Homeಮುಖಪುಟಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

ಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

- Advertisement -
- Advertisement -

ಜೂನ್ 9 ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ ಜಿತಿನ್ ಪ್ರಸಾದ್ ಕೇಂದ್ರ ಮಂತ್ರಿ ಪಿಯುಶ್ ಗೋಯಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆ ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯೆಂದು ಅನೇಕರು ಚರ್ಚಿಸುತ್ತಿದ್ದಾರೆ. ಒಂದು ಕಾಲದಲ್ಲಿ ರಾಹುಲ್ ಗಾಂಧಿಯ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮತ್ತು ಕೇಂದ್ರದಲ್ಲಿ ಎರಡು ಅವಧಿಗೆ ಮಂತ್ರಿಯಾಗಿದ್ದ ಜಿತಿನ್ ಪ್ರಸಾದ್ ಬಿಜೆಪಿಯತ್ತ ಮುಖ ಮಾಡಿದ್ದು ಯಾಕೆ ? ಜಿತಿನ್ ಪ್ರಸಾದ್ ಸೇರ್ಪಡೆಯ ಹಿಂದಿನ ಬಿಜೆಪಿಯ ರಾಜಕೀಯ ಲೆಕ್ಕಾಚಾರವೇನು?

ಜಿತಿನ್ ಪ್ರಸಾದ್ ಕಾಂಗ್ರೆಸ್ ತೊರೆಯಲು ಮುಂದಾಗಿದ್ದು ಯಾಕೆ ?

ಕಾಂಗ್ರೆಸ್ ನ ಹಿರಿಯ ನಾಯಕ ಜಿತಿನ್ ಪ್ರಸಾದ್ ಕಳೆದ ವರ್ಷ “ಪಕ್ಷದ ನಾಯಕತ್ವದಲ್ಲಿ ಅಮೂಲಾಗ್ರ ಬದಲಾವಣೆಯಾಗಬೇಕು. ನೆಹರು-ಗಾಂಧಿ ಪರಿವಾರದವರನ್ನು ಹೊರತುಪಡಿಸಿ ಇತರರು ಕಾಂಗ್ರೆಸ್ ನ ಅಧ್ಯಕ್ಷರಾಗಬೇಕು. ಸೋನಿಯಾ-ರಾಹುಲ್ ಆಪ್ತ ವಲಯವನ್ನು ಹೊರತುಪಡಿಸಿ ಇತರರಿಗೂ ಅಧಿಕಾರ ನೀಡಬೇಕೆಂದು” ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು. ಜಿತಿನ್ ಪ್ರಸಾದ್ ಜೊತೆಗೆ ಕಪಿಲ್ ಸಿಬಲ್, ಶಶಿ ತರೂರ್ ಸೇರಿ ಉಳಿದ 22 ನಾಯಕರೂ ಸಹ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು. G-23 ಎಂದು ಕರೆಯಲಾಗುವ ಈ ನಾಯಕರ ಗುಂಪನ್ನು ಕಾಂಗ್ರೆಸ್ ಹೈಕಮಾಂಡ್ ಕ್ರಮೇಣ ಕಡೆಗಣನೆ ಮಾಡುತ್ತಲೇ ಬಂದಿದೆ. ನಡುವೆ ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆ ಉಸ್ತುವಾರಿಯನ್ನು ಜಿತಿನ್ ಪ್ರಸಾದ್ ಅವರಿಗೆ ನೀಡಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಒಂದೇ ಒಂದು ಕ್ಷೇತ್ರದಲ್ಲಿ ಸಹ ಗೆಲುವು ಸಾಧಿಸಿಲ್ಲ. ಇದೆಲ್ಲ ಬೆಳವಣಿಗೆಯಿಂದ ಜಿತಿನ್ ಪ್ರಸಾದ್ ಕಾಂಗ್ರೆಸ್ ಪಕ್ಷದಲ್ಲಿ ಮೂಲೆ ಗುಂಪಾಗಿದ್ದಾರೆ. 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ರೇಣುಕಾದೇವಿ ಶರ್ಮ ವಿರುದ್ಧ ಸೋತ ನಂತರ ಜಿತಿನ್ ಪ್ರಸಾದ್ ಮತ್ತೆ ಚುನಾವಣೆಗಳಲ್ಲಿ ಗೆಲುವು ಸಾಧಿಸಿಲ್ಲ. ಮುಂದಿನ‌ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಜಿತಿನ್ ಪ್ರಸಾದ್ ಬಿಜೆಪಿಯಿಂದ ತಮ್ಮ ರಾಜಕೀಯ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ

ಇದನ್ನೂ ಓದಿ :‌ ನಮ್ಮ ವಿವಾಹಕ್ಕೆ ಕಾನೂನಿನ ಮಾನ್ಯತೆಯಿಲ್ಲ ಹಾಗಾಗಿ ವಿಚ್ಛೇದನದ ಪ್ರಶ್ನೆಯಿಲ್ಲ-  ಟಿಎಂಸಿ ಸಂಸದೆ ನುಸ್ರತ್

ಜಿತಿನ್ ಪ್ರಸಾದ್ ಸೇರ್ಪಡೆಯ ಹಿಂದಿನ ಬಿಜೆಪಿ ರಾಜಕೀಯ ಲೆಕ್ಕಾಚಾರವೇನು ?

ಜಿತಿನ್ ಪ್ರಸಾದ್ ಮೂಲತಃ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ರಾಜಕೀಯ ನಾಯಕ. ಉತ್ತರ ಪ್ರದೇಶದಲ್ಲಿ ಸರಿ ಸುಮಾರು 10% ಮತದಾರರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ.‌ 90 ರ ದಶಕದಿಂದಲೂ ಬ್ರಾಹ್ಮಣ ಸಮುದಾಯ ಬಿಜೆಪಿಯ ಬೆನ್ನಿಗೆ ನಿಂತಿದೆ. ಆದರೆ 2011 ರ ಉತ್ತರ ಪ್ರದೇಶ ಚುನಾವಣೆಯಲ್ಲಿ ರಜಪೂತ ಸಮುದಾಯಕ್ಕೆ ಸೇರಿದ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದು ಬ್ರಾಹ್ಮಣ ಸುಮುದಾಯಕ್ಕೆ ಸರಿ ಬಂದಿರಲಿಲ್ಲ. ಅದರ ನಡುವೆ ಗ್ಯಾಂಗ್‌ ಸ್ಟರ್ ವಿಕಾಸ್ ದುಬೆಯ ಹತ್ಯೆ ಕೂಡ ಬ್ರಾಹ್ಮಣ ಸಮುದಾಯ ಬಿಜೆಪಿ ಮೇಲೆ ಮುನಿಸಿಕೊಳ್ಳುವಂತೆ ಮಾಡಿತ್ತು. ಜೊತೆಗೆ ಯೋಗಿ ಆದಿತ್ಯನಾಥ್ ಮತ್ತು ರಾಜ್ಯದ ಇತರ ಬಿಜೆಪಿ ನಾಯಕರ ನಡುವಿನ ಸಂಬಂಧ ಹಳಸಿದೆ ಎಂದು ಹೇಳಲಾಗುತ್ತಿದೆ. ಪಕ್ಷದಿಂದ ದೂರ ಸರಿಯುತ್ತಿರುವ ಬಿಜೆಪಿಯ ಬ್ರಾಹ್ಮಣ ವೋಟ್ ಬ್ಯಾಂಕ್ ಅನ್ನು ಹಿಡಿದಿಡಲು ಜಿತಿನ್ ಪ್ರಸಾದ್ ಸೇರ್ಪಡೆ ಬಿಜೆಪಿಗೆ ಬಲ ತುಂಬಲಿದೆ ಎನ್ನಲಾಗಿದೆ.

ರೀಟಾ ಬಹುಗುಣ ಜೋಶಿಯವರನ್ನು ಬಿಜೆಪಿ ಹಿಂದೆ ಬ್ರಾಹ್ಮಣ ಸಮುದಾಯದ ನಾಯಕಿಯನ್ನಾಗಿ ಬಿಂಬಿಸಿತ್ತು. ಆದರೆ ರಿಟಾ ಬಹುಗುಣ ಜೋಶಿಯವರಿಂದ ಬಿಜೆಪಿಗೆ ಹೆಚ್ಚಿನ ಲಾಭವಾಗಿರಲಿಲ್ಲ. ಅವರು ಉತ್ತರ ಪ್ರದೇಶದಲ್ಲಿ ಹೆಚ್ಚು ಜನಪ್ರಿಯರಾಗಿ ಗುರುತಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈಗ ಜಿತಿನ್ ಪ್ರಸಾದ್ ಸೇರ್ಪಡೆ ಉತ್ತರ ಪ್ರದೇಶ ಬಿಜೆಪಿಗೆ ಬ್ರಾಹ್ಮಣ ಮತಬ್ಯಾಂಕ್ ಅನ್ನು ಸೆಳೆಯಲು ಒಂದಷ್ಟು ಬಲ ತುಂಬಲಿದೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ದಿನೇ ದಿನೇ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿದೆ. ಮತ್ತೊಂದೆಡೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಮಾಯವತಿಯ BSP ಕೆಲವೇ ಕೆಲವು ಕ್ಷೇತ್ರಗಳಲ್ಲಿ ಮತ್ತು ಕೆಲವು ಸಮುದಾಯಗಳಲ್ಲಿ‌ತಮ್ಮ ಪ್ರಭಾವವನ್ನು ಹೊಂದಿವೆ. 2022 ರಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಬಿಜಿಪಿ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸಿದೆ. ಕೋವಿಡ್ ನಿರ್ವಹಣೆಯಲ್ಲಿ ಯೋಗಿ ಆದಿತ್ನಾಥ್ ಸರ್ಕಾರದ ವೈಫಲ್ಯ ಪಕ್ಷಕ್ಕೆ ಹಿನ್ನಡೆಯನ್ನುಂಟು ಮಾಡುವ ಸಾದ್ಯತೆಯನ್ನು ಅರಿತ ಬಿಜೆಪಿ ಈಗ ಬೇರೆ ಬೇರೆ ಸಮುದಾಯಗಳ ನಾಯಕತ್ವವನ್ನು ಬಲಪಡಿಸಲು ಮುಂದಾಗಿದೆ. ಆ ಪ್ರಯತ್ನವಾಗಿ ಇಂದು ಜಿತಿನ್ ಪ್ರಸಾದ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದೆ. ಜಿತಿನ್ ಪ್ರಸಾದ್ ಸೇರ್ಪಡೆ ಬಿಜೆಪಿಗೆ ಎಷ್ಟು ನೆರವಾಗಲಿದೆ ಎಂದು ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ನಂತರವಷ್ಟೇ ತಿಳಿಯಬಹುದು.


ಇದನ್ನೂ ಓದಿ : ಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...