Homeಕರ್ನಾಟಕಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

- Advertisement -
- Advertisement -

ಆಪರೇಷನ್ ಕಮಲದಿಂದಾಗಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ತಮ್ಮ ಸ್ವಕ್ಷೇತ್ರವನ್ನೇ ಕಳೆದುಕೊಂಡ ಮಾಜಿ ಉಪಮುಖ್ಯಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ.

ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನಿಡುವುದಾಗಿ ಘೋಷಣೆ ಮಾಡಿದರು. ಬೆಳಗಾವಿಯ ಅಥಣಿಯಲ್ಲಿ ಇಂದು(ಏಪ್ರಿಲ್ 12) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವದಿ, ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.

”ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜತೆ ಚರ್ಚಿಸಿ ಘೋಷಣೆ ಮಾಡುತ್ತೇನೆ. ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ. ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕ ಮಾಡಿದ್ದಾರೆ. ನಾಳೆ ಸಂಜೆ ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ. ಸವದಿ ಯಾವತ್ತೂ ಒಳಗೊಂದು ಹೊರಗೊಂದು ಮಾತನಾಡಲ್ಲ. ವಿಧಾನಸಭೆಯಲ್ಲಿ ನಡೆದ ಘಟನೆಯಿಂದ ರಾಜೀನಾಮೆ ಕೊಡಬೇಕಾಯಿತು. ಈ ಪ್ರಕರಣದಿಂದ ನನ್ನ ಗುರುಗಳ ಕಣ್ಣಲ್ಲಿ ನೀರು ಬಂದಿತ್ತು” ಎಂದು ಆ ದಿನಗಳನ್ನು ನೆನೆದರು.

”ಸೌಜನ್ಯಕ್ಕಾದರೂ ಮೊದಲು ನನ್ನ ಜೊತೆ ಚರ್ಚೆ ಮಾಡಬೇಕಿತ್ತು. ಮುಂದಿನ ದಿನಗಳಲ್ಲಿ ಸಿಎಂ ಆಗಿ, ಪ್ರಧಾನಿ ಆಗುವ ಅವಕಾಶ ಇದೆ. ಪ್ರಧಾನಿ ಆಗಿ ನೋಡುವ ಆಸೆ ಇದೆ. ಅವರು ಈ ರಾಷ್ಟ್ರದ ಪ್ರಧಾನಮಂತ್ರಿ ಆಗಲು ಯಾರು ತಪ್ಪಿಸಲ್ಲ ಅಂದುಕೊಂಡಿದ್ದೇನೆ. ಮೋದಿಗೆ 75 ವರ್ಷ ಆದ ಬಳಿಕ, ಇವರಿಗೆ ಅವಕಾಶ ಸಿಗಬಹುದು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.

”ನಿನಗೆ ಟಿಕೆಟ್​ ಕೊಡುವುದಕ್ಕೆ ಆಗಲ್ಲ ಸುಮ್ಮನೆ ಬಿದ್ದುಕೊಂಡು ಇರು ಎಂದು ಹೇಳಿದ್ದರೆ ಕೇಳುತ್ತಿದ್ದೆ. ನನಗೆ ಅವರ ಮೇಲೆ ದ್ವೇಷ ಇಲ್ಲ. ಅವರ ತಂದೆ ಸಿಎಂ ಆಗಿದ್ದ ದಿನದಿಂದಲೂ ಒಳ್ಳೆಯ ಸಂಬಂಧ ಇದೆ. ಸಿ.ಸಿ.ಪಾಟೀಲ್ ಹಾಗೂ ನನ್ನ ವಿನಂತಿ ಮನ್ನಿಸಿ ಬಿಜೆಪಿಗೆ ಬಂದರು. ನಾನು ಸಿ‌‌.ಸಿ‌‌.ಪಾಟೀಲ್ ಸೇರಿ ಬೊಮ್ಮಾಯಿರ‌ನ್ನು ಬಿಜೆಪಿಗೆ ಸೇರ್ಪಡೆ ಮಾಡಿಸಿದ್ದೇವು. ಅವರು ಬೃಹತ್ ನೀರಾವರಿ ಸಚಿವರಾಗಿ ಸಿಎಂ ಆಗಿ ಕಾರ್ಯನಿರ್ವಹಿಸುವುದು ನನಗೆ ಬಹಳ ಸಂತೋಷ ಆಗಿದೆ. ನನಗೆ ಸಹಾಯ ಮಾಡಿದ ಎಲ್ಲರಿಗೂ ಅಭಿನಂದನೆ ಹೇಳುತ್ತೇನೆ. ನಾನು ಎಲ್ಲೇ ಇರಲಿ ಹೇಗೆ ಇರಲಿ ಅಲ್ಲಿ ನನ್ನ ಗುರು ಇದ್ದಾರೆ, ಆ ಗುರುವನ್ನು ಮಾತ್ರ ಮರೆಯಲ್ಲ. ಅವರಿಗೆ ನಾನು ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ, ನನ್ನ ಕ್ಷಮಿಸಬೇಕು ಎಂದು ಹೇಳುತ್ತೇನೆ” ಎಂದರು.

ಟಿಕೆಟ್ ಸಿಗದಿರುವ ಬಗ್ಗೆ ತಿಳಿದ ಸವದಿ ಬೆಂಬಲಿಗರ ಜೊತೆ ಮುಂದಿನ ನಡೆ ಬಗ್ಗೆ ಚರ್ಚಿಸಲು ಸಿದ್ಧರಾಗಿದ್ದರು.  ”ಗುರುವಾರ (ಏಪ್ರಿಲ್ 13) ಸಂಜೆ 4 ಗಂಟೆಗೆ ಅಥಣಿ ಕ್ಷೇತ್ರ ಬೃಹತ್ ಜನರ ಸಭೆ ಕರೆಯಲಾಗುವುದು. ನೀವು ಏನು ಹೇಳುತ್ತಿರಿ ನಾನು ಅದನ್ನು ಕೇಳುತ್ತೇನೆ. ನೀವು ಮನೆಯಲ್ಲಿರು ಎಂದರೆ ನಾನು ಮನೆಯಲ್ಲಿ ಕೂರುತ್ತೇನೆ. ನೀವು ಯಾವು ದಿಕ್ಕು ತೊರುತ್ತಿರಿ ನಾನು ಆ ದಿಕ್ಕು ಕಡೆ ಹೋಗುತ್ತೇನೆ. ನೀವು ಕೊಡುವಂತಹ ಆದೇಶಕ್ಕೆ ನಾನು ಬದ್ಧನಾಗಿದ್ದೇನೆ ಎಂಬ ಸಂದೇಶವನ್ನು ಸವದಿ ರವಾನಿಸಿದ್ದರು.

ಪಕ್ಷೇತರ ಅಥವಾ ಕಾಂಗ್ರೆಸ್‌ನಿಂದ ಸ್ಪರ್ಧೆ ಸಾಧ್ಯತೆ

ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಲಕ್ಷ್ಮಣ ಸವದಿ ಅವರು, ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೂ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರೆ. ಈ ಮೂಲಕ ಅವರು ಪಕ್ಷೇತರರಾಗಿಯಾದರೂ ಸ್ಪರ್ಧೆ ಮಾಡಲು ನಿಶ್ಚಿಯಿಸಿದ್ದಾರೆ. ಇನ್ನು ಕಾಂಗ್ರೆಸ್ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅವರು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿವೆ. ಮತ್ತೊಂದೆಡೆ ಕಾಂಗ್ರೆಸ್ ಕೂಡ ಅಥನಿ ಕ್ಷೇತ್ರಕ್ಕೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ. ಈ ಎಲ್ಲ ಬೆಳವಣಿಗೆಗಳನ್ನು ನೋಡಿದಾಗ ಲಕ್ಷ್ಮಣ ಸವದಿ ಕಾಮಗ್ರೆಸ್ ಸೇರಿದರೂ ಅಚ್ಚರಿಪಡಬೇಕಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...