Homeಕರ್ನಾಟಕಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

- Advertisement -
- Advertisement -

ಆಪರೇಷನ್ ಕಮಲದಿಂದಾಗಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ತಮ್ಮ ಸ್ವಕ್ಷೇತ್ರವನ್ನೇ ಕಳೆದುಕೊಂಡ ಮಾಜಿ ಉಪಮುಖ್ಯಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ.

ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನಿಡುವುದಾಗಿ ಘೋಷಣೆ ಮಾಡಿದರು. ಬೆಳಗಾವಿಯ ಅಥಣಿಯಲ್ಲಿ ಇಂದು(ಏಪ್ರಿಲ್ 12) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವದಿ, ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.

”ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜತೆ ಚರ್ಚಿಸಿ ಘೋಷಣೆ ಮಾಡುತ್ತೇನೆ. ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ. ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕ ಮಾಡಿದ್ದಾರೆ. ನಾಳೆ ಸಂಜೆ ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ. ಸವದಿ ಯಾವತ್ತೂ ಒಳಗೊಂದು ಹೊರಗೊಂದು ಮಾತನಾಡಲ್ಲ. ವಿಧಾನಸಭೆಯಲ್ಲಿ ನಡೆದ ಘಟನೆಯಿಂದ ರಾಜೀನಾಮೆ ಕೊಡಬೇಕಾಯಿತು. ಈ ಪ್ರಕರಣದಿಂದ ನನ್ನ ಗುರುಗಳ ಕಣ್ಣಲ್ಲಿ ನೀರು ಬಂದಿತ್ತು” ಎಂದು ಆ ದಿನಗಳನ್ನು ನೆನೆದರು.

”ಸೌಜನ್ಯಕ್ಕಾದರೂ ಮೊದಲು ನನ್ನ ಜೊತೆ ಚರ್ಚೆ ಮಾಡಬೇಕಿತ್ತು. ಮುಂದಿನ ದಿನಗಳಲ್ಲಿ ಸಿಎಂ ಆಗಿ, ಪ್ರಧಾನಿ ಆಗುವ ಅವಕಾಶ ಇದೆ. ಪ್ರಧಾನಿ ಆಗಿ ನೋಡುವ ಆಸೆ ಇದೆ. ಅವರು ಈ ರಾಷ್ಟ್ರದ ಪ್ರಧಾನಮಂತ್ರಿ ಆಗಲು ಯಾರು ತಪ್ಪಿಸಲ್ಲ ಅಂದುಕೊಂಡಿದ್ದೇನೆ. ಮೋದಿಗೆ 75 ವರ್ಷ ಆದ ಬಳಿಕ, ಇವರಿಗೆ ಅವಕಾಶ ಸಿಗಬಹುದು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.

”ನಿನಗೆ ಟಿಕೆಟ್​ ಕೊಡುವುದಕ್ಕೆ ಆಗಲ್ಲ ಸುಮ್ಮನೆ ಬಿದ್ದುಕೊಂಡು ಇರು ಎಂದು ಹೇಳಿದ್ದರೆ ಕೇಳುತ್ತಿದ್ದೆ. ನನಗೆ ಅವರ ಮೇಲೆ ದ್ವೇಷ ಇಲ್ಲ. ಅವರ ತಂದೆ ಸಿಎಂ ಆಗಿದ್ದ ದಿನದಿಂದಲೂ ಒಳ್ಳೆಯ ಸಂಬಂಧ ಇದೆ. ಸಿ.ಸಿ.ಪಾಟೀಲ್ ಹಾಗೂ ನನ್ನ ವಿನಂತಿ ಮನ್ನಿಸಿ ಬಿಜೆಪಿಗೆ ಬಂದರು. ನಾನು ಸಿ‌‌.ಸಿ‌‌.ಪಾಟೀಲ್ ಸೇರಿ ಬೊಮ್ಮಾಯಿರ‌ನ್ನು ಬಿಜೆಪಿಗೆ ಸೇರ್ಪಡೆ ಮಾಡಿಸಿದ್ದೇವು. ಅವರು ಬೃಹತ್ ನೀರಾವರಿ ಸಚಿವರಾಗಿ ಸಿಎಂ ಆಗಿ ಕಾರ್ಯನಿರ್ವಹಿಸುವುದು ನನಗೆ ಬಹಳ ಸಂತೋಷ ಆಗಿದೆ. ನನಗೆ ಸಹಾಯ ಮಾಡಿದ ಎಲ್ಲರಿಗೂ ಅಭಿನಂದನೆ ಹೇಳುತ್ತೇನೆ. ನಾನು ಎಲ್ಲೇ ಇರಲಿ ಹೇಗೆ ಇರಲಿ ಅಲ್ಲಿ ನನ್ನ ಗುರು ಇದ್ದಾರೆ, ಆ ಗುರುವನ್ನು ಮಾತ್ರ ಮರೆಯಲ್ಲ. ಅವರಿಗೆ ನಾನು ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ, ನನ್ನ ಕ್ಷಮಿಸಬೇಕು ಎಂದು ಹೇಳುತ್ತೇನೆ” ಎಂದರು.

ಟಿಕೆಟ್ ಸಿಗದಿರುವ ಬಗ್ಗೆ ತಿಳಿದ ಸವದಿ ಬೆಂಬಲಿಗರ ಜೊತೆ ಮುಂದಿನ ನಡೆ ಬಗ್ಗೆ ಚರ್ಚಿಸಲು ಸಿದ್ಧರಾಗಿದ್ದರು.  ”ಗುರುವಾರ (ಏಪ್ರಿಲ್ 13) ಸಂಜೆ 4 ಗಂಟೆಗೆ ಅಥಣಿ ಕ್ಷೇತ್ರ ಬೃಹತ್ ಜನರ ಸಭೆ ಕರೆಯಲಾಗುವುದು. ನೀವು ಏನು ಹೇಳುತ್ತಿರಿ ನಾನು ಅದನ್ನು ಕೇಳುತ್ತೇನೆ. ನೀವು ಮನೆಯಲ್ಲಿರು ಎಂದರೆ ನಾನು ಮನೆಯಲ್ಲಿ ಕೂರುತ್ತೇನೆ. ನೀವು ಯಾವು ದಿಕ್ಕು ತೊರುತ್ತಿರಿ ನಾನು ಆ ದಿಕ್ಕು ಕಡೆ ಹೋಗುತ್ತೇನೆ. ನೀವು ಕೊಡುವಂತಹ ಆದೇಶಕ್ಕೆ ನಾನು ಬದ್ಧನಾಗಿದ್ದೇನೆ ಎಂಬ ಸಂದೇಶವನ್ನು ಸವದಿ ರವಾನಿಸಿದ್ದರು.

ಪಕ್ಷೇತರ ಅಥವಾ ಕಾಂಗ್ರೆಸ್‌ನಿಂದ ಸ್ಪರ್ಧೆ ಸಾಧ್ಯತೆ

ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಲಕ್ಷ್ಮಣ ಸವದಿ ಅವರು, ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೂ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರೆ. ಈ ಮೂಲಕ ಅವರು ಪಕ್ಷೇತರರಾಗಿಯಾದರೂ ಸ್ಪರ್ಧೆ ಮಾಡಲು ನಿಶ್ಚಿಯಿಸಿದ್ದಾರೆ. ಇನ್ನು ಕಾಂಗ್ರೆಸ್ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅವರು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿವೆ. ಮತ್ತೊಂದೆಡೆ ಕಾಂಗ್ರೆಸ್ ಕೂಡ ಅಥನಿ ಕ್ಷೇತ್ರಕ್ಕೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ. ಈ ಎಲ್ಲ ಬೆಳವಣಿಗೆಗಳನ್ನು ನೋಡಿದಾಗ ಲಕ್ಷ್ಮಣ ಸವದಿ ಕಾಮಗ್ರೆಸ್ ಸೇರಿದರೂ ಅಚ್ಚರಿಪಡಬೇಕಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...