Homeಕರ್ನಾಟಕಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

- Advertisement -
- Advertisement -

ಆಪರೇಷನ್ ಕಮಲದಿಂದಾಗಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ತಮ್ಮ ಸ್ವಕ್ಷೇತ್ರವನ್ನೇ ಕಳೆದುಕೊಂಡ ಮಾಜಿ ಉಪಮುಖ್ಯಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ.

ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನಿಡುವುದಾಗಿ ಘೋಷಣೆ ಮಾಡಿದರು. ಬೆಳಗಾವಿಯ ಅಥಣಿಯಲ್ಲಿ ಇಂದು(ಏಪ್ರಿಲ್ 12) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವದಿ, ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.

”ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜತೆ ಚರ್ಚಿಸಿ ಘೋಷಣೆ ಮಾಡುತ್ತೇನೆ. ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ. ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕ ಮಾಡಿದ್ದಾರೆ. ನಾಳೆ ಸಂಜೆ ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ. ಸವದಿ ಯಾವತ್ತೂ ಒಳಗೊಂದು ಹೊರಗೊಂದು ಮಾತನಾಡಲ್ಲ. ವಿಧಾನಸಭೆಯಲ್ಲಿ ನಡೆದ ಘಟನೆಯಿಂದ ರಾಜೀನಾಮೆ ಕೊಡಬೇಕಾಯಿತು. ಈ ಪ್ರಕರಣದಿಂದ ನನ್ನ ಗುರುಗಳ ಕಣ್ಣಲ್ಲಿ ನೀರು ಬಂದಿತ್ತು” ಎಂದು ಆ ದಿನಗಳನ್ನು ನೆನೆದರು.

”ಸೌಜನ್ಯಕ್ಕಾದರೂ ಮೊದಲು ನನ್ನ ಜೊತೆ ಚರ್ಚೆ ಮಾಡಬೇಕಿತ್ತು. ಮುಂದಿನ ದಿನಗಳಲ್ಲಿ ಸಿಎಂ ಆಗಿ, ಪ್ರಧಾನಿ ಆಗುವ ಅವಕಾಶ ಇದೆ. ಪ್ರಧಾನಿ ಆಗಿ ನೋಡುವ ಆಸೆ ಇದೆ. ಅವರು ಈ ರಾಷ್ಟ್ರದ ಪ್ರಧಾನಮಂತ್ರಿ ಆಗಲು ಯಾರು ತಪ್ಪಿಸಲ್ಲ ಅಂದುಕೊಂಡಿದ್ದೇನೆ. ಮೋದಿಗೆ 75 ವರ್ಷ ಆದ ಬಳಿಕ, ಇವರಿಗೆ ಅವಕಾಶ ಸಿಗಬಹುದು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.

”ನಿನಗೆ ಟಿಕೆಟ್​ ಕೊಡುವುದಕ್ಕೆ ಆಗಲ್ಲ ಸುಮ್ಮನೆ ಬಿದ್ದುಕೊಂಡು ಇರು ಎಂದು ಹೇಳಿದ್ದರೆ ಕೇಳುತ್ತಿದ್ದೆ. ನನಗೆ ಅವರ ಮೇಲೆ ದ್ವೇಷ ಇಲ್ಲ. ಅವರ ತಂದೆ ಸಿಎಂ ಆಗಿದ್ದ ದಿನದಿಂದಲೂ ಒಳ್ಳೆಯ ಸಂಬಂಧ ಇದೆ. ಸಿ.ಸಿ.ಪಾಟೀಲ್ ಹಾಗೂ ನನ್ನ ವಿನಂತಿ ಮನ್ನಿಸಿ ಬಿಜೆಪಿಗೆ ಬಂದರು. ನಾನು ಸಿ‌‌.ಸಿ‌‌.ಪಾಟೀಲ್ ಸೇರಿ ಬೊಮ್ಮಾಯಿರ‌ನ್ನು ಬಿಜೆಪಿಗೆ ಸೇರ್ಪಡೆ ಮಾಡಿಸಿದ್ದೇವು. ಅವರು ಬೃಹತ್ ನೀರಾವರಿ ಸಚಿವರಾಗಿ ಸಿಎಂ ಆಗಿ ಕಾರ್ಯನಿರ್ವಹಿಸುವುದು ನನಗೆ ಬಹಳ ಸಂತೋಷ ಆಗಿದೆ. ನನಗೆ ಸಹಾಯ ಮಾಡಿದ ಎಲ್ಲರಿಗೂ ಅಭಿನಂದನೆ ಹೇಳುತ್ತೇನೆ. ನಾನು ಎಲ್ಲೇ ಇರಲಿ ಹೇಗೆ ಇರಲಿ ಅಲ್ಲಿ ನನ್ನ ಗುರು ಇದ್ದಾರೆ, ಆ ಗುರುವನ್ನು ಮಾತ್ರ ಮರೆಯಲ್ಲ. ಅವರಿಗೆ ನಾನು ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ, ನನ್ನ ಕ್ಷಮಿಸಬೇಕು ಎಂದು ಹೇಳುತ್ತೇನೆ” ಎಂದರು.

ಟಿಕೆಟ್ ಸಿಗದಿರುವ ಬಗ್ಗೆ ತಿಳಿದ ಸವದಿ ಬೆಂಬಲಿಗರ ಜೊತೆ ಮುಂದಿನ ನಡೆ ಬಗ್ಗೆ ಚರ್ಚಿಸಲು ಸಿದ್ಧರಾಗಿದ್ದರು.  ”ಗುರುವಾರ (ಏಪ್ರಿಲ್ 13) ಸಂಜೆ 4 ಗಂಟೆಗೆ ಅಥಣಿ ಕ್ಷೇತ್ರ ಬೃಹತ್ ಜನರ ಸಭೆ ಕರೆಯಲಾಗುವುದು. ನೀವು ಏನು ಹೇಳುತ್ತಿರಿ ನಾನು ಅದನ್ನು ಕೇಳುತ್ತೇನೆ. ನೀವು ಮನೆಯಲ್ಲಿರು ಎಂದರೆ ನಾನು ಮನೆಯಲ್ಲಿ ಕೂರುತ್ತೇನೆ. ನೀವು ಯಾವು ದಿಕ್ಕು ತೊರುತ್ತಿರಿ ನಾನು ಆ ದಿಕ್ಕು ಕಡೆ ಹೋಗುತ್ತೇನೆ. ನೀವು ಕೊಡುವಂತಹ ಆದೇಶಕ್ಕೆ ನಾನು ಬದ್ಧನಾಗಿದ್ದೇನೆ ಎಂಬ ಸಂದೇಶವನ್ನು ಸವದಿ ರವಾನಿಸಿದ್ದರು.

ಪಕ್ಷೇತರ ಅಥವಾ ಕಾಂಗ್ರೆಸ್‌ನಿಂದ ಸ್ಪರ್ಧೆ ಸಾಧ್ಯತೆ

ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಲಕ್ಷ್ಮಣ ಸವದಿ ಅವರು, ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೂ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರೆ. ಈ ಮೂಲಕ ಅವರು ಪಕ್ಷೇತರರಾಗಿಯಾದರೂ ಸ್ಪರ್ಧೆ ಮಾಡಲು ನಿಶ್ಚಿಯಿಸಿದ್ದಾರೆ. ಇನ್ನು ಕಾಂಗ್ರೆಸ್ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅವರು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿವೆ. ಮತ್ತೊಂದೆಡೆ ಕಾಂಗ್ರೆಸ್ ಕೂಡ ಅಥನಿ ಕ್ಷೇತ್ರಕ್ಕೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ. ಈ ಎಲ್ಲ ಬೆಳವಣಿಗೆಗಳನ್ನು ನೋಡಿದಾಗ ಲಕ್ಷ್ಮಣ ಸವದಿ ಕಾಮಗ್ರೆಸ್ ಸೇರಿದರೂ ಅಚ್ಚರಿಪಡಬೇಕಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...