Homeಕರ್ನಾಟಕಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

- Advertisement -
- Advertisement -

ಆಪರೇಷನ್ ಕಮಲದಿಂದಾಗಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ತಮ್ಮ ಸ್ವಕ್ಷೇತ್ರವನ್ನೇ ಕಳೆದುಕೊಂಡ ಮಾಜಿ ಉಪಮುಖ್ಯಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ.

ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನಿಡುವುದಾಗಿ ಘೋಷಣೆ ಮಾಡಿದರು. ಬೆಳಗಾವಿಯ ಅಥಣಿಯಲ್ಲಿ ಇಂದು(ಏಪ್ರಿಲ್ 12) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವದಿ, ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.

”ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜತೆ ಚರ್ಚಿಸಿ ಘೋಷಣೆ ಮಾಡುತ್ತೇನೆ. ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ. ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕ ಮಾಡಿದ್ದಾರೆ. ನಾಳೆ ಸಂಜೆ ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ. ಸವದಿ ಯಾವತ್ತೂ ಒಳಗೊಂದು ಹೊರಗೊಂದು ಮಾತನಾಡಲ್ಲ. ವಿಧಾನಸಭೆಯಲ್ಲಿ ನಡೆದ ಘಟನೆಯಿಂದ ರಾಜೀನಾಮೆ ಕೊಡಬೇಕಾಯಿತು. ಈ ಪ್ರಕರಣದಿಂದ ನನ್ನ ಗುರುಗಳ ಕಣ್ಣಲ್ಲಿ ನೀರು ಬಂದಿತ್ತು” ಎಂದು ಆ ದಿನಗಳನ್ನು ನೆನೆದರು.

”ಸೌಜನ್ಯಕ್ಕಾದರೂ ಮೊದಲು ನನ್ನ ಜೊತೆ ಚರ್ಚೆ ಮಾಡಬೇಕಿತ್ತು. ಮುಂದಿನ ದಿನಗಳಲ್ಲಿ ಸಿಎಂ ಆಗಿ, ಪ್ರಧಾನಿ ಆಗುವ ಅವಕಾಶ ಇದೆ. ಪ್ರಧಾನಿ ಆಗಿ ನೋಡುವ ಆಸೆ ಇದೆ. ಅವರು ಈ ರಾಷ್ಟ್ರದ ಪ್ರಧಾನಮಂತ್ರಿ ಆಗಲು ಯಾರು ತಪ್ಪಿಸಲ್ಲ ಅಂದುಕೊಂಡಿದ್ದೇನೆ. ಮೋದಿಗೆ 75 ವರ್ಷ ಆದ ಬಳಿಕ, ಇವರಿಗೆ ಅವಕಾಶ ಸಿಗಬಹುದು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.

”ನಿನಗೆ ಟಿಕೆಟ್​ ಕೊಡುವುದಕ್ಕೆ ಆಗಲ್ಲ ಸುಮ್ಮನೆ ಬಿದ್ದುಕೊಂಡು ಇರು ಎಂದು ಹೇಳಿದ್ದರೆ ಕೇಳುತ್ತಿದ್ದೆ. ನನಗೆ ಅವರ ಮೇಲೆ ದ್ವೇಷ ಇಲ್ಲ. ಅವರ ತಂದೆ ಸಿಎಂ ಆಗಿದ್ದ ದಿನದಿಂದಲೂ ಒಳ್ಳೆಯ ಸಂಬಂಧ ಇದೆ. ಸಿ.ಸಿ.ಪಾಟೀಲ್ ಹಾಗೂ ನನ್ನ ವಿನಂತಿ ಮನ್ನಿಸಿ ಬಿಜೆಪಿಗೆ ಬಂದರು. ನಾನು ಸಿ‌‌.ಸಿ‌‌.ಪಾಟೀಲ್ ಸೇರಿ ಬೊಮ್ಮಾಯಿರ‌ನ್ನು ಬಿಜೆಪಿಗೆ ಸೇರ್ಪಡೆ ಮಾಡಿಸಿದ್ದೇವು. ಅವರು ಬೃಹತ್ ನೀರಾವರಿ ಸಚಿವರಾಗಿ ಸಿಎಂ ಆಗಿ ಕಾರ್ಯನಿರ್ವಹಿಸುವುದು ನನಗೆ ಬಹಳ ಸಂತೋಷ ಆಗಿದೆ. ನನಗೆ ಸಹಾಯ ಮಾಡಿದ ಎಲ್ಲರಿಗೂ ಅಭಿನಂದನೆ ಹೇಳುತ್ತೇನೆ. ನಾನು ಎಲ್ಲೇ ಇರಲಿ ಹೇಗೆ ಇರಲಿ ಅಲ್ಲಿ ನನ್ನ ಗುರು ಇದ್ದಾರೆ, ಆ ಗುರುವನ್ನು ಮಾತ್ರ ಮರೆಯಲ್ಲ. ಅವರಿಗೆ ನಾನು ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ, ನನ್ನ ಕ್ಷಮಿಸಬೇಕು ಎಂದು ಹೇಳುತ್ತೇನೆ” ಎಂದರು.

ಟಿಕೆಟ್ ಸಿಗದಿರುವ ಬಗ್ಗೆ ತಿಳಿದ ಸವದಿ ಬೆಂಬಲಿಗರ ಜೊತೆ ಮುಂದಿನ ನಡೆ ಬಗ್ಗೆ ಚರ್ಚಿಸಲು ಸಿದ್ಧರಾಗಿದ್ದರು.  ”ಗುರುವಾರ (ಏಪ್ರಿಲ್ 13) ಸಂಜೆ 4 ಗಂಟೆಗೆ ಅಥಣಿ ಕ್ಷೇತ್ರ ಬೃಹತ್ ಜನರ ಸಭೆ ಕರೆಯಲಾಗುವುದು. ನೀವು ಏನು ಹೇಳುತ್ತಿರಿ ನಾನು ಅದನ್ನು ಕೇಳುತ್ತೇನೆ. ನೀವು ಮನೆಯಲ್ಲಿರು ಎಂದರೆ ನಾನು ಮನೆಯಲ್ಲಿ ಕೂರುತ್ತೇನೆ. ನೀವು ಯಾವು ದಿಕ್ಕು ತೊರುತ್ತಿರಿ ನಾನು ಆ ದಿಕ್ಕು ಕಡೆ ಹೋಗುತ್ತೇನೆ. ನೀವು ಕೊಡುವಂತಹ ಆದೇಶಕ್ಕೆ ನಾನು ಬದ್ಧನಾಗಿದ್ದೇನೆ ಎಂಬ ಸಂದೇಶವನ್ನು ಸವದಿ ರವಾನಿಸಿದ್ದರು.

ಪಕ್ಷೇತರ ಅಥವಾ ಕಾಂಗ್ರೆಸ್‌ನಿಂದ ಸ್ಪರ್ಧೆ ಸಾಧ್ಯತೆ

ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಲಕ್ಷ್ಮಣ ಸವದಿ ಅವರು, ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೂ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರೆ. ಈ ಮೂಲಕ ಅವರು ಪಕ್ಷೇತರರಾಗಿಯಾದರೂ ಸ್ಪರ್ಧೆ ಮಾಡಲು ನಿಶ್ಚಿಯಿಸಿದ್ದಾರೆ. ಇನ್ನು ಕಾಂಗ್ರೆಸ್ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅವರು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿವೆ. ಮತ್ತೊಂದೆಡೆ ಕಾಂಗ್ರೆಸ್ ಕೂಡ ಅಥನಿ ಕ್ಷೇತ್ರಕ್ಕೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ. ಈ ಎಲ್ಲ ಬೆಳವಣಿಗೆಗಳನ್ನು ನೋಡಿದಾಗ ಲಕ್ಷ್ಮಣ ಸವದಿ ಕಾಮಗ್ರೆಸ್ ಸೇರಿದರೂ ಅಚ್ಚರಿಪಡಬೇಕಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...