Homeಕರ್ನಾಟಕಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ; ವಿಧಾನಸೌಧವು 'ವ್ಯಾಪಾರಸೌಧ' ಆಗಿದೆ ಎಂದ ಕಾಂಗ್ರೆಸ್

ಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ; ವಿಧಾನಸೌಧವು ‘ವ್ಯಾಪಾರಸೌಧ’ ಆಗಿದೆ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ರಾಜಕೀಯ ಮುಖಂಡರ ನಡುವಿನ ವಾಕ್ಸಮರವೂ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದೆ.

ಎಐಸಿಸಿ ವಕ್ತಾರ ಪವನ್ ಖೇರಾ ಅವರು ಇಂದು (ಮೇ.5) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತ ರೇಟ್​ ಕಾರ್ಡ್​ ಬಿಡುಗಡೆ ಮಾಡಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು ”ಬಿಜೆಪಿಯು ರಾಜ್ಯವನ್ನು ರಾಜಕೀಯ ಪ್ರವಾಸದ ಕೇಂದ್ರ ಮಾಡಿಕೊಂಡಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ರಾಜ್ಯದಲ್ಲಿ 40% ಅಲ್ಲ 50% ಕಮಿಷನ್ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ಕಮಿಷನ್​, ಮಂತ್ರಿ ಹುದ್ದೆಗೆ 500 ಕೋಟಿ, ವರ್ಗಾವಣೆಗೆ 5-15 ಕೋಟಿ, ಇಂಜಿನಿಯರ್​ ಹುದ್ದೆಗೆ 1ರಿಂದ 5 ಕೋಟಿ ನೀಡಬೇಕು” ಎಂದು ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

”ಬಿಜೆಪಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಾರಂಭ ಮಾಡಿದೆ. ಆದರೆ, ಕರ್ನಾಟಕದ ಜನ ಮಾತ್ರ ಎಲ್ಲ ವಿಚಾರಗಳನ್ನು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆಯಿಂದ ಜನರಿಗೆ ಬಿಜೆಪಿಯವರ ಬಗ್ಗೆ ಸಿಟ್ಟಿದೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಗ್ಗೆ ಜನರು ಆಕ್ರೋಶಗೊಂಡಿದ್ದಾರೆ. ಇದೇ ಸಿಟ್ಟು ಬಿಜೆಪಿ ವಿರುದ್ದ ಜನರು ಓಟು ಒತ್ತುವಂತೆ ಮಾಡುತ್ತದೆ. ಬಿಜೆಪಿ ಮತ್ತೆ ಬಂದರೆ 40% ಕಮಿಷನ್ ಭ್ರಷ್ಟಾಚಾರ 80% ಆಗುತ್ತದೆ ಎಂಬ ಭಯ ಆತಂಕ ಜನರಿಗೆ ಇದೆ. ಇದೇ ಭಾವನೆಗಳು ಬಿಜೆಪಿಗೆ ಹೊಡೆತ ಕೊಡಲಿದೆ” ಎಂದರು.

ಇನ್ನು ಈ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”2019ರಿಂದ 2023ರ ರವರೆಗೆ ಆಡಳಿತದುದ್ದಕ್ಕೂ ಲೂಟಿಯನ್ನೇ ಪರಮದೈವ ಎಂದುಕೊಂಡು ರಾಜ್ಯದ ಖಜಾನೆಯನ್ನು ಬರಿದು ಮಾಡಿದ ಬಿಜೆಪಿ ಸರ್ಕಾರ ಕನ್ನಡಿಗರನ್ನು, ಕರ್ನಾಟಕದ ಅಭಿವೃದ್ಧಿಯನ್ನು ಬೀದಿಪಾಲು ಮಾಡಿದೆ. ಮತ ಹಾಕುವ ಮುನ್ನ ಕರ್ನಾಟಕದ ಭವಿಷ್ಯವನ್ನು ಪರಿಗಣಿಸಿ” ಎಂದು ಕಾಂಗ್ರೆಸ್‌ ಟ್ವೀಟ್ ಮಾಡಿದೆ.

ಕಳೆದ ನಾಲ್ಕು ವರ್ಷಗಳಲ್ಲಿ 40 ಪರ್ಸೆಂಟ್ ಸರ್ಕಾರ ಕನ್ನಡಿಗರಿಂದ ₹1,50,000 ಕೋಟಿಗೂ ಹೆಚ್ಚು ಹಣ ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ! ಎಂದು ಕಾಂಗ್ರೆಸ್ ಮನವಿ ಮಾಡಿದೆ.

”ಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್ ಇದು.. ಆಡಳಿತದುದ್ದಕ್ಕೂ ಲೂಟಿಯನ್ನೇ ಪರಮಧೈವ ಎಂದುಕೊಂಡು ರಾಜ್ಯದ ಖಜಾನೆಯನ್ನು ಬರಿದು ಮಾಡಿದ ಸರ್ಕಾರ ಕನ್ನಡಿಗರನ್ನು, ಕರ್ನಾಟಕದ ಅಭಿವೃದ್ಧಿಯನ್ನು ಬೀದಿಪಾಲು ಮಾಡಿದೆ. ಮತ ಹಾಕುವ ಮುನ್ನ ಕರ್ನಾಟಕದ ಭವಿಷ್ಯವನ್ನು ಪರಿಗಣಿಸಿ ಕಾಂಗ್ರೆಸ್ ಬೆಂಬಲಿಸ” ಎಂದು ಟ್ವೀಟ್ ಮಾಡಿದ್ದಾರೆ.

ಸಿಎಂ ಹುದ್ದೆಗೆ ₹2,500 ಕೋಟಿ

ಮಂತ್ರಿಗಳ ಹುದ್ದೆ ₹500 ಕೋಟಿ

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್‌ ₹5 ಕೋಟಿ –₹15 ಕೋಟಿ

ಎಂಜಿನಿಯರ್ ₹1 ಕೋಟಿ– ₹5 ಕೋಟಿ

ಸಬ್ ರಿಜಿಸ್ಟಾರ್‌ ₹ಲಕ್ಷ –₹5 ಕೋಟಿ

ಬೆಸ್ಕಾಂ ₹1 ಕೋಟಿ

ಪಿಎಸ್‌ಐ ₹80 ಲಕ್ಷ

ಸಹಾಯಕ ಪ್ರಾಧ್ಯಾಪಕ ₹50 ಲಕ್ಷ –₹70 ಲಕ್ಷ

ಉಪನ್ಯಾಸಕ ₹30 ಲಕ್ಷ –₹50 ಲಕ್ಷ

ಎಫ್‌ಡಿಎ ₹30 ಲಕ್ಷ

ಸಹಾಯಕ ಎಂಜಿನಿಯರ್ ₹30 ಲಕ್ಷ

ಬಮುಲ್ ₹25 ಲಕ್ಷ

ಪಿಡಬ್ಲ್ಯೂಡಿ ಸಹಾಯಕ ಎಂಜಿನಿಯರ್ ₹10 ಲಕ್ಷ

ಪೊಲೀಸ್ ₹10 ಲಕ್ಷ

ಹುದ್ದೆಗಳ ದರ

ಬಿಡಿಎ ಆಯುಕ್ತ ₹10 ಕೋಟಿ– ₹15 ಕೋಟಿ

ಕೆಪಿಎಸ್‌ಸಿ ಅಧ್ಯಕ್ಷ ₹5 ಕೋಟಿ –₹15 ಕೋಟಿ

ಡಿಸಿ ಮತ್ತು ಎಸ್‌ಸಿ ₹5 ಕೋಟಿ– ₹15 ಕೋಟಿ

ಉಪಕುಲಪತಿ ₹5 ಕೋಟಿ –₹10 ಕೋಟಿ

ಎಸಿ– ತಹಸೀಲ್ದಾರ್ ₹50 ಲಕ್ಷ –₹3 ಕೋಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...