪಿಗೆ ಬ್ರಾಹ್ಮಣ ಮತಬ್ಯಾಂಕ್ ಅನ್ನು ಸೆಳೆಯಲು ಒಂದಷ್ಟು ಬಲ ತುಂಬಲಿದೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ದಿನೇ ದಿನೇ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿದೆ. ಮತ್ತೊಂದೆಡೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಮಾಯವತಿಯ BSP ಕೆಲವೇ ಕೆಲವು ಕ್ಷೇತ್ರಗಳಲ್ಲಿ ಮತ್ತು ಕೆಲವು ಸಮುದಾಯಗಳಲ್ಲಿ‌ತಮ್ಮ ಪ್ರಭಾವವನ್ನು ಹೊಂದಿವೆ. 2022 ರಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಬಿಜಿಪಿ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸಿದೆ. ಕೋವಿಡ್ ನಿರ್ವಹಣೆಯಲ್ಲಿ ಯೋಗಿ ಆದಿತ್ನಾಥ್ ಸರ್ಕಾರದ ವೈಫಲ್ಯ ಪಕ್ಷಕ್ಕೆ ಹಿನ್ನಡೆಯನ್ನುಂಟು ಮಾಡುವ ಸಾದ್ಯತೆಯನ್ನು ಅರಿತ ಬಿಜೆಪಿ ಈಗ ಬೇರೆ ಬೇರೆ ಸಮುದಾಯಗಳ ನಾಯಕತ್ವವನ್ನು ಬಲಪಡಿಸಲು ಮುಂದಾಗಿದೆ. ಆ ಪ್ರಯತ್ನವಾಗಿ ಇಂದು ಜಿತಿನ್ ಪ್ರಸಾದ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದೆ. ಜಿತಿನ್ ಪ್ರಸಾದ್ ಸೇರ್ಪಡೆ ಬಿಜೆಪಿಗೆ ಎಷ್ಟು ನೆರವಾಗಲಿದೆ ಎಂದು ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ನಂತರವಷ್ಟೇ ತಿಳಿಯಬಹುದು.


ಇದನ್ನೂ ಓದಿ : ಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...