Homeಮುಖಪುಟಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

ಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

- Advertisement -
- Advertisement -

ಜೂನ್ 9 ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ ಜಿತಿನ್ ಪ್ರಸಾದ್ ಕೇಂದ್ರ ಮಂತ್ರಿ ಪಿಯುಶ್ ಗೋಯಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆ ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯೆಂದು ಅನೇಕರು ಚರ್ಚಿಸುತ್ತಿದ್ದಾರೆ. ಒಂದು ಕಾಲದಲ್ಲಿ ರಾಹುಲ್ ಗಾಂಧಿಯ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮತ್ತು ಕೇಂದ್ರದಲ್ಲಿ ಎರಡು ಅವಧಿಗೆ ಮಂತ್ರಿಯಾಗಿದ್ದ ಜಿತಿನ್ ಪ್ರಸಾದ್ ಬಿಜೆಪಿಯತ್ತ ಮುಖ ಮಾಡಿದ್ದು ಯಾಕೆ ? ಜಿತಿನ್ ಪ್ರಸಾದ್ ಸೇರ್ಪಡೆಯ ಹಿಂದಿನ ಬಿಜೆಪಿಯ ರಾಜಕೀಯ ಲೆಕ್ಕಾಚಾರವೇನು?

ಜಿತಿನ್ ಪ್ರಸಾದ್ ಕಾಂಗ್ರೆಸ್ ತೊರೆಯಲು ಮುಂದಾಗಿದ್ದು ಯಾಕೆ ?

ಕಾಂಗ್ರೆಸ್ ನ ಹಿರಿಯ ನಾಯಕ ಜಿತಿನ್ ಪ್ರಸಾದ್ ಕಳೆದ ವರ್ಷ “ಪಕ್ಷದ ನಾಯಕತ್ವದಲ್ಲಿ ಅಮೂಲಾಗ್ರ ಬದಲಾವಣೆಯಾಗಬೇಕು. ನೆಹರು-ಗಾಂಧಿ ಪರಿವಾರದವರನ್ನು ಹೊರತುಪಡಿಸಿ ಇತರರು ಕಾಂಗ್ರೆಸ್ ನ ಅಧ್ಯಕ್ಷರಾಗಬೇಕು. ಸೋನಿಯಾ-ರಾಹುಲ್ ಆಪ್ತ ವಲಯವನ್ನು ಹೊರತುಪಡಿಸಿ ಇತರರಿಗೂ ಅಧಿಕಾರ ನೀಡಬೇಕೆಂದು” ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು. ಜಿತಿನ್ ಪ್ರಸಾದ್ ಜೊತೆಗೆ ಕಪಿಲ್ ಸಿಬಲ್, ಶಶಿ ತರೂರ್ ಸೇರಿ ಉಳಿದ 22 ನಾಯಕರೂ ಸಹ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು. G-23 ಎಂದು ಕರೆಯಲಾಗುವ ಈ ನಾಯಕರ ಗುಂಪನ್ನು ಕಾಂಗ್ರೆಸ್ ಹೈಕಮಾಂಡ್ ಕ್ರಮೇಣ ಕಡೆಗಣನೆ ಮಾಡುತ್ತಲೇ ಬಂದಿದೆ. ನಡುವೆ ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆ ಉಸ್ತುವಾರಿಯನ್ನು ಜಿತಿನ್ ಪ್ರಸಾದ್ ಅವರಿಗೆ ನೀಡಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಒಂದೇ ಒಂದು ಕ್ಷೇತ್ರದಲ್ಲಿ ಸಹ ಗೆಲುವು ಸಾಧಿಸಿಲ್ಲ. ಇದೆಲ್ಲ ಬೆಳವಣಿಗೆಯಿಂದ ಜಿತಿನ್ ಪ್ರಸಾದ್ ಕಾಂಗ್ರೆಸ್ ಪಕ್ಷದಲ್ಲಿ ಮೂಲೆ ಗುಂಪಾಗಿದ್ದಾರೆ. 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ರೇಣುಕಾದೇವಿ ಶರ್ಮ ವಿರುದ್ಧ ಸೋತ ನಂತರ ಜಿತಿನ್ ಪ್ರಸಾದ್ ಮತ್ತೆ ಚುನಾವಣೆಗಳಲ್ಲಿ ಗೆಲುವು ಸಾಧಿಸಿಲ್ಲ. ಮುಂದಿನ‌ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಜಿತಿನ್ ಪ್ರಸಾದ್ ಬಿಜೆಪಿಯಿಂದ ತಮ್ಮ ರಾಜಕೀಯ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ

ಇದನ್ನೂ ಓದಿ :‌ ನಮ್ಮ ವಿವಾಹಕ್ಕೆ ಕಾನೂನಿನ ಮಾನ್ಯತೆಯಿಲ್ಲ ಹಾಗಾಗಿ ವಿಚ್ಛೇದನದ ಪ್ರಶ್ನೆಯಿಲ್ಲ-  ಟಿಎಂಸಿ ಸಂಸದೆ ನುಸ್ರತ್

ಜಿತಿನ್ ಪ್ರಸಾದ್ ಸೇರ್ಪಡೆಯ ಹಿಂದಿನ ಬಿಜೆಪಿ ರಾಜಕೀಯ ಲೆಕ್ಕಾಚಾರವೇನು ?

ಜಿತಿನ್ ಪ್ರಸಾದ್ ಮೂಲತಃ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ರಾಜಕೀಯ ನಾಯಕ. ಉತ್ತರ ಪ್ರದೇಶದಲ್ಲಿ ಸರಿ ಸುಮಾರು 10% ಮತದಾರರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ.‌ 90 ರ ದಶಕದಿಂದಲೂ ಬ್ರಾಹ್ಮಣ ಸಮುದಾಯ ಬಿಜೆಪಿಯ ಬೆನ್ನಿಗೆ ನಿಂತಿದೆ. ಆದರೆ 2011 ರ ಉತ್ತರ ಪ್ರದೇಶ ಚುನಾವಣೆಯಲ್ಲಿ ರಜಪೂತ ಸಮುದಾಯಕ್ಕೆ ಸೇರಿದ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದು ಬ್ರಾಹ್ಮಣ ಸುಮುದಾಯಕ್ಕೆ ಸರಿ ಬಂದಿರಲಿಲ್ಲ. ಅದರ ನಡುವೆ ಗ್ಯಾಂಗ್‌ ಸ್ಟರ್ ವಿಕಾಸ್ ದುಬೆಯ ಹತ್ಯೆ ಕೂಡ ಬ್ರಾಹ್ಮಣ ಸಮುದಾಯ ಬಿಜೆಪಿ ಮೇಲೆ ಮುನಿಸಿಕೊಳ್ಳುವಂತೆ ಮಾಡಿತ್ತು. ಜೊತೆಗೆ ಯೋಗಿ ಆದಿತ್ಯನಾಥ್ ಮತ್ತು ರಾಜ್ಯದ ಇತರ ಬಿಜೆಪಿ ನಾಯಕರ ನಡುವಿನ ಸಂಬಂಧ ಹಳಸಿದೆ ಎಂದು ಹೇಳಲಾಗುತ್ತಿದೆ. ಪಕ್ಷದಿಂದ ದೂರ ಸರಿಯುತ್ತಿರುವ ಬಿಜೆಪಿಯ ಬ್ರಾಹ್ಮಣ ವೋಟ್ ಬ್ಯಾಂಕ್ ಅನ್ನು ಹಿಡಿದಿಡಲು ಜಿತಿನ್ ಪ್ರಸಾದ್ ಸೇರ್ಪಡೆ ಬಿಜೆಪಿಗೆ ಬಲ ತುಂಬಲಿದೆ ಎನ್ನಲಾಗಿದೆ.

ರೀಟಾ ಬಹುಗುಣ ಜೋಶಿಯವರನ್ನು ಬಿಜೆಪಿ ಹಿಂದೆ ಬ್ರಾಹ್ಮಣ ಸಮುದಾಯದ ನಾಯಕಿಯನ್ನಾಗಿ ಬಿಂಬಿಸಿತ್ತು. ಆದರೆ ರಿಟಾ ಬಹುಗುಣ ಜೋಶಿಯವರಿಂದ ಬಿಜೆಪಿಗೆ ಹೆಚ್ಚಿನ ಲಾಭವಾಗಿರಲಿಲ್ಲ. ಅವರು ಉತ್ತರ ಪ್ರದೇಶದಲ್ಲಿ ಹೆಚ್ಚು ಜನಪ್ರಿಯರಾಗಿ ಗುರುತಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈಗ ಜಿತಿನ್ ಪ್ರಸಾದ್ ಸೇರ್ಪಡೆ ಉತ್ತರ ಪ್ರದೇಶ ಬಿಜೆಪಿಗೆ ಬ್ರಾಹ್ಮಣ ಮತಬ್ಯಾಂಕ್ ಅನ್ನು ಸೆಳೆಯಲು ಒಂದಷ್ಟು ಬಲ ತುಂಬಲಿದೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ದಿನೇ ದಿನೇ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿದೆ. ಮತ್ತೊಂದೆಡೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಮಾಯವತಿಯ BSP ಕೆಲವೇ ಕೆಲವು ಕ್ಷೇತ್ರಗಳಲ್ಲಿ ಮತ್ತು ಕೆಲವು ಸಮುದಾಯಗಳಲ್ಲಿ‌ತಮ್ಮ ಪ್ರಭಾವವನ್ನು ಹೊಂದಿವೆ. 2022 ರಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಬಿಜಿಪಿ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸಿದೆ. ಕೋವಿಡ್ ನಿರ್ವಹಣೆಯಲ್ಲಿ ಯೋಗಿ ಆದಿತ್ನಾಥ್ ಸರ್ಕಾರದ ವೈಫಲ್ಯ ಪಕ್ಷಕ್ಕೆ ಹಿನ್ನಡೆಯನ್ನುಂಟು ಮಾಡುವ ಸಾದ್ಯತೆಯನ್ನು ಅರಿತ ಬಿಜೆಪಿ ಈಗ ಬೇರೆ ಬೇರೆ ಸಮುದಾಯಗಳ ನಾಯಕತ್ವವನ್ನು ಬಲಪಡಿಸಲು ಮುಂದಾಗಿದೆ. ಆ ಪ್ರಯತ್ನವಾಗಿ ಇಂದು ಜಿತಿನ್ ಪ್ರಸಾದ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದೆ. ಜಿತಿನ್ ಪ್ರಸಾದ್ ಸೇರ್ಪಡೆ ಬಿಜೆಪಿಗೆ ಎಷ್ಟು ನೆರವಾಗಲಿದೆ ಎಂದು ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ನಂತರವಷ್ಟೇ ತಿಳಿಯಬಹುದು.


ಇದನ್ನೂ ಓದಿ : ಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...